*ಏಲ್ಲಾ ಕಡೆ ಸದ್ದು ಮಾಡುತ್ತಿದೆ *ಕರಳೆ*ಚಿತ್ರದ ಪೋಸ್ಟರ್* ಈ ಹಿಂದೆ ಕಲಿವೀರ, ಕನ್ನಡದೇಶದೊಳ್ ಚಿತ್ರ ಮಾಡಿದ ನಿರ್ದೇಶಕ ಅವಿರಾಮ್ ಕಂಠೀರವ ಮತೊಮ್ಮೆ ವಿಬ್ಬಿನ್ನ ಕಥಾ ಹಂದರ ಹೊಂದಿರುವ “ಕರಳೆ” ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಇದು ನೈಜ ಘಟನೆ ಆಧಾರಿತ ಚಿತ್ರ, ಈಗಾಗಲೇ ಎರಡು ಹಂತದ ಚಿತ್ರೀಕರಣ ಪೂರ್ಣಗೊಳಿಸಿರುವ ಚಿತ್ರತಂಡ ಮೂರನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗಿದೆ. ಇದು ಮಹಿಳಾ ಪ್ರಧಾನ ಚಿತ್ರವಾಗಿದ್ದು ಇತ್ತೀಚೆಗೆ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ ಗೊಳಿಸಿದೆ. ಪೋಸ್ಟರ್ ಏಲ್ಲಾಕಡೆ ಬಾರಿ ಮೆಚ್ಚುಗೆ ಗಳಿಸಿದೆ, ಚಿತ್ರದಲ್ಲಿ ಸಮಾಜದ ವಾಸ್ತವ ಅಂಶಗಳನ್ನೇ ಇಲ್ಲಿ ಚಿತ್ರೀಸಲಾಗುತ್ತಿದೆ, ಎಮೋಷನಲ್, ರಾ, ಮನಕಲಕುವ ದೃಶ್ಯಗಳು ....
*ಅದ್ದೂರಿಯಾಗಿ ಅನಾವರಣವಾಯಿತು ನಕುಲ್ ಗೌಡ - ಮಾನ್ವಿತ ಹರೀಶ್ ಅಭಿನಯದ "BAD" ಚಿತ್ರದ ಟೀಸರ್* . *ಪಿ.ಸಿ.ಶೇಖರ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ಬಿಡುಗಡೆ* . ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ, ಪಿ.ಸಿ.ಶೇಖರ್ ನಿರ್ದೇಶನದ ಹಾಗೂ "ಪ್ರೀತಿಯ ರಾಯಭಾರಿ" ಖ್ಯಾತಿಯ ನಕುಲ್ ಗೌಡ ನಾಯಕನಾಗಿ ನಟಿಸಿರುವ "BAD" ಚಿತ್ರದ ಟೀಸರ್ ಇತ್ತೀಚೆಗೆ ಲುಲು ಮಾಲ್ ನಲ್ಲಿ ಅದ್ದೂರಿಯಾಗಿ ಅನಾವರಣವಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕೀಯ ಮುಖಂಡರಾದ ಬಿ.ಕೆ.ಶಿವರಾಮ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ....
*"ನಿಂಬಿಯಾ ಬನಾದ ಮ್ಯಾಗ"(ಪೇಜ್ ೧) ಚಿತ್ರದ ಟೀಸರ್ ಗೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಮೆಚ್ಚುಗೆ* . *ಇದು ಡಾ||ರಾಜಕುಮಾರ್ ಮೊಮ್ಮಗ ಷಣ್ಮುಖ ಗೋವಿಂದರಾಜ್ ಅಭಿನಯದ ಚಿತ್ರ* . ಭಾರತೀಯ ಚಿತ್ರರಂಗದ ಮೇರು ನಟ ಡಾ||ರಾಜಕುಮಾರ್ ಅವರ ಕುಟುಂಬದ ಮತ್ತೊಂದು ಕುಡಿ ಷಣ್ಮುಖ ಗೋವಿಂದರಾಜ್ "ನಿಂಬಿಯಾ ಬನಾದ ಮ್ಯಾಗ" ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಷಣ್ಮುಖ, ಡಾ||ರಾಜಕುಮಾರ್ ಪುತ್ರಿ ಲಕ್ಷ್ಮೀ ಹಾಗೂ ಗೋವಿಂದರಾಜು ಅವರ ಪುತ್ರ. ವಿ.ಮಾದೇಶ್ ನಿರ್ಮಾಣದ, ಅಶೋಕ್ ಕಡಬ ನಿರ್ದೇಶಿಸಿರುವ ಈ ಚಿತ್ರದ ಟೀಸರ್ ಇತ್ತೀಚಿಗೆ A2 music ಮೂಲಕ ಬಿಡುಗಡೆಯಾಗಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ....
ಪುನೀತ್ ರಾಜ್ಕುಮಾರ್ಗೆ ಗೌರವ ಸೂಚಕವಾಗಿ ’ಅಪ್ಪು ಟ್ಯಾಕ್ಸಿ’ ಚಿತ್ರ ಘೋಷಣೆ; ಜಗ್ಗು ಸಿರ್ಸಿ ಆ್ಯಕ್ಷನ್ ಕಟ್! ಚಿತ್ರದ ಶೀರ್ಷಿಕೆ ವಿನ್ಯಾಸವು ಹೃದಯಸ್ಪರ್ಶಿಯಾಗಿದ್ದು, ಪುನೀತ್ ರಾಜ್ಕುಮಾರ್ ಅವರ ಚಿತ್ರವನ್ನು ಒಳಗೊಂಡಿದೆ. ಅಪ್ಪು ಟ್ಯಾಕ್ಸಿ ಪುನೀತ್ ಅವರ ನಡವಳಿಕೆ ಮತ್ತು ಅವರು ಸಮಾಜದ ಮೇಲೆ ಬಿಟ್ಟ ಆಳವಾದ ಪ್ರಭಾವದ ಕುರಿತು ಹೇಳಲು ಪ್ರಯತ್ನಿಸುತ್ತದೆ. ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ಅವರ ಹುಟ್ಟುಹಬ್ಬದಂದು ದಿಲೀಪ್ ಕುಮಾರ್ ಎಚ್ಆರ್ ತಮ್ಮ ಮುಂಬರುವ ಚಿತ್ರ ’ಅಪ್ಪು ಟ್ಯಾಕ್ಸಿ’ಯನ್ನು ಘೋಷಿಸಿದ್ದಾರೆ. ಮಾರ್ಚ್ 17 ರಂದು ಈ ಘೋಷಣೆ ಮಾಡಲಾಗಿದೆ. ಸಿನಿಮಾ ಪತ್ರಿಕೋದ್ಯಮ, ಪ್ರೊಡಕ್ಷನ್ ಮತ್ತು ವಿತರಣೆಯಲ್ಲಿ ಎರಡು ....
*ಕಂಸಾಳೆ ಫಿಲಂಸ್ ಹಾಗೂ ಭುವನ್ ಎಂಟರ್ಟೈನ್ಮೆಂಟ್ ನಿರ್ಮಾಣದ "ಚಿ ಸೌಜನ್ಯ" ಚಿತ್ರದ ಮೂಲಕ ನಿರ್ದೇಶನದತ್ತ ಖ್ಯಾತ ನಟಿ ಹರ್ಷಿಕಾ ಪೂಣಚ್ಛ* . *ಶೋಷಿತ ಹೆಣ್ಣುಮಕ್ಕಳ ಕುರಿತಾದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಬಹುಭಾಷಾ ನಟ ಕಿಶೋರ್* . ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಅಷ್ಟೇ ಅಲ್ಲದೆ ಉತ್ತಮ ಸಾಮಾಜಿಕ ಕಾರ್ಯಗಳಿಂದಲೂ ಗುರುತಿಸಿಕೊಂಡಿರುವ ನಟಿ ಹರ್ಷಿಕಾ ಪೂಣಚ್ಛ ಈಗ ನಿರ್ದೇಶಕಿಯಾಗುತ್ತಿದ್ದಾರೆ. ಕನ್ನಡದಲ್ಲಿ ಕೇವಲ ಬೆರಳೆಣಿಕೆಯಷ್ಟು ಮಾತ್ರವಿರುವ ನಿರ್ದೇಶಕಿಯರ ಸಾಲಿಗೆ ಹರ್ಷಿಕಾ ಸೇರ್ಪಡೆಯಾಗಲಿದ್ದಾರೆ. ಇತ್ತೀಚೆಗೆ ಹರ್ಷಿಕಾ ಪೂಣಚ್ಛ ಅವರು ನಿರ್ದೇಶಿಸುತ್ತಿರುವ, ಕಂಸಾಳೆ ಫಿಲಂಸ್ ಹಾಗೂ ....
*ಅಂದುಕೊಂಡ ರೀತಿಯಲ್ಲೇ ಚಿತ್ರೀಕರಣ ಪೂರ್ಣ. "Congratulations ಬ್ರದರ್"* *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಸುಪ್ರೀಂ ಹೀರೋ ಶಶಿಕುಮಾರ್ ನಟನೆ* . *ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆ** . ಸಾಮಾಜಿಕ ಮಾದ್ಯಮದಲ್ಲಿ ಸಾಕಷ್ಟು ಸದ್ದು ಮಾಡಿರುವ ಡೈಲಾಗ್ "Congratulations ಬ್ರದರ್". ಕಳೆದ ಮೂರು ತಿಂಗಳ ಹಿಂದೆ ಇದೇ ಹೆಸರಿನಲ್ಲಿ ಚಿತ್ರ ಆರಂಭವಾಗಿದ್ದು ಎಲ್ಲರಿಗೂ ತಿಳಿದ ಸಂಗತಿ. ಈಗ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರದ ಚಿತ್ರೀಕರಣ ನಿಗದಿಯಂತೆ ಪೂರ್ಣವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಮುಂದಿನ ತಿಂಗಳು ಚಿತ್ರದ ಮೊದಲ ಹಾಡು ದುಬೈನಲ್ಲಿ ಬಿಡುಗಡೆಯಾಗಲಿದೆ. ಬಹುತೇಕ ಹೊಸ ....
ಅವಳೆ ಕಾಂಚನ ಟ್ರೇಲರ್ ಬಿಡುಗಡೆ ’ಅವಳೆ ಕಾಂಚನ’ ಚಿತ್ರದ ಟ್ರೇಲರನ್ನು ಹಿರಿಯ ಪತ್ರಕರ್ತ ಕೆ.ಜೆ.ಕುಮಾರ್ ಬಿಡುಗಡೆ ಮಾಡಿದರು. ’ನಮ್ಮೂರ ರಾಮಾಯಣ’ ಚಿತ್ರದ ಮೂಲಕ ನಿರ್ದೇಶಕ ಮತ್ತು ನಿರ್ಮಾಪಕರಾಗಿ ಗುರುತಿಸಿಕೊಂಡಿರುವ ಹಿರಿಯ ತಂತ್ರಜ್ಘ ಮಂಡ್ಯನಾಗರಾಜ್ ಹದಿನೆಂಟನೇ ಅನುಭವ ಎನ್ನುವಂತೆ ಬಂಡವಾಳ ಹೂಡುವ ಜತೆಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಂದರ್ಭದಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಉಪಸ್ತಿತರಿದ್ದರು. ನಿರ್ದೇಶಕರು ಹೇಳುವಂತೆ ಕುಟುಂಬಸಮೇತ ನೋಡಬಹುದಾದ ಸನ್ನಿವೇಶಗಳು ಇರಲಿದೆ. ಹಳ್ಳಿಯಲ್ಲಿ ಎರಡು ಕುಟುಂಬಗಳ ಮಧ್ಯೆ ನಡೆಯುವ ವಾದ ವಿವಾದಗಳು. ಒಂದೇ ಊರಿನವರು ಪ್ರೀತಿಯಲ್ಲಿ ಬಿದ್ದಾಗ, ....
ಸಸ್ಪೆನ್ಸ್ , ಥ್ರಿಲ್ಲರ್ ಸಿನಿಮಾ "ಸೂತ್ರಧಾರಿ". ಮೇ ತಿಂಗಳ 9 ರಂದು ಬಿಡುಗಡೆ ಸಸ್ಪೆನ್ಸ್, ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ " ಸೂತ್ರದಾರಿ" ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು ಗಮನ ಸೆಳೆದಿದೆ. ನಿರ್ಮಾಪಕರಾದ ಚೇತನ್, ಮುನೇಗೌಡ, ರಾಜೇಶ್ ಚಿತ್ರದ ಬಿಡುಗಡೆ ದಿನಾಂಕ ಪ್ರಕಟಿಸಿದರು. ಮೇ 9 ರಂದು ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ನಟ ,ನಿರ್ಮಾಪಕ ನವರಸನ್ ನಿರ್ಮಾಣ ದಲ್ಲಿ ಮೂಡಿ ಬಂದಿರುವ ಚಿತ್ರದಲ್ಲಿ ಕಿರಣ್ ಕುಮಾರ್ ಆಕ್ಷನ್ಕಟ್ ಹೇಳಿದ್ದು ರಾಪರ್ ಚಂದನ್ಶೆಟ್ಟಿ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರ ಇದು. ನಾಯಕಿಯಾಗಿ ಅಪೂರ್ವ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಸಂಜನಾ ಆನಂದ್ ಕಾಣಿಸಿಕೊಂಡಿದ್ದು ....
ಕಲ್ಕಿ ಅವತಾರದಲ್ಲಿ ಅರಿಂದಮ್ ಲಿರಿಕಲ್ ಹಾಡುಗಳ ಅನಾವರಣ ತನ್ನ ವಯಸಿಗೆ ಮೀರಿದಂಥ ನಡವಳಿಕೆ, ಬುದ್ದಿಶಕ್ತಿ ಹೊಂದಿದ ಯುವಕನೋರ್ವನ ಜೀವನದಲ್ಲಿ ದುಷ್ಟಶಕ್ತಿಗಳ ವಿರುದ್ದ ನಡೆಯುವ ಹೋರಾಟ ಹಾಗೂ ಪ್ರೀತಿ, ಪ್ರೇಮದ ಸುತ್ತ ನಡೆಯುವ ಘಟನೆಗಳೇ ಅರಿಂದಮ್. ಕಲ್ಕಿ ಅಗಸ್ತ್ಯ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದ ಎರಡು ಲಿರಿಕಲ್ ಹಾಡುಗಳ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಿತ್ರದಲ್ಲಿ ನಾಯಕನಾಗೂ ಕಾಣಿಸಿಕೊಂಡಿರುವ ಕಲ್ಕಿ ಅಗಸ್ತ್ಯ ಮಾತನಾಡುತ್ತ ನಾನು ಮೂಲತಃ ಧಾರವಾಡದವನು. ಉತ್ಸಾಹಿ ಯುವಕರೆಲ್ಲ ಸೇರಿ ಒಂದು ಸದಭಿರುಚಿಯ ಸಿನಿಮಾ ಮಾಡಿದ್ದೇವೆ. ಕಾಳಿ ಎಂಬ ಯುವಕನ ....
ಮೆಜೆಸ್ಟಿಕ್-2 'ನಾಯಕ ನಾನೇ’ ಲಿರಿಕಲ್ ಸಾಂಗ್ ಬಿಡುಗಡೆ ಅಮ್ಮಾ ಎಂಟರ್ ಪ್ರೈಸಸ್ ಮೂಲಕ ಕೋಟೆನಾಡು ಚಿತ್ರದುರ್ಗದ ಹೆಚ್.ಆನಂದಪ್ಪ ಅವರು ಬಿಗ್ ಬಜೆಟ್ ನಲ್ಲಿ ನಿರ್ಮಿಸಿರುವ ಮೆಜೆಸ್ಟಿಕ್-2 ಚಿತ್ರದ ’ನಾಯಕ ನಾನೇ’ ಎಂಬ ಮೊದಲ ಹಾಡಿನ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಯುವನಟ ಭರತ್ ಕುಮಾರ್, ಸಂಹಿತಾ ವಿನ್ಯಾ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಸಾಂಗ್ ರಿಲೀಸ್ ಮಾಡಿ, ಈ ಟೈಟಲ್ ಅದ್ಭುತವಾಗಿದೆ. ಇದರಿಂದ ಲಾಂಚ್ ಆದವರು ಎತ್ತರಕ್ಕೆ ಹೋಗಿದ್ದಾರೆ. ಅದೇರೀತಿ ಶಿಲ್ಪಾ ಶ್ರೀನಿವಾಸ್ ಅವರ ಮಗ ಭರತ್ ಕೂಡ ....
ಧ್ರುವ 369 ಟೀಸರ್ದಲ್ಲಿ ಡಾ.ರಾಜ್ಕುಮಾರ್ ಮತ್ತು ಡಾ.ಪುನೀತ್ ರಾಜ್ಕುಮಾರ್ ವಿನೂತನ ಶೀರ್ಷಿಕೆ ಹೊಂದಿರುವ ’ಧ್ರುವ 369’ ಚಿತ್ರದ ಟೀಸರ್ನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ.ಗೋವಿಂದು ಅನಾವರಣಗೊಳಿಸಿದರು. ನಂತರ ಮಾತನಾಡುತ್ತಾ ನಿರ್ದೇಶಕರ ಶ್ರಮ ಇದರಲ್ಲಿ ಕಂಡು ಬಂದಿದೆ. ಇಂತಹವರ ಹಾಜರಾತಿ ಪ್ರಸಕ್ತ ಚಿತ್ರರಂಗಕ್ಕೆ ಅವಶ್ಯಕವಾಗಿದೆ. ಭವಿಷ್ಯದಲ್ಲಿ ಇವರಿಗೆ ಒಳ್ಳೆ ಅವಕಾಶಗಳು ಸಿಗುವ ಲಕ್ಷಣಗಳು ಕಾಣಿಸುತ್ತಿದೆ. ಒಳ್ಳೆಯದಾಗಲಿ ಎಂದರು. ಸುಂದರ ಸಮಯದಲ್ಲಿ ಎನ್.ಎಂ.ಸುರೇಶ್, ನಟ ರಮೇಶ್ಭಟ್, ಮುಂತಾದವರು ಉಪಸ್ತಿತರಿದ್ದರು. ಆಧುನಿಕ ತಂತ್ರಜ್ಘಾನದಲ್ಲಿ ಸೃಷ್ಟಿಸಿರುವ 1.40 ನಿಮಿಷದ ....
*"ವಾಮನ" ಚಿತ್ರದ ತಾಯಿ - ಮಗನ ಬಾಂಧವ್ಯದ ಹಾಡಿಗೆ ಅಭಿಮಾನಿಗಳು ಫಿದಾ* . *ಚೇತನ್ ಗೌಡ ನಿರ್ಮಾಣದ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕನಟರಾಗಿ, ನಟಿಸಿರುವ ಈ ಚಿತ್ರ ಏಪ್ರಿಲ್ 10 ರಂದು ತೆರೆಗೆ* . "ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್" ಬ್ಯಾನರ್ ಅಡಿಯಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ, ಶಂಕರ್ ರಾಮನ್ ಎಸ್, ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ "ವಾಮನ" ಚಿತ್ರಕ್ಕಾಗಿ ಪ್ರಮೋದ್ ಮರವಂತೆ ಬರೆದಿರುವ "ಕಂದ ಕನಸ ರೂಪ" ಎಂಬ ತಾಯಿ - ಮಗನ ಬಾಂಧವ್ಯದ ಕುರಿತಾದ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರು ಈ ಹಾಡನ್ನು ಬಿಡುಗಡೆ ಮಾಡಿ ....
"ಅವನಿರಬೇಕಿತ್ತು." ಚಿತ್ರದ ಒಹೋ ..ಹೃದಯ ಹಾಡು ಬಿಡುಗಡೆ. ಕನ್ನಡದಲ್ಲಿ ಹೊಸಹೊಸ ಕಂಟೆಂಟುಗಳೊಂದಿಗೆ ಹೊಸ ತಂಡ ಚಿತ್ರರಂಗದಲ್ಲಿ ಮೋಡಿ ಮಾಡುತ್ತಿದೆ. ಅದರ ಸಾಲಿಗೆ "ಅವನಿರಬೇಕಾಗಿತ್ತು" ಚಿತ್ರ ತಂಡ ಹೊಸ ಸೇರ್ಪಡರಯಾಗಿದೆ. ಅಂದಕಾಲಿತ್ತಲೇ.. ಇಂದ ಕಾಲಿತ್ತಲೇ ಹಾಡಿನ ಬಳಿಕ ಚಿತ್ರದ "ಓಹೋ..ಹೃದಯ " ಹಾಡು ಬಿಡುಗಡೆಯಾಗಿದೆ. ಅರ್ಪಾಜ್ ಉಳ್ಳಾಳ್ ಹಾಗು ಅನುರಾಧ ಭಟ್ ಹಾಡಿರುವ ಹಾಡಿನಲ್ಲಿ ಭರತ್ ಹಾಗು ಸೌಮ್ಯ ಜಾನ್ ಕಾಣಿಸಿಕೊಂಡಿದ್ದಾರೆ. ಲೋಕಿ ತಪಸ್ಯ ಸಂಗೀತ ನೀಡಿದ್ದಾರೆ. ಅಶೋಕ್ ಸಾಮ್ರಾಟ್ ಆಕ್ಷನ್ ಕಟ್ ಹೇಳಿದ್ದಾರೆ. ಮುರುಳಿ ಬಿಟಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಹಾಡು ಬಿಡುಗಡೆ ಬಳಿಕ ಮಾತಿಗಿಳಿದ ನಿರ್ದೇಶಕ ಅಶೋಕ್ ....
*ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ* *ಮನದ ಕಡಲು ಚಿತ್ರದ ಹಾಡನ್ನ ಬಿಡುಗಡೆ ಮಾಡಿದ ರಮ್ಯಾ* ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ ’ಮನದ ಕಡಲು’ ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆದ್ರೂ ಅಚ್ಚರಿಯಿಲ್ಲ. ಹಿಂದೆ ’ರಂಗ SSLC' ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ - ರಮ್ಯಾ ಅದ್ಭುತ ಅಭಿನಯ ಮಾಡಿದ್ರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ....
*IIFA 2025 ಬಾಲಿವುಡ್ ನ ಅತೀ ದೊಡ್ಡ ಪ್ರಶಸ್ತಿ ಸಮಾರಂಭದ ಗ್ರೀನ್ ಕಾರ್ಪೆಟ್ ನಲ್ಲಿ ಮಿಂಚಿದ ಕನ್ನಡದ ನಟಿ ಹಾಗೂ ಸೂಪರ್ ಮಾಡೆಲ್ ಸಂಹಿತಾ ವಿನ್ಯಾ* . *ಕನ್ನಡದ ನಟಿಗೆ ಬಾಲಿವುಡ್ ನಿಂದಲೂ ಬರುತ್ತಿದೆ ಆಫರ್* . "ವಿಷ್ಣು ಸರ್ಕಲ್", "ಮೆಜೆಸ್ಟಿಕ್ ೨" ಸೇರಿದಂತೆ ಅನೇಕ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿರುವ ಹಾಗೂ ಮಾಡಲಿಂಗ್ ಕ್ಷೇತ್ರದಲ್ಲೂ ತನ್ನದೇ ಆದ ಚಾಪು ಮೂಡಿಸಿರುವ ನಟಿ ಸಂಹಿತಾ ವಿನ್ಯಾ ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ನಡೆದ ಬಾಲಿವುಡ್ ಅತೀ ದೊಡ್ಡ ಪ್ರಶಸ್ತಿ ಸಮಾರಂಭ "IIFA 2025" ನಲ್ಲಿ ಅತಿಥಿಯಾಗಿ ಭಾಗಿಯಾಗಿದ್ದಾರೆ. ಖ್ಯಾತ ವಸ್ತ್ರ ವಿನ್ಯಾಸಕ ಫಾರೆವರ್ ನವೀನ್ ಕುಮಾರ್ ಅವರು ಸಿದ್ದಪಡಿಸಿದ ವಿನೂತನ ಉಡುಗೆಯಲ್ಲಿ ಸಂಹಿತಾ ವಿನ್ಯಾ IIFA 2025 ....
*ನೂತನ ಪ್ರತಿಭೆಗಳ ಸಮಾಗಮದಲ್ಲಿ ಮೂಡಿಬರುತ್ತಿದೆ "ಉಜ್ಜಯಿನಿ ಮಹಾಕಾಲ"* *ಹರಿಪ್ರಸಾದ್ ಎಂ.ಬಿ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ವಿನಯ್ ನಾಯಕ* . ದ್ವಾದಶ ಜ್ಯೋತಿರ್ಲಿಂಗಗಳಲ್ಲಿ "ಉಜ್ಜಯಿನಿ ಮಹಾಕಾಲ" ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ - ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ "ಉಜ್ಜಯಿನಿ ಮಹಕಾಲ" ಪೌರಾಣಿಕ ಚಿತ್ರವಲ್ಲ. ಹೊಸತಂಡದ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು ಬಿಡುಗಡೆ ಮಾಡಿದರು. ....
* ರಿಲೀಸ್ಗೆ ರೆಡಿಯಾಗಿದೆ ’ನಾರಾಯಣ ನಾರಾಯಣ’ ಸಿನಿಮಾ *ರಿಲೀಸ್ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ* * ಮಜಾ ಟಾಕಿಸ್ ಪವನ್ ಕುಮಾರ್ ನಟನೆಯ ನಾರಾಯಣ ನಾರಾಯಣ ಚಿತ್ರದ ಟ್ರೈಲರ್ ರಿಲೀಸ್* * ನಾರಾಯಣ ನಾರಾಯಣ ಟ್ರೈಲರ್ ನೋಡಿ ಚಿತ್ರಾಭಿಮಾನಿಗಳು ಹೇಳಿದ್ದೇನು? * ರಿಲೀಸ್ಗೂ ಮೊದಲೇ ನಾರಾಯಣ ನಾರಾಯಣ ಸಿನಿಮಾದ ತುಳು ರೈಟ್ಸ್ ಮಾರಾಟ ನಾರಾಯಣ ನಾರಾಯಣ, ಸ್ಯಾಂಡಲ್ವುಡ್ ನಲ್ಲಿ ರಿಲೀಸ್ಗೆ ತಯಾರಿ ಮಾಡಿಕೊಳ್ಳುತ್ತಿರುವ ಹೊಸಬರ ಸಿನಿಮಾ. ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡುವ ಹೊಸ ಪ್ರತಿಭೆಗಳಿಗೇನು ಕಮ್ಮಿ ಇಲ್ಲ. ಅನೇಕ ಕಲಾವಿದರು ತಂತ್ರಜ್ಞರು ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಇದೀಗ ನಾರಾಯಣ ....
ಟ್ರೇಲರ್ ನಲ್ಲೇ ಮೋಡಿಮಾಡಿದ ಕಾಗೆಯೇ ನಾಯಕನಾಗಿರುವ “ರಾವೆನ್” ಚಿತ್ರ ಕನ್ನಡದಲ್ಲಿ ವಿವಿಧ ಪ್ರಾಣಿ ಹಾಗೂ ಪಕ್ಷಿಗಳನ್ನು ಕೇಂದ್ರವಾಗಿಟ್ಟಿಕೊಂಡು ನಿರ್ಮಾಣವಾಗಿರುವ ಸಾಕಷ್ಟು ಚಿತ್ರಗಳು ಬಂದಿದೆ. ಆದರೆ ಆತ್ಮ ಸಿನಿಮಾಸ್ ಹಾಗೂ ವಿಶ್ವ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಬಿಕ್ ಮೊಗವೀರ್ ಮತ್ತು ವಿಶ್ವನಾಥ್ ಜಿಪಿ ಅವರು ನಿರ್ಮಿಸಿರುವ ಹಾಗೂ ವೇದ್ ನಿರ್ದೇಶನದ “ರಾವೆನ್” ಚಿತ್ರದಲ್ಲಿ ಕಾಗೆಯೇ ಪ್ರಮುಖ ಪಾತ್ರಧಾರಿ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ರಾವೆನ್” ....
*"ಠಾಣೆ" ಚಿತ್ರದಿಂದ ಬಂತು ಸುಂದರ ಹಾಡು* . *ನಟ ರಿಷಿ, ಪೊಲೀಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಹಾಗೂ ಡಿ.ಎಸ್ ಮ್ಯಾಕ್ಸ್ ದಯಾನಂದ್ ಅವರಿಂದ ಹಾಡಿನ ಅನಾವರಣ* . ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ,"ಠಾಣೆ" ಚಿತ್ರಕ್ಕಾಗಿ ಖ್ಯಾತ ಗಾಯಕಿ ಮಜಾಟಾಕೀಸ್ ಖ್ಯಾತಿಯ ರೆಮೊ ಅವರು ಬರೆದಿರುವ "ಬಾಳಿನಲ್ಲಿ ಭರವಸೆಯ ಬೆಳಕು" ಎಂಬ ಅರ್ಥಗರ್ಭಿತ ಹಾಡು ಇತ್ತೀಚೆಗೆ ಅನಾವರಣವಾಯಿತು. ಮಾನಸ ಹೊಳ್ಳ ಸಂಗೀತ ಸಂಯೋಜಿಸಿ, ಜ್ಞಾನ, ಅನುಷ್ಕ, ಜನ್ಯ ಆದರ್ಶ್ ಹಾಗೂ ಮೌಲ್ಯ ಅಚಿಂತ್ಯ ಎಂಬ ಬಾಲ ಪ್ರತಿಭೆಗಳು ಹಾಡಿರುವ ....