Klaantha.Film News

Monday, April 24, 2023

  *ವೈಭವ್ ಪ್ರಶಾಂತ್ ನಿರ್ದೇಶನದ ಸಿನಿಮಾಗೆ ಟೈಟಲ್ ಫಿಕ್ಸ್...ಕ್ಲಾಂತ ಎನ್ನುತ್ತಿದ್ದಾರೆ ಸಂಗೀತ ಭಟ್*     ಕನ್ನಡದಲ್ಲೀಗ ಹೊಸ ಬಗೆಯ ಶೀರ್ಷಿಕೆ ಸಿನಿಮಾಗಳು ಬಹಳಷ್ಟು ಸದ್ದು ಮಾಡುತ್ತಿವೆ. ಈ ಪಟ್ಟಿಗೀಗ ಹೊಸ ಸೇರ್ಪಡೆ ಕ್ಲಾಂತ. ಈ ಹಿಂದೆ ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ ಪ್ರಶಾಂತ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಇಂದು ಕ್ಲಾಂತ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಅನಾವರಣ ಮಾಡಲಾಗಿತ್ತು. ಈ ಬಗ್ಗೆ ಚಿತ್ರತಂಡ ಮಾಧ್ಯಮದವರೊಂದಿಗೆ ಮಾಹಿತಿ ಹಂಚಿಕೊಂಡಿತು.     ನಿರ್ದೇಶಕ ವೈಭವ್  ಪ್ರಶಾಂತ್ ಮಾತನಾಡಿ, ಇದು ನನ್ನ ನಾಲ್ಕನೇ ಸಿನಿಮಾ. ಯುವಜನತೆಗೆ ಒಳ್ಳೆ ಸಂದೇಶ ಕೊಡುವ ....

595

Read More...

The Judgemnt.News

Friday, April 21, 2023

  *ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರಕ್ಕೆ ಚಾಲನೆ* .   ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ "ದ ಜಡ್ಜ್ ಮೆಂಟ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು.   G9 communication media & Entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಗುರುರಾಜ ಬಿ ಕುಲಕರ್ಣಿ(ನಾಡಗೌಡ) ನಿರ್ದೇಶಿಸುತ್ತಿದ್ದಾರೆ. ಈ ಹಿಂದೆ "ಆಕ್ಸಿಡೆಂಟ್", " ಲಾಸ್ಟ್‌ ಬಸ್" , "ಅಮೃತ ಅಪಾರ್ಟ್‌ಮೆಂಟ್ಸ್" ಚಿತ್ರಗಳನ್ನು ಈ ಸಂಸ್ಥೆ ಮೂಲಕ ನಿರ್ಮಿಸಲಾಗಿತ್ತು ಹಾಗೂ ಈ ಚಿತ್ರಗಳನ್ನು ಗುರುರಾಜ್ ಬಿ ಕುಲಕರ್ಣಿ ಅವರೆ ನಿರ್ದೇಶಿಸಿದ್ದರು. ಸಂಸ್ಥೆಯ ನಾಲ್ಕನೇ ಚಿತ್ರವಾಗಿ "ದ ....

312

Read More...

Sudha Murty.San Man.News

Thursday, April 20, 2023

  *ಪದ್ಮಭೂಷಣ ಪ್ರಶಸ್ತಿ ವಿಜೇತ ಸುಧಾಮೂರ್ತಿಯವರಿಗೊಂದು ಅರ್ಥಪೂರ್ಣ ಸನ್ಮಾನ*   *ಖ್ಯಾತ ನಿರ್ಮಾಪಕ ರಮೇಶ್  ರೆಡ್ಡಿಯವರ ನೇತೃತ್ವದಲ್ಲಿ ಜರುಗಿತು ಅಪರೂಪದ ಕಾರ್ಯಕ್ರಮ*       ಸರಳತೆ, ಸಹಾಯ, ಸಮಾಜಸೇವೆಗೆ ಇನ್ನೊಂದು ಹೆಸರು ಸುಧಾಮೂರ್ತಿ ಎಂದರೆ ತಪ್ಪಾಗಲಿಕ್ಕಿಲ್ಲ. ಇನ್ಫೋಸಿಸ್ ಎಂಬ ಐ.ಟಿ ದಿಗ್ಗಜ ಸಂಸ್ಥೆಯ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಕನ್ನಡಿಗರ ಹೆಮ್ಮೆ ಹೆಚ್ಚಿಸಿದ ಕನ್ನಡತಿ. ಲಕ್ಷಾಂತರ ಮಂದಿಗೆ ಕೆಲಸ ಕೊಟ್ಟ ಉದ್ಯಮಿ, ಸಮಾಜಸೇವಕಿ, ಲೇಖಕಿ ಸುಧಾಮೂರ್ತಿಯವರ ಸಾಮಾಜಿಕ ಸೇವೆಗಾಗಿ ಇತ್ತೀಚೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದ್ದರು. ಈ ನಿಟ್ಟಿನಲ್ಲಿ, ಇತ್ತೀಚಿಗೆ ಖ್ಯಾತ ನಿರ್ಮಾಪಕರಾದ ರಮೇಶ್ ....

268

Read More...

Present Prapancha 0% Love

Wednesday, April 19, 2023

  *ತೆರೆಗೆ ಬರಲು ಸಿದ್ದವಾಗಿದೆ "ಪ್ರೆಸೆಂಟ್ ಪ್ರಪಂಚ ೦% ಲವ್" ಚಿತ್ರ* .   ರೊಮ್ಯಾಂಟಿಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಪ್ರೆಸೆಂಟ್ ಪ್ರಪಂಚ 0% ಲವ್" ಚಿತ್ರ  ತೆರೆಗೆ ಬರಲು ಸಿದ್ದವಾಗಿದೆ. ಈ ಕುರಿತು ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು.   ನಿರ್ದೇಶಕನಿಗೆ ತನ್ನ ಚಿತ್ರವೇ ಸರ್ವಸ್ವ. ನಮ್ಮ ಚಿತ್ರದ ನಿರ್ದೇಶಕ ಅಭಿರಾಮ್ ಎ ಅವರಿಗೂ ಈ ಚಿತ್ರದ ಬಗ್ಗೆ ಅಪಾರ ಪ್ರೀತಿ. ಆದರೆ ವಿಧಿ, ಚಿತ್ರ ಬಿಡುಗಡೆಗೆ ಮುನ್ನವೇ ನಿರ್ದೇಶಕ ಅಭಿರಾಮ್ ಹಾಗೂ ನಾಯಕ ಅರ್ಜುನ್ ಮಂಜುನಾಥ್ ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಅವರಿಬ್ಬರ ಅನುಪಸ್ಥಿತಿ ತುಂಬಾ ಕಾಡುತ್ತಿದೆ. ಇಬ್ಬರು ಚಿತ್ರೀಕರಣ ಹಾಗೂ ಡಬ್ಬಿಂಗ್ ಮುಗಿಯುವ ತನಕ ಜೊತೆಗಿದ್ದರು. ಆಮೇಲೆ ಯಾರು ನಿರೀಕ್ಷಿಸದ್ದು ....

357

Read More...

Margret Lover Of Ramachari

Sunday, April 23, 2023

  *ಸೆಟ್ಟೇರಿದ ’ಮಾರ್ಗರೇಟ್​ ಲವರ್​ ಆಫ್​​ ರಾಮಾಚಾರಿ’....ಅಭಿಲಾಶ್​-ಸೋನಲ್​ ಜೋಡಿಗೆ ಡಾಲಿ ಧನಂಜಯ್ ಶುಭ ಹಾರೈಕೆ*      ಕನ್ನಡ ಚಿತ್ರರಂಗದಲ್ಲಿ ಹೊಸ ಮೈಲಿಗಲ್ಲು ಸೃಷ್ಟಿಸಿದ ಸಿನಿಮಾ ನಾಗರಹಾವು. ಈ ಚಿತ್ರದ ರಾಮಾಚಾರಿ ಹಾಗೂ ಮಾರ್ಗರೇಟ್​ ಪಾತ್ರಗಳು ಇಂದಿಗೂ ಪ್ರೇಕ್ಷಕರ ಅಚ್ಚುಮೆಚ್ಚು. ಇದೇ ಚಿತ್ರದ ಪಾತ್ರಗಳನ್ನು ಇಟ್ಕೊಂಡು ಬಂದ ರಾಮಾಚಾರಿ ಮತ್ತು ಮಿಸ್ಟರ್ ಅಂಡ್ ಮಿಸೆಸ್ ರಾಮಾಚಾರಿ  ಸಿನಿಮಾ ಸೂಪರ್ ಸಕ್ಸಸ್ ಕಂಡಿದೆ. ಇದೇ ನಾಗರಹಾವು ಸಿನಿಮಾದ ಪಾತ್ರಗಳ ಸ್ಫೂರ್ತಿ ಪಡೆದು ಹೊಸ ಸಿನಿಮಾವೊಂದು ಬರ್ತಿದೆ. ಆ ಚಿತ್ರಕ್ಕೆ ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಎಂದು ಟೈಟಲ್ ಇಡಲಾಗಿದೆ.     ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಹಾಗೂ ಸೋನಲ್ ಮೊಂಥೆರೋ ....

285

Read More...

PS 2.Film News

Saturday, April 22, 2023

  *ಬೆಂಗಳೂರಿನಲ್ಲಿ ಪೊನ್ನಿಯಿನ್ ಸೆಲ್ವನ್-2 ಅದ್ಧೂರಿ ಪ್ರಚಾರ.....ಕನ್ನಡ ಸಿನಿಮಾಗಳನ್ನು ಕೊಂಡಾಡಿದ ತಮಿಳು ಸ್ಟಾರ್ಸ್ಸ್*       ಮಣಿರತ್ನಂ ಡ್ರೀಮ್ ಪ್ರಾಜೆಕ್ಟ್  ’ಪೊನ್ನಿಯಿನ್ ಸೆಲ್ವನ್ 2' ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ತಿಂಗಳ 28ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸುತ್ತಿದೆ. ಉತ್ತರ ಭಾರತದಲ್ಲಿ ಪ್ರಚಾರ ಮುಗಿಸಿರುವ ಚಿತ್ರತಂಡ ದಕ್ಷಿಣದಲ್ಲಿ ಭರದ ಪ್ರಚಾರ ಕಾರ್ಯ ನಡೆಸುತ್ತಿದೆ. ಈಗಾಗಲೇ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಮೋಷನ್ ಮಾಡಿರುವ ಪಿಎಸ್-2 ಬಳಗ ಬೆಂಗಳೂರಿನಲ್ಲಿ ನಿನ್ನೆ ಪ್ರಮೋಷನ್ ಕಹಳೆ ಮೊಳಗಿಸಿದೆ. ನಿನ್ನೆ ಖಾಸಗಿ ಹೋಟೆಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ನಟ ವಿಕ್ರಂ, ತ್ರಿಷಾ, ಕಾರ್ತಿ ಹಾಗೂ ಜಯಂರವಿ ಭಾಗಿಯಾಗಿದ್ದರು. ....

269

Read More...

Colours Of Love.News

Saturday, April 22, 2023

  ಭಾವನೆಗಳನ್ನು ಕೆದಕುವ ಕಲರ‍್ಸ್ ಆಫ್ ಲವ್        ’ಕ್ರಷ್’ ಕಿರುಚಿತ್ರ ಹಾಗೂ ’ಲಗೋರಿ’ ಎಂಬ ಟೆಲಿಫಿಲಿಂ ಮಿಲಯಿನ್ಸ್‌ಗಟ್ಟಲೆ ವೀಕ್ಷಣೆಗೊಂಡು ಮೆಚ್ಚುಗೆಗೆ ಪಾತ್ರವಾಗಿತ್ತು. ಇದೇ ಹುಮ್ಮಸಿನಿಂದ ನಿರ್ದೇಶಕ ಯು.ವಿ.ಹರಿಶೌರ್ಯ ಮೂರನೇ ಪ್ರಯತ್ನ ಎನ್ನುವಂತೆ ’ಕಲರ‍್ಸ್ ಆಫ್ ಲವ್’ ಎನ್ನುವ ೫೦ ನಿಮಿಷದ ಚಿತ್ರಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಒಂದು ಕಾವ್ಯಾತ್ಮಕ ಪ್ರೀತಿ ಕಥೆ ಎಂದು ಇಂಗ್ಲೀಷ್‌ನಲ್ಲಿ ಅಡಿಬರಹವಿದೆ. ಗ್ಯಾಂಗ್‌ಬ್ಯಾಂಗ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಚೇತನ್‌ಕುಮಾರ್ ಮತ್ತು ಜಯಪ್ರಕಾಶ್ ಬಂಡವಾಳ ಹೂಡಿದ್ದಾರೆ.       ಕಥಾನಾಯಕ ಒಬ್ಬ ಬರಹಗಾರ. ’ಕಲರ‍್ಸ್ ಆಫ್ ಲವ್’ ಎನ್ನುವ ಪುಸ್ತಕವನ್ನು ಬರೆದು ....

445

Read More...

Ramzan.Film News

Tuesday, April 18, 2023

  ಚಿತ್ರಮಂದಿರದಲ್ಲಿ ರಂಜಾನ್        ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ’ರಂಜಾನ್’ ಸಿನಿಮಾವು ಹಿರಿಯ ಲೇಖಕ ಫಕೀರ್‌ಮುಹಮ್ಮದ್ ಕಟ್ಪಾಡಿ ಬರೆದಿರುವ ’ನೊಂಬು’ ಕಥೆಯನ್ನು ಆಧರಿಸಿದೆ. ’ಸಿಲ್ಲಿ ಲಲ್ಲಿ’ ಹಾಗೂ ಸುಮಾರು 35ಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯ ನಟನಾಗಿ ಗುರುತಿಸಿಕೊಂಡಿರುವ ಸಂಗಮೇಶ ಉಪಾಸೆ ಮೊದಲಬಾರಿ ನಾಯಕನಾಗಿ ಶೀರ್ಷಿಕೆ ಹೆಸರಿನಲ್ಲಿ ಕಾಣಿಸಿಕೊಂಡಿದ್ದು, ಜತೆಗೆ  ಚಿತ್ರಕಥೆ-ಸಂಭಾಷಣೆ ಹಾಗೂ ಸಾಹಿತ್ಯ ಒದಗಿಸಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಪಂಚಾಕ್ಷರಿ.ಸಿ.ಈ ನಿರ್ದೇಶನ ಮಾಡಿದ್ದಾರೆ. ಯೂನಿವರ್ಸಲ್ ಸ್ಟುಡಿಯೋ ಮೂಲಕ ಮಡಿವಾಳಪ್ಪ.ಎಂ.ಗೂಗಿ ನಿರ್ಮಾಣ ಮಾಡಿರುವುದು ಹೊಸ ಅನುಭವ. .        ಬಡತನ, ....

425

Read More...

Nodadha Putagalu.News

Tuesday, April 18, 2023

  ಕುತೂಹಲ ಕೆರಳಿಸುವ ನೋಡದ ಪುಟಗಳು        ರಿಯಲ್ ಲೈಫ್ ಚಿತ್ರಗಳು ಹೆಚ್ಚು ಬರುತ್ತಿರುವುದು ಆರೋಗ್ಯಕರ ಬೆಳವಣಿಗೆಯಾಗಿದೆ. ಆ ಸಾಲಿಗೆ ’ನೋಡದ ಪುಟಗಳು’ ಚಿತ್ರವೊಂದು ಸದ್ದಿಲ್ಲದೆ ಬಿಡುಗಡೆಗೆ ಸಿದ್ದವಾಗಿದೆ. ’ಜೀವನಪೂರ್ತಿ ತಿರುವುಗಳು ಬರುತ್ತದೆ. ನಿನ್ನ ತಿರುವು ಬರುವ ತನಕ ಕಾಯಬೇಕು’ ಎಂದು ಇಂಗ್ಲೀಷ್‌ದಲ್ಲಿ ಅಡಿಬರಹವಿದೆ. ಬಿಡುಗಡೆಯಾಗಿರುವ ಟ್ರೇಲರ್‌ಗೆ ಸುಚೇಂದ್ರಪ್ರಸಾದ್ ಧ್ವನಿ ನೀಡಿರುವುದು ತೂಕ ಹೆಚ್ಚಿದೆ.       ನವ ಪ್ರತಿಭೆ ಎಸ್.ವಸಂತ್‌ಕುಮಾರ್ ಸಿನಿಮಾಕ್ಕೆ ರಚನೆ,ನಿರ್ದೇಶನ ಹಾಗೂ ಸ್ವೀಟ್ ಅಂಡ್ ಸಾಲ್ಟ್ ಮೂವೀಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಮೂಲತ: ಟೆಕ್ಕಿಯಾಗಿರುವ ಇವರು ಬಣ್ಣದ ಲೋಕದ ಆಸೆಯಿಂದ ನಿರ್ದೇಶನದ ....

396

Read More...

Raaghu.Filom News

Sunday, April 16, 2023

  *’ರಾಘು’ ಟ್ರೇಲರ್ ರಿಲೀಸ್…ಸೋಲೋ ಆಕ್ಟರ್ ಆಗಿ ಬಂದ ಚಿನ್ನಾರಿ ಮುತ್ತನಿಗೆ ಹ್ಯಾಟ್ರಿಕ್ ಹೀರೋ ಶಿವಣ್ಣ ಸಾಥ್*   ಕನ್ನಡ ಚಿತ್ರರಂಗದಲ್ಲೀಗ ಪ್ಯಾನ್ ಇಂಡಿಯಾ ಸಿನಿಮಾಗಳ ಜೊತೆ ಜೊತೆಯಲಿ ಭಿನ್ನ-ವಿಭಿನ್ನ ಹಾಗೂ ಪ್ರಯೋಗಾತ್ಮಕ ಚಿತ್ರಗಳು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಇದೇ ಸಾಲಿಗೆ ಒಂದಿಷ್ಟು ಕೌತುಕಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡಿರುವ ರಾಘು ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಇದೇ 28ಕ್ಕೆ ರಾಜ್ಯಾದ್ಯಂತ ರಿಲೀಸ್ ಆಗುತ್ತಿರುವ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಹೊಸ ಬಗೆಯ ರಾಘು ಚಿತ್ರದ ಟ್ರೇಲರ್ ಅನಾವರಣಗೊಂಡಿದೆ.   *‘ರಾಘು’ಗೆ ಶಿವಣ್ಣ ಬಲ*   ಯುವ ನಿರ್ದೇಶಕ ಎಂ ಆನಂದ್ ರಾಜ್ ನಿರ್ದೇಶನದಲ್ಲಿ ಮೂಡಿ ....

337

Read More...

Rangu Ragale.News

Sunday, April 16, 2023

  *'ರಂಗು ರಗಳೆ’ಗೆ ಮುಹೂರ್ತದ ಸಂಭ್ರಮ...ಇದು ಜಾಕ್ ನಿರ್ದೇಶನದ ಮಲ್ಟಿಸ್ಟಾರ್ ಸಿನಿಮಾ*     ಕನ್ನಡ ಚಿತ್ರರಂಗದಲ್ಲೀಗ ಹೊಸ ಪ್ರಯೋಗಗಳ ಪರ್ವ ಕಾಲ ಶುರುವಾಗಿದೆ. ಹೊಸಬರು ವಿಭಿನ್ನ ಪ್ರಯತ್ನದೊಂದಿಗೆ ಚಿತ್ರರಂಗಕ್ಕೆ ಅಡಿ ಇಡ್ತಿದ್ದಾರೆ. ಅದರ ಮುಂದುವರೆದ ಭಾಗವಾಗಿ ರೂಪಗೊಂಡಿರುವ ಸಿನಿಮಾ ರಂಗು ರಗಳೆ. ಅತೀವ ಕಲಾ ಪ್ರೇಮದಿಂದ ಯುವ ಪ್ರತಿಭೆ ಜಾಕ್ ನಿರ್ದೇಶಿಸುತ್ತಿರುವ ಈ ಚಿತ್ರದ ಮುಹೂರ್ತ ಬೆಂಗಳೂರಿನ ಪಂಚಮುಖಿ ಗಣಪತಿ ದೇಗುಲದಲ್ಲಿಂದು ನೆರವೇರಿದೆ.     ತಮಿಳು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿರುವ ಜಾಕ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ....

317

Read More...

Ramana Avatara.News

Monday, April 10, 2023

  *'ರಾಮನ ಅವತಾರ’ ಟೀಸರ್ ರಿಲೀಸ್....ಕಾಮಿಡಿ ಕಚಗುಳಿ ಇಟ್ಟ ಆಪರೇಷನ್ ಅಲಮೇಲಮ್ಮ ಖ್ಯಾತಿಯ ರಿಷಿ*     ಆಪರೇಷನ್ ಅಲಮೇಲಮ್ಮ, ಕವಲುದಾರಿ ಸಿನಿಮಾ ಖ್ಯಾತಿಯ ರಿಷಿ ನಟನೆಯ ರಾಮನ ಅವತಾರ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಟೀಸರ್ ಮೂಲಕ ನಿರ್ದೇಶಕ ವಿಕಾಸ್ ಪಂಪಾಪತಿ ಭರಪೂರ ನಗುವಿನ ಮ್ಯಾಜಿಕ್ಕನ್ನು ಪ್ರೇಕ್ಷಕರಿಗೆ ಉಣ ಬಡಿಸಿದ್ದಾರೆ. ರಿಷಿ ಪಂಚಿಂಗ್ ಸಂಭಾಷಣೆ ಮೂಲಕ ನೋಡುಗರನ್ನು‌ ನಕ್ಕು ನಲಿಸುತ್ತಾರೆ. ಇವರಿಗೆ ಜೋಡಿಯಾಗಿ ಪ್ರಣೀತಾ  ಸುಭಾಷ್ ಹಾಗೂ ಶುಭ್ರ ಅಯ್ಯಪ್ಪ ನಟಿಸಿದ್ದಾರೆ. ಅರುಣ್ ಸಾಗರ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.     ಟೀಸರ್ ರಿಲೀಸ್ ಬಳಿಕ ಮಾತಾನಾಡಿದ ರಿಷಿ, ಸಾಮಾನ್ಯವಾಗಿ ಕಾಮಿಡಿ ಕಷ್ಟವಾದ ಜಾನರ್. ಅದರಲ್ಲಿ ಡಬಲ್ ಮೀನಿಂಗ್ ....

319

Read More...

Fans Cricket League Season 10

Friday, April 14, 2023

  *ಹೊರಬಿತ್ತು ಬಹುನಿರೀಕ್ಷಿತ, ಸಿನಿಮಾ ಅಭಿಮಾನಿಗಳು ಸೇರಿ ಆಡುವಂತಹ, ’ಫ್ಯಾನ್ಸ್ ಕ್ರಿಕೆಟ್ ಲೀಗ್’ ಈ ಸಾಲಿನ ದಿನಾಂಕಗಳು*     'ನಮ್ ಟಾಕೀಸ್’ನ ನೇತೃತ್ವದಲ್ಲಿ ನಡೆಯುವಂತಹ, ಸಿನಿಮಾ ಅಭಿಮಾನಿಗಳು, ಸಿನಿಮಾ ಪ್ರೇಮಿಗಳು ಸೇರಿ ಆಡುವಂತಹ ಏಕೈಕ ಕ್ರಿಕೆಟ್ ಪಂದ್ಯಾಟ ’ಫ್ಯಾನ್ಸ್ ಕ್ರಿಕೆಟ್ ಲೀಗ್’. 2015ನೇ ಇಸವಿಯಿಂದ ಯಶಸ್ವಿಯಾಗಿ ನಡೆಯುತ್ತಾ ಬಂದಿರುವ ಈ ಕ್ರಿಕೆಟ್ ಪಂದ್ಯಾಟ, ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಆಶೀರ್ವಾದದೊಂದಿಗೆ ಈ ಬಾರೀ ತನ್ನ ಹತ್ತನೇ ಆವೃತ್ತಿಯ ಆರಂಭ ಕಾಣುತ್ತಿದೆ. ಸದ್ಯ ಈ ಬಾರಿಯ ದಿನಾಂಕಗಳು ಹೊರಬಿದ್ದಿದ್ದು, ’ಲೂಸಿಯ’,’ಅಯೋಗ್ಯ’ ಸಿನಿಮಾಗಳ ಮೂಲಕ ಕನ್ನಡಿಗರ ಚಿರಪರಿಚಿತ ನಟ ಸತೀಶ್ ನೀನಾಸಂ ಅವರು ದಿನಾಂಕಗಳನ್ನ ಘೋಷಣೆ ....

331

Read More...

Shivajisuratkal 2.Film News

Friday, March 31, 2023

ವೈರಲ್ ಆಯ್ತು ಶಿವಾಜಿ ಸುರತ್ಕಲ್- ಟ್ರೇಲರ್

      ‘ಶಿವಾಜಿ ಸುರತ್ಕಲ್-೨’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಎಲ್ಲಾ ಕಡೆಗಳಿಂದ ಉತ್ತಮ ಪ್ರಶಂಸೆ ಬರುತ್ತಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಾಯಕ ರಮೇಶ್‌ಅರವಿಂದ್ ಶಿವಾಜಿ ಯಾವುದಾದರೂ ಕೇಸ್ ತೆಗೆದುಕೊಂಡರೆ ‘ಒಂದಾ ಜೈಲಿಗೆ’, ‘ಇಲ್ಲವಾ ಸ್ಮಶಾನಕ್ಕೆ’ ಎಂದು ಪ್ರಸಿದ್ದಿ. ಭಾಗ-೨ರಲ್ಲಿ ಆತ ಯಾವ ಕೇಸ್ ತೆಗೆದುಕೊಳ್ಳುತ್ತಾನೆ ಎಂಬ ಕುತೂಹಲಕ್ಕೆ ಸದ್ಯದಲ್ಲೆ ಉತ್ತರ ಸಿಗಲಿದೆ. ಭಾಗ-೧ ಚಿತ್ರವನ್ನು ಇದೇ ಜಾಗದಲ್ಲಿ ರಾಹುಲ್‌ಡ್ರಾವಿಡ್ ಕುಟುಂಬದೊಂದಿಗೆ ಒಟ್ಟಿಗೆ ನೋಡಿದ್ದೇವು. 

334

Read More...

Dildar.Film News

Friday, March 31, 2023

ದಿಲ್‌ದಾರ್ ಪೋಸ್ಟರ್ ಬಿಡುಗಡೆ ಮಾಡಿದ ಕ್ರೇಜಿಸ್ಟಾರ್         ‘ಪಡ್ಡೆಹುಲಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿರುವ ಹಿರಿಯ ನಿರ್ಮಾಪಕ ಕೆ.ಮಂಜು ಪುತ್ರ ಶ್ರೇಯಸ್.ಕೆ.ಮಂಜು ಅವರ ಮೂರನೇ ಚಿತ್ರ ‘ದಿಲ್‌ದಾರ್’ ಮುಹೂರ್ತ ಸಮಾರಂಭವು ಮೊನ್ನೆಯಷ್ಟೇ ನಡೆಯಿತು. ಡಾ.ರವಿಚಂದ್ರನ್ ಬಲೂನ್‌ಗಳನ್ನು ಒಡೆಯುವುದರ ಮೂಲಕ ಪೋಸ್ಟರ್‌ನ್ನು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.  ನಾಗತ್ತಿಹಳ್ಳಿ ಚಂದ್ರಶೇಖರ್ ಕ್ಯಾಮಾರ ಚಾಲನೆ ಮಾಡಿದರು. ‘ಬ್ಯಾಡ್ ಮ್ಯಾನರ್ಸ್’ ಮತ್ತು ‘ಅದ್ದೂರಿ ಲವರ್’ ಚಿತ್ರಗಳಲ್ಲಿ ನಟಿಸಿರುವ ಪ್ರಿಯಾಂಕಾಕುಮಾರ್ ನಾಯಕಿಯಾಗಿ ....

324

Read More...

Ghost.Film Press Meet

Tuesday, March 28, 2023

ಘೋಸ್ಟ್ದಲ್ಲಿ ಅನುಪಮ್ಖೇರ್ ನಟನೆ

      ಬಾಲಿವುಡ್ ನಟ ಅನುಪಮ್‌ಖೇರ್ ‘ಘೋಸ್ಟ್’ ಚಿತ್ರದಲ್ಲಿ ಅಭಿನಯಿಸುತ್ತಾರೆಂದು ಸುದ್ದಿಯಾಗಿತ್ತು. ಅದರಂತೆ ಬೆಂಗಳೂರಿಗೆ ಬಂದು ತಮ್ಮ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಮಾಧ್ಯಮದವರು ಸೆಟ್‌ಗೆ ಭೇಟಿ ನೀಡಿದಾಗ ನಾಯಕ ಶಿವರಾಜ್‌ಕುಮಾರ್ ಅವರೊಂದಿಗಿನ ಮಾತಿನ ಭಾಗದ ಶೂಟಿಂಗ್ ನಡೆಯತ್ತಿತ್ತು. ಬಿಡುವು ಮಾಡಿಕೊಂಡು ತಂಡವು ಮಾತಿಗೆ ಕುಳಿತುಕೊಂಡರು.

288

Read More...

Darbar.Film News

Tuesday, March 28, 2023

ದರ್ಬಾರ್‌ದಲ್ಲಿ ಹಳ್ಳಿ ರಾಜಕೀಯ      ಹಿರಿಯ ಸಾಹಿತಿ, ಸಂಗೀತ ಸಂಯೋಜಕ ಮತ್ತು ನಟ ವಿ.ಮನೋಹರ್ ದೀರ್ಘ ಕಾಲದ ಗ್ಯಾಪ್ ನಂತರ ‘ದರ್ಬಾರ್’ ಎನ್ನುವ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಸತೀಶ್ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡುವ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ನಿರ್ದೇಶಕರು, ಸುಮಾರು ೨೩ ವರ್ಷಗಳ ನಂತರ ನಿರ್ದೇಶನ ಮಾಡಿದ್ದೇನೆ. ಅದಕ್ಕೆ ನಿರ್ಮಾಪಕರೇ ಕಾರಣರಾಗಿರುತ್ತಾರೆ. ಇಂದ್ರಧುನುಷ್ ಮಾಡಿದ ಮೇಲೆ ಏನೇನೋ ಆಯಿತು. ನಂತರ ಧಾರವಾಹಿ, ಸಂಗೀತದ ಮೇಲೆ ಬ್ಯುಸಿ ಆದೆ. ಸಿನಿಮಾರಂಗಕ್ಕೆ ಬರುವ ಮುನ್ನ ಕೆಲ ಪತ್ರಿಕೆಗಳಿಗೆ ಕಾರ್ಟೂನ್ ....

312

Read More...

Yala Kunni.Film News

Monday, March 27, 2023

ವಜ್ರಮುನಿ ಡೈಲಾಗ್ ಚಿತ್ರದ ಶೀರ್ಷಿಕೆ       ಗತಕಾಲದ ಖ್ಯಾತ ಖಳನಟ ವಜ್ರಮುನಿ ಹಲವು ಚಿತ್ರಗಳಲ್ಲಿ ‘ಯಲಾ ಕುನ್ನಿ’ ಎಂಬ ಡೈಲಾಗ್ ಬಳಸುತ್ತಿದ್ದು, ಹೆಚ್ಚು ಪ್ರಸಿದ್ದಿಯಾಗಿತ್ತು. ಈಗ ಇದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಮೇರಾ ನಾಮ್ ವಜ್ರಮುನಿ ಎಂಬ ಅಡಿಬರಹವಿದೆ. ಮುಹೂರ್ತ ಸಮಾರಂಭವು ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನಡೆಯಿತು. ವಜ್ರಮುನಿ ಕುಟುಂಬದ ಸದಸ್ಯರು ಆಗಮಿಸಿ ತಂಡಕ್ಕೆ ಶುಭಕೋರಿದ್ದು ವಿಶೇಷವೆನಿಸಿತ್ತು. ಲಕ್ಷೀವಜ್ರಮುನಿ ಪ್ರಥಮ ದೃಶ್ಯಕ್ಕೆ ಕ್ಯಾಮಾರಾ ಚಾಲನೆ ಮಾಡಿದರೆ, ಹಿರಿಯ ಪುತ್ರ ವಿಶ್ವನಾಥ್ ಕ್ಲಾಪ್ ಮಾಡಿದರು. ‘ಸಡಗರ’ ನಿರ್ಮಾಣ ಮಾಡಿರುವ ಮಹೇಶ್‌ಗೌಡ್ರು ಬಂಡವಾಳ ....

310

Read More...

PS-2.Film Trailer.News

Wednesday, March 29, 2023

  *‘ಪೊನ್ನಿಯಿನ್ ಸೆಲ್ವನ್-2’ ಟ್ರೇಲರ್ ರಿಲೀಸ್..ಚೋಳಾ ಸಾಮ್ರಾಜ್ಯಕ್ಕಾಗಿ ಮುಂದುವರೆದ ಹೋರಾಟ..*   ಖ್ಯಾತ ನಿರ್ದೇಶಕ ಮಣಿರತ್ನಂ ಕನಸಿನ ಕೂಸು ಐತಿಹಾಸಿಕ ದೃಶ್ಯಕಾವ್ಯ ಪೊನ್ನಿಯೆನ್ ಸೆಲ್ವನ್-2 ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಚೆನ್ನೈನಲ್ಲಿ ನಿನ್ನೆ ಸಂಜೆ ಅದ್ಧೂರಿಯಾಗಿ ಟ್ರೇಲರ್ ಹಾಗೂ ಆಡಿಯೋ ಲಾಂಚ್ ಕಾರ್ಯಕ್ರಮ ಜರುಗಿತು. ವಿಶೇಷ ಅತಿಥಿಯಾಗಿ ಆಗಮಿಸಿದ್ದ ಉಳಗನಾಯಗನ್ ಕಮಲ್ ಹಾಸನ್ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ನೀಡಿದ್ರು. ಟ್ರೇಲರ್ ಲಾಂಚ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಮಣಿರತ್ನಂ, ಕಾರ್ತಿ, ಐಶ್ವರ್ಯ ರೈ, ವಿಕ್ರಮ್, ತ್ರಿಯ, ಜಯಂರವಿ, ಪ್ರಕಾಶ್ ರೈ, ಶರತ್ ಕುಮಾರ್ ಸೇರಿದಂತೆ ಹಲವು ಸೂಪರ್ ಸ್ಟಾರ್ಸ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ....

427

Read More...

Appu Katha Gaanam.Video Song

Thursday, March 16, 2023

  *ಅಭಿಮಾನಿ ನಿರ್ಮಾಪಕರಿಂದ ಪುನೀತ್ ಹುಟ್ಟುಹಬ್ಬಕ್ಕೆ  ಅಪ್ಪುಕಥಾಗಾನಂ*       ಅಭಿಮಾನ ಎನ್ನುವುದು ತುಂಬಾ ದೊಡ್ಡದು. ಅದಕ್ಕೆ ಬೆಲೆ ಕಟ್ಟಲಾಗದು. ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನಗಲಿ  ವರ್ಷಗಳೇ ಕಳೆದರೂ ಅವರನ್ನು ಆರಾಧಿಸುವ ಅಭಿಮಾನಿಗಳು ಅವರ ಹೆಸರನ್ನು ಆಕಾಶದೆತ್ತರಕ್ಕೆ ತೆಗೆದುಕೊಂಡು ಹೋಗುತ್ತಿದ್ದಾರೆ. ಅಂಥ ಮತ್ತೊಬ್ಬ ಅಪ್ಪಟ ಅಭಿಮಾನಿಯೇ ಮಹಿ ಶಿವಶಂಕರ್. ಇವರು ಮೂಲತಃ ಆಂಧ್ರದವರಾದರೂ ಬೆಂಗಳೂರಿನಲ್ಲೇ ತಮ್ಮ  ಜೀವನ ಕಟ್ಟಿಕೊಂಡಿದ್ದಾರೆ. ಮೊದಲಿಂದಲೂ ರಾಜ್ ಕುಟುಂಬದ ಮೇಲೆ ಅಪಾರ ಗೌರವ ಅಭಿಮಾನ ಇಟ್ಟುಕೊಂಡಿದ್ದ ಮಹಿ ಶಿವಶಂಕರ್ ಅಪ್ಪು ಅಗಲಿಕೆಯ ನೋವನ್ನು ಸುಂದರವಾದ ಹಾಡೊಂದರ ಮೂಲಕ ವ್ಯಕ್ತಪಡಿಸಿದ್ದಾರೆ. ಮೂಲತಃ ಇವರೊಬ್ಬ ನಿರ್ಮಾಪಕರೂ ....

415

Read More...
Copyright@2018 Chitralahari | All Rights Reserved. Photo Journalist K.S. Mokshendra,