ಒಳ್ಳೆಯ ಪೊಲೀಸ್ ಸ್ಟೋರಿ ಫೀಲ್ ಕೊಡುವ ಸಿನಿಮಾ ‘ಹೊಯ್ಸಳ’ ಧನಂಜಯ್ 25ನೇ ಚಿತ್ರದಲ್ಲಿದೆ ಬೆಳಗಾವಿಯ ರಗಡ್ ಕಥೆ ಕೆ.ಆರ್.ಜಿ ಸ್ಟುಡಿಯೋಸ್ ಬ್ಯಾನರ್ನಲ್ಲಿ ಯೋಗಿ. ಜಿ. ರಾಜ್ ಹಾಗೂ ಕಾರ್ತಿಕ್ ಗೌಡ ಅವರು ನಿರ್ಮಿಸಿರುವ ‘ಹೊಯ್ಸಳ’ ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದ್ದು, ಇದೇ ಮಾರ್ಚ್ 30ರಂದು ವಿಶ್ವದಾದ್ಯಂತ ಕನ್ನಡ ಭಾಷೆಯಲ್ಲಿಯೇ ಬಿಡುಗಡೆಯಾಗಲಿದೆ. ಈಗಾಗಲೇ ಟೀಸರ್, ಹಾಡುಗಳಿಂದ ಪ್ರೇಕ್ಷಕರ ಹೃದಯ ಗೆದ್ದಿರುವ ’ಹೊಯ್ಸಳ’ ತಂಡದಿಂದ ಸದ್ಯದಲ್ಲಿಯೇ ಟ್ರೇಲರ್ ಕೂಡ ಬಿಡುಗಡೆ ಆಗಲಿದೆ. ಚಿತ್ರದ ಪ್ರಮೋಷನ್ ಜೋರಾಗಿದ್ದು, ನಾಯಕ ಡಾಲಿ ಧನಂಜಯ್ ಉತ್ತರ ಕರ್ನಾಟಕದಲ್ಲಿ ಸಂಚರಿಸುತ್ತಿದ್ದಾರೆ. ಇತ್ತೀಚೆಗೆ ನಡಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ....
*ಸುಸಜ್ಜಿತ ಎಂ.ಜೆ ಅವ್ಯಾನಾ ರೆಸಾರ್ಟ್ ನಲ್ಲಿ ಆರಂಭವಾಯಿತು ಅನಿಲ್ ಕುಮಾರ್ ಸಾರಥ್ಯದ ಎಂ ಜೆ ಪ್ರೊಡಕ್ಷನ್* . *ನೂತನ ಚಿತ್ರ ನಿರ್ಮಾಣ ಸಂಸ್ಥೆ ಉದ್ಘಾಟನೆಯಲ್ಲಿ ಹಲವು ಚಿತ್ರರಂಗದ ಹಲವು ಗಣ್ಯರು ಭಾಗಿ* . ಜಿಗಣಿ-ಆನೇಕಲ್ ರಸ್ತೆಯಲ್ಲಿ ಎಂ.ಜೆ ಅವ್ಯಾನಾ ಎಂಬ ಅದ್ಭುತ ರೆಸಾರ್ಟ್ ಇದೆ. ಈ ಸುಂದರ ರೆಸಾರ್ಟ್ ನಲ್ಲಿ ಅನಿಲ್ ಕುಮಾರ್ ಅವರ ಸಾರಥ್ಯದ ಎಂ ಜೆ ಪ್ರೊಡಕ್ಷನ್ ಎಂಬ ನಿರ್ಮಾಣ ಸಂಸ್ಥೆ ಆರಂಭವಾಯಿತು. ಖ್ಯಾತ ನಟ ಶರಣ್, "ಕಾಂತಾರ" ಖ್ಯಾತಿಯ ನಟಿ ಸಪ್ತಮಿ ಗೌಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕರ್ನಾಟಕ ಚಲನಚಿತ್ರ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಎನ್.ಸುಬ್ರಹ್ಮಣ್ಯ, ನಿರ್ದೇಶಕ ಹರಿ ಸಂತು, ಮುಖೇಶ್ ಕುಮಾರ್, ಸತೀಶ್ ಕುಮಾರ್ ....
*ವಿನಯ್ ರಾಜ್ ಕುಮಾರ್ ನಟನೆಯ ‘ಒಂದು ಸರಳ ಪ್ರೇಮಕಥೆ’ ಪೋಸ್ಟರ್ ರಿಲೀಸ್* ಸಿಂಪಲ್ ಸುನಿ ನಿರ್ದೇಶನದಲ್ಲಿ ವಿನಯ್ ರಾಜ್ ಕುಮಾರ್ ನಟಿಸುತ್ತಿರುವ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ‘ಒಂದು ಸರಳ ಪ್ರೇಮಕಥೆ’. ಚಿತ್ರದಲ್ಲಿ ನಾಯಕಿಯರಾಗಿ ಸ್ವಾತಿಷ್ಠ ಕೃಷ್ಣನ್, ‘ರಾಧಾ ಕೃಷ್ಣ’ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ನಟಿಸುತ್ತಿದ್ದಾರೆ. ಈಗಾಗಲೇ ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಮೈಸೂರಿನಲ್ಲಿ ಎರಡನೇ ಹಂತದ ಚಿತ್ರೀಕರಣದಲ್ಲಿ ನಿರತವಾಗಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ ಚಿತ್ರತಂಡ. ನಟ ವಿನಯ್ ರಾಜ್ ಕುಮಾರ್ ಮಾತನಾಡಿ ಮೊದಲ ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ನನಗೆ ....
*"ನಮ್ ನಾಣಿ ಮದ್ವೆ ಪ್ರಸಂಗ" ದಲ್ಲಿ ನಗುನೇ ಜಾಸ್ತಿ ಅಂತಾರೆ ಹೇಮಂತ್ ಹೆಗ್ಡೆ*
ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಜನಪ್ರಿಯರಾಗಿರುವ ಹೇಮಂತ್ ಹೆಗ್ಡೆ ನಿರ್ದೇಶಿಸಿ, ಮುಖ್ಯಪಾತ್ರದಲ್ಲಿ ನಟಿಸಿರುವ "ನಮ್ ನಾಣಿ ಮದ್ವೆ ಪ್ರಸಂಗ" ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕ ವಿ.ಮನೋಹರ್ ಹವ್ಯಕ ಭಾಷೆಯ ಈ ಹಾಡನ್ನು ಬಿಡುಗಡೆ ಮಾಡಿದರು. ಹೇಮಂತ್ ಹೆಗ್ಡೆ ಅವರೆ ಬರೆದಿರುವ ಈ ಹಾಡಿಗೆ ರವಿ ಮುರೂರ್ ಸಂಗೀತ ಸಂಯೋಜನೆ ಮಾಡಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಹಾಡಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಹೈಡ್ ಅಂಡ್ ಸೀಕ್ ಫಸ್ಟ್ ಲುಕ್ ಬಿಡುಗಡೆ ಲಕ್ಷ್ಮಣ ಖ್ಯಾತಿಯ ನಟ ಅನೂಪ್ ರೇವಣ್ಣ ನಟಿಸಿರುವ ಹೈಡ್ ಅಂಡ್ ಸೀಕ್ ಚಿತ್ರವು ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದೆ. ಪುನೀತ್ ನಾಗರಾಜು ಅವರ ನಿರ್ದೇಶನದ ಈ ಚಿತ್ರದಲ್ಲಿ ಅನೂಪ್ ರೇವಣ್ಣ ಒಬ್ಬ ಕಿಡ್ನಾಪರ್ ಆಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಹಾಗೂ ಮೇಕಿಂಗ್ ವೀಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಚಿತ್ರದ ಫಸ್ಟ್ ಲುಕ್ ಅನಾವರಣಗೊಳಿಸಿದರೆ, ಮಾಜಿಸಚಿವ ಹೆಚ್.ಎಂ.ರೇವಣ್ಣ ಅವರು ಮೇಕಿಂಗ್ ವೀಡಿಯೋ ಲಾಂಚ್ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಂ.ರೇವಣ್ಣ ಪುನೀತ್ ....
ಪ್ರಭುತ್ವ ಹಾಡುಗಳ ಸಮಯ
ರವಿರಾಜ್.ಎಸ್.ಕುಮಾರ್ ನಿರ್ಮಾಣ, ಆರ್.ರಂಗನಾಥ್ ನಿರ್ದೇಶನ ‘ಪ್ರಭುತ್ವ’ ಚಿತ್ರದ ಹಾಡುಗಳ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಮತದಾನದ ಮಹತ್ವ ಸಾರುವ ಅಂಶಗಳು ಇರಲಿದೆ. ಇಂಡಿಯನ್ ಪಾಲಿಟಿಕ್ಸ್ ಅಂತ ಅಡಿಬರಹದಲ್ಲಿ ಹೇಳಿಕೊಂಡಿದೆ. ಚೇತನ್ಚಂದ್ರ ನಾಯಕ. ಪಾವನಗೌಡ ನಾಯಕಿ. ಉಳಿದಂತೆ ಶರತ್ಲೋಹಿತಾಶ್ವ, ವಿಜಯ್ಚೆಂಡೂರು, ಡ್ಯಾನಿ ಮುಂತಾದವರು ನಟಿಸಿದ್ದಾರೆ.
ಫ್ಲೆಮಿಂಗೋ ಸೆಲೆಬ್ರೀಟೀಸ್ ವಲ್ಡ್ ಪ್ರೈ.ಲಿ ಫಿಲಂ ಸಂಸ್ಥೆಗೆ 2023 ರ ಎರೆಡು (2 ) ಪ್ರಶಸ್ತಿಗಳು :- ನಟಿ ಪೂಜಾ ಹೆಗ್ಡೆ ಯಿಂದ , ಇಂಡಿಯನ್ ಐಕಾನಿಕ್ ಫಿಲಂ ಇನ್ಟಿಟ್ಯೂಟ್ ಆಫ್ ದಿ ಇಯರ್ 2023 ರ ಪ್ರಶಸ್ತಿ ಲಭಿಸಿದೆ , ಬೆಂಗಳೂರು ನಗರದ ಶಾಂಗ್ರಿ ಲಾ ಹೋಟೆಲ್ ನಲ್ಲಿ 25/02/2023 ರ ಶನಿವಾರ ದಂದು , ಪ್ರೈಡ್ ಇಂಡಿಯ ಅವಾರ್ಡ್ಸ್ ರವರು - ಇಂಡಿಯನ್ ಐಕಾನ್ ಅವಾರ್ಡ್ಸ್ 2023 ರ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಆಯೋಜಿಸಿದ್ದರು. ಆ ಸಮಾರಂಭದಲ್ಲಿ ಫ್ಲೆಮಿಂಗೋ ಸೆಲೆಬ್ರೀಟೀಸ್ ವಲ್ಡ್ ಪ್ರೈ.ಲಿ ಫಿಲಂ ಸಂಸ್ಥೆಯ ದಶಕಗಳ ಸಾಧನೆಗೆ , ಡಿಕೇಟ್ ಆಫ್ ಅಚೀವ್ಮೆಂಟ್ ಎಂದು - ನಟಿ ಪೂಜಾ ಹೆಗ್ಡೆ ಅವರು , ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಆದ ದವನ್ ಸೋಹ ಅವರಿಗೆ “ ಇಂಡಿಯನ್ ಐಕಾನಿಕ್ ಫಿಲಂ ಇನ್ಟಿಟ್ಯೂಟ್ ಆಫ್ ದಿ ಇಯರ್ ....
*ಮಾರ್ಚ್ ಹತ್ತರಂದು ಬರಲಿದೆ ಮನಸೂರೆಗೊಳ್ಳುವ "ಚೌಕಾಬಾರ".*
ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳನ್ನು ಜನ ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ವಿಭಿನ್ನ ಕಂಟೆಂಟ್ ವುಳ್ಳ " ಚೌಕಾಬಾರ " ಚಿತ್ರ ಇದೇ ಮಾರ್ಚ್ 10ರಂದು ಕರ್ನಾಟಕದಾದ್ಯಂತ ಐವತ್ತಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್ ಗಳಲ್ಲಿ ಬಿಡುಗಡೆಯಾಗಲಿದೆ.
ಮಾರ್ಚ್ 24, 25 ಹಾಗೂ 26 ಅಮೇರಿಕಾದ ಐದು ರಾಜ್ಯಗಳಲ್ಲಿ ಈ ಚಿತ್ರ ತೆರೆ ಕಾಣಲಿದೆ.
ಸುಮಾರು ವರ್ಷಗಳಿಂದ ರಂಗಭೂಮಿ, ಕಿರುತೆರೆ ಹಾಗೂ ಹಿರಿತೆರೆಗಳಲ್ಲಿ ಸಕ್ರಿಯರಾಗಿರುವ ನಮಿತಾರಾವ್ ಹಾಗೂ ವಿಕ್ರಮ್ ಸೂರಿ ದಂಪತಿಗಳ ಕನಸಿನ ಕೂಸು ಈ "ಚೌಕಾಬಾರ".
" *ಟ್ರೇಲರ್ ಮೂಲಕ ಗಮನ ಸೆಳೆದಿರುವ "ಚೌಕಾಬಾರ" ಚಿತ್ರ ಮಾರ್ಚ್ ಹತ್ತರಂದು ತೆರೆಗೆ* " *ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಹಲವು ಗಣ್ಯರು ಭಾಗಿ* .ನವಿ ನಿರ್ಮಿತಿ ಲಾಂಛನದಲ್ಲಿ ನಮಿತಾರಾವ್ ನಿರ್ಮಿಸಿರುವ, ವಿಕ್ರಮ್ ಸೂರಿ ನಿರ್ದೇಶನದ "ಚೌಕಾಬಾರ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಖ್ಯಾತ ಸಾಹಿತಿಗಳಾದ ಹೆಚ್ ಎಸ್ ವೆಂಕಟೇಶ್ ಮೂರ್ತಿ, ಬಿ.ಆರ್ ಲಕ್ಷ್ಮಣರಾವ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಭಾ.ಮ.ಹರೀಶ್, ನಟ ಸುಂದರರಾಜ್, ಲಹರಿ ವೇಲು, ರಘು ಭಟ್, ನಿರ್ಮಾಪಕ ಸಂಜಯ್ ಗೌಡ , ಸಚಿವ ಆರ್ ಅಶೋಕ್ ಪುತ್ರ ಶರತ್, ಉದ್ಯಮಿ ಉಮೇಶ್ ಕುಮಾರ್, ಸಂಜಯ್ ಸೂರಿ ಸೇರಿದಂತೆ ಅನೇಕ ಗಣ್ಯರು ಹಾಗೂ ಚಿತ್ರತಂಡದ ....
*ಅಪಾರ ಜನಸಾಗರದ ನಡುವೆ ಶಿಡ್ಲಘಟ್ಟದಲ್ಲಿ ನಡೆಯಿತು ‘ಕಬ್ಜ’ ಹಬ್ಬ* *ಕಲರ್ ಫುಲ್ ವೇದಿಕೆಯಲ್ಲಿ ರಿಲೀಸ್ ಆಯ್ತು ಚಿತ್ರದ ‘ಚುಮ್ ಚುಮ್ ಚಳಿ ಚಳಿ ...’ ಮಾಸ್ ಸಾಂಗ್* ಸದ್ಯ ಪ್ಯಾನ್ ಇಂಡಿಯಾ ಹಂತದಲ್ಲಿ ಟ್ರೆಂಡಿಂಗ್ನಲ್ಲಿರುವ ಸಿನಿಮಾ ಎಂದರೆ ‘ಕಬ್ಜ’. ಈಗಾಗಲೇ ತನ್ನ ಟೀಸರ್, ಎರಡು ಹಾಡುಗಳಿಂದ ಜನರ ಮನ ಗೆದ್ದಿರುವ ‘ಕಬ್ಜ’ ಚಿತ್ರದಿಂದ ಇದೀಗ ಪಡ್ಡೆ ಹುಡುಗರ ಹೃದಯಕ್ಕೆ ಹತ್ತಿರವಾಗುವ ಹಾಡೊಂದು ಬಿಡುಗಡೆಯಾಗಿದೆ. ಹೌದು ಇತ್ತೀಚೆಗೆ ಆರ್.ಚಂದ್ರು ಅವರ ತವರು ಶಿಡ್ಲಘಟ್ಟದಲ್ಲಿ "ಕಬ್ಜ" ಚಿತ್ರದ ‘ಚುಮ್ ಚುಮ್ ಚಳಿ ಚಳಿ . ತಬ್ಕೊ ಚಳುವಳಿ’ ಎಂಬ ಮಾಸ್ ಹಾಡು ಅಪಾರ ಜನಸಾಗರದ ನಡುವೆ ಬಿಡುಗಡೆಯಾಯಿತು. ಪ್ರಮೋದ್ ಮರವಂತೆ ಬರೆದಿರುವ ಈ ....
*ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ "ಮಾರ್ಟಿನ್" ಚಿತ್ರದ ಟೀಸರ್ ಗೆ ಪ್ರಶಂಸೆಯ ಸುರಿಮಳೆ* . *ಇದೇ ಮೊದಲ ಬಾರಿಗೆ ವಿಭಿನ್ನವಾಗಿ ಬಿಡುಗಡೆಯಾಯಿತು ಈ ಚಿತ್ರದ ಟೀಸರ್.* ಸಾಮಾನ್ಯವಾಗಿ ಚಿತ್ರಗಳ ಪ್ರೀಮಿಯರ್ ಶೋ ನಡೆಯುವುದು ವಾಡಿಕೆ. ಆದರೆ ಧ್ರುವ ಸರ್ಜಾ ನಾಯಕರಾಗಿ ನಟಿಸಿರುವ "ಮಾರ್ಟಿನ್" ಚಿತ್ರದ ಟೀಸರ್ ಗೆ ಪ್ರೀಮಿಯರ್ ನಡೆದಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ವೀರೇಶ ಚಿತ್ರಮಂದಿರದಲ್ಲಿ "ಮಾರ್ಟಿನ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕನ್ನಡ ಸೇರಿದಂತೆ ಬೇರೆ ಯಾವ ಚಿತ್ರರಂಗದಲ್ಲೂ ಈ ರೀತಿ ಟೀಸರ್ ಪ್ರೀಮಿಯರ್ ನಡೆದಿರುವುದು ತಿಳಿದಿಲ್ಲ. ಇದೇ ಮೊದಲು ಎನ್ನಬಹುದು. ಇತ್ತೀಚೆಗೆ ಕನ್ನಡ ಸೇರಿದಂತೆ ....
ಸೌತ್ ಇಂಡಿಯನ್ ಹೀರೋಗೆ ಉಪ್ಪಿ ಸಾಥ್ ಈ ಹಿಂದೆ ಫಸ್ಟ್ ರ್ಯಾಂಕ್ ರಾಜು, ರಾಜು ಕನ್ನಡ ಮೀಡಿಯಂ ನಂಥ ಯಶಸ್ವೀ ಚಿತ್ರಗಳನ್ನು ನಿರ್ದೇಶಿಸಿದ್ದ ನಿರ್ದೇಶಕ ನರೇಶ್ಕುಮಾರ್ ಹೆಚ್.ಎನ್. ಹೊಸಳ್ಳಿ ಈಗ ಮತ್ತೊಂದು ಚಿತ್ರವನ್ನು ತೆರೆಗೆ ತರಲು ಅಣಿಯಾಗಿದ್ದಾರೆ. ಆ ಚಿತ್ರದ ಹೆಸರು ಸೌತ್ ಇಂಡಿಯನ್ ಹೀರೋ. ನಿರ್ದೇಶನದ ಜೊತೆಗೆ ಪತ್ನಿ ಶಿಲ್ಪಾ ಅವರ ಜೊತೆಗೂಡಿ ಚಿತ್ರಕ್ಕೆ ಬಂಡವಾಳವನ್ನೂ ಸಹ ಹಾಕಿದ್ದಾರೆ. ಈ ಚಿತ್ರದಲ್ಲಿ ಕಿರುತೆರೆ ನಟ ಸಾರ್ಥಕ್ ನಾಯಕನಾಗಿದ್ದು, ನಾಯಕಿಯರಾಗಿ ಕಾಶಿಮಾ ಹಾಗೂ ಮುಂಬೈ ಮೂಲದ ಊರ್ವಶಿ ನಟಿಸಿದ್ದಾರೆ. ಇದೇ ತಿಂಗಳ ೨೪ರಂದು ಈ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮುನ್ನ ಈ ಚಿತ್ರದ ಟ್ರೈಲರ್ ಬಿಡುಗಡೆ ....
ನೈಜ ಹಾಗೂ ಕಾಲ್ಪನಿಕ ಕಾಣೆಯಾಗಿದ್ದಾಳೆ
ವಿನೂತನ ಶೀರ್ಷಿಕೆ ಹೊಂದಿರುವ ‘ಕಾಣೆಯಾಗಿದ್ದಾಳೆ’ ಚಿತ್ರವನ್ನು ಆರ್ಕೆ ನಿರ್ದೇಶನ ಮಾಡಿದ್ದಾರೆ. ಹುಡುಕಿಕೊಟ್ಟವರಿಗೆ ಬಹುಮಾನ ಎಂಬುದಾಗಿ ಅಡಿಬರಹವಿದೆ. ಸಾಮಾಜಿಕ ಕಳಕಳಿಯ ಚಿತ್ರದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಹಳ್ಳಿಯಿಂದ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳಿಗೆ ನಗರದಲ್ಲಿ ಯಾವೆಲ್ಲಾ ಸಮಸ್ಯೆಗಳು ಕಾಡುತ್ತವೆ. ಆಕೆ ಎದುರಿಸುವ ಸವಾಲುಗಳೇನು? ಐಎಎಸ್ ಅಧಿಕಾರಿ ಆಗುತ್ತಾಳಾ? ಪ್ರಸ್ತುತ ಸನ್ನಿವೇಶದಲ್ಲಿ ಹೆಣ್ಣುಮಕ್ಕಳು ಎದುರಿಸುವ ಸಮಸ್ಯೆಗಳ ವಿಚಾರವನ್ನು ಯಾಕೆ ಜನರ ಮುಂದಿಡಬಾರದು ಎನ್ನುವಂತಹ ವಿಷಯಗಳನ್ನು ತೋರಿಸಲಾಗಿದೆ.
*"ಸಿನಿ ಬಜಾರ್" ಇದು ನಿರ್ಮಾಪಕರ ಸ್ನೇಹಿ ಓಟಿಟಿ.* ತಂತ್ರಜ್ಞಾನ ಮುಂದುವರಿದ ಹಾಗೆ ಜೀವನಶೈಲಿ ಕೂಡ ಬದಲಾಗುತ್ತಿದೆ. ಜನರಿಗೆ ಆಧುನಿಕ ತಂತ್ರಜ್ಞಾನದಿಂದ ಸಾಕಷ್ಟು ಅನುಕೂಲವಾಗುತ್ತಿದೆ. ಇಂತಹುದೇ ವಿಶೇಷ ತಂತ್ರಜ್ಞಾನವುಳ್ಳ "ಸಿನಿಬಜಾರ್" ಎಂಬ ಓಟಿಟಿ ಬಿಡುಗಡೆಯಾಗಿದ್ದು, ಈ ಓಟಿಟಿ ಮೂಲಕ ವಿಶ್ವದ ಅನೇಕ ರಾಷ್ಟ್ರಗಳ ಜನರು ತಮ್ಮ ನೆಚ್ಚಿನ ಸಿನಿಮಾಗಳನ್ನು ತಾವು ಇದ್ದಲ್ಲಿಯೇ ನೋಡಬಹುದು. ಇದರಿಂದ ನಿರ್ಮಾಪಕರಿಗೆ ಹೆಚ್ಚು ಅನುಕೂಲವಾಗಲಿದೆ. ಇತ್ತೀಚಿಗೆ "ಸಿನಿಬಜಾರ್" ಓಟಿಟಿ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. "ಸಿನಿಬಜಾರ್" ಓಟಿಟಿಯಲ್ಲಿ ಪ್ರತಿ ಶುಕ್ರವಾರ ಸಿನಿಮಾಗಳು ಫ್ಯಾನ್ ವಲ್ಡ್ ವಿಶ್ವದ 177 ದೇಶಗಳಲ್ಲಿ ....
ಮನಸೂರೆಗೊಳ್ಳುತ್ತಿರುವ ಜೂಲಿಯೆಟ್-೨ ಟ್ರೇಲರ್
ಉತ್ತಮ ಅಂಶಗಳನ್ನು ಒಳಗೊಂಡಿರುವ ‘ಜೂಲೆಯಟ್-೨’ ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಗೊಂಡಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಗೊಂಡು ಎಲ್ಲಾ ಕಡೆಗಳಿಂದಲೂ ಪ್ರಶಂಸೆಗಳು ಬರುತ್ತಿದೆ. ‘ಪ್ರೇಮಂಪೂಜ್ಯಂ’ ಖ್ಯಾತಿಯ ಬೃಂದಾಆಚಾರ್ಯ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ವಿರಾಟ್.ಬಿ.ಗೌಡ ನಿರ್ದೇಶನ ಮಾಡಿದ್ದು, ಲಿಖಿತ್.ಆರ್.ಕೋಟ್ಯಾನ್ ಬಂಡವಾಳ ಹೂಡಿದ್ದಾರೆ.
ತೆರೆಗೆ ಸಿದ್ದ ಅಸ್ಥಿರ ನಿರ್ದೇಶಕ ಹೊರತುಪಡಿಸಿ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಅಸ್ಥಿರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಎಸ್ಆರ್ವಿ ಪ್ರಿವ್ಯೂ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಉಪಾಧ್ಯಕ್ಷ ಮತ್ತು ಹಿರಿಯಪತ್ರಕರ್ತ ಎನ್ಆರ್ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಸ್ಥಿರವಲ್ಲದ್ದನ್ನು ಅಸ್ಥಿರ ಎಂದು ಕರೆಯುವುದುಂಟು. ಅದೇ ರೀತಿ ಸೀಮಿತ ಮನಸ್ಥಿತಿ ಇಲ್ಲದೆ ಇರುವ ವ್ಯಕ್ತಿಯು ಪ್ರೀತಿಯಲ್ಲಿ ಸೋತಾಗ ಸಾಮಾನ್ಯ ಹುಡುಗನಾದವನು ಯಾವ ರೀತಿ ಇರುತ್ತಾನೆ ಎಂಬುದನ್ನು ಹೇಳಲಾಗಿದೆ. ತ್ರಿಕೋನ ಪ್ರೇಮ ಕಥೆಯು ....
ಲಂಕಾಸುರದಲ್ಲಿ ಮಾಡರ್ನ್ ಮಹಾಲಕ್ಷೀ ಗೀತೆ
ವಿನೋದ್ಪ್ರಭಾಕರ್ ನಾಯಕನಾಗಿ ನಟಿಸಿರುವ ‘ಲಂಕಾಸುರ’ ಚಿತ್ರದ ‘ಮಾಡರ್ನ್ ಮಹಾಲಕ್ಷೀ’ ಹಾಡನ್ನು ಮಾಲಾಶ್ರೀ ಬಿಡುಗಡೆ ಮಾಡಿದರು. ನಂತರ ಮಾತನಾಡಿ ನಾನು ವಿನೋದ್ಪ್ರಭಾಕರ್ ದೊಡ್ಡ ಅಭಿಮಾನಿ. ಅವರ ಸಾಹಸ ಸನ್ನಿವೇಶಗಳು ನನಗೆ ತುಂಬಾ ಇಷ್ಟ. ಟೈಗರ್ ಟಾಕೀಸ್ ಮೂಲಕ ಪತ್ನಿ ನಿಶಾ ಹೆಸರಿನಲ್ಲಿ ಮೊದಲ ಬಾರಿ ಬಂಡವಾಳ ಹೂಡಿದ್ದಾರೆ.
ಅಮೋಘ ಸಾಲುಗಳಿಂದ ಸಂಗೀತ ಪ್ರಿಯರ ಮನಗೆಲ್ಲುತ್ತಿರುವ ಜೂಲಿಯೆಟ್ 2 ಚಿತ್ರದ "ನೆನಪೆಲ್ಲಿ ಈಗ" ವಿಡಿಯೋ ಸಾಂಗ್ ಇದೀಗ 5 ಲಕ್ಷ ವೀಕ್ಷಣೆಯನ್ನು ಪಡೆಯುವತ್ತ ದಾಪುಗಾಲಿಟ್ಟಿದೆ
*ಗಾಂಧಿ ಬಜಾರ್ ನಲ್ಲಿ ಆರಂಭವಾಯಿತು "Combat warriors"* . *ಇದು ಚಲನಚಿತ್ರದಲ್ಲಿ ನಟಿಸಲು ಬಯಸುವವರಿಗೆ ಫಿಸಿಕಲ್ ಫಿಟ್ನೆಸ್ ಮತ್ತು ಸೆಲ್ಫ್ ಡಿಫೆನ್ಸ್ ಕುರಿತು ಶಿಕ್ಷಣ ನೀಡುವ ಸಂಸ್ಥೆ* . ಪ್ರತಿಯೊಬ್ಬ ಮನುಷ್ಯನು ತಾನು ದೈಹಿಕವಾಗಿ ಆರೋಗ್ಯವಾಗಿರಬೇಕೆಂದು ಬಯಸುತ್ತಾನೆ. ಅದರಲ್ಲೂ ಸಿನಿಮಾದಲ್ಲಿ ನಟಿಸಬೇಕೆಂಬ ಆಸಕ್ತಿ ಇರುವವರಿಗಂತೂ ಫಿಸಿಕಲ್ ಫಿಟ್ನೆಸ್ ಬಹು ಮುಖ್ಯ. ಇದರ ಬಗ್ಗೆ ಸರಿಯಾದ ಶಿಕ್ಷಣ ನೀಡಲು ಬೆಂಗಳೂರಿನ ಹೃದಯ ಭಾಗವಾದ ಗಾಂಧಿ ಬಜಾರ್ ನಲ್ಲಿ "Combat warriors"* ಎಂಬ ಸಂಸ್ಥೆ ಆರಂಭವಾಗಿದೆ. ಇತ್ತೀಚೆಗೆ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಂಸ್ಥೆಯ ಮುಖ್ಯಸ್ಥ ಗ್ರ್ಯಾಂಡ್ ಮಾಸ್ಟರ್ ಎಂ ಹೆಚ್ ಅಬೀದ್, ನಾನು ಈ ತನಕ ದೇಶ ಹಾಗೂ ....
ಅದ್ದೂರಿಯಾಗಿ ರಿಲೀಸ್ ಆಯ್ತು ’ಸರ್ವೈವರ್’ ಟ್ರೇಲರ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಹಾಲಿವುಡ್ ಶೈಲಿಯ ಈ ಕಿರುಚಿತ್ರ ಯುವ ಪ್ರತಿಭೆಗಳು ತಮ್ಮನ್ನು ಚಿತ್ರರಂಗಕ್ಕೆ ಪರಿಚಯ ಮಾಡಿಕೊಳ್ಳಲು ಉತ್ತಮ ವೇದಿಕೆಯಾಗಿ ಕಿರುಚಿತ್ರಗಳು ಹಾಗೂ ಅಲ್ಬಮ್ ಸಾಂಗ್ ಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಈ ಸಾಲಿಗೆ ಯುವ ಪ್ರತಿಭೆ ರಜತ್ ರಜನಿಕಾಂತ್ ಸೇರಿದ್ದಾರೆ. ಹೌದು ಸಿನಿಮಾ ಮಾಡುವ ಕನಸನ್ನು ಹೊತ್ತು ಇಂಡಸ್ಟ್ರಿಗೆ ಬಂದಿರುವ ಇವರು ಮೊದಲ ಪ್ರಯತ್ನವಾಗಿ ’ದ ಸರ್ವೈವರ್’ ಎಂಬ ಕಿರುಚಿತ್ರವನ್ನು ಸಿದ್ದಪಡಿಸಿದ್ದಾರೆ. ಈ ಚಿತ್ರಕ್ಕೆ ರಜತ್ ರಜನಿಕಾಂತ್ ಅವರೇ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಸಂಕಲನ, ನಿರ್ದೇಶನದ ಜೊತೆಗೆ ನಾಯಕರಾಗಿ ನಟಿಸಿದ್ದಾರೆ. ....