*"ದಿಲ್ ಪಸಂದ್" ಗೆ ಚಾಲನೆ ನೀಡಿದ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್.* ಶಿವತೇಜಸ್ ನಿರ್ದೇಶನದ ಈ ಚಿತ್ರಕ್ಕೆ ಡಾರ್ಲಿಂಗ್ ಕೃಷ್ಣ ನಾಯಕ. ನಿಶ್ವಿಕ ನಾಯ್ಡು - ಮೇಘ ಶೆಟ್ಟಿ ನಾಯಕಿಯರು. ರಶ್ಮಿ ಫಿಲಂಸ್ ಲಾಂಛನದಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಎಸ್ ಆರ್ ವಿ ಥಿಯೇಟರ್ ನಲ್ಲಿ ನಡೆಯಿತು. ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದರು. ಚಿತ್ರಕ್ಕೆ "ದಿಲ್ ಪಸಂದ್" ಎಂದು ಹೆಸರಿಡಲಾಗಿದೆ. ಡಾರ್ಲಿಂಗ್ ಕೃಷ್ಣ ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರದ ನಾಯಕಿಯರಾಗಿ ನಿಶ್ವಿಕನಾಯ್ಡು ಹಾಗೂ ಮೇಘ ಶೆಟ್ಟಿ ಅಭಿನಯಿಸುತ್ತಿದ್ದಾರೆ. ....
*ಅಕ್ಟೋಬರ್ 1ರಂದು ಬಿಡುಗಡೆಯಾಗಲಿದೆ ಪಿ.ಶೇಷಾದ್ರಿ ನಿರ್ದೇಶನದ "ಮೋಹನದಾಸ".* ಮಹಾತ್ಮ ಗಾಂಧಿ ಅವರ ಬಾಲ್ಯದ ಬಗ್ಗೆ ತಿಳಿಸುವ ಈ ಚಿತ್ರ ಗಾಂಧಿ ಜಯಂತಿ ವೇಳೆ ತೆರೆಗೆ. ಕನ್ನಡಕ್ಕೆ ಹಲವು ರಾಷ್ಟ್ರಪ್ರಶಸ್ತಿ ತಂದುಕೊಟ್ಟಿರುವ ನಿರ್ದೇಶಕ ಪಿ.ಶೇಷಾದ್ರಿ. ಇದೇ ಅಕ್ಟೋಬರ್ 1 ರಂದು ಶೇಷಾದ್ರಿ ಅವರು ನಿರ್ದೇಶಿಸಿರುವ "ಮೋಹನದಾಸ" ಚಿತ್ರ ತೆರೆಗೆ ಬರಲಿದೆ. ಈ ವಿಷಯವನ್ನು ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಬ ಈ ವರೆಗೂ ಗಾಂಧೀಜಿಯವರ ಕುರಿತು ಸಾಕಷ್ಟು ಸಾಕ್ಷ್ಯಚಿತ್ರ ಹಾಗೂ ಪುಸ್ತಕಗಳು ಬಂದಿವೆಯಾದರೂ, ಚಲನಚಿತ್ರಗಳು ಬಂದಿರುವುದು ಕಡಿಮೆ. ಬಾಲ್ಯದ ಕುರಿತಾದ ಚಿತ್ರ ಬಂದಿಲ್ಲ. ರಿಚರ್ಡ್ ಆಟನ್ ....
ನೀರೆಯರಿಗೆಆತ್ಮವಿಶ್ವಾಸತುಂಬುವಫ್ಯಾಶನ್ ಷೋ ಫ್ಯಾಶನ್ ಷೋ ಅಂದರೆಅಲ್ಲಿಅಂದ,ಚಂದ,ಶೇಪ್, ವಯಸ್ಸು ಮುಂತಾದವುಇರುವವರನ್ನುರ್ಯಾಂಪ್ ವಾಕ್ದಲ್ಲಿ ಭಾಗವಹಿಸಲು ಅರ್ಹತೆಕೊಡುವುದು ಸಾಮಾನ್ಯವಾಗಿದೆ. ಆದರೆಜ್ಯೋತ್ಸಾವೆಂಕಟೇಶ್ ಮತ್ತು ಸಬರೇಷ್ಬಾಲಕೃಷ್ಣನಾಯ್ಡು ಸಾರಥ್ಯದಜಾಸ್ ಸ್ಟುಡಿಯೋದವರುಇದೆಲ್ಲಾವನ್ನು ಪರಿಗಣಿಸದೆ, ‘ಮಿಸ್ಅಂಡ್ ಮಿಸಸ್ಕರ್ನಾಟಕ ೨೦೨೧’ ಅಡಿಷನ್ಸ್ಪರ್ಧೆಯಲ್ಲಿ ಪಾಲ್ಗೋಳಲು ಅವಕಾಶ ಮಾಡಿಕೊಟ್ಟಿದ್ದರು.ಇದಕ್ಕೆಯಾವುದೇರೀತಿಯ ನೊಂದಣಿ ಶುಲ್ಕವಿರುವುದಿಲ್ಲ. ಪ್ರಸಕ್ತ ಪಿಡುಗು ಬಂದಿರುವಸಂದರ್ಭದಲ್ಲಿ ಇವರುಗಳಿಗೆ ಬದುಕಿನಲ್ಲಿಆತ್ಮವಿಶ್ವಾಸ, ಪ್ರೋತ್ಸಾಹ ಹಾಗೆಯೇಯಾವರೀತಿ ....
ಸೇನಾಪುರಕ್ಕೆ ಗಾಯಕಿ ಅನನ್ಯ ಭಟ್ ಹಿರೋಯಿನ್ | ಟೀಸರ್ ರಿಲೀಸ್ ಅಕ್ರಮ ಗಣಿ ಧಣಿಗಳ ಸತ್ಯ ಘಟನೆಗಳು ಒಂದು ಕಾಲಘಟ್ಟದಲ್ಲಿ ಅಕ್ರಮ ಗಣಿ ದಂಧೆ ರಾಜ್ಯಾದ್ಯಂತ ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿತ್ತು. ಬಿಸಿಲು ನಾಡಿನ ಒಡಲಲ್ಲಿ ನಡೆದಿದ್ದ, ದಂಧೆಯ ಕಬಂಧ ಬಾಹುಗಳು ಕರಾವಳಿಯ ಕಿನಾರೆಗಳವರೆಗೂ ಮೈಚಾಚಿಕೊಂಡಿತ್ತು. ಇಂತಹ ವಿದ್ಯಾಮಾನಗಳ ಸುತ್ತ ನಡೆದಂತ ಒಂದಷ್ಟು ನೈಜ ಅಂಶಗಳನ್ನು ’ಸೇನಾಪುರ’ ಚಿತ್ರದಲ್ಲಿ ಬಳಸಲಾಗಿದೆ. ಕತೆ ಬರೆದು ನಿರ್ದೇಶನ ಮಾಡಿರುವುದು ಕುಂದಾಪುರದ ನವ ಪ್ರತಿಭೆ ಗುರುಸಾವನ್. ಇವರು ಹೇಳುವಂತೆ ಮೊದಲು ವೆಬ್ಸೀರೀಸ್ಗೆ ಅಂತಲೇ ಮಾಡಲು ಚಿಂತನೆ ನಡೆಸಲಾಗಿತ್ತು. ಮುಂದೆ ಅದು ಚಿತ್ರವಾಗಿ ರೂಪಾಂತರಗೊಂಡಿತು. ಸಮಾಜ ಮತ್ತು ಪ್ರಕೃತಿ ಎಲ್ಲರಿಗೂ ....
ಮೊದಲ ಹಂತ ಮುಗಿಸಿದ ಸುಕನ್ಯದ್ವೀಪ ಸುಕನ್ಯ ದ್ವೀಪ ಎನ್ನುವ ಟೈಟಲ್ ಕೇಳಿದೊಡನೆ ಇದೊಂದು ಸಸ್ಪೆನ್ಸ್ ಚಿತ್ರವಿರಬಹುದು ಎಂದುಕೊಳ್ಳುತ್ತಾರೆ. ಆದರೆ ಅಂಥಾ ಯಾವುದೇ ಸಸ್ಪೆನ್ಸ್ , ಥ್ರಿಲ್ಲರ್ ಇರದೆ ಪಕ್ಕಾ ಫ್ಯಾಮಿಲಿ ಲವ್ ಎಂಟರ್ಟೈನರ್ ಕಥಾಹಂದರಕ್ಕೆ ಹಾಸ್ಯದ ಟಚ್ ಕೊಟ್ಟು ನಿರೂಪಿಸುವ ಪ್ರಯತ್ನವನ್ನು ನಿರ್ದೇಶಕ ಎಂ.ಡಿ. ಅಫ್ಜಲ್ ಮಾಡಿದ್ದಾರೆ. ಸೂಪರ್ ಸ್ಟಾರ್ ಪತ್ರಿಕೆಯ ಸಂಪಾದಕರೂ ಆದ ಇವರು ಈಗಾಗಲೇ ಮೊಬೈಲ್ ರಾಜ ಎನ್ನುವ ಚಿತ್ರ ನಿರ್ದೇಶಿಸಿದ್ದು, ಅದಿನ್ನೂ ಬಿಡುಗಡೆಯಾಗಿಲ್ಲ, ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತಕ್ಕೆ ಅಣಿಯಾಗಿದ್ದು, ಅದಕ್ಕೂ ಮುನ್ನ ಮಾಧ್ಯಮಗಳ ಮುಂದೆ ಹಾಜರಾಗಿ ಚಿತ್ರೀಕರಣದ ....
ಈವಾರ ತೆರೆಗೆ ಜನುಮದ ಜಾತ್ರೆ ಶ್ರೀ ಮಣಿಕುಪ್ಪೆ ಆಂಜನೇಯ ಸ್ವಾಮಿ ಪ್ರೊಡಕ್ಷನ್ ಲಾಂಛನ ದಲ್ಲಿ ದೊಡ್ಮನೆ ಮಂಜುನಾಥ್ ಎಂ ಅವರ ನಿರ್ಮಾಣದ ಈ ಚಿತ್ರವನ್ನು ಈ ವಾರ ರಾಜ್ಯದ್ಯಂತ ತೆರೆಗೆ ತರುತ್ತಿದ್ದಾರೆ. ಆಟೋ ಚಾಲಕನಾಗಿದ್ದುಕೊಂಡೇ ಜನುಮದಜಾತ್ರೆ ಎಂಬ ಸಿನಿಮಾ ನಿರ್ದೇಶನ ಮಾಡಿರುವ ಆಟೋ ಆನಂದ್ . ಪಕ್ಕಾ ಹಳ್ಳಿ ಸೊಗಡಿನಲ್ಲಿ ನಡೆಯುವ ಪ್ರೇಮಕಥೆಯ ಚಿತ್ರ ಇದಾಗಿದ್ದು, ಮಲೆ ಮಹದೇಶ್ವರ ಬೆಟ್ಟ, ಮಂಡ್ಯ, ತುಮಕೂರು, ಕೊರಟಗೆರೆ ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಎಲ್ಲಾ ಪ್ರೇಮ ಕಥೆಗಳ ಹಾಗೆ ಇದೂ ಕೂಡ ಗ್ರಾಮೀಣ ಪರಿಸರದ ಹಿನ್ನೆಲೆಯಲ್ಲಿ ನಡೆಯೋ ಪ್ರೇಮಕಥೆಯಾಗಿದ್ದರೂ, ಚಿತ್ರಕಥೆಯಲ್ಲಿ ಒಂದಷ್ಟು ಹೊಸ ವಿಷಯಗಳನ್ನು ತೆಗೆದುಕೊಳ್ಳಲಾಗಿದೆ. ಪ್ರೇಮಿಗಳಿಬ್ಬರು ....
ಚಿತ್ರೀಕರಣ ಮುಗಿಸಿಕೊಂಡ ರಗಡ್ ಕಥೆಯ ‘ಬಯಲುಸೀಮೆ’!
ಉತ್ತರ ಕರ್ನಾಟಕ ಶೈಲಿಯ ರಗಡ್ ಕಥೆಗಳ ಬಗ್ಗೆ ಕನ್ನಡದ ಪ್ರೇಕ್ಷಕರರಲ್ಲಿ ಯಾವತ್ತಿಗೂ ಒಂದು ವಿಶೇಷ ಪ್ರೀತಿ ಜಾರಿಯಲ್ಲಿರುತ್ತೆ. ಇದೀಗ ಅದೇ ಸೊಗಡಿನ ಪಕ್ಕಾ ರಗಡ್ ಕಥಾನಕ ಹೊಂದಿರೋ ಚಿತ್ರವೊಂದು ಸಂಪೂರ್ಣವಾಗಿ ಚಿತ್ರೀಕರಣ ಮುಗಿಸಿಕೊಂಡಿದೆ. ಪೊಲಿಟಿಕಲ್ ಕ್ರೈಂ ಥ್ರಿಲ್ಲರ್ ಜಾನರಿನ ಈ ಸಿನಿಮಾಗೆ ಕಥೆಗೆ ತಕ್ಕುದಾಗಿ ‘ಬಯಲುಸೀಮೆ’ ಎಂಬ ಶೀರ್ಷಿಕೆಯಿದಲಾಗಿದೆ. ಸಂಪೂರ್ಣವಾಗಿ ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರೋ ಈ ಸಿನಿಮಾ ನಾನಾ ಮಜಲುಗಳ, ಮೈನವಿರೇಳಿಸೋ ತಿರುವುಗಳ ಮೂಲಕ ಪ್ರೇಕ್ಷಕರನ್ನು ಬೇರೆಯದ್ದೇ ಜಗತ್ತಿಗೆ ಕೊಂಡೊಯ್ಯುವಂತೆ ಮೂಡಿ ಬಂದಿದೆ ಎಂಬ ಆತ್ಮವಿಶ್ವಾಶ ಚಿತ್ರತಂಡದಲ್ಲಿದೆ.
ಚಡ್ಡಿ ದೋಸ್ತ್ ಸಿನಿಮಾ ನೋಡಿ ಗೋಲ್ಡ್ ಕಾಯಿನ್ ಗೆಲ್ಲಿ ಹಾಸ್ಯದ ಜೊತೆ ಸ್ನೇಹ, ಪ್ರೀತಿಯ ಕಥಾನಕ ಹೊಂದಿದ, ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಚಡ್ಡಿದೋಸ್ತ್ ಕಡ್ಡಿ ಅಲ್ಲಾಡುಸ್ಬುಟ್ಟ ಚಿತ್ರವು ಕಳೆದ ಶುಕ್ರವಾರ ರಾಜ್ಯಾದ್ಯಂತ ಬಿಡುಗಡೆಯಾಗಿ, ಎಲ್ಲಾ ಕಡೆಯಿಂದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಚಿತ್ರದ ಕಲೆಕ್ಷನ್ ಕೂಡ ಇಂಪ್ರೂವ್ ಆಗ್ತಿದೆ. ಕಾಮಿಡಿಯೊಂದಿಗೆ ಆರಂಭವಾಗುವ ಚಿತ್ರದ ಕ್ಲೈಮ್ಯಾಕ್ಸ್ ಸೀನ್ ಪ್ರೇಕ್ಷಕರ ಕಣ್ಣನ್ನು ಒದ್ದೆಯಾಗಿಸುತ್ತದೆ. ಆಸ್ಕರ್ ಕೃಷ್ಣ ನಿರ್ದೇಶನದ ಈ ಚಿತ್ರಕ್ಕೆ ಲೋಕೇಂದ್ರಸೂರ್ಯ. ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿದ್ದಾರೆ. ....
ಕುಶಲಕರ್ಮಿಗಳ ಉತ್ತೇನಕ್ಕಾಗಿ ವಿಶೇಷ ಸ್ಟುಡಿಯೋ ಉದ್ಘಾಟನೆ! ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್ ಲಾಂಚ್. ಫ್ಯಾಶನ್ ಲೋಕದಲ್ಲಿ ಸಾಕಷ್ಟು ಹೆಸರು ಮಾಡುತ್ತಲೇ, ಆ ಜಗತ್ತಿಗೆ ಪ್ರತಿಭಾವಂತರನ್ನು ಕೊಡಮಾಡಿರುವ ಅಪರೂಪದ ಸಂಸ್ಥೆ ಕ್ರೀಮ್ ಕಲರ್ಸ್ ಸ್ಟುಡಿಯೋಸ್. ಈ ಸಂಸ್ಥೆಯೀಗ ಮತ್ತೊಂದು ಸಾಹಸದ ಮೈಲಿಗಲ್ಲು ಸ್ಥಾಪಿಸುವಲ್ಲಿ ಮೊದಲ ಹೆಜ್ಜೆಯಿರಿಸಿದೆ. ಈ ನೆಲದ ನೈಜ ಘಮವನ್ನು ಫ್ಯಾಶನ್ ಜಗತ್ತಿಗೆ ಪರಿಚಯಿಸುವ ಚೆಂದದ ಯಾನವೊಂದಕ್ಕೆ ಇದೀಗ ಚಾಲನೆ ಸಿಕ್ಕಿದೆ. ದೇಸೀ ಸೊಗಡಿನ ಕಾಸ್ಟ್ಯೂಮ್ಗಳ ಮೂಲಕ, ಕುಶಲಕರ್ಮಿಗಳಿಂದಲೇ ತಯಾರಾದ ವಿಶೇಷ ಬಟ್ಟೆಗಳ ಮೂಲಕವೇ ವಿಶಿಷ್ಟವಾದೊಂದು ಫ್ಯಾಶನ್ ಶೋ ನೆರವೇರಿದೆ. ಈ ಮೂಲಕ ಕುಶಲಕರ್ಮಿಗಳ ವಿನ್ಯಾಸಗಳನ್ನು ....
ಪ್ರೇಕ್ಷಕರ ಮನದೊಂದಿಗೆ ಗಳಿಕೆಯಲ್ಲೂ ಗೆಲ್ಲುತ್ತಿದೆ "ಲಂಕೆ". ಲೂಸ್ ಮಾದ ಯೋಗೇಶ್ ಅಭಿನಯದ "ಲಂಕೆ" ಚಿತ್ರ ಗಣಪತಿ ಹಬ್ಬದ ಶುಭದಿನದಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನಮ್ಮ "ಲಂಕೆ" ಯಶಸ್ಸು ಕಾಣುತ್ತಿರುವುದಕ್ಕೆ ಪ್ರಮುಖ ಕಾರಣರಾದ ಮಾಧ್ಯಮ ಹಾಗೂ ಸಿನಿ ರಸಿಕರಿಗೆ ಅನಂತ ಧನ್ಯವಾದ ತಿಳಿಸುತ್ತೇನೆ . ಚಿತ್ರ ಸುಮಾರು ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಎರಡನೇ ವಾರದಲ್ಲೂ ಹೆಚ್ಚು ಕಡಿಮೆ ಅಷ್ಟೇ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಮುಂದುವರೆಯುತ್ತಿದೆ. ಹಣ ಗಳಿಕೆಯೂ ಉತ್ತಮವಾಗಿದೆ. ಇದು ನನ್ನ ಮಾತಲ್ಲ ....
ಅಕ್ಷಿ ಹಾಡುಗಳ ಸಮಯ ನೇತ್ರದಾನಕುರಿತಂತೆ ‘ಅಕ್ಷಿ’ ಸಿನಿಮಾವುಅತ್ಯುತ್ತಮಚಿತ್ರವೆಂದು ೬೭ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.ಪ್ರಚಾರದಎರಡನೇ ಹಂತವಾಗಿಚಿತ್ರದಆಡಿಯೋ ಬಿಡುಗಡೆ ಸಮಾರಂಭವುರೇಣುಕಾಂಬ ಸ್ಟುಡಿಯೋದಲ್ಲಿ ಸರಳವಾಗಿ ನಡೆಯಿತು.ಸ್ಪರ್ಶಾರೇಖಾ ಮತ್ತು ವಿಜಯ್ಸೂರ್ಯ ಅತಿಥಿಗಳಾಗಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.ಕತೆ,ಚಿತ್ರಕತೆ,ಸಂಭಾಷಣೆ,ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಮನೋಜ್ಕುಮಾರ್ ನುಡಿಗಳ ಪರಿ ಹೀಗಿತ್ತು. ೨೦೧೯ರಲ್ಲಿ ಶುರು ಮಾಡಿ, ೫೫ ದಿನಗಳ ಕಾಲ ಚಿಕ್ಕಮಗಳೂರಿನ ಸಣ್ಣ ಹಳ್ಳಿಯಲ್ಲಿ ಚಿತ್ರೀಕರಣ ನಡೆಸಲಾಗಿತ್ತು.ಡಾ.ರಾಜ್ಕುಮಾರ್ತೀರಿಕೊಂಡಾಗ, ಕಣ್ಣನ್ನುದಾನ ಮಾಡಿದ ಬಗ್ಗೆ ....
ನೋಡಿದವರ ಕಣ್ಣಂಚಲ್ಲಿ ನೀರು ತರಿಸಿದ "ಆರಾಧ್ಯ".
ಅಪ್ಪ-ಮಗಳ ಬಾಂಧವ್ಯದ ಕಿರುಚಿತ್ರಕ್ಕೆ ಯತಿರಾಜ್ ಸಾರಥ್ಯ..
ಕನ್ನಡದ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಯತಿರಾಜ್, ಕಳೆದವರ್ಷ ಕೊರೋನ ಬಂದ ಮೇಲೆ ಸುಮಾರು ಹದಿನೇಳು ಕಿರುಚಿತ್ರಗಳನ್ನು ನಿರ್ದೇಶಿಸಿದ್ದಾರೆ." ಆರಾಧ್ಯ " ಹದಿನೆಂಟನೇ ಕಿರುಚಿತ್ರ.
ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ಈ ಕಿರುಚಿತ್ರವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಅಭಿನಯ ಕೂಡ ಮಾಡಿದ್ದಾರೆ.
ಅಪ್ಪ -ಮಗಳ ಸೆಂಟಿಮೆಂಟ್ ಸನ್ನಿವೇಶಗಳು ಈ ಕಿರುಚಿತ್ರದ ಹೈಲೆಟ್.
ಗೌಳಿಗೆ ಅದ್ದೂರಿ ಮಹೂರ್ತ ಶ್ರೀನಗರಕಿಟ್ಟಿ ಫಲವತ್ತಾದದಾಡಿಯನ್ನು ಬಿಡಲಾಗಿದ್ದು, ಯಾವ ಸಿನಿಮಾಕ್ಕೆಅಂತ ತಿಳಿದಿರಲಿಲ್ಲ. ಕಳೆದವಾರ ‘ಗೌಳಿ’ ಚಿತ್ರದಜಾಹಿರಾತಿನಿಂದಅದಕ್ಕೆಉತ್ತರ ಸಿಕ್ಕಿತ್ತು.ಈಗ ಅದೇ ಸಿನಿಮಾದ ಮಹೂರ್ತ ಸಮಾರಂಭವು ವಿಜಯನಗರದೇವಸ್ಥಾನದಲ್ಲಿಅದ್ದೂರಿಯಾಗಿ ನಡೆಯಿತು.ರಘುಸಿಂಗಮ್ ನಿರ್ಮಾಣದಲ್ಲಿ, ಸೂರ ನಿರ್ದೇಶನದಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ.ಈ ಕುರಿತಂತೆ ಮಾತನಾಡುವ ನಾಯಕ ಶ್ರೀನಗರ ಕಿಟ್ಟಿ ನಾನು ಇಲ್ಲಿಯವರೆಗೂ ಮಾಡಿರುವ ಚಿತ್ರಗಳದ್ದೇ ಒಂದು ಹಂತವಾದರೆ, ಈ ಸಿನಿಮಾವು ಮತ್ತೊಂದು ಹಂತಎನ್ನುಬಹುದು.ರಗಡ್ ಆಗಿ ಕಾಣಿಸಿಕೊಳ್ಳಲಿದ್ದು, ಲುಕ್ಕು ಕತೆ ಸಾಕಷ್ಟು ಹೊಸತನದಿಂದಕೂಡಿದೆ. ಪೂರ್ತಿಗಡ್ಡ ಬಿಟ್ಟು ಹೀಗೆ ....
ಪ್ರೀತಿಯ ಅಂಶಗಳನ್ನು ತೆರೆದಿಡುವ ಪ್ರೇಮಮಯಿ ಹೊಸಬರ ‘ಪ್ರೇಮಮಯಿ’ ಚಿತ್ರವೊಂದುಕೋಣನಕುಂಟೆ ಶ್ರೀ ಮಹಾಲಕ್ಷಿದೇವಸ್ಥಾನದಲ್ಲಿ ಸರಳವಾಗಿ ಮಹೂರ್ತಆಚರಿಸಿಕೊಂಡಿತು. ‘ಇದು ಹೃದಯಗಳ ವಿಷಯ’ ಎಂದುಅಡಿಬರಹದಲ್ಲಿ ಹೇಳಿಕೊಂಡಿದೆ.ಚಿತ್ರವು ಹೊಸದಾಗಿದ್ದರೂ ಮುಖ್ಯಕಲಾವಿದರು ಹೂರತುಪಡಿಸಿ ಉಳಿದವರು ಸಿನಿಮಾ ಸಂಸ್ಕ್ರತಿಯಲ್ಲೆ ಬೆಳೆದವರು ಎಂಬುದುಗಮನಾರ್ಹಅಂಶವಾಗಿದೆ. ಮೂರು ಚಿತ್ರಗಳನ್ನು ನಿರ್ದೇಶನ ಮಾಡಿರುವರಘುವರ್ಮಚಿತ್ರಕ್ಕೆ ಕತೆ,ಚಿತ್ರಕತೆ,ಸಂಭಾಷಣೆ, ಸಾಹಿತ್ಯ ಬರೆದುಆಕ್ಷನ್ಕಟ್ ಹೇಳುತ್ತಿದ್ದಾರೆ. ಎಲ್.ನಾಗಭೂಷಣ್ ನಿರ್ಮಾಪಕರುಇವರೊಂದಿಗೆ ಸಂಗೀತ ಸಂಯೋಜಕಕಾರ್ತಿಕ್ವೆಂಕಟೇಶ್ ಮತ್ತು ಪಿ.ಎನ್.ಕಿರಣ್ಕುಮಾರ್ ಸಹ ....
ಬಿಡುಗಡೆಯಾಯಿತು "ಕರ್ಮಣ್ಯೇವಾಧಿಕಾರಸ್ತೇ" ಚಿತ್ರದ ಟ್ರೇಲರ್ ಹಾಗೂ ಹಾಡುಗಳು. ಶಾಸಕ ಅರವಿಂದ್ ಬೆಲ್ಲದ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ. "ಕರ್ಮಣ್ಯೇವಾಧಿಕಾರಸ್ತೇ". ಅಂದರೆ ನೀನು ನಿನ್ನ ಕೆಲಸ ಮಾಡು.. ಫಲಾಫಲಗಳನ್ನು ನನಗೆ ಬಿಡು ಎಂದು. ಈ ವಾಕ್ಯದ ಅರ್ಥವನ್ನೇ ಇಟ್ಟುಕೊಂಡು ನಿರ್ಮಾಣವಾಗಿರುವ ಚಿತ್ರ "ಕರ್ಮಣ್ಯೇವಾಧಿಕಾರಸ್ತೇ". ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ನೆರವೇರಿತು. ಧಾರವಾಡ ಶಾಸಕ ಅರವಿಂದ್ ಬೆಲ್ಲದ್ ಈ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. ನನಗೆ ಈ ಚಿತ್ರದ ನಾಯಕ ಪ್ರತೀಕ್ ಚಿಕ್ಕಂದಿನಿಂದಲೂ ಪರಿಚಯ. ಅವನು ಸಿನಿಮಾಗೆ ಬರುತ್ತಾನೆ ಎಂದು ತಿಳಿದಾಗ ....
25ನೇ ದಿನಕ್ಕೆ *ಗ್ರೂಫಿ* ಸೆಲ್ಫೀ ಫೋಟೋ ತೆಗೆದುಕೊಳ್ಳುವ ಹವ್ಯಾಸ ಅತಿಯಾದಾಗ ಅದು ಏನೆಲ್ಲ ಅನಾಹುತಕ್ಕೆ ಕಾರಣವಾಗುತ್ತದೆ ಎಂಬುದನ್ನು ಉತ್ತಮ ಸಂದೇಶದೊಂದಿಗೆ ಹೇಳುವ ಚಿತ್ರ ಗ್ರೂಫಿ, ವಾರಗಳ ಹಿಂದೆ ಬಿಡುಗಡೆಯಾಗಿತ್ತು, ಡಿ.ರವಿ ಅರ್ಜುನ್ ಅವರ ನಿರ್ದೇಶನದ ಈ ಚಿತ್ರಕ್ಕೆ ಬಿಡುಗಡೆಯಾದೆಲ್ಲೆಡೆ ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಆ ಚಿತ್ರವೀಗ ೨೫ ದಿನಗಳನ್ನು ಯಶಸ್ವಿಯಾಗಿ ಪೂರೈಸಿ ಮುನ್ನಡೆದಿದೆ. ಈ ವಿಷಯವನ್ನು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಹಂಚಿಕೊಂಡಿತು. ನಿರ್ದೇಶಕ ರವಿ ಅರ್ಜುನ್ ಮಾತನಾಡುತ್ತ ನಮ್ಮ ಸಿನಿಮಾಗೆ ಎಲ್ಲ ಕಡೆಯಿಂದಲೂ ಪಾಸಿಟಿವ್ ರೆಸ್ಪಾನ್ಸ್ ಬಂದಿದೆ, ಚಿತ್ರ ವೀಕ್ಷಿಸಿದ ಎಲ್ಲರೂ ಚೆನ್ನಾಗಿದೆ ....
ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು "ರಾಣ" ಟೀಸರ್. ರಿಯಲ್ ಸ್ಟಾರ್ ಉಪೇಂದ್ರ ಅವರು ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆ ಮಾಡಿದರು. ಶ್ರೇಯಸ್ಸ್ ಹೆಸರಿನಲ್ಲೇ ಶ್ರೇಯಸ್ಸು ಇದೆ. ಅವನ ಮಾತು ಕೇಳಿ ಸಂತೋಷವಾಯಿತು. ತಂದೆಯನ್ನು ಮೀರಿಸಿದ ಮಗ ಶ್ರೇಯಸ್ಸ್. ಅವನಿಗೆ ಹಾಗೂ ಚಿತ್ರತಂಡಕ್ಕೆ ಒಳ್ಳೆಯದಾಗಲಿ ಎಂದು ಉಪೇಂದ್ರ ಹರಸಿದರು. ಕಂಪ್ಲಿ ಶಾಸಕರಾದ J.N ಗಣೇಶ್ ಅವರು ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ಟೀಸರ್ ಗೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಟೀಸರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ....
ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ.
ವಿಭಿನ್ನ ಟ್ರೇಲರ್ ಗೆ ರಿಯಲ್ ಸ್ಟಾರ್ ಉಪೇಂದ್ರ ಮೆಚ್ಚುಗೆ.
ಪ್ರಿಯಾಂಕ ಉಪೇಂದ್ರ ಅಭಿನಯದ 1980 ಚಿತ್ರದ ಟ್ರೇಲರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ಅವರಿಂದ ಬಿಡುಗಡೆಯಾಗಿದೆ.
ಟ್ರೇಲರ್ ಬಿಡುಗಡೆ ಮಾಡಿದ್ದ ಸುದೀಪ್, ನಾನು ಎರಡು ವರ್ಷಗಳಿಂದ ದೊಡ್ಡ ಪರದೆಯ ಮೇಲೆ ಚಿತ್ರವನ್ನಾಗಲಿ, ಟ್ರೇಲರ್ ಆಗಲಿ ನೋಡಿಲ್ಲ. ತುಂಬಾ ದಿನಗಳ ನಂತರ ಈ ಅವಕಾಶ ತಂದುಕೊಟ್ಟ ಚಿತ್ರತಂಡಕ್ಕೆ ಧನ್ಯವಾದ ಎಂದು ಹೇಳುತಾ,ಈ ಚಿತ್ರದ ಬಿಡುಗಡೆ ವೇಳೆಗೆ ಈಗಿರುವ ಸಂಕಷ್ಟದ ಪರಿಸ್ಥಿತಿ ದೂರವಾಗಿ, ಜನರಿಂದ ಚಿತ್ರಮಂದಿರ ತುಂಬ ತುಳುಕುವಂತಾಗಲಿ ಎಂದು ಶುಭ ಕೋರಿದರು.
ನೈಜಘಟನೆಯಕುಂತಿಪುತ್ರ ೧೯೯೦ರ ಕಲಬುರ್ಗಿ ಭಾಗದಲ್ಲಿ ನಡೆದಂತಒಂದುಘಟನೆಯು ಈಗ ‘ಕುಂತಿಪುತ್ರ’ ಚಿತ್ರವಾಗಿ ಬರುತ್ತಿದೆ.ಸದ್ದಿಲ್ಲದೆ ಪಾಂಡವಪುರ ಸುತ್ತಮುತ್ತಚಿತ್ರೀಕರಣ ಮುಗಿಸಿದೆ.ಟಾಲಿವುಡ್ದಲ್ಲಿ ವಿಜುಯಲ್ಎಫೆಕ್ಟ್ ಕೆಲಸ ಮಾಡಿಕೊಂಡಿರುವರಾಜು ಬೋನಗಾನಿ ಸಿನಿಮಾಕ್ಕೆಕತೆ,ಚಿತ್ರಕತೆ ಬರೆದು ನಿರ್ದೇಶನ ಮಾಡಿರುವುದು ಮೊದಲ ಅನುಭವ. ಕತೆಯಲ್ಲಿತಾನಾಯಿತು, ತನ್ನ ಕೆಲಸವಾಯಿತುಎನ್ನುವಂತಿದ್ದ ಹುಡುಗ, ಕೆಟ್ಟದ್ದನ್ನುಎಂದೂ ಸಹಿಸಲಾರ ಹಾಗೂ ಅಲ್ಲಿಅನ್ಯಾಯಕಂಡುಬಂದರೆ, ನೇರವಾಗಿ ಹೇಳುತ್ತಿದ್ದ. ಈತನಗುಣದಿಂದ ಹಳ್ಳಿಜನರುಆತನನ್ನುತಪ್ಪಾಗಿ ತಿಳಿದುಕೊಂಡಿರುತ್ತಾರೆ.ಅವನ ಗುಣಕಂಡ ಅವಳು ಆತನ ಬದುಕಿಗೆ ಪ್ರವೇಶ ಮಾಡಿ ಸರಿದಾರಿಗೆತರಲು ....
ವಿಶೇಷತೆಗಳ ಗುಚ್ಚ ತ್ರಿವೇದಂ ಹೊಸಬರ ‘ತ್ರಿವೇದಂ’ ಚಿತ್ರದಲ್ಲಿ ಹಲವು ವಿನೂತನಗಳು ಇರುವುದು ವಿಶೇಷ. ಸಾಮಾನ್ಯವಾಗಿ ನೈಜಕತೆಯನ್ನು ಆದರಿಸಿದ ಚಿತ್ರಗಳು ಬಂದಿವೆ, ಬರುತ್ತಲೆಇದೆ. ಆದರೆಇದರಲ್ಲಿ ಮೂರುಸತ್ಯಘಟನೆಗಳು ಬೇರೆ ಬೇರೆ ಸ್ಥಳಗಳಲ್ಲಿ ನಡೆದಿದೆ.೨೦೧೨ರಲ್ಲಿ ಬೆಂಗಳೂರಿನ ಕುರುಬರಹಳ್ಳಿ, ಆರು ವರ್ಷದ ಕೆಳಗೆ ಮಂಡ್ಯಾ ಮತ್ತು ಹನ್ನರೆಡು ವರ್ಷದ ಹಿಂದೆ ಮೈಸೂರುಆಸುಪಾಸುದಲ್ಲಿಜರುಗಿದೆ.ಅಂದರೆ ತ್ರಿವಳಿ ಕತೆಗಳನ್ನು ಒಗ್ಗೂಡಿಸಿ ಒಂದು ಸಿನಿಮಾ ಮಾಡಲು ಹೊರಟಿದ್ದಾರೆ.ಹಾಗಂತಒಂದಕ್ಕೊಂದು ಸಂಬಂದವಿರುವುದಿಲ್ಲ ಹಾಗೂ ಸಮಾನಾಂತರವಾಗಿ ಸಾಗುತ್ತದೆ.ಎಲ್ಲವು ಪ್ರೀತಿಕುರಿತಾಗಿದ್ದುಇರುತ್ತದೆ.ಅದಕ್ಕಾಗಿಕತೆಗೆ ಪೂರಕವಾಗುವಂತೆ ....