Digvijaya.Film News

Saturday, September 16, 2023

  ದಿಗ್ವಿಜಯ ಟ್ರೈಲರ್ ಆಡಿಯೋ ಬಿಡುಗಡೆ        ರೈತರು ಎದುರಿಸುತ್ತಿರುವ  ಸಂಕಷ್ಟಗಳು ಹಾಗೂ ಅದಕ್ಕೆ ಪರಿಹಾರ ಹುಡುಕುವ ಪ್ರಯತ್ನವನ್ನು  ನಿರ್ದೇಶಕ ದುರ್ಗಾ ಪಿ.ಎಸ್. ಅವರು ತಮ್ಮ ನಿರ್ದೇಶನದ  ದಿಗ್ವಿಜಯ ಚಿತ್ರದ ಮೂಲಕ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೈಲರ್ ಹಾಗೂ ಆಡಿಯೋ ಬಿಡುಗಡೆ ಸಮಾರಂಭ ಎಸ್ ಆರ್ ವಿ ಥಿಯೇಟರಿನಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ  ದುರ್ಗಾ ಪಿ.ಎಸ್. ಕಳೆದ 18 ವರ್ಷಗಳಿಂದ ಇಂಡಸ್ಟ್ರಿಯಲ್ಲಿದ್ದೇನೆ. 65ಕ್ಕೂ ಹೆಚ್ಚು ಚಿತ್ರಗಳಿಗೆ ಸಂಕಲನ‌ಮಾಡಿದ್ದು,  ಸೀಯು, ಕರ್ತ ನಂತರ ಇದು ನನ್ನ ನಿರ್ದೇಶನದ  5 ನೇ ಚಿತ್ರ. ಇತ್ತೀಚೆಗೆ ರೈತರು ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ  ಪರಿಹಾರದ  ಹಣಕ್ಕಾಗಿ ಸೂಸೈಡ್ ....

282

Read More...

Fighter.Film Song.News

Wednesday, September 13, 2023

  *"ಫೈಟರ್" ಚಿತ್ರದ "ಐ ವಾನ ಫಾಲೋ ಯು" ಹಾಡು ಬಿಡುಗಡೆ* .    *ವಿನೋದ್ ಪ್ರಭಾಕರ್ ಅಭಿನಯದ ಫೈಟರ್ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ* .    ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನಡೆಯಿತು. ಗುರುರಂಜನ್ ಶೆಟ್ಟಿ(ನಟಿ ಅನುಷ್ಕಾ ಶೆಟ್ಟಿ ಸಹೋದರ), ನಾಗರಾಜ್, ಕೃಷ್ಣಪ್ಪ , ಗೌರೀಶ್ ಹಾಗೂ ಹಿರಿಯ ಪತ್ರಕರ್ತರಾದ ಕೆ.ಎಸ್ ವಾಸು, ....

247

Read More...

Katera.Film News

Monday, September 11, 2023

  *ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ "ಕಾಟೇರ" ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯ* .    *ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಈ ಚಿತ್ರಕ್ಕೆ ತರುಣ್ ಸುಧೀರ್ ನಿರ್ದೇಶನ* .   ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ನಿರ್ಮಾಣದ, ತರುಣ್ ಸುಧೀರ್ ನಿರ್ದೇಶನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ "ಕಾಟೇರ" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು.   ನಮ್ಮ ಸಂಸ್ಥೆಯ ನಿರ್ಮಾಣದ "ಕಾಟೇರ" ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಈ ....

295

Read More...

Ravike Prasanga.Film News

Thursday, September 14, 2023

  *"ರವಿಕೆ ಪ್ರಸಂಗ" ಚಿತ್ರದ ಟೈಟಲ್ ಸಾಂಗ್ ಬಿಡುಗಡೆ* .   ಹೆಣ್ಣುಮಕ್ಕಳು ನಿತ್ಯ ಧರಿಸುವ ಸೀರೆ,   ಓಲೆ, ಬಳೆ, ಗೆಜ್ಜೆ ಮುಂತಾದವುಗಳ ಬಗ್ಗೆ ಹಾಡು ಬಂದಿದೆ. ಆದರೆ ರವಿಕೆ ಬಗ್ಗೆ ಈವರೆಗೂ ಯಾವುದೇ ಹಾಡು ಬಂದಿಲ್ಲ. ರವಿಕೆಯ ಬಗೆಗಿನ ಹಾಡು ರವಿಕೆ ಕುರಿತಾಗಿಯೇ ನಿರ್ಮಾಣವಾಗಿರುವ "ರವಿಕೆ ಪ್ರಸಂಗ" ಚಿತ್ರದಲ್ಲಿದೆ. ಈ ಚಿತ್ರಕ್ಕಾಗಿ ಕಿರಣ್ ಕಾವೇರಪ್ಪ ಅವರು ಬರೆದಿರುವ "ರವಿ, ರವಿ, ರವಿಕೆ ಪ್ರಸಂಗ" ಎಂಬ ಟೈಟಲ್ ಸಾಂಗ್ ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ. ಈ ಹಾಡಿಗೆ ವಿನಯ್ ಶರ್ಮ ಸಂಗೀತ ನೀಡಿದ್ದು, ಚೈತ್ರ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಕೃಷ್ಣೇಗೌಡ ಅವರು ಈ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ....

397

Read More...

Varahachakram.Film News

Wednesday, September 13, 2023

  ವರಾಹಚಕ್ರಂ ಶೀರ್ಷಿಕೆ ಅನಾವರಣ, ಮಂಜು ಮಸ್ಕಲ್ ಮಟ್ಟಿ ನಿರ್ದೇಶನದ ನೂತನ ಚಿತ್ರಕ್ಕೆ ಚಾಲನೆ      ದಶಕದ ಹಿಂದೆ ಮನಸುಗಳ ಮಾತು ಮಧುರ, ಯುಗಪುರುಷ, ಗೌರೀಪುತ್ರ ಚಿತ್ರಗಳನ್ನು ನಿರ್ದೇಶಿಸಿದ್ದ ಮಂಜು ಮಸ್ಕಲ್ ಮಟ್ಟಿ ಅವರು ಬಹಳ ವರ್ಷಗಳ ನಂತರ, ಆಧುನಿಕ ಪಂಚ ಪಾಂಡವರನ್ನಿಟ್ಟುಕೊಂಡು, ವಿಭಿನ್ನ ಕಥಾನಕದೊಂದಿಗೆ ಚಿತ್ರ ನಿರ್ದೇಶನಕ್ಕೆ ಮರಳಿದ್ದಾರೆ. ತಮ್ಮ  ಹೊಸ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮವನ್ನು ವಿಭಿನ್ನವಾಗಿ ಆಯೋಜಿಸಿದ್ದರು.    ಹಿರಿಯನಟಿ ಪ್ರೇಮಾ, ಸಾಯಿಕುಮಾರ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವ ಈ ಚಿತ್ರದ ಹೆಸರು ’ವರಾಹಚಕ್ರಂ’. ಈ ಚಿತ್ರವನ್ನು ಮನ್ವಂತರಿ ಮೂವಿಮೇಕರ್ಸ್ ಅಡಿಯಲ್ಲಿ ಒಂದಷ್ಟು ಸ್ನೇಹಿತರೆಲ್ಲ ಸೇರಿ ಈ ....

317

Read More...

Parishuddam.Film News

Friday, September 15, 2023

  ಗಂಡ ಹೆಂಡತಿ ಸಂಬಂಧ ಪರಿಶುದ್ಧವಾದುದು        ವಿಭಿನ್ನ ಕಥಾಹಂದರ ಹೊಂದಿರುವ ’ಪರಿಶುದ್ಧಂ’ ಚಿತ್ರಕ್ಕೆ ಆರೋನ್ ಕಾರ್ತಿಕ್‌ವೆಂಕಟೇಶ್ ಕಥೆ, ಸಾಹಿತ್ಯ, ಸಂಗೀತ ಜತೆಗೆ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದು, ನಿರ್ಮಾಣದಲ್ಲಿ ಪಾಲುದಾರನಾಗಿದ್ದೇನೆ. ಮದುವೆ ಅನ್ನುವ ಪದ್ದತಿ ಪರಿಶುದ್ದವಾದದು. ಗಂಡಹೆಂಡತಿ ಸಂಬಂಧದಲ್ಲಿ ಮೂರನೇ ವ್ಯಕ್ತಿ ಪ್ರವೇಶ ಆಗಬಾರದೆಂದು ಸಂದೇಶದಲ್ಲಿ ಹೇಳಲಾಗಿದೆ. ಇದನ್ನು ಕಮರ್ಷಿಯಲ್ ರೀತಿಯಲ್ಲಿ ತೋರಿಸಲಾಗಿದೆ. ನಟಿ ಕಲ್ಪನಾರಂತೆ ಸ್ಪರ್ಶಾರೇಖಾ ತೂಕದ ಪಾತ್ರವನ್ನು ನಿರ್ವಹಿಸಿದ್ದಾರೆ. ಅತಿಥಿಯಾಗಿ ಎಂ.ಡಿ.ಕೌಶಿಕ್ ಕೊನೆ ದೃಶ್ಯದಲ್ಲಿ ಬರಲಿದ್ದು, ಭಾಗ-2ರಲ್ಲಿ ಇವರಿಂದಲೇ ಸಿನಿಮಾವು ಶುರುವಾಗುತ್ತದೆ. ಬೆಂಗಳೂರು, ....

270

Read More...

Ranahaddu.Film News

Wednesday, September 13, 2023

  ರಣಹದ್ದು ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ರಾಕಿಂಗ್ ಸ್ಟಾರ್ ಯಶ್ ಮೊದಲ ನಾಯಕಿ   ಜಂಬದ ಹುಡುಗಿ ಕೈಯಲ್ಲಿ ’ರಣಹದ್ದು’: ಫಸ್ಟ್ ಲುಕ್ ರಿಲೀಸ್ ಮಾಡಿದ ರಾಕಿಂಗ್ ಸ್ಟಾರ್ ಮೊದಲ ನಾಯಕಿ   'ರಣಹದ್ದು’ ಸ್ಯಾಂಡಲ್ ವುಡ್ ನಲ್ಲಿ ರಿಲೀಸ್ ಗೆ ಸಜ್ಜಾಗುತ್ತಿರುವ ಮತ್ತೊಂದು ಹೊಸಬರ ಹೊಸ  ಸಿನಿಮಾ. ತಮಿಳು ನಿರ್ದೇಶಕ ಮಾಣಿಕ್ಯ ಜೈ ಸಾರಥ್ಯದಲ್ಲಿ ಮೂಡಿಬಂದ ಸಿನಿಮಾ ಇದಾಗಿದ್ದು ಹೊಸಬರೆ ನಟಿಸಿದ್ದಾರೆ. ಮಾಣಿಕ್ಯ ನಿರ್ದೇಶನದ ಜೊತೆಗೆ ರಣಹದ್ದು ಸಿನಿಮಾದಲ್ಲಿ ನಟಿಸಿದ್ದಾರೆ.   ಮಾಣಿಕ್ಯ ಜೈ ಈಗಾಗಲೇ ತಮಿಳಿನಲ್ಲಿ 2 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ರಣಹದ್ದು ಕನ್ನಡದ ಮೊದಲ ಸಿನಿಮಾವಾಗಿದೆ. ಇದೀಗ ರಣಹದ್ದು ಚಿತ್ರದ ಫಸ್ಟ್ ಲುಕ್ ಮೂಲಕ ಕನ್ನಡ ....

293

Read More...

Bun Tea.Film News

Tuesday, September 12, 2023

  * ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆ ಬಗ್ಗೆ ಹೇಳ್ತಿದ್ದಾರೆ ’ಬನ್ ಟೀ’: ಟ್ರೈಲರ್ ಮೂಲಕ ಗಮನ  ಸೆಳೆಯುತ್ತಿದೆ ಸಿನಿಮಾ   * ಟ್ರೈಲರ್ ಮೂಲಕ ಬಂದ ’ಬನ್ ಟೀ’: ಹದಗೆಟ್ಟಿರುವ ಶಿಕ್ಷಣ ವ್ಯವಸ್ಥೆ ಬಗ್ಗೆ ಹೇಳ್ತಿದೆ ಈ ಸಿನಿಮಾ      * ಬನ್ರಿ ಚಿತ್ರಮಂದಿರಕ್ಕೆ: ಕುಡಿದು ತಿನ್ನೋಣ ’ಬನ್ ಟೀ’     ಸ್ಯಾಂಡಲ್‌ವುಡ್‌ನಲ್ಲಿ ವಾರಕ್ಕೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತವೆ. ಅದರಲ್ಲಿ ಕೆಲವು ಹೊಸಬರ ಹೊಸ ಸಿನಿಮಾಗಳು ಇವೆ. ಇದೀಗ ಮತ್ತೊಂದು ಹೊಸಬರ ಹೊಸ ಸಿನಿಮಾ ರಿಲೀಸ್ ರೆಡಿಯಾಗಿದೆ. ಹೌದು, ’ಬನ್ ಟೀ’ ಎನ್ನುವ ಸಿನಿಮಾ ಚಿತ್ರಮಂದಿರಕ್ಕೆ ಬರಲು ಸಜ್ಜಾಗಿದೆ. ರಿಲೀಸ್‌ಗೂ ಮೊದಲೇ ಸಿನಿಮಾತಂಡ ಟ್ರೈಲರ್ ಮೂಲಕ ಮಾಧ್ಯಮದ ಮುಂದೆ ಹಾಜರಾಗಿತ್ತು. ....

278

Read More...

Raven.Film Launch.News

Monday, September 11, 2023

  *ವಿಭಿನ್ನ ಕಥೆಯ "ರಾವೆನ್" ಆರಂಭ* .    *ಕನ್ನಡದಲ್ಲೊಂದು "ಕಾಗೆ" ಕುರಿತಾದ ಚಿತ್ರ*   ವಿಶ್ವ ಪ್ರೊಡಕ್ಷನ್ಸ್ ಹಾಗೂ ಆತ್ಮ ಸಿನಿಮಾಸ್ ಲಾಂಛನದಲ್ಲಿ ವಿಶ್ವನಾಥ್.ಜಿ.ಪಿ ಹಾಗೂ ಪ್ರಬಿಕ್ ಮೊಗವೀರ್ ಅವರು ನಿರ್ಮಿಸುತ್ತಿರುವ ಹಾಗೂ ವೇದ್ ನಿರ್ದೇಶನದ "ರಾವೆನ್" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಶಾಸಕ ಗೋಪಲಯ್ಯ ಚಿತ್ರದ ಮೊದಲ ದೃಶ್ಯಕ್ಕೆ ಆರಂಭ ಫಲಕ ತೋರಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಿರ್ದೇಶಕ ಎಂ.ಡಿ.ಶ್ರೀಧರ್ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.   "ರಾವೆನ್" ಎಂದರೆ ಕಾಗೆಯ ಹೆಸರು. ಸಾಮಾನ್ಯವಾಗಿ ಕಾಗೆ ....

353

Read More...

Choo Mantra.Film News

Monday, September 11, 2023

*ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರಿಂದ ಬಿಡುಗಡೆಯಾಯಿತು "ಛೂಮಂತರ್" ಚಿತ್ರದ ಟೈಟಲ್ ಟ್ರ್ಯಾಕ್*    *ಶರಣ್ ಅಭಿನಯದ ಈ ಚಿತ್ರ ಬಿಡುಗಡೆಗೆ ಸಿದ್ದ*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರದ ಟೈಟಲ್ ಟ್ರ್ಯಾಕ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಕ್ರೇಜಿ ಸ್ಟಾರ್ ವಿ.ರವಿಚಂದ್ರನ್ ಅವರು ಟೈಟಲ್ ಟ್ರ್ಯಾಕ್ ಬಿಡುಗಡೆ ಮಾಡಿದರು.   ಚಿತ್ರತಂಡದವರ ಮಾತು ಕೇಳಿದಾಗ ಈ ತಂಡದಿಂದ ಒಳ್ಳೆಯ ಚಿತ್ರ ಬರುವ ಎಲ್ಲಾ ಲಕ್ಷಣಗಳು ಇದೆ ಎಂದು ಮಾತು ಆರಂಭಿಸಿದ ಕ್ರೇಜಿಸ್ಟಾರ್ ರವಿಚಂದ್ರನ್, ಶರಣ್ ಒಬ್ಬ ಒಳ್ಳೆಯ ನಟ. ....

244

Read More...

Production No # 6.News

Sunday, September 10, 2023

 

ರಮೇಶ್ ಅರವಿಂದ್ - ಗೋಲ್ಡನ್ ಸ್ಟಾರ್ ಗಣೇಶ್

  ಜೋಡಿಯ ಹೊಸ ಚಿತ್ರಕ್ಕೆ ವಿಖ್ಯಾತ್ ನಿರ್ದೇಶನ

 

   ಕನ್ನಡ ಚಿತ್ರರಂಗಕ್ಕೆ ವಿಖ್ಯಾತ್ ಚಿತ್ರ  ಪ್ರೊಡಕ್ಷನ್ಸ್ ಮೂಲಕ ಪುಷ್ಪಕ ವಿಮಾನ, ಇನ್ಸ್ ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು  ಕೊಡುಗೆಯಾಗಿ ನೀಡಿದ ನಿರ್ಮಾಪಕ ವಿಖ್ಯಾತ್ ತಮ್ಮ ಸಂಸ್ಥೆಯ ನಿರ್ಮಾಣದ  ಆರನೇ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಪ್ರಥಮ ಪ್ರಯತ್ನದಲ್ಲೇ ಮಲ್ಟಿ ಸ್ಟಾರ್ ‌ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ. 

264

Read More...

Daiji.Film News

Sunday, September 10, 2023

  ಶಿವಾಜಿ ಸುರತ್ಕಲ್ ಭಾಗ ೧ ಮತ್ತು ೨ ರ ಯಶಸ್ಸಿನ ಬೆನ್ನಲ್ಲೇ ಮತ್ತೊಂದು ಚಿತ್ರಕ್ಕೆ ನಟ ರಮೇಶ್ ಅರವಿಂದ್ ಮತ್ತು ನಿರ್ದೇಶಕ ಆಕಾಶ್ ಶ್ರೀವತ್ಸ ಕೈಜೋಡಿಸುತ್ತುದ್ದಾರೆ. ಚಿತ್ರದ ಶೀರ್ಷಿಕೆ ’ದೈಜಿ’.   ಈ ಚಿತ್ರವನ್ನು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ನಿರ್ಮಿಸುತ್ತಿದ್ದಾರೆ. ಇದಕ್ಕೂ ಮುಂಚೆ ಕಾನ್ಸ್ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ತೆರೆ ಕಂಡ ಕಿರು ಚಿತ್ರ ಸುಳ್ಳೇ ಸತ್ಯ, ಪವನ್ ಕುಮಾರ್ ರವರ ಲೂಸಿಯಾ, ಡಾಲಿ ಧನಂಜಯ್ ಅವರು ನಟಿಸಿದ ’ಬದ್ಮಾಶ್’ ಇದೇ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿದ್ದವು.   ಚಿತ್ರದ ಶೀರ್ಶಿಕೆ ’ದೈಜಿ’ ಗೆ ಬೇರೆ ಬೇರೆ ಭಾಷೆಗಳಲ್ಲಿ ಬೇರೆ ಬೇರೆ ಅರ್ಥಗಳಿವೆ. ಕೊಂಕಣಿಯಲಿ ದೈಜಿ ಎಂದರೆ ರಕ್ತ ....

270

Read More...

Taekwondo Girl.News

Saturday, September 09, 2023

  *"ಟೇಕ್ವಾoಡೋ ಗರ್ಲ್ "* ಚಿತ್ರದ ಧ್ವನಿ ಸುರುಳಿ ಬಿಡುಗಡೆ     10 ವರ್ಷದ ಪೋರಿ 4 ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ಗಳಲ್ಲಿ ಭಾಗವಹಿಸಿ ಬ್ಲಾಕ್ ಬೆಲ್ಟ್ ಪಡೆದು ಈಗ ನಟಿಯಾಗಿ "ಟೇಕ್ವಾಂಡೋ ಗರ್ಲ್" ಆಗಿ ಬೆಳ್ಳಿತೆರೆಗೆ ಎಂಟ್ರಿ   "ಟೇಕ್ವಾಂಡೋ ಸಮರ ಕಲೆ ಕುರಿತ ಚಿತ್ರ ಟೇಕ್ವಾಂಡೋ ಗರ್ಲ್ ಚಿತ್ರದ ಹಾಡುಗಳ ಬಿಡುಗಡೆ"   ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣಿನ ಕುಲಕ್ಕೆ ಕಂಟಕಪ್ರಾಯವಾದ ಕೃತ್ಯಗಳು ನಡೆಯುತ್ತಲೇ ಬಂದಿದೆ. ಹೆಣ್ಣು ತನ್ನನ್ನು ತಾನು ರಕ್ಷಿಸಿಕೊಳ್ಳುವುದು ಅತೀ ಮುಖ್ಯವಾದ ವಿಚಾರ ಈ ನಿಟ್ಟಿನಲ್ಲಿ ಸದ್ದಿಲ್ಲದೆ ಒಂದು ಸಿನಿಮಾ ತಯಾರಾಗಿದೆ. ಚಿತ್ರದ ಹೆಸರು "ಟೇಕ್ವಾಂಡೋ ಗರ್ಲ್".   ಈ ಚಿತ್ರದಲ್ಲಿ ಒಂದು ಬಡ ಕುಟುಂಬದ ....

285

Read More...

Bhageeratha.Film News

Saturday, September 09, 2023

  *ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಭಗೀರಥ" ಚಿತ್ರಕ್ಕೆ ಚಾಲನೆ* .   ಸಾಯಿ ರಮೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಕೆ.ರಮೇಶ್ ಹಾಗೂ ಬಿ.ಭೈರಪ್ಪ ಮೈಸೂರು ನಿರ್ಮಿಸುತ್ತಿರುವ ಹಾಗೂ ರಾಮ್ ಜನಾರ್ದನ್ ನಿರ್ದೇಶನದ "ಭಗೀರಥ" ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನೆರವೇರಿತು. ‌ಮೊದಲ ಸನ್ನಿವೇಶಕ್ಕೆ ಹೆಸರಾಂತ ನಿರ್ದೇಶಕ ಸಾಯಿಪ್ರಕಾಶ್ ಆರಂಭ ಫಲಕ ತೋರಿದರು. ಸಿರಿ ಕನ್ನಡ ವಾಹಿನಿ ಮುಖ್ಯಸ್ಥರಾದ ರಾಜೇಶ್ ರಾಜಘಟ್ಟ ಕ್ಯಾಮೆರಾ ಚಾಲನೆ ಮಾಡಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   ನಾನು 2005 ರಲ್ಲಿ "ಬಾಯ್ ಫ್ರೆಂಡ್" ಮೂಲಕ ನನ್ನ ಚಿತ್ರರಂಗದ ಜರ್ನಿ ಆರಂಭವಾಯಿತು. ನಂತರ ಕೆಲವು ಚಿತ್ರಗಳಲ್ಲಿ ....

287

Read More...

Raja Rani.Song Shooting.News

Friday, September 08, 2023

  ಆಂಜನೇಯನ ಸನ್ನಿದಿಯಲ್ಲಿ ಯೋಗಿ ನೃತ್ಯ        ‘ವಜ್ರಕಾಯ’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಜೊತೆ ಸ್ಟಾರ್ ಕಲಾವಿದರು ದೇವರ ಹಾಡಿಗೆ ಡ್ಯಾನ್ಸ್ ಮಾಡಿದ್ದರು. ಇದರಿಂದ ಪ್ರೇರಿತಗೊಂಡ ‘ರಾಜರಾಣಿ’ ಚಿತ್ರದ ನಾಯಕ ಮತ್ತು ನಿರ್ದೇಶಕ ಬಳ್ಳಾರಿಯ ರಣಧೀರ್ ಇದೇ ತರಹದ ಗೀತೆಯನ್ನು ಸೃಷಿಸಿದ್ದಾರೆ. ‘ಇಟ್ಟಿಗೆ ಗೂಡಿನಲ್ಲಿ ರಾಜರಾಣಿ’ ಎಂಬ ಅಡಿಬರಹವಿದೆ. ರಾಜನಕುಂಟೆ ಬಯಲು ಭೂಮಿಯಲ್ಲಿ ಬೃಹದಕಾರದ ಕಲರ್‌ಫುಲ್ ಸೆಟ್‌ನಲ್ಲಿ ಹತ್ತು ಅಡಿ ಎತ್ತರದ ಆಂಜನೇಯನ ಮೂರ್ತಿಯನ್ನು ಪ್ರತಿಷ್ಟಾಪಿಸಲಾಗಿತ್ತು. ಮಾಧ್ಯಮದವರು ಸೆಟ್‌ಗೆ ಭೇಟಿ ನೀಡಿದಾಗ  ರವಿತಪಸ್ವಿ ಸಾಹಿತ್ಯ, ಪ್ರಭು ನೃತ್ಯ ....

270

Read More...

Bhima Koregaon.News

Friday, September 08, 2023

  ‌‌‌       ಸತ್ಯಘಟನೆ ಆಧಾರಿತ "ಭೀಮಾ ಕೋರೇಗಾಂವ"  ಶೀರ್ಷಿಕೆ ಅನಾವರಣ      ಇತ್ತೀಚೆಗಷ್ಟೇ ಸಂಜು ವೆಡ್ಸ್ ಗೀತಾ-2 ಚಿತ್ರಕ್ಕೆ ಚಾಲನೆ ನೀಡಿದ್ದ ನಿರ್ದೇಶಕ ನಾಗಶೇಖರ್,  ಅದರ ಬೆನ್ನಲ್ಲೇ ಮತ್ತೊಂದು  ಬಿಗ್ ಪ್ರಾಜೆಕ್ಟ್ ಗೆ  ಕೈ  ಹಾಕಿದ್ದಾರೆ. ರೆವಲ್ಯೂಷನರಿ ಸಬ್ಜೆಕ್ಟ್ ಇಟ್ಟುಕೊಂಡು ನೈಜ ಘಟನೆಯನ್ನು ತೆರೆಯ ಮೇಲೆ ಹೇಳಹೊರಟಿದ್ದಾರೆ. ಅದಕ್ಕೆ ಕೊಟ್ಟಿರುವ ಹೆಸರು ಭೀಮಾ ಕೋರೇಗಾಂವ.    ನಾಗಶೇಖರ್ ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿ ಛಲವಾದಿ ಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬಹು ಸೂಕ್ಷ್ಮ ವಿಚಾರ ಇಟ್ಟುಕೊಂಡು  ಮಾಡುತ್ತಿರುವ ಚಲನಚಿತ್ರ ಇದಾಗಿದ್ದು,  ಬೆಂಗಳೂರಿನ ಅಶೋಕಾ ....

299

Read More...

Chandramukhi 2.Film News

Friday, September 08, 2023

 

*ಸೆಪ್ಟಂಬರ್ 28ಕ್ಕೆ ಲೈಕಾ ನಿರ್ಮಾಣದ, ರಾಘವ್ ಲಾರೆನ್ಸ್-ಕಂಗನಾ ನಟನೆಯ ‘ಚಂದ್ರಮುಖಿ-2’ ರಿಲೀಸ್*

 

ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ ’ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ನಿರ್ಧರಿಸಲಾಗಿತ್ತು. ಆದರೆ ಇದೀಗ ’ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ತೆರೆ ಕಾಣಲಿದೆ. ಅಂದ್ರೆ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ.

295

Read More...

Chaser.Film News

Monday, September 04, 2023

 

*ಸುಮಂತ್ ಶೈಲೇಂದ್ರ ಹುಟ್ಟುಹಬ್ಬಕ್ಕೆ ಬರಲಿದೆ "ಚೇಸರ್" ಚಿತ್ರದ ಫಸ್ಟ್ ಲುಕ್* .

 

 *ಎಂ.ಜೈರಾಮ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಮುಕ್ತಾಯಹಂತದಲ್ಲಿ* .

 

ಮಾಲತಿ ಶೇಖರ್ ಶಿವಮೊಗ್ಗ ನಿರ್ಮಾಣದ, ಎಂ ಜೈರಾಮ್ ನಿರ್ದೇಶನದಲ್ಲಿ ಸುಮಂತ್ ಶೈಲೇಂದ್ರ ನಾಯಕನಾಗಿ ನಟಿಸುತ್ತಿರುವ "ಚೇಸರ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದ್ದು, ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

 

ಸೆಪ್ಟೆಂಬರ್ 7 ನಾಯಕ ,  ಶೈಲೇಂದ್ರ ಹುಟ್ಟುಹಬ್ಬ. ಅದೇ ದಿನ "ಚೇಸರ್" ಚಿತ್ರದ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ ಸುಮಂತ್ ಅವರಿಗೆ ಹುಟ್ಟುಹಬ್ಬದ ಉಡುಗೊರೆ ನೀಡಲು ಚಿತ್ರತಂಡ ಮುಂದಾಗಿದೆ‌.

267

Read More...

Adharsha Raitha.News

Wednesday, September 06, 2023

    *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅನಾವರಣವಾಯಿತು ಡಾ||ಅಮರನಾಥ ರೆಡ್ಡಿ ವಿ ನಿರ್ಮಿಸಿ, ನಟಿಸಿರುವ "ಆದರ್ಶ ರೈತ" ಚಿತ್ರದ ಟ್ರೇಲರ್*    *ಇದು ರೈತನಿಂದ ರೈತರಿಗಾಗಿ ನಿರ್ಮಾಣವಾಗಿರುವ ಚಿತ್ರ*   ರೈತನ ಕುರಿತು ಸಾಕಷ್ಟು ಚಿತ್ರಗಳು ಬಂದಿದೆ‌. ಆದರೆ ರೈತ ಏನು ಮಾಡಬೇಕು? ಏನು ಮಾಡಬಾರದು? ಎಂದು ಹೇಳುವ ಕಥಾಹಂದರ ಹೊಂದಿರುವ "ಆದರ್ಶ ರೈತ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ, ಹಾಡುಗಳ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ನಟಿ ಪ್ರಿಯಾ ಹಾಸನ್, ವೇಗಸ್ ಆಸ್ಪತ್ರೆ ಮುಖ್ಯಸ್ಥರಾದ ನಾರಾಯಣ ಸ್ವಾಮಿ , ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ, ಆರ್ ವಿ ಚೌಡಪ್ಪ(ACP)  ಹಾಗೂ ನಿರ್ಮಾಪಕ ಆಂತರ್ಯ ಸತೀಶ್ ಅವರು ಮುಖ್ಯ ....

406

Read More...

Skandha.Film News

Tuesday, September 05, 2023

  *ಸೆ.28 ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ರಿಲೀಸ್*       ರಾಮ್ ಪೋತಿನೇನಿ ಹಾಗೂ ಶ್ರೀಲೀಲಾ ನಟನೆಯ ‘ಸ್ಕಂದ’ ಸಿನಿಮಾ ಸೆಪ್ಟೆಂಬರ್ 15ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ, ಈಗ ತಂಡ ಸಿನಿಮಾ ರಿಲೀಸ್ ದಿನಾಂಕವನ್ನು ಎರಡು ವಾರ ಮುಂದಕ್ಕೆ ಹಾಕಿದೆ. ಅರ್ಥಾತ್, ಸೆಪ್ಟೆಂಬರ್ 28ರಂದು ಚಿತ್ರ ರಿಲೀಸ್ ಮಾಡಲು ಪ್ಲ್ಯಾನ್ ರೂಪಿಸಿಕೊಂಡಿದೆ.     ಬೋಯಪಾಟಿ ಶ್ರೀನು ಆಕ್ಷನ್ ಕಟ್ ಹೇಳಿರುವ ಆಕ್ಷನ್ ಎಂಟರ್ ಟೈನರ್ ಸ್ಕಂದ ಸಿನಿಮಾದ ಟ್ರೇಲರ್ ಹಾಗೂ ಹಾಡುಗಳು ಭಾರೀ ಸದ್ದು ಮಾಡಿವೆ. ಪ್ರೀ ರಿಲೀಸ್ ವ್ಯವಹಾರದಲ್ಲಿಯೂ ದಾಖಲೆ ಬರೆದಿರುವ ಈ ಚಿತ್ರವನ್ನು ಶ್ರೀನಿವಾಸ್ ಸಿಲ್ವರ್ ಸ್ಕ್ರೀನ್ ಬ್ಯಾನರ್ ಅಡಿ ಶ್ರೀನಿವಾಸ್ ಚಿತ್ತೂರಿ ನಿರ್ಮಾಣ ....

262

Read More...
Copyright@2018 Chitralahari | All Rights Reserved. Photo Journalist K.S. Mokshendra,