ಸಸ್ಪೆನ್ಸ್ ಥ್ರಿಲ್ಲರ್ ಉಸಿರು ಟೀಸರ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರುಗಳು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ, ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ, ಅಂಥವರಲ್ಲಿ ಆರ್.ಎಸ್.ಪಿ. ಪ್ರೊಡಕ್ಷನ್ಸ್ ನ ಲಕ್ಷ್ಮಿ ಹರೀಶ್ ಕೂಡ ಒಬ್ಬರು. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ ಅವರು ತಮ್ಮ ಆರ್ಎಸ್ಪಿ ಪ್ರೊಡಕ್ಷನ್ ಮೂಲಕ ಸಸ್ಪೆನ್ಸ್ , ಥ್ರಿಲ್ಲರ್ ಕಥಾಹಂದರ ಒಳಗೊಂಡ ಉಸಿರು ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ, ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ, ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ....
*ಡೆಡ್ಲಿ ಲವರ್ಸ್ ಟ್ರೇಲರ್ ಬಿಡುಗಡೆ* ಕ್ಯಾಚಿ ಟೈಟಲ್ ಹೊಂದಿರುವ *ಡೆಡ್ಲಿ ಲವರ್ಸ್* ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ’ಹುಲಿಯಾ’ ನಿರ್ಮಾಪಕ ಗೋವಿಂದರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. *ನಾಗೇಂದ್ರ ಕಥೆ,ಚಿತ್ರಕಥೆ,ಸಂಭಾಷಣೆ,ಸಂಕಲನ, ನಿರ್ದೇಶನ ಜತೆಗೆ ಅನಘ ಎಂಟರ್ ಪ್ರೈಸಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ* ಅಖಿಲ್ ಕುಮಾರ್ ನಾಯಕ. ನವಪ್ರತಿಭೆ ತನುಪ್ರಸಾದ್ ನಾಯಕಿ. ಎಸಿಪಿಯಾಗಿ ಪ್ರೇಮಾಗೌಡ, ತಂದೆಯಾಗಿ ಭಾಸ್ಕರ್, ದುರಳನಾಗಿ ವಿನೋಧ್, ಗೃಹ ಮಂತ್ರಿಯಾಗಿ ಲಹರಿವೇಲು, ಎ.ಆರ್.ಲೋಕೇಶ್ ಮುಂತಾದವರು ನಟಿಸಿದ್ದಾರೆ. ಸಂಗೀತ ಲಯಕೋಕಿಲ, ಛಾಯಾಗ್ರಹಣ ಹೆಚ್.ಎನ್.ನರಸಿಂಹಮೂರ್ತಿ, ....
*ಉತ್ತರ ಕರ್ನಾಟಕ ಪ್ರತಿಭೆಗಳ ಹೆಬ್ಬುಲಿ ಕಟ್ ಟ್ರೇಲರ್ ರಿಲೀಸ್..ಸಿನಿಮಾ ಪ್ರೆಸೆಂಟ್ ಮಾಡುತ್ತಿರುವ ಸತೀಶ್ ನೀನಾಸಂ* *ಟ್ರೇಲರ್ನಲ್ಲಿ ಹೆಬ್ಬುಲಿ ಕಟ್...ಜುಲೈ 4ಕ್ಕೆ ಸಿನಿಮಾ ರಿಲೀಸ್* ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿರುವ ಸಿನಿಮಾ ಹೆಬ್ಬುಲಿ ಕಟ್. ಜುಲೈ 4ರಂದು ತೆರೆಗೆ ಬರ್ತಿರುವ ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳ ಈ ಚಿತ್ರಕ್ಕೆ ಸತೀಶ್ ನೀನಾಸಂ ಸಾಥ್ ಕೊಟ್ಟಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್ನಡಿ ಹೆಬ್ಬುಲಿ ಕಟ್ ಚಿತ್ರ ಅರ್ಪಿಸುತ್ತಿದ್ದಾರೆ. ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ಎಸ್ ಆರ್ ವಿ ಚಿತ್ರಮಂದಿರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟ ನವೀಶ್ ಶಂಕರ್, ಸತೀಶ್ ನೀನಾಸಂ ....
'ಪ್ರಪಂಚವನ್ನು ಮೆಟ್ಟಿನಿಂತ ಮಾನವ’ ’ಸೆಪ್ಟೆಂಬರ್ 10' ಮೋಟಿವೇಷನ್ ಸಾಂಗ್ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಕ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬ ಸಮಾಜಮುಖಿ ಸಂದೇಶ ಇಟ್ಟುಕೊಂಡು 105 ಸಿನಿಮಾಗಳನ್ನು ನಿರ್ದೇಶಿಸಿದ ಓಂ ಸಾಯಿ ಪ್ರಕಾಶ್ ಅವರು ಡೈರೆಕ್ಷನ್ ಮಾಡಿರುವ ಮತ್ತೊಂದು ಚಿತ್ರ ’ಸೆಪ್ಟೆಂಬರ್ 10' ಈ ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಮೋಟೊವೇಶನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕೇಂದ್ರ ಕಿಸಾನ್ ಸಮಿತಿಯ ನಿರ್ದೇಶಕರಾದ ಆರ್.ಎಸ್.ರಾಜು ಅವರು ಈ ಹಾಡನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ನನ್ನ ಗುರುಗಳಾದ ....
ಇದೇ ಜೂನ್ 20ರಂದು "ಕಾಲವೇ ಮೋಸಗಾರ" ಚಿತ್ರ ಬಿಡುಗಡೆ. ಈ ಚಿತ್ರದ ಟ್ರೈಲರ್ ಹಾಗೂ ಪ್ರೋಮೋ ಸಾಂಗ್ ಬಿಡುಗಡೆ ಮಾಡಿದ ನಟ ವಸಿಷ್ಠ ಸಿಂಹ ಮತ್ತು ಕೆಂಪೇಗೌಡ ಸೇನೆಯ ರಾಜ್ಯಾಧ್ಯಕ್ಷ ರವಿ ಕುಮಾರ್ , ಸೇನೆಯ ಮಹಿಳಾ ಅಧ್ಯಕ್ಷೆ ಲಕ್ಷ್ಮೀ. ಸ್ಯಾಂಡಲ್ ವುಡ್ ಗೆ ಯುವ ಪ್ರತಿಭೆಗಳ ತಂಡ ಸೇರಿಕೊಂಡು ಒಂದು ಸೈಲೆಂಟ್ ಲವ್ ಸ್ಟೋರಿ ಯಲ್ಲಿ ವೈಲೆಂಟ್ ಅಂಶವನ್ನ ಸೇರಿಸಿಕೊಂಡು "ಕಾಲವೇ ಮೋಸಗಾರ" ಎಂಬ ಚಿತ್ರವನ್ನ ಸಿದ್ದಪಡಿಸಿ , ಈಗ ಚಿತ್ರದ ಟ್ರೈಲರ್ ಹಾಗೂ ಪ್ರೋಮೋ ಸಾಂಗ್ ಬಿಡುಗಡೆ ಕಾರ್ಯಕ್ರಮವನ್ನು ಜಿ.ಟಿ. ಮಾಲ್ ನಲ್ಲಿರುವ ಎಂ.ಎಂ. ಬಿ ಲೆಗಸಿಯಲ್ಲಿ ಆಯೋಜನೆ ಮಾಡಿತು. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಂಚಿನ ಕಂಠದ ನಟ ....
ಚಿತ್ರ : ಕಮಲ್ ಶ್ರೀದೇವಿ ನಿರ್ಮಾಣ: ಸ್ವರ್ಣಾಂಬಿಕ ಪಿಕ್ಚರ್ಸ್ ಶ್ರೀಮತಿ ಬಿ.ಕೆ ಧನಲಕ್ಷ್ಮೀ ಸಹ ನಿರ್ಮಾಣ : Barnswallow company ರಾಜವರ್ಧನ್ ಕ್ರಿಯೇಟಿವ್ ಹೆಡ್ : ರಾಜವರ್ಧನ್ ನಿರ್ದೇಶನ : ವಿ.ಎ ಸುನೀಲ್ ಸಂಗೀತ :ಕೀರ್ತನ್ ಸಾಹಿತ್ಯ : ಪ್ರಮೋದ್ ಮರವಂತೆ ಛಾಯಾಗ್ರಹಣ:ನಾಗೇಶ್ ವಿ ಆಚಾರ್ಯ, ಸಂಕಲನ:ಜ್ಞಾನೇಶ್ ಬಿ ಮಠದ್ ಕಲೆ: ಗುಣ ತಾರಾಗಣ : ಸಚಿನ್ ಚಲುವರಾಯ ಸ್ವಾಮಿ, ಸಂಗೀತ ಭಟ್, ಕಿಶೋರ್,ರಮೇಶ್ ಇಂದಿರಾ ಮತ್ತಿತರರು ಶ್ರೀ ಎನ್ ಚಲುವರಾಯ ಸ್ವಾಮಿ ಅರ್ಪಿಸುವ ಸ್ವರ್ಣಾಂಬಿಕ ಪಿಚ್ಚರ್ಸ್ ಬ್ಯಾನರ್ ನಡಿಯಲ್ಲಿ *ಬಿ.ಕೆ ಧನಲಕ್ಷ್ಮೀ* ನಿರ್ಮಾಣದ Barnswallow companyಯ ರಾಜವರ್ಧನ್ ಸಹ ನಿರ್ಮಾಣದ ಸಚಿನ್ ಚಲುವರಾಯ ಸ್ವಾಮಿ ಅಭಿನಯದ ....
*ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ "ತಿಮ್ಮನ ಮೊಟ್ಟೆಗಳು"* *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ* ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ....
*ಟೀಸರ್ ನಲ್ಲೇ ಮೋಡಿ ಮಾಡಿದ "ಎಲ್ಟು ಮುತ್ತಾ"* . *ಇದು ಸಾವಿಗೆ ಡೋಲು ಬಡೆಯುವವರ ಜೀವನದಲ್ಲಿ ನಡೆಯುವ ಘಟನೆ ಆಧರಿಸಿದ ಚಿತ್ರ* . ಹೈ5 ಸ್ಟುಡಿಯೋಸ್ ಲಾಂಛನದಲ್ಲಿ ಸತ್ಯ ಶ್ರೀನಿವಾಸನ್ ನಿರ್ಮಿಸಿರುವ, ರಾ.ಸೂರ್ಯ ಬರೆದು ನಿರ್ದೇಶಿಸಿರುವ ಹಾಗೂ ರಾ.ಸೂರ್ಯ - ಶೌರ್ಯ ಪ್ರತಾಪ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಎಲ್ಟು ಮುತ್ತಾ" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಶೈಲಜಾ ವಿಜಯ್ ಕಿರಂಗದೂರ್, ಅಕ್ಷಯ್ ಗಂಗಾಧರ್ ಹಾಗೂ ಎಲ್ ವೈ ರಾಜೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟೀಸರ್ ಕುತೂಹಲ ಮೂಡಿಸಿದ್ದು, ಬಿಡುಗಡೆ ಆದ ಕ್ಷಣದಿಂದಲೇ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ....
ಬಿಡುಗಡೆಗೆ ಅಣಿಗೊಂಡ ಪದ್ಮಗಂಧಿ! ಸುಚೇಂದ್ರ ಪ್ರಸಾದ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಪದ್ಮಗಂಧಿ ಚಿತ್ರವೀಗ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಅಣಿಗೊಂಡಿದೆ. ಈ ಹಂತದಲ್ಲಿ ವಿಶಿಷ್ಟವಾದೊಂದು ರೀತಿಯಲ್ಲಿ ಚಿತ್ರತಂಡ ಮಾಧ್ಯಮದವರನ್ನು ಮುಖಾಮುಖಿಯಾಗುವ ಮೂಲಕ ಒಟ್ಟಾರೆ ಸಿನಿಮಾ ಬೆಗೆಗಿನ ಒಂದಷ್ಟು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದೆ. ಈ ಸಂದರ್ಭದಲ್ಲಿ ಸದರಿ ಚಿತ್ರದ ನಿರ್ಮಾಪಕರೂ, ಕಥೆಗಾರರೂ ಆಗಿರುವ ಪ್ರೊ.ಎಸ್.ಆರ್ ಲೀಲಾ ಅವರು ಉಪಸ್ಥಿತರಿದ್ದು ಈ ಸಿನಿಮಾ ಶುರುವಾತಿನ ಬಗ್ಗೆ, ಕಥೆ ಹುಟ್ಟಿನ ಹಿಂದಿರೋ ಬೆರಗಿನ ಬಗ್ಗೆ ಒಂದಷ್ಟು ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಇದೇ ಹೊತ್ತಿನಲ್ಲಿ ಹಾಡುಗಳ ತುಣುಕುಗನ್ನೂ ಪ್ರದರ್ಶಿಸಲಾಗಿದೆ. ....
*ದೂರದೂರಿನಲ್ಲೂ ಮೇಳೈಸುತ್ತಿದೆ "ದೂರ ತೀರ ಯಾನ"ದ ಶೀರ್ಷಿಕೆ ಗೀತೆ** . *ಡಿ ಕ್ರಿಯೇಷನ್ಸ್ ನಿರ್ಮಾಣದ, ಮಂಸೋರೆ ನಿರ್ದೇಶನದ ಈ ಚಿತ್ರ ಜುಲೈ 11 ಕ್ಕೆ ತೆರೆಗೆ* . ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್. ನಿರ್ಮಾಣದ ಹಾಗೂ "ಹರಿವು", " ನಾತಿಚರಾಮಿ", "ಆಕ್ಟ್ 1978", "19.20.21" ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ - ಪ್ರಿಯಾಂಕ ಕುಮಾರ್ ನಾಯಕ - ನಾಯಕಿಯಾಗಿ ನಟಿಸಿರುವ "ದೂರ ....
*ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ "ಶ್ರೀಜಗನ್ನಾಥದಾಸರು ಭಾಗ ೨" ಚಿತ್ರದ ಹಾಡುಗಳ ಅನಾವರಣ* . ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ "ಶ್ರೀಜಗನ್ನಾಥದಾಸರು", " ಶ್ರೀವಿಜಯದಾಸರು", "ಶ್ರೀಮಹಿಪತಿದಾಸರು", " ಶ್ರೀಪ್ರಸನ್ನವೆಂಕಟದಾಸರು" ಮುಂತಾದ ಮಹಾಮಹಿಮರ ಕುರಿತಾದ ಚಿತ್ರಗಳು ಈಗಾಗಲೇ ಬಿಡುಗಡೆಯಾಗಿದೆ. ಪ್ರಸ್ತುತ "ಶ್ರೀಜಗನ್ನಾಥದಾಸರು ಭಾಗ ೨" ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದ್ದು, ಇತ್ತೀಚೆಗೆ ಹಾಡುಗಳು ಅನಾವರಣವಾಗಿದೆ. ಗಾಯನ ಸಮಾಜದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ....
ಕ್ಯೂರಿಯಾಸಿಟಿ ಹೆಚ್ಚಿಸಿದ ಕರಾವಳಿ ಭಾಗದ ಪ್ರೇಮಕಥೆ ’ಮಾರ್ನಮಿ’ ಸಿನಿಮಾದ ಟೀಸರ್..ರಗಡ್ ಲುಕ್ನಲ್ಲಿ ರಿತ್ವಿಕ್ ಮಠದ್! ’ಅನುರೂಪ’, ’ಗಿಣಿರಾಮ’, ’ನಿನಗಾಗಿ’ ಧಾರಾವಾಹಿಗಳ ಮೂಲಕ ಫೇಮಸ್ ಆಗಿರುವ ನಟ ರಿತ್ವಿಕ್ ಮಠದ್ ರಗಡ್ ಅವತಾರವೆತ್ತಿದ್ದಾರೆ. ಗಿಫ್ಟ್ ಬಾಕ್ಸ್ ಚಿತ್ರದ ನಂತರ ತುಂಬಾ ಸಮಯ ತೆಗೆದುಕೊಂಡು ಕಿರುತೆರೆಯಿಂದ ಈಗ ರಿತ್ವಿಕ್ ಬೆಳ್ಳಿತೆರೆಗೆ ಒಂದೊಳ್ಳೆ ಕಥೆ ಹಾಗೂ ತಂಡ ಕಟ್ಟಿಕೊಂಡು ಎಂಟ್ರಿ ಕೊಟ್ಟಿದ್ದಾರೆ, ಅವರು ನಟಿಸುತ್ತಿರುವ ಚಿತ್ರ ಮಾರ್ನಮಿಯ ಟೀಸರ್ ರಿಲೀಸ್ ಆಗಿದೆ. ನಿನ್ನೆ ರಿತ್ವಿಕ್ ಮಠದ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ಅವರ ಇಂಟ್ರೂಡಕ್ಷನ್ ಟೀಸರ್ ಅನಾವರಣ ಮಾಡಿದೆ. ಗುಣಾದ್ಯಾ ....
ಡಿಪಿ ಮೂವೀಸ್ ಬ್ಯಾನರ್ ಅಡಿಯಲ್ಲಿ ಡಿಪಿ ವೆಂಕಟೇಶ್ ನಿರ್ಮಾಣದ ಚಿತ್ರ RR77 ಇನ್ನು ಚಿತ್ರದ ಮುಖ್ಯ ಭೂಮಿಕೆಯಲ್ಲಿ ಡಾ. ರಾಜ್ವೀರ್ ಅಭಿನಯಿಸಲಿದ್ದಾರೆ ಚಿತ್ರದ ಶೀರ್ಷಿಕೆಯೊಂದಿಗೆ ಎಲ್ಲರ ಗಮನವನ್ನು ಸೆಳೆಯಲು ಯಾವ ಅನುಮಾನವೂ ಇಲ್ಲ ಎಂದು ಚಿತ್ರದ ನಿರ್ದೇಶಕ ಮಂಜು ಕವಿ ತಿಳಿಸಿದರು ಸಂಪೂರ್ಣ ಕಥೆಯನ್ನು ಕೇಳಿ ಡಿಪಿ ವೆಂಕಟೇಶ್ ರವರು ಕಥೆ ತುಂಬ ಮನಸ್ಸಿಗೆ ಹತ್ತಿರವಾಗಿದೆ ಇಂತಹ ಕಥೆಗಾಗಿ ಕಾಯುತ್ತಿದ್ದೆ ಕರ್ನಾಟಕದ ಜನತೆಗೆ ನಮ್ಮ ಸಿನಿಮಾ ಕೊಡುಗೆಯಾಗಲಿ ಎಂದು ತಿಳಿಸಿ ಬಂಡವಾಳ ಹೂಡಲಿದ್ದಾರೆ ಇನ್ನು ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು ಎಲ್ಲರ ಗಮನ ಸೆಳೆಯುತ್ತದೆ ಎಂದು ಮಂಜು ಕವಿ ತಿಳಿಸಿದರು ನಿರ್ದೇಶನ ತಂಡದಲ್ಲಿ ಎಸ್ ಜೆ ಸಂಜಯ್ ದಯಾ ಗಿರೀಶ್ ಸಾಕಿ ಸಂಗೀತ ಶೆಟ್ಟಿ ....
*ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ "ಪಿನಾಕ" ಚಿತ್ರಕ್ಕೆ ಚಿತ್ರೀಕರಣ* . *ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ* . ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್ ಹಾಕಲಾಗಿದೆ. ಸೆಟ್ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು ....
*ಬ್ಲ್ಯಾಕ್ ಶೀಪ್ ಟೀಸರ್,ಟ್ರೈಲರ್ ಮತ್ತು ಹಾಡು* ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *ಬ್ಲ್ಯಾಕ್ ಶೀಪ್* ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ ಕಾರ್ಯಕ್ರಮ ಎಸ್ಆರ್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮೂಲತ: ಡ್ಯಾನ್ಸರ್, ’ಹರೇ ರಾಮ ಹರೇ ಕೃಷ್ಣ’ದಲ್ಲಿ ಶೃತಿಹರಿಹರನ್, ’ದೇವ್ ಸನ್ ಆಫ್ ಮುದ್ದೆಗೌಡ’ದಲ್ಲಿ ಚಾರ್ಮಿಕೌರ್ಗೆ ಜೋಡಿ, ’ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರಕ್ಕೆ ಡ್ಯಾನ್ಸ್ ಕೋರಿಯಾಗ್ರಾಫರ್ ಆಗಿದ್ದ *ಜೀವನ್ ಹಳ್ಳಿಕಾರ್* ಇದೆಲ್ಲಾ ಅನುಭವದಿಂದ ಈಗ ಸಿನಿಮಾಕ್ಕೆ *ರಚನೆ,ಚಿತ್ರಕಥೆ, ನಿರ್ದೇಶನ ಹಾಗೂ ನೃತ್ಯ ಸಂಯೋಜನೆ* ....
ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ ಮುಖ್ಯಾಂಶಗಳು • ಖ್ಯಾತ ನಿರ್ದೇಶಕ ಸಂತೋಷ್ ಅನಂದ್ ರಾಮ್ ರಿಂದ ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆ • ಹೊಸ ತಂಡದ ಹೊಸ ಬಗೆಯ ಸಾಹಸಮಯ ದೃಶ್ಯಕಾವ್ಯಕ್ಕೆ ಸಂತೋಷ್ ಶುಭಹಾರೈಕೆ • ಕರಿಕಾಡ ಚಿತ್ರದಲ್ಲಿ ಅಭಿನಯಿಸಿರೋ ದಿ.ರಾಕೇಶ್ ಪೂಜಾರಿ ಹಾಗೂ ಆರ್ .ಸಿ.ಬಿ ಸಂಭ್ರಮದ ದುರಂತದಲ್ಲಿ ಜೀವತೆತ್ತವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಕಾರ್ಯಕ್ರಮ ಆರಂಭ • ಕನ್ನಡ ಹಾಗೂ ತಮಿಳು ಎರಡೂ ಭಾಷೆಯಲ್ಲಿ ಬಿಡುಗಡೆಯಾಗಲಿರುವ ಕರಿಕಾಡ • ಕರಿಕಾಡ ಚಿತ್ರದ ....
*ಕಾಶಿ ವಿಶ್ವನಾಥನ ಸನ್ನಿದಿಯಲ್ಲಿ ಛೂ ಬಾಣ ಮುಹೂರ್ತ* *ಛೂ ಬಾಣ* ಚಿತ್ರದ ಮುಹೂರ್ತ ಸಮಾರಂಭವು ಬಸವೇಶ್ವರ ನಗರದಲ್ಲಿರುವ ಕಾಶಿ ವಿಶ್ವನಾಥನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಚಲನಚಿತ್ರ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜೆ.ಜಿ.ಕೃಷ್ಣ ಕ್ಯಾಮಾರ ಚಾಲನೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಎಸ್.ಕೆ.ಭಾಷಾ ಫಿಲಂಸ್ ಅಡಿಯಲ್ಲಿ ವಿಜಯವಾಡದ ಇಂಜಿನಿಯರ್ *ಎಸ್.ಕೆ.ಫಿರೋಜ್ಭಾಷ ಬಂಡವಾಳ ಹೂಡುವುದರ ಜತೆಗೆ ನಾಯಕನಾಗಿ ಅಭಿನಯಿಸುತ್ತಿರುವುದು* ಹೊಸ ಅನುಭವ. *ಎಸ್.ಆರ್.ಪ್ರಮೋದ್ ಕಥೆ, ಸಾಹಿತ್ಯ ರಚಿಸಿ ಒಂಬತ್ತನೇ ಸಿನಿಮಾಕ್ಕೆ ನಿರ್ದೇಶನ* ....
*ಗುರಿ ಟೀಸರ್ ಮತ್ತು ಹಾಡುಗಳ ಲೋಕಾರ್ಪಣೆ* 80ರ ದಶಕದಲ್ಲಿ ಡಾ.ರಾಜ್ಕುಮಾರ್ ಅಭಿನಯಸಿದ್ದ *ಗುರಿ* ಚಿತ್ರವು ಸೂಪರ್ ಹಿಟ್ ಆಗಿತ್ತು. 4 ದಶಕದ ತರುವಾಯ ಇದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ಸಿದ್ದಗೊಂಡಿದೆ. ’ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹ ಇಂಗ್ಲೀಷ್ನಲ್ಲಿ ಹೇಳಿಕೊಂಡಿದೆ. ವಿಷ್ಣುದುರ್ಗಾ ಪ್ರೊಡಕ್ಷನ್ ಅಡಿಯಲ್ಲಿ *ರಾಧಿಕಾ.ಎಸ್.ಆರ್ ಮತ್ತು ಚಿತ್ರಲೇಖಾ.ಎಸ್ ನಿರ್ಮಾಣ* ಮಾಡಿರುವುದು ಹೊಸ ಅನುಭವ. *ಸೆಲ್ವಂ ಮಾದಪ್ಪನ್ ಸಿನಿಮಾಕ್ಕೆ ಕಥೆ,ಚಿತ್ರಕತೆ, ಛಾಯಾಗ್ರಹಣ ಹಾಗೂ ನಿರ್ದೇಶನದ* ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಲಹರಿವೇಲು ಹೊಸದಾಗಿ ಸ್ಥಾಪನೆ ಮಾಡಿರುವ ’ಎಂಆರ್ಟಿ ಮ್ಯೂಸಿಕ್’ ಆಡಿಯೋ ಹಕ್ಕುಗಳನ್ನು ....
'ದೇವಸಸ್ಯ’ ಟೈಟಲ್ ಟೀಸರ್ ಬಿಡುಗಡೆ ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ. ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು. ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ....
ಸೆಪ್ಟೆಂಬರ್ 10: ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ * ಸಾಯಿಪ್ರಕಾಶ್ ನಿರ್ದೇಶನದ 105ನೇ ಚಿತ್ರ ಜೀವನದಲ್ಲಿ ಎದುರಾಗುವಂಥ ಹಲವಾರು ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರವಲ್ಲ ಎಂಬ ಉತ್ತಮ ಸಂದೇಶ ಇಟ್ಟುಕೊಂಡು ಶತ ಸಿನಿಮಾಗಳ ಸರದಾರ ಓಂ ಸಾಯಿ ಪ್ರಕಾಶ್ ಅವರು ’ಸೆಪ್ಟೆಂಬರ್ 10' ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ, ಕೋವಿಡ್ ಸಮಯದಲ್ಲಿ ಲಕ್ಷಾಂತರ ....