ಸೂತ್ರಧಾರಿಯಲ್ಲಿ ಚಂದನ್ಶೆಟ್ಟಿ-ಸಂಜನಾಆನಂದ್ ಹಾಡು ಮೈ ಮೂವೀ ಬಜಾರ್ ಖ್ಯಾತಿಯ ನಟ, ನಿರ್ದೇಶಕ ನವರಸನ್ ನಿರ್ಮಾಣದ ‘ಸೂತ್ರಧಾರಿ’ ಸಿನಿಮಾದ ಚಿತ್ರೀಕರಣವು ಶೇಕಡ ೯೦ರಷ್ಟು ಮುಗಿದಿದೆ. ಈಗ ಹೊಸ ವರ್ಷದ ಸಂಭ್ರಮಾಚರಣೆಗೆಂದು ಡ್ಯಾಶ್ ಸಾಂಗ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಚಿತ್ರದ ಮೊದಲ ಹಾಡಿನ ಶೂಟಿಂಗ್ ನೃತ್ಯ ಸಂಯೋಜಕ ಭಜರಂಗಿ ಮೋಹನ್ ಸಾರಥ್ಯದಲ್ಲಿ ಇನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆರೆಹಿಡಿಯಲಾಗಿದೆ. ತನ್ನ ಹಾಡುಗಳ ಮೂಲಕ ಹುಡುಗ, ಹುಡುಗಿಯರ ಮನಗೆದ್ದಿರುವ ಚಂದನ್ಶೆಟ್ಟಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಹಾಗಾಗಿ ಹೀರೋ ಇಂಟ್ರಡಕ್ಷನ್ ಸಾಂಗ್ ....
*ಜನವರಿ 6ಕ್ಕೆ "MR ಬ್ಯಾಚುಲರ್" ಆಗಮನ.* ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ "Mr ಬ್ಯಾಚುಲರ್" ಚಿತ್ರ ಜನವರಿ 6 ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ನಾನು ಮೊದಲೇ ಹೇಳಿದ ಹಾಗೆ ಈ ಚಿತ್ರದ ಮೇಲೆ ನನಗೆ ವಿಶೇಷ ಪ್ರೀತಿ. ಏಕೆಂದರೆ ನಾನು ಈ ಚಿತ್ರ ಒಪ್ಪಿಕೊಂಡ ನಂತರ ನಿರ್ಮಾಪಕನಾಗಿ "ಲವ್ ಮಾಕ್ಟೇಲ್" ಚಿತ್ರ ಮಾಡಿದ್ದು. ಇನ್ನು ಚಿತ್ರದ ಬಗ್ಗೆ ಹೇಳಬೇಕೆಂದರೆ ನಿರ್ದೇಶಕ ನಾಯ್ಡು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಕಥೆ ಹೇಳಲು ಬಂದಾಗಲೆ ಕಥೆ ಕೇಳಿ ಸಾಕಷ್ಟು ಎಂಜಾಯ್ ಮಾಡಿದ್ದೆ. ನಾನು ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಹಾಕಿರದಷ್ಟು ಬಟ್ಟೆಗಳನ್ನು ಈ ಚಿತ್ರದಲ್ಲಿ ಹಾಕಿದ್ದೇನೆ. ....
ಸ್ಪೂಕಿ ಕಾಲೇಜ್ ಟ್ರೇಲರ್ ಬಿಡುಗಡೆ ಸೈಕಲಾಜಿಕಲ್ ಥ್ರಿಲ್ಲರ್ ಕಥೆ ಹೊಂದಿರುವ ‘ಸ್ಪೂಕಿ ಕಾಲೇಜ್’ ಬಿಡುಗಡೆಪೂರ್ವ ಸಮಾರಂಭವು ಅದ್ದೂರಿಯಾಗಿ ನಡೆಯಿತು. ಯೋಗರಾಜಭಟ್, ರಮೇಶ್ಅರವಿಂದ್ ಅವರ ಬಳಿ ನಿರ್ದೇಶನ ವಿಭಾಗದಲ್ಲಿ ಅನುಭವ ಪಡೆದುಕೊಂಡಿರುವ ಭರತ್ ರಚನೆ,ಚಿತ್ರಕಥೆ,ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಈ ಕುರಿತಂತೆ ಮಾತನಾಡಿರುವ ನಿರ್ದೇಶಕರು ಸಿನಿಮಾವು ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಕೂಡಿದೆ. ಧಾರವಾಡದ ನೂರು ವರ್ಷಗಳಿಗೂ ಹಳೆಯದಾದ ಕಡಿ ಕಾಲೇಜಿನಲ್ಲಿ ಹಾಗೂ ಕ್ಲೈಮಾಕ್ಸ್ ಭಾಗವನ್ನು ದಾಂಡೇಲಿಯ ಕಾಡಿನಲ್ಲಿ ಶೂಟ್ ಮಾಡಲಾಗಿದೆ. ಸ್ಪೂಕಿ ಎಂದರೆ ಭಯ. ಕಾಲೇಜಿನಲ್ಲಿ ಘಟನೆಗಳು ನಡೆಯುವುದರಿಂದ ....
*ಡಿಸೆಂಬರ್ 30 ರಂದು ತೆರೆಗೆ ಬರಲಿದೆ "ಮೇಡ್ ಇನ್ ಬೆಂಗಳೂರು".* ಕೋಟ್ಯಾಂತರ ಜನರಿಗೆ ಆಶ್ರಯ ನೀಡಿರುವ ಬೆಂಗಳೂರಿನ ಕುರಿತಾದ ಚಿತ್ರ " ಮೇಡ್ ಇನ್ ಬೆಂಗಳೂರು " ಇದೇ ಡಿಸೆಂಬರ್ 30 ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಗೂ ಪೂರ್ವದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಯುವ ಉದ್ಯಮಿ ಸುಹಾಸ್ ಗೋಪಿನಾಥ್ ಸೇರಿದಂತೆ ಅನ್ನು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಭಾಗಿಯಾಗಿದ್ದರು. ನಾವು ಮೂರು ಜನ ಸ್ನೇಹಿತರು ಸೇರಿ ಇಪ್ಪತ್ತೈದು ವರ್ಷಗಳ ಹಿಂದೆ ಒಂದು ಕಂಪನಿ ಆರಂಭಿಸಿದ್ದೆವು. ನಿರ್ದೇಶಕ ಪ್ರದೀಪ್ ಶಾಸ್ತ್ರಿ ಸ್ಟಾರ್ಟ್ ಅಪ್ ಹಾಗೂ ಬೆಂಗಳೂರಿನ ಮೇಲಿರುವ ಎಮೋಷನ್ ಕುರಿತಾದ ಈ ಚಿತ್ರದ ಕಥೆ ಹೇಳಿದರು. ನನಗೆ ನಾವು ಕಂಪನಿ ಆರಂಭಿಸಿದ ದಿನಗಳು ....
ಪದವಿಪೂರ್ವಗೆ ಶುಭ ಹಾರೈಸಿದ ಅಭಿಷೇಕ್ಅಂಬರೀಷ್ ‘ಪದವಿ ಪೂರ್ವ’ ಚಿತ್ರವು ಡಿಸೆಂಬರ್ ೩೦ಕ್ಕೆ ತೆರೆಕಾಣುತ್ತಿದೆ. ಈಗಾಗಲೇ ಸುದೀಪ್, ಧ್ರುವಸರ್ಜಾ, ಜಗ್ಗೇಶ್ ಸಿನಿಮಾದ ಕುರಿತಂತೆ ಮಾತನಾಡಿ ಶುಭ ಹಾರೈಸಿದ್ದಾರೆ. ಕೊನೆ ಸರದಿ ಎನ್ನುವಂತೆ ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಅಭಿಷೇಕ್ಅಂಬರೀಷ್ ಟ್ರೇಲರ್ನ್ನು ಬಿಡುಗಡೆ ಮಾಡಿ ತಂಡದ ಕೆಲಸವನ್ನು ಕೊಂಡಾಡಿದರು. ಉದ್ಯಮಿ ರವಿಶಾಮನೂರು ಹಾಗೂ ಯೋಗರಾಜಭಟ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಿರ್ಮಾಪಕರ ....
*ಸದ್ಯದಲ್ಲೇ ಬರಲಿದೆ "ದೊಡ್ಡಹಟ್ಟಿ ಬೋರೇಗೌಡ" ಚಿತ್ರದ ಟ್ರೇಲರ್.* *ವಿಭಿನ್ನ ಕಥೆಯ ಈ ಚಿತ್ರಕ್ಕೆ *2021* *ರಲ್ಲಿ ಬಂದಿದೆ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿ ಗರಿ*** . "ತರ್ಲೆವಿಲೇಜ್", "ಪರಸಂಗ", ಚಿತ್ರಗಳ ನಿರ್ದೇಶಕ ಕೆ ಎಂ ರಘು ನಿರ್ದೇಶಿಸಿರುವ " ದೊಡ್ಡಹಟ್ಟಿ ಬೋರೇಗೌಡ" ಚಿತ್ರದ ಟ್ರೇಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ. ರಾಜರಾಜೇಶ್ವರಿ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ "ದೊಡ್ಡಹಟ್ಟಿ ಬೋರೇಗೌಡ" ಚಿತ್ರ 2021ನೇ ಸಾಲಿನ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡದ ಪ್ರಥಮ ಅತ್ಯುತ್ತಮ ಚಲನಚಿತ್ರ ಎಂಬ ಪ್ರಶಸ್ತಿಯನ್ನು ....
*"ಸೂತ್ರಧಾರಿ ಸಿನಿಮಾದಲ್ಲಿ ಚಂದನ್ ಶೆಟ್ಟಿಗೆ ಕೈ ಜೊಡಿಸಿದ ಸಲಗ ಖ್ಯಾತಿಯ ಸಂಜನಾ ಆನಂದ್.* ಕನ್ನಡದ ರ್ಯಾಪರ್ ಅಂತ ಅಂದ್ರೆ ಎಲ್ಲರಿಗೂ ಗೊತ್ತಾಗೋದು *ಚಂದನ್ ಶೆಟ್ಟಿ* ಅವರ ಹಾಡುಗಳನ್ನ ಕೇಳದ ಜನರಿಲ್ಲಾ, ಪಡ್ಡೆ ಹುಡುಗರ ಮತ್ತು ಹುಡುಗಿಯರ ಮನಗೆದ್ದ *ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸುತ್ತಿರುವ ಹಾಗೂ *ಮೈ ಮೂವಿ ಬಜಾರ್ ಖ್ಯಾತಿ ನವರಸನ್ ಅವರ ನಿರ್ಮಾಣದ ಚಿತ್ರ *"ಸೂತ್ರಧಾರಿ"*. ಈಗಾಗಲೆ 90% ಸಿನೆಮಾದ ಚಿತ್ರೀಕರಣ ಮುಕ್ತಾಯಗೊಂಡಿದ್ದು ಚಿತ್ರದ ಮೊದಲ ಹಾಡಿನ ಚಿತ್ರೀಕರಣ ಇನೋವೇಟೀವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿಯಾಗಿ ಸೆಟ್ಟೆರಿದೆ, ಈ ಚಿತ್ರದ ಹೀರೋ ಇಂಟ್ರೊಡಕ್ಷನ್ ಸಾಂಗ್ ಆಗಿದ್ದು ಸಂಗೀತ ನಿರ್ದೇಶಕ ಮತ್ತು ಗಾಯಕನಾಗಿ ನಾಯಕನಾಗಿ ....
ಥಗ್ಸ್ ಆಫ್ ರಾಮಘಡ ಟ್ರೇಲರ್ ಮೆಚ್ಚಿದ ಡಾಲಿ ಧನಂಜಯ್ ‘ಥಗ್ಸ್ ಆಫ್ ರಾಮಘಡ’ ಚಿತ್ರವು ಫಸ್ಟ್ಲುಕ್ ಹಾಡಿನ ಮೂಲಕ ಗಮನ ಸೆಳೆದಿದ್ದು, ಈಗ ಟ್ರೇಲರ್ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ. ಮೊನ್ನೆ ನಡೆದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಧನಂಜಯ್ ಮಾತನಾಡಿ ಇಡೀ ತಂಡದ ಕೆಲಸ ನೋಡಿ ಖುಷಿ ಆಯ್ತು. ನಿರ್ದೇಶಕರು ತುಂಬಾ ಒಳ್ಳೆ ತಂಡವನ್ನು ಕಟ್ಟಿಕೊಂಡು, ಉತ್ತಮ ಕಲಾವಿದರನ್ನು ಇಟ್ಟುಕೊಂಡು ನೈಜ ಘಟನೆ ಆಧರಿಸಿದ ಚಿತ್ರ ಮಾಡಿದ್ದಾರೆ. ಪ್ರಚಾರವನ್ನು ಕೂಡ ಕ್ರಿಯೇಟೀವ್ ಆಗಿ ಮಾಡುತ್ತಿದ್ದಾರೆ. ವರ್ಷದ ಮೊದಲ ಚಿತ್ರ ಹಿಟ್ ಆಗಲಿ. ಉತ್ತರ ಕರ್ನಾಟಕ ಭಾಗದಿಂದ ಇನ್ನಷ್ಟು ....
*ಟ್ರೇಲರ್ ಮೂಲಕ ಜನಮನಸೆಳೆಯುತ್ತಿದೆ "once upon a time in ಜಮಾಲಿ ಗುಡ್ಡ" .* *ಡಾಲಿ ಅಭಿನಯದ ಈ ಚಿತ್ರ ಡಿಸೆಂಬರ್ 30 ರಂದು ತೆರೆಗೆ* ನಟ ರಾಕ್ಷಸ ಎಂದೇ ಖ್ಯಾತರಾಗಿರುವ ಡಾಲಿ ಧನಂಜಯ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿರುವ "once upon a time in ಜಮಾಲಿಗುಡ್ಡ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ಈ ಚಿತ್ರ ಒಂದು ಕಾಲ್ಪನಿಕ ಪ್ರಪಂಚ. ಜೊತೆಗೆ ಭಾವನಾತ್ಮಕ ಪಯಣ ಕೂಡ. ಧನಂಜಯ ಹಾಗೂ ಬೇಬಿ ಪ್ರಾಣ್ಯ ನಡುವಿನ ಸನ್ನಿವೇಶಗಳು ಸುಂದರವಾಗಿ ಮೂಡಿಬಂದಿದೆ. 95 - 96 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಚಿಕ್ಕಮಗಳೂರಿನ ಬಾಬಾಬುಡನಗಿರಿಯ ಸೊಬಗು ಚಿತ್ರದ ಮತ್ತೊಂದು ....
*‘ಜೋಡರ್ನ್’ ಟ್ರೇಲರ್ ಬಿಡುಗಡೆ - ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್* ವಿನೋದ್ ಧಯಾಳನ್ ನಿರ್ದೇಶನದ ‘ಜೋಡರ್ನ್’ ಸಿನಿಮಾ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್, ಕವಲು ದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ....
*‘ಜೋಡರ್ನ್’ ಟ್ರೇಲರ್ ಬಿಡುಗಡೆ - ಡಿಸೆಂಬರ್ 30ಕ್ಕೆ ಸಿನಿಮಾ ರಿಲೀಸ್* ವಿನೋದ್ ಧಯಾಳನ್ ನಿರ್ದೇಶನದ ‘ಜೋಡರ್ನ್’ ಸಿನಿಮಾ ಟ್ರೇಲರ್ ಇಂದು ಬಿಡುಗಡೆಯಾಗಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಹೇಂದ್ರ ಪ್ರಸಾದ್, ಕವಲು ದಾರಿ ಖ್ಯಾತಿಯ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಡಿಸೆಂಬರ್ 30ರಂದು ಸಿನಿಮಾ ಬಿಡುಗಡೆಯಾಗುತ್ತಿದೆ. ಚಿತ್ರದ ಬಹು ನಿರೀಕ್ಷಿತ ಟ್ರೇಲರ್ ಚಿತ್ರತಂಡ ಬಿಡುಗಡೆ ಮಾಡಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ ಅಮೇರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ....
*ಟ್ರೇಲರ್ ಮೂಲಕ ಸದ್ದು ಮಾಡುತ್ತಿದೆ "ನಾನು,ಅದು ಮತ್ತು ಸರೋಜ" .* *ಲೂಸ್ ಮಾದ ಯೋಗಿ ಅಭಿನಯದ ಈ ಚಿತ್ರ ವರ್ಷಾಂತ್ಯಕ್ಕೆ ತೆರೆಗೆ.* ಕನ್ನಡದಲ್ಲಿ ಈಗ ಕಂಟೆಂಟ್ ಒರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚಾಗಿ ಮುಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ವಿಭಿನ್ನ ಕಥಾಹಂದರ ಹೊಂದಿರುವ, ಲೂಸ್ ಮಾದ ಯೋಗಿ ನಾಯಕರಾಗಿ ನಟಿಸಿರುವ "ನಾನು, ಅದು ಮತ್ತು ಸರೋಜ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಡಿಸೆಂಬರ್ 30ರಂದು ಚಿತ್ರ ತೆರೆ ಕಾಣುತ್ತಿದೆ. ಈ ವಿಷಯವನ್ನು ಚಿತ್ರತಂಡ ಮಾಧ್ಯಮದ ಮುಂದೆ ಹಂಚಿಕೊಂಡರು. ನಾನು ಈ ಹಿಂದೆ "ಮಡಮಕ್ಕಿ" ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. "ನಾನು, ಅದು ಮತ್ತು ಸರೋಜ" ಚಿತ್ರದ ಕಥೆ ಮೂರು ಪ್ರಮುಖಪಾತ್ರಗಳ ಸುತ್ತ ....
ರಾಘವೇಂದ್ರ ಟೀಸರ್, ಧೀರನ್ ಬಿಡುಗಡೆ ಈ ಹಿಂದೆ ಹುಲಿದುರ್ಗ ಎಂಬ ಚಿತ್ರ ಮಾಡಿದ್ದ ನಾಯಕ ಸುಪ್ರೀತ್ ಹಾಗೂ ನಿರ್ದೇಶಕ ವಿಕ್ರಮ್ ಯಶೋಧರ ಜೋಡಿ ಈಗ ಮತ್ತೊಂದು ಚಿತ್ರದ ಮೂಲಕ ಕನ್ನಡ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ರಾಘವೇಂದ್ರಹೆಸರಿನ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ನಟ ಧೀರನ್ ರಾಮ್ ಕುಮಾರ್ ಅವರು ಟೀಸರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಸುಪ್ರೀತ್ ಈ ಚಿತ್ರದ ನಾಯಕನಾಗಿದ್ದು, ಪ್ರತೀಕ್ಷಾ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಪ್ರದರ್ಶನದ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಿರ್ದೇಶಕ ವಿಕ್ರಮ್ ಇದು ನಾವಿಬ್ಬರೂ ಸೇರಿ ಮಾಡಿರೋ ೨ನೇ ಚಿತ್ರ. ಇದೊಂದು ಮೆಸೇಜ್ ಒರಿಯಂಟೆಡ್ ಚಿತ್ರ ....
*"ಗುಲ್ಟು" ನವೀನ್ ಶಂಕರ್ "ಮೂಲತಃ ನಮ್ಮವರೇ".* "ಗುಲ್ಟು" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದಿರುವ ನವೀನ್ ಶಂಕರ್ ನಾಯಕನಾಗಿ ನಟಿಸಿರುವ ಚಿತ್ರ "ಮೂಲತಃ ನಮ್ಮವರೇ". ಕಿರಣ್ ಗೋವಿಂದರಾಜ್ ನಿರ್ಮಿಸಿ, ಚೇತನ್ ಭಾಸ್ಕರಯ್ಯ ನಿರ್ದೇಶಿಸಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚಿಗೆ ನಡೆಯಿತು. ರಂಗಭೂಮಿ ನಂಟಿರುವ ನನಗೆ ಸಿನಿಮಾ ನಿರ್ದೇಶನದಲ್ಲಿ ಆಸಕ್ತಿ. ಹಿಂದೆ ಕೆಲವು ಕಿರುಚಿತ್ರಗಳ ನಿರ್ದೇಶಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ಕಥೆ ಸಿದ್ದವಾದ ನಂತರ, ನಾಯಕನ ಹುಡುಕಾಟದಲ್ಲಿದ್ದಾಗ ನವೀನ್ ಸಿಕ್ಕರು. ಆಗಷ್ಟೇ ಅವರ " ಗುಲ್ಟು" ಚಿತ್ರ ಬಿಡುಗಡೆಯಾಗಿತ್ತು. "ಮೂಲತ: ನಮ್ಮವರೇ" ಇದೊಂದು ....
*ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ* ‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ. ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್ ಬ್ಯಾಕ್ ಡ್ರಾಪ್ ನಲ್ಲಿ ನಡಿಯೋ ಸಿನಿಮಾ. ಈಗಾಗಲೇ ಕಾಲೇಜ್ ಸಬ್ಜೆಕ್ಟ್ ಇರುವ ಹಲವಾರು ಸಿನಿಮಾಗಳು ಬಂದಿವೆ ನಾವೇನು ಹೊಸತು ಹೇಳ್ತೀವಿ ಅನ್ನೋದು ಮುಖ್ಯ. ಒಂದೇ ಲೈನ್ ನಲ್ಲಿ ಸಿನಿಮಾ ಬಗ್ಗೆ ಹೇಳಬೇಕು ಅಂದ್ರೆ ಈ ಚಿತ್ರದಲ್ಲಿ ಜಸ್ಟ್ ಪಾಸ್ ....
ಕಲ್ಯಾಣ ಕುವರ ಐತಿಹಾಸಿಕ ಚಿತ್ರ ‘ಡಾ.ಬಿ.ಆರ್.ಅಂಬೇಡ್ಕರ್’ ಚಿತ್ರ ನಿರ್ಮಿಸಿ ನಟನೆ ಮಾಡಿದ್ದ ಬಿ.ಜಿ.ವಿಷ್ಣುಕಾಂತ್ ಗ್ಯಾಪ್ ತರುವಾಯ ‘ಕಲ್ಯಾಣ ಕುವರ’ ಎನ್ನುವ ಧಾರ್ಮಿಕ, ಐತಿಹಾಸಿಕ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಗತಕಾಲ ಬೀದರ್ನಲ್ಲಿ ನಿಜಾಮರ ಆಳ್ವಿಕೆ ಇದ್ದ ಕಾಲದಲ್ಲಿ ಕನ್ನಡ ಭಾಷೆಯ ಬಳಕೆ ವಿರಳವಾಗಿತ್ತು. ಅಂಥ ಜಾಗದಲ್ಲಿ ಕನ್ನಡ ಶಾಲೆಗಳನ್ನು ಸ್ಥಾಪಿಸಿದ ಡಾ.ಚನ್ನಬಸವ ಪಟ್ಟದೇವರನ್ನು ಆಧುನಿಕ ಬಸವಣ್ಣ ಅಂತ ಕರೆಯುತ್ತಿದ್ದರು. ಜಾತಿ ಭೇದ ಭಾವ ತೊಡೆದುಹಾಕಿ ಎಲ್ಲಡೆ ಸಮಾನತೆಯ ಮಂತ್ರ ಸಾರುತ್ತ ಎಲ್ಲರಿಗೂ ಲಿಂಗದೀಕ್ಷೆ ನೀಡಿದ್ದರು. ಅಂತಹ ಕ್ರಾಂತಿಕಾರಿ ಹೋರಾಟಗಾರ, ಮಹಾತ್ಮನ ಜೀವನದ ಕಥೆಯೇ ....
*ನಟ ದೇವರಾಜ್ ಅವರಿಂದ ಬಿಡುಗಡೆಯಾಯಿತು "ಪ್ರಜಾರಾಜ್ಯ"ಚಿತ್ರದ ಟೀಸರ್.* ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ " ಪ್ರಜಾರಾಜ್ಯ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಟ ದೇವರಾಜ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ದೇವರಾಜ್ ಚಿತ್ರದ ಮುಖ್ಯಪಾತ್ರದಲ್ಲೂ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ ರಾಜಕೀಯ ಮುಖಂಡನ ಪಾತ್ರ ಮಾಡಿದ್ದೇನೆ. ಈಗಿನ ರಾಜಕೀಯದ ಲೋಪದೋಷಗಳನ್ನು ತೋರಿಸಿ, ಅದಕ್ಕೆ ಪರಿಹಾರವನ್ನು ಹೇಳುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಿದ್ದಾರೆ. ಟೀಸರ್ ಚೆನ್ನಾಗಿದೆ. ಇನ್ನು, ಈ ಚಿತ್ರದ ನಿರ್ಮಾಪಕರಾದ ವರದರಾಜು ಅವರು ವೈದ್ಯರಾಗಿದ್ದು, ಸಾಮಾಜಿಕ ಕಾಳಜಿಯಿರುವ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಚಿತ್ರ ಯಶಸ್ವಿಯಾಗಲಿ ಎಂದು ದೇವರಾಜ್ ....
ಕನ್ನಡ ನಾಡಿನ ಹಿರಿಮೆ ಸಾರುವ ಮೊದಲ ಮಿಡಿತ
ಹಿರಿಯ ನಿರ್ದೇಶಕ ಭಗವಾನ್ ಬಳಿ ತರಭೇತಿ ಪಡೆದುಕೊಂಡಿರುವ ಹರಿಚೇತ್ ‘ಮೊದಲ ಮಿಡಿತ’ ಚಿತ್ರಕ್ಕೆ ಕಥೆ,ಚಿತ್ರಕಥೆ,ಸಂಭಾಷಣೆ, ಸಾಹಿತ್ಯ, ಸಂಗೀತ, ನಿರ್ದೇಶನ ಮಾಡುವ ಜೊತೆಗೆ ಹರೀಶ್ಡ್ಯಾಮಿ ಕ್ರಿಯೇಶನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ಪ್ರೀತಿಗಷ್ಟೇ ಜಾಗವಿಲ್ಲದೆ ತಂದೆ-ತಾಯಿ ಮಗನ ಸೆಂಟಿಮೆಂಟ್, ಆಕ್ಷನ್, ಕಾಮಿಡಿ, ನಾಲ್ಕು ಹಾಡುಗಳು, ಫೈಟ್ಗಳು ಇರಲಿದೆ. ಹಾಗೂ ಕನ್ನಡ ನಾಡು ಶಾಂತಿಯ ಬೀಡು, ನಮ್ಮಯ ಉಸಿರೇ ಕಾವೇರಿ ನೀರು ಎಂಬ ಸಾಹಿತ್ಯ ಇರುವ ಗೀತೆ ಮೊನ್ನೆ ಬಿಡುಗಡೆಗೊಂಡಿತು.
ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಹಾಡುಗಳು ಬಿಡುಗಡೆ: ಜನವರಿಗೆ ಸಿನಿಮಾ ರಿಲೀಸ್ ಕನ್ನಡದಲ್ಲಿ ಈಗಾಗಲೇ ತರಹವೇವಾರಿ ಶೀರ್ಷಿಕೆ ಇರುವ ಚಿತ್ರಗಳು ಬಂದಿವೆ. ಆ ಸಾಲಿಗೆ ಈಗ ಶ್ರೀ ಬಾಲಾಜಿ ಫೋಟೋ ಸ್ಟುಡಿಯೋ ಸಿನಿಮಾ ಕೂಡ ಸೇರಿದೆ. ಈಗಾಗಲೇ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದೆ. ಬಿಡುಗಡೆಗೂ ಮುನ್ನ ಚಿತ್ರದ ಹಾಡುಗಳು ಅದ್ಧೂರಿಯಾಗಿ ರಿಲೀಸ್ ಆಗಿವೆ. ಆಡಿಯೋ ರಿಲೀಸ್ ವೇಳೆ ಅತಿಥಿಯಾಗಿ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ರವರು ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ನೂತನ ಅಧ್ಯಕ್ಷರು ಹಾಗೂ ಕನ್ನಡ ಚಲನಚಿತ್ರದ ಹಿರಿಯ ಛಾಯಾಗ್ರಾಹಕ ಅಶೋಕ್ ಕಶ್ಯಪ್ ಆಗಮಿಸಿ ಹಾಡು ರಿಲೀಸ್ ಮಾಡಿ ತಂಡಕ್ಕೆ ಶುಭ ಕೋರಿದರು. ಹಿರಿಯ ....
ಹೊರಬಂತು ಯು ಟರ್ನ್-೨ ಟ್ರೇಲರ್ ಹಾರರ್ ಅಂಶಗಳನ್ನು ಒಳಗೊಂಡಿದ್ದು, ಪಿಜ್ಜಾ ಸರಬರಾಜು ಮಾಡುವ ವ್ಯಕ್ತಿಯ ಸುತ್ತ ಕಥೆ ಹೋಗುವ ‘ಯು ಟರ್ನ್ ೨’ ಸಿನಿಮಾದ ಟ್ರೇಲರ್ನ್ನು ಶಾಸಕ ಸತೀಶ್ರೆಡ್ಡಿ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಬೆಂಗಳೂರು, ಬಿಡದಿ, ಹೊನ್ನಾವರ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ. ನೋಡುಗರು ಇಷ್ಟಪಡುವಂತಹ ಚಿತ್ರಕಥೆ ಇರಲಿದ್ದು, ಜತೆಗೆ ಸಾಮಾಜಿಕ ಸಂದರ್ಭಗಳ ಸನ್ನಿವೇಶಗಳು ಕಾಣಿಸಿಕೊಳ್ಳಲಿದೆ. ಚಿತ್ರಕಥೆ,ಸಂಭಾಷಣೆ, ಸಾಹಿತ್ಯ, ಸಂಗೀತ, ನಿರ್ದೇಶನ ಮಾಡಿರುವ ಚಂದ್ರುಓಬಯ್ಯ ಒಂದು ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದಕ್ಕೂ ಮುನ್ನ ಇವರು ಎರಡು ಕಾದಂಬರಿ ಮತ್ತು ....