*ಮೊದಲ ಹಾಡಿನಲ್ಲಿ "ನೋಡಿದ್ದು ಸುಳ್ಳಾಗಬಹುದು"* . *ಹಾಡು ಬಿಡುಗಡೆ ಮಾಡಿ ಹಾರೈಸಿದ ಸಿನಿರಂಗದ ಗಣ್ಯರು* . ಅನಿಲ್ ಕುಮಾರ್ ಕೆ.ಆರ್ ನಿರ್ಮಾಣ ಮಾಡುವುದರೊಂದಿಗೆ ನಾಯಕನಾಗೂ ನಟಿಸಿರುವ, ವಿಜಯ್ ಚಲಪತಿ ನಿರ್ದೇಶನದ ಹಾಗೂ ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ "ನೋಡಿದ್ದು ಸುಳ್ಳಾಗಬಹುದು" ಚಿತ್ರದ "ಕನಸುಗಳ ಮೆರವಣಿಗೆ" ಎಂಬ ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಯಿತು. ಅನಿರುದ್ಧ್ ಶಾಸ್ತ್ರಿ ಬರೆದಿರುವ, ಗುಮ್ಮಿನೆನಿ ವಿಜಯ್ ಸಂಗೀತ ಸಂಯೋಜಿಸಿರುವ ಹಾಗೂ ಅನಿರುದ್ಧ್ ಶಾಸ್ತ್ರಿ ಮತ್ತು ಪೃಥ್ವಿ ಭಟ್ ಹಾಡಿರುವ ಈ ಹಾಡನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ....
*ಕರಳೆ ಸಿನಿಮಾ ತಂಡದಿಂದ ಐ ಫೋನ್ ಉಡುಗೊರೆ* ಕರಳೆ ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳ ಹೆಸರು ಪ್ರಕಟಿಸಿದ ವಸಿಷ್ಟ ಸಿಂಹ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ಮೂಲಕ ಸುದ್ದಿಯಾಗಿದ್ದ ಕರಳೆ ಸಿನಿಮಾದಿಂದ ಐ ಫೋನ್ ಗಿಫ್ಟ್ ಕೊಡಲಾಗಿದೆ. ಚಿತ್ರದ ಹೆಸರಿನ ಅರ್ಥ ತಿಳಿಸಿದ ಅದೃಷ್ಟಶಾಲಿಗಳಿಗೆ ಐ ಫೋನ್ ಉಡುಗೊರೆ ಸಿಕ್ಕಿದೆ. ಕನ್ನಡದ ಕಂಚಿನ ಕಂಠ ನಟ ವಸಿಷ್ಟ ಸಿಂಹ ಲಕ್ಕಿಡಿಪ್ ಎತ್ತುವ ಮೂಲಕ ಅದೃಷ್ಟಶಾಲಿಗಳ ಆಯ್ಕೆ ಮಾಡಿದ್ದಾರೆ. ‘ಕಲಿವೀರ’, ‘ಕನ್ನಡ ದೇಶದೊಳ್’ ಚಿತ್ರ ಮಾಡಿದ್ದ ನಿರ್ದೇಶಕ ಅವಿರಾಮ್ ಕಂಠೀರವ ಅವರ ನಿರ್ದೇಶನದಲ್ಲಿ ‘ಕರಳೆ’ ಮೂಡಿ ಬರುತ್ತಿದ್ದು, ಇದು ನೈಜ ಘಟನೆ ಆಧಾರಿತ ಚಿತ್ರವಾಗಿದೆ. ಇದಾಗಲೇ ಬಹುತೇಕ ಚಿತ್ರೀಕರಣ ಮುಗಿದಿದ್ದು ....
*’ಸರ್ಕಾರಿ ನ್ಯಾಯಬೆಲೆ ಅಂಗಡಿ’ಯಲ್ಲಿ ಕೊನೆ ಹಂತದ ಚಿತ್ರೀಕರಣ ಬಾಕಿ* *ಚಿತ್ರೀಕರಣದ ಅನುಭವಗಳನ್ನು ಹಂಚಿಕೊಂಡ ಚಿತ್ರತಂಡ* *ಪಡಿತರ ವ್ಯವಸ್ಥೆಯ ಮೇಲೊಂದು ಚಿತ್ರ* *ಹಳ್ಳಿ ಹುಡುಗಿಯ ಗೆಟಪ್ ನಲ್ಲಿ ರಾಗಿಣಿ ಮಿಂಚು* ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಎಂಬ ಹೆಸರಿನಲ್ಲಿ ಹೊಸ ಚಿತ್ರವೊಂದು ಸೆಟ್ಟೇರಿದ್ದು ಅನೇಕರಿಗೆ ಗೊತ್ತಿರಬಹುದು. ಈಗಾಗಲೇ ಸದ್ದಿಲ್ಲದೆ ಈ ಚಿತ್ರದ ಮುಕ್ಕಾಲು ಭಾಗ ಚಿತ್ರೀಕರಣವನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಅಂತಿಮ ಹಂತದ ಚಿತ್ರೀಕರಣಕ್ಕೆ ಅಣಿಯಾಗುತ್ತಿದೆ. ಇದೇ ವೇಳೆ ಪತ್ರಕರ್ತರು ಮತ್ತು ಮಾಧ್ಯಮಗಳ ಮುಂದೆ ಬಂದಿದ್ದ ಚಿತ್ರತಂಡ, ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಮೇಕಿಂಗ್ ....
*ಆಗಸ್ಟ್ 31ರಂದು ಮೈಸೂರಿನಲ್ಲಿ ಅದ್ದೂರಿಯಾಗಿ ನಡೆಯಲಿದೆ ಖ್ಯಾತ ನಿರ್ಮಾಪಕ ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬ* ಯಶಸ್ವಿ ನಿರ್ಮಾಪಕ, ಮಾಜಿ ಎಂ.ಎಲ್.ಸಿ ಸಂದೇಶ್ ನಾಗರಾಜ್ ಈಗ 80ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹೌದು. ಆಗಸ್ಟ್ 16, ಸಂದೇಶ ನಾಗರಾಜ್ ಅವರು 79 ಪೂರೈಸುತ್ತಿದ್ದು, 80ನೇ ವಸಂತಕ್ಕೆ ಕಾಲಿಡಲಿದ್ದಾರೆ. ಸಂದೇಶ್ ನಾಗರಾಜ್ ಅವರ 80ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವರ ಕುಟುಂಬ ಮುಂದಾಗಿದೆ. ಆಗಸ್ಟ್ 31ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸಂದೇಶ ನಾಗರಾಜ್ ಅವರ ಮಕ್ಕಳಾದ ಸಂದೇಶ್, ಬೃಂದಾ, ಮಂಜೇಶ್ ಮಾಹಿತಿ ....
*ವಿಭಿನ್ನ ಕಥಾಹಂದರ ಹೊಂದಿರುವ "ಸಾರಂಗಿ" ಚಿತ್ರದಲ್ಲಿ ಎರಡೇ ಪಾತ್ರಗಳು* . *ಇದು ಹೊಸತಂಡದ ಹೊಸಪ್ರಯತ್ನ* . ಹೊಸತಂಡದ ಹೊಸಪ್ರಯತ್ನಗಳು ಕನ್ನಡ ಚಿತ್ರರಂಗದಲ್ಲಿ ನಡೆಯುತ್ತಿರುತ್ತದೆ. ಅಂತಹ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ "ಸಾರಂಗಿ". ಈ ಚಿತ್ರದಲ್ಲಿ ಕೇವಲ ಎರಡೇ ಪಾತ್ರಗಳಿರುವುದು ವಿಶೇಷ. ಚಿತ್ರದ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. . ಮನುಷ್ಯ ದಿನ ಬೆಳಗ್ಗಾದರೆ ಎಲ್ಲರ ಮುಂದೆ ಒಂದೊಂದು ತರಹದ ಮುಖವಾಡ ಧರಿಸಿ ....
*ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾದ ಕಾಪಾಡೋ ದ್ಯಾವ್ರೇ ಸಾಂಗ್ ರಿಲೀಸ್* ತರುಣ್ ಸುಧೀರ್ ನಿರ್ಮಾಣದ ಏಳುಮಲೆ ಸಿನಿಮಾ ತನ್ನ ಕಂಟೆಂಟ್ ಮೂಲಕ ಸದ್ದು ಮಾಡುತ್ತಿದೆ. ಈಗಾಗಲೇ ಟೈಟಲ್ ಟೀಸರ್ ಮೂಲಕ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿರುವ ಈ ಚಿತ್ರದಿಂದ ಇದೀಗ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ಏಳುಮಲೆ ಚಿತ್ರದ ಕಾಪಾಡೋ ದ್ಯಾವ್ರೇ ಎಂಬ ಗೀತೆ ಅನಾವರಣ ಮಾಡಲಾಯಿತು. ಚಿತ್ರರಂಗದ ಹಿರಿಯ ನಟಿಯರಾದ ಶೃತಿ, ಸುಧಾರಾಣಿ, ಹಾಗೂ ತಾರಾ ಅನುರಾಧ ಹಾಡನ್ನು ಬಿಡುಗಡೆ ಮಾಡಿ ಇಡೀ ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಿರ್ಮಾಪಕ ತರುಣ್ ಸುಧೀರ್, ನಿರ್ದೇಶಕ ಪುನೀತ್ ರಂಗಸ್ವಾಮಿ, ನಾಯಕ ರಾಣಾ, ನಾಯಕಿ ....
ಸೋಲ್ ಮೇಟ್ಸ್ - ಆಡಿಯೋ ಲಾಂಚ್ ನಾದ ಬ್ರಹ್ಮ ಹಂಸಲೇಖ ಸಂಗೀತ ಸಂಯೋಜನೆಯ, ಡಾ. ವಿಷ್ಣುವರ್ಧನ್ ರ ಅಪ್ಪಟ ಅಭಿಮಾನಿ ಪಿ.ವಿ ಶಂಕರ್ ನಿರ್ದೇಶನದ ಚೊಚ್ಚಲ ಸಿನಿಮಾ ಸೋಲ್ ಮೇಟ್ಸ್ ಚಿತ್ರದ ಮೊದಲ ಲಿರಿಕಲ್ ವಿಡಿಯೋ ಹಾಡು ಬಿಡುಗಡೆಯಾಗಿದೆ. ಹಂಸಲೇಖ ಸಾಹಿತ್ಯವಿರೋ ಕಿಲಕಿಲ ಹಾಡಿಗೆ ಅನಿರುದ್ಧ್ ಶಾಸ್ತ್ರಿ, ಅಂಕಿತಾ ಕುಂಡು ಧನಿಯಾಗಿದ್ದಾರೆ. ಸೋಲ್ ಮೇಟ್ಸ್ ಪರಿಸರ ಪ್ರೇಮಿ ಅನ್ನೋ ಟ್ಯಾಗ್ ಲೈನ್ ಇರೋ ಈ ಚಿತ್ರದಲ್ಲಿ ಇಬ್ಬರು ನಾಯಕ ನಟರು ಇಬ್ಬರು ನಾಯಕಿಯರು ಅಭಿನಯಿಸಿದ್ದಾರೆ. ರಂಗ್ ಬಿ ರಂಗ್ ಖ್ಯಾತಿಯ ಶ್ರೀಜಿತ್ ಸೂರ್ಯ, ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು ಚಿತ್ರದ ಇನಾಯತ್ ಖ್ಯಾತಿಯ ಪ್ರಸನ್ನ ಶೆಟ್ಟಿ, ಯಶ್ವಿಕಾ ನಿಷ್ಕಲ, ರಜನಿ, ಅಲ್ಮಾಸ್, ಯಶ್ ಶೆಟ್ಟಿ, ಶರತ್ ಲೋಹಿತಾಶ್ವ, ....
ಯುವ ಪ್ರತಿಭೆಗಳ "ಆಸ್ಟಿನ್ ನ ಮಹನ್ಮೌನ" ಚಿತ್ರದ ಹಾಡುಗಳ ಬಿಡುಗಡೆ. ಲವ್, ಥ್ರಿಲ್ಲಿಂಗ್ ಹಾಗೂ ಭಾವನಾತ್ಮಕ ಕಥಾನಕ ಚಿತ್ರ ಸೆಪ್ಟಂಬರ್ 5 ಕ್ಕೆ ರಿಲೀಸ್. ಬೆಳ್ಳಿ ಪರದೆ ಮೇಲೆ ಮತ್ತೊಂದು ಯುವ ಪಡೆಗಳ ತಂದ ವಿಭಿನ್ನ ಶೀಷಿಕೆಯ ಮೂಲಕ ಪ್ರೇಕ್ಷಕರ ಗಮನ ಸೆಳೆಯಲು ಸಿದ್ಧರಾಗಿದ್ದಾರೆ. ಯುವ ಪ್ರತಿಭೆ ವಿನಯ್ ಕುಮಾರ್ ವೈದ್ಯನಾಥನ್ ನಟಿಸಿ , ನಿರ್ಮಿಸುವುದರ ಜೊತೆಗೆ ನಿರ್ದೇಶನ ಮಾಡಿರುವಂತಹ " ಆಸ್ಟಿನ್ ನ ಮಹನ್ಮೌನ " ಚಿತ್ರದ ಟೀಸರ್ ಹಾಗೂ ಹಾಡುಗಳ ಬಿಡುಗಡೆ ಕಾರ್ಯಕ್ರಮವನ್ನು ಮಲ್ಲೇಶ್ವರಂ ನ ಎಸ್. ಆರ್. ವಿ ಪ್ರೀವ್ಯೂ ಥಿಯೇಟರ್ ನಲ್ಲಿ ಯೋಜನೆ ಮಾಡಿತ್ತು. ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಾಯಕ , ನಿರ್ದೇಶಕ ಹಾಗೂ ನಿರ್ಮಾಪಕ ವಿನಯ್ ....
ಹೊಸಬರ ಕನಸಿಗೆ ಧ್ರುವ ಸರ್ಜಾ ಸಾಥ್ ‘ಮಗ್ನೇ’ ಮಾಸ್ ಆಲ್ಬಂ ಸಾಂಗ್ ರಿಲೀಸ್ ಸಿನಿಮಾ ರಂಗದ ಕನಸು ಹೊತ್ತು ಚಿತ್ರರಂಗದಲ್ಲಿ ಸಾಧಿಸಬೇಕು ಎಂದು ಬರೋರು ಲಕ್ಷಾಂತರ ಮಂದಿ. ಆ ಲಕ್ಷಾಂತರ ಮಂದಿಗಳಲ್ಲಿ ಕೆಲವರನ್ನ ಮಾತ್ರ ಜನರು ಲಕ್ಷವಿಟ್ಟು ನೋಡ್ತಾರೆ. ಕಾರಣ ಅವರಲ್ಲಿ ಅಡಗಿರುವ ಪ್ರತಿಭೆ. ಇಲ್ಲೊಬ್ಬ ಪ್ರತಿಭಾವಂತನನ್ನು ಸ್ಯಾಂಡಲ್ವುಡ್ನ ‘ಕೆ.ಡಿ’ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಗುರುತಿಸಿದ್ದಾರೆ , ಆತನ ಪ್ರಯತ್ನವನ್ನ ಬೆನ್ತಟ್ಟಿ ಭೇಷ್ ಎಂದಿದ್ದಾರೆ. ಹಾಗಾದ್ರೆ ಆ ಪ್ರತಿಭೆ ಯಾರು ಅನ್ನೋ ಪ್ರಶ್ನೆ ಗೆ ಉತ್ತರ ವಾಲೀಸ್ ಸಂತೋಷ್.ಎನ್. ವಾಲೀಸ್ ಸಂತೋಷ್ ಪ್ರತಿಭವಂತ ನೃತ್ಯ ಪಟು , ಡ್ಯಾನ್ಸ್ ಕೊರಿಯೋಗ್ರಫರ್. ಮಾಗಡಿಯ ರೈತಾಪಿ ಕುಟುಂಬದಲ್ಲಿ ....
*ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ "ಸೂರಿ ಅಣ್ಣ" ಚಿತ್ರ* . *ಹಲವು ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಟೀಸರ್ ಅನಾವರಣ* . ಕನ್ನಡ ಚಿತ್ರರಂಗದ ಸೂಪರ್ ಹಿಟ್ "ಸಲಗ" ಚಿತ್ರದ ತಮ್ಮ ಪಾತ್ರದ ಮೂಲಕ ಪರಿಚಿತರಾಗಿರುವ ಸೂರಿ ಅವರು ಸಲಗ ಸೂರಿ ಅಣ್ಣ ಎಂದೆ ಖ್ಯಾತರಾಗಿದ್ದಾರೆ. ಪ್ರಸ್ತುತ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದೊಂದಿಗೆ ನಿರ್ಮಾಣವನ್ನೂ ಮಾಡಿರುವ ಚಿತ್ರ "ಸೂರಿ ಅಣ್ಣ". ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಿವೃತ್ತ ಪೊಲೀಸ್ ಅಧಿಕಾರಿ ಎಸ್ ಕೆ ಉಮೇಶ್, ಲಹರಿ ವೇಲು, ಎಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ), ಪಿ.ಮೂರ್ತಿ, ಗಡ್ಡ ನಾಗಣ್ಣ, ಜೀಬ್ರಾ, ಲಕ್ಕಿ ಅಣ್ಣ, ....
*N1ಕ್ರಿಕೆಟ್ ಅಕಾಡೆಮಿಯ IPT 12 ಸೀಸನ್-2 ಕ್ರಿಕೆಟ್ ಟ್ರೋಫಿ ಅನಾವರಣ* *ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ IPT 12 ಸೀಸನ್-2* *ಮತ್ತೆ ಶುರು IPT 12 ..ಆಗಸ್ಟ್ 9ರಿಂದ 15ರವರೆಗೆ ನಡೆಯಲಿದೆ ಸೀಸನ್-2 ಕ್ರಿಕೆಟ್ ಟೂರ್ನಮೆಂಟ್* ಸುನಿಲ್ ಕುಮಾರ್ ಬಿ. ಆರ್ ನೇತೃತ್ವದ ಎನ್ 1 ಕ್ರಿಕೆಟ್ ಅಕಾಡೆಮಿ ಕ್ರಿಕೆಟ್ ಪ್ರೇಮಿಗಳಿಗಾಗಿ ಹಲವಾರು ಟೂರ್ನಮೆಂಟ್ ಆಯೋಜಿಸಿ ಯಶಸ್ವಿ ಕಂಡಿದೆ. ಇದೀಗ ಮತ್ತೊಮ್ಮೆ IPT12 ಏರ್ಪಡಿಸಿದೆ. ಕಳೆದ ವರ್ಷ IPT12 ಯಶಸ್ವಿಯಾಗಿ ಜರುಗಿದ್ದು, ಇದೀಗ IPT12 ಸೀಸನ್ 2 ಚಾಲನೆ ದೊರೆತಿದೆ. ಡಾಕ್ಟರ್ಸ್, ಲಾಯರ್ಸ್, ಸಿನಿಮಾ ನಟರು, ಕಿರುತೆರೆ ಕಲಾವಿದರು, ಮಾಧ್ಯಮದವರು, ಸಿವಿಲ್ ಕಾಂಟ್ರಾಕ್ಟರ್ಸ್,ಎಕ್ಸ್ಜಿ ಡಿಪಾರ್ಟ್ಮೆನ್ ಕರ್ನಾಟಕ ಪೊಲೀಸ್,ಪ್ರೈವೇಟ್ ಲಿಮಿಟೆಡ್ ಕಂಪನಿ ....
*'ತಾಯವ್ವ’ ನಟಿ ಗೀತಪ್ರಿಯ ಈಗ ’ಅಪರಿಚಿತೆ’* *ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಸಾಥ್ ನೀಡಿದ ಶಾಸಕ ಸಿ.ಎನ್. ಅಶ್ವಥ್ ನಾರಾಯಣ* ಈ ಮೊದಲು ’ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಆ ಚಿತ್ರದ ಹೆಸರು ’ಅಪರಿಚಿತೆ’. ಹೌದು ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಸಿ.ಎನ್. ಅಶ್ವಥ್ ನಾರಾಯಣ ’ಅಪರಿಚಿತ’ ಶೀರ್ಷಿಕೆ ಪೋಸ್ಟರ್ ಬಿಡುಗಡೆ ಮಾಡಿ, ’ಸಿನಿಮಾ ಪವರ್ ಫುಲ್ ಮೀಡಿಯಾ. ಸಾಮಾಜಿಕ ಸಂದೇಶ ಇರುವ ಇಂತ ಸಿನಿಮಾ ಹೆಚ್ಚಾಗಿ ಬರಬೇಕು. ಆಗ ಜನ ಹಾಗೂ ಇಂಡಸ್ಟ್ರಿ ಚನ್ನಾಗಿ ಇರುತ್ತದೆ’ ಎಂದು ಶುಭ ....
ಕಮಲ್ರಾಜ್ ನಿರ್ಮಾಣದ 3 ಚಿತ್ರಗಳ ಪೋಸ್ಟರ್ ಬಿಡುಗಡೆ ಚಿತ್ರರಂಗದಲ್ಲಿ ನಟ, ಸಹನಿರ್ಮಾಪಕನಾಗಿದ್ದ, ಇತ್ತೀಚೆಗೆ ದ ಸೂಟ್ ಎಂಬ ಚಿತ್ರದಲ್ಲಿ ನಟಿಸಿದ್ದ ಕಮಲ್ರಾಜ್ ಅವರು ಇದೀಗ ಒಟ್ಟಿಗೇ ಮೂರು ಚಿತ್ರಗಳನ್ನು ಆರಂಭಿಸಿದ್ದಾರೆ, ಮೊಹಬ್ಬತ್ ಜಿಂದಾಬಾದ್, ಟಾಸ್ಕ್ ಹಾಗೂ ನಾಳೆ ನಮ್ಮ ಭರವಸೆ, ಈ ಮೂರೂ ಚಿತ್ರಗಳಲ್ಲಿ ಅಭಿನಯಿಸುವ ಜೊತೆಗೆ ಕಮಲ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ಅವರೇ ಚಿತ್ರ ನಿರ್ಮಾಣ ಸಹ ಮಾಡುತ್ತಿದ್ದಾರೆ. ಮೊಹಬ್ಬತ್ ಜಿಂದಾಬಾದ್ ಹಿಂದಿ ಚಿತ್ರ. ಅಲ್ಲದೆ ನಾಳೆ ನಮ್ಮ ಭರವಸೆ ಚಿತ್ರವನ್ನು 10 ಜನ ನಿರ್ದೇಶನ ಮಾಡಲಿದ್ದು, ಇದರಲ್ಲಿ ನಾಯಕ ಕಮಲ್ರಾಜ್ 50 ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇತ್ತೀಚಿಗೆ ಈ ಮೂರೂ ಚಿತ್ರಗಳ ಶೀರ್ಷಿಕೆ ....
ಚಿತ್ರ : ಕಮಲ್ ಶ್ರೀದೇವಿ
ನಿರ್ಮಾಣ: ಸ್ವರ್ಣಾಂಬಿಕ ಪಿಕ್ಚರ್ಸ್
ಶ್ರೀಮತಿ ಬಿ.ಕೆ ಧನಲಕ್ಷ್ಮೀ
ಸಹ ನಿರ್ಮಾಣ : Barnswallow company
ರಾಜವರ್ಧನ್
ಕ್ರಿಯೇಟಿವ್ ಹೆಡ್ : ರಾಜವರ್ಧನ್
ನಿರ್ದೇಶನ : ವಿ.ಎ ಸುನೀಲ್
ಸಂಗೀತ :ಕೀರ್ತನ್
ಸಾಹಿತ್ಯ : ಪ್ರಮೋದ್ ಮರವಂತೆ
ಛಾಯಾಗ್ರಹಣ:ನಾಗೇಶ್ ವಿ ಆಚಾರ್ಯ,
ಸಂಕಲನ:ಜ್ಞಾನೇಶ್ ಬಿ ಮಠದ್
ಕಲೆ: ಗುಣ
ತಾರಾಗಣ : ಸಚಿನ್ ಚಲುವರಾಯ ಸ್ವಾಮಿ, ಸಂಗೀತ ಭಟ್, ಕಿಶೋರ್,ರಮೇಶ್ ಇಂದಿರಾ ಮತ್ತಿತರರು
*ಚಿತ್ರೀಕರಣ ಮುಗಿಸಿದ ಮತ್ತೆ ಮಳೆ ಹೊಯ್ಯುತ್ತಿದೆ* ತಂತ್ರಜ್ಘರು ಹೊರತುಪಡಿಸಿ, ಕಲಾವಿದರೆಲ್ಲರೂ ಹೊಸಬರಾಗಿರುವ *ಮತ್ತೆ ಮಳೆ ಹೊಯ್ಯುತ್ತಿದೆ* ಸಿನಿಮಾದ ಶೂಟಿಂಗ್ ಮುಕ್ತಾಯವಾಗಿದ್ದರಿಂದ ಅನುಭವಗಳನ್ನು ಹಂಚಿಕೊಳ್ಳಲು ತಂಡವು ಮಾಧ್ಯಮದ ಮುಂದೆ ಹಾಜರಾಗಿತ್ತು. ’ಎಲ್ಲ ನೆನಪಾಗುತಿದೆ’ ಎಂಬ ಅಡಿಬರಹವಿದೆ. ಮೂರು ದಶಕಗಳಿಂದ ಸಹಾಯಕ ಕಲಾ ನಿರ್ದೇಶಕರಾಗಿರುವ ಗಂಗಾಧರ್ ಶ್ರೀ ಗವಿರಂಗನಾಥ ಸ್ವಾಮಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪತ್ನಿ *ಸುಮ ಹೆಸರಿನಲ್ಲಿ ಬಂಡವಾಳ ಹೂಡುತ್ತಿದ್ದಾರೆ*. ಶೃತಿ ಅನಿಲ್ಕುಮಾರ್ ಸಹ ನಿರ್ಮಾಪಕರು ಹಾಗೂ ಪ್ರಾಧ್ಯಾಪಕರ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಹಲವು ವರ್ಷಗಳಿಂದ ಸಿನಿಮಾರಂಗದಲ್ಲಿ ಸಕ್ರಿಯರಾಗಿರುವ ....
ಯಶಸ್ಸಿನ ಸಂಭ್ರಮದಲ್ಲಿ ಲಕ್ಷ್ಮಿ 26 ಅಂತರರಾಷ್ಟ್ರೀಯ ಪ್ರಶಸ್ತಿ ಗಳಿಸಿದ ಕಿರುಚಿತ್ರ ಕಿರುತೆರೆಯ ಸಾಕಷ್ಟು ವಿಭಾಗಗಳಲ್ಲಿ ಕೆಲಸಮಾಡಿ ಅನುಭವ ಪಡೆದ ಅಭಿಜಿತ್ ಪುರೋಹಿತ್ ಕಳೆದ ವರ್ಷ "ಲಕ್ಷ್ಮಿ" ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಆ ಚಿತ್ರವು ಇದೀಗ ದೇಶ ವಿದೇಶಗಳ ಫಿಲಂ ಫೆಸ್ಟಿವಲ್ ಗಳಲ್ಲಿ ಭಾಗವಹಿಸಿ ಪ್ರಶಂಸೆಯ ಜತೆ ಅಭಿನಯ, ನಿರ್ದೇಶನ, ಸಂಗೀತ, ಛಾಯಾಗ್ರಹಣ ಸೇರಿದಂತೆ ನಾನಾ ವಿಭಾಗಗಳಲ್ಲಿ 27 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದೆ. ಈ ಸಂಭ್ರಮವನ್ನು ನಿರ್ದೇಶಕ ಅಭಿಜಿತ್ ಮಾಧ್ಯಮದೊಂದಿಗೆ ಹಂಚಿಕೊಳ್ಳಲು ಪತ್ರಿಕಾ ಗೋಷ್ಟಿ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ತನ್ನ ತಾಯಿಯ ಮೇಲೆ ಅಪಾರ ಪ್ರೀತಿ ಗೌರವ ....
*ಓಟಿಟಿಗೆ ‘ದಿ ಜಡ್ಜ್ ಮೆಂಟ್’ ಎಂಟ್ರಿ* *ಜು. 25ರಿಂದ ‘ಅಮೇಜಾನ್ ಪ್ರೈಮ್’ ಮತ್ತು ‘ಬುಕ್ ಮೈ ಶೋ’ನಲ್ಲಿ ಸ್ಟ್ರೀಮಿಂಗ್* *ಓಟಿಟಿಗೆ ಬಂತು ಲೀಗಲ್-ಥ್ರಿಲ್ಲರ್ ‘ದಿ ಜಡ್ಜ್ ಮೆಂಟ್’* ಕಳೆದ ವರ್ಷ ತೆರೆಕಂಡಿದ್ದ ಕನ್ನಡದ ಲೀಗಲ್-ಥ್ರಿಲ್ಲರ್ ಶೈಲಿಯ ‘ದಿ ಜಡ್ಜ್ ಮೆಂಟ್’ ಸಿನಿಮಾಕ್ಕೆ ಥಿಯೇಟರಿನಲ್ಲಿ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ‘ದಿ ಜಡ್ಜ್ ಮೆಂಟ್’ ಸಿನಿಮಾವನ್ನು ನೋಡಿದ್ದ ಅನೇಕರು ಕನ್ನಡದಲ್ಲಿ ಇದೊಂದು ವಿಭಿನ್ನ ಪ್ರಯತ್ನ ಎಂದು ಚಿತ್ರತಂಡದ ಪರಿಶ್ರಮಕ್ಕೆ ಬೆನ್ನು ತಟ್ಟಿದ್ದರು. ಥಿಯೇಟರಿನಲ್ಲಿ ಉತ್ತಮ ಪ್ರದರ್ಶನ ಕಂಡು, ಗಲ್ಲಾ ಪೆಟ್ಟಿಗೆಯಲ್ಲೂ ಗೆಲುವಿನ ನಗು ಬೀರಿದ್ದ ‘ದಿ ....
Mahesh Mahadev ಗಾಯಕಿ ಡಾ.ಪ್ರಿಯದರ್ಶಿನಿ ಅವರ ಪ್ರಿಸಂ ರೆಕಾರ್ಡಿಂಗ್ ಸ್ಟುಡಿಯೋಗೆ ಶಾಸಕ ಡಾ.ಅಶ್ವಥ್ ನಾರಾಯಣ ಚಾಲನೆ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಹಿನ್ನೆಲೆ ಗಾಯಕಿ ಹಾಗೂ ಸಂಗೀತ ಸಂಶೋಧಕಿಯೂ ಆದ ಡಾ. ಪ್ರಿಯದರ್ಶಿನಿ ಅವರು ಪ್ರಿಸಮ್ ರೆಕಾರ್ಡಿಂಗ್ ಸ್ಟುಡಿಯೋ ಹಾಗೂ ಪ್ರಿಸಂ ಫೌಂಡೇಶನ್-ಇಂಟರ್ ನ್ಯಾಷನಲ್ ಸ್ಕೂಲ್ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ನ ಸ್ಥಾಪಕಿಯೂ ಹೌದು. ಜತೆಗೆ ಪಿಎಂ ಆಡಿಯೋಸ್ ಅಂಡ್ ಎಂಟರ್ಟೈನ್ಮೆಂಟ್ಸ್ನ ಸಿಇಒ ಕೂಡ ಆಗಿದ್ದಾರೆ. ಎಂ.ಎಸ್.ಆರ್.ನಗರದಲ್ಲಿದ್ದ ಪ್ರಿಸಂ ರೆಕಾಂರ್ಡಿಂಗ್ ಸಂಸ್ಥೆ 10 ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಇದೀಗ ಒಂದೇ ಸೂರಿನಡಿ ಎಲ್ಲಾ ವ್ಯವಸ್ಥೆಗಳೂ ಇರುವಂಥ ಪ್ರಿಸಂ ....
*ಖ್ಯಾತ ರಂಗಕರ್ಮಿ ಪ್ರಕಾಶ್ ಬೆಳವಾಡಿ ಅವರಿಂದ "ಹಿಕೋರ" ಚಿತ್ರದ ಟ್ರೇಲರ್ ಅನಾವರಣ** . *ಹೆಸರಾಂತ ನಿರ್ದೇಶಕ ದಿನೇಶ್ ಬಾಬು ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ* . ರತ್ನ ಶ್ರೀಧರ್ ನಿರ್ಮಾಣದ, ನೀನಾಸಂ ಕಿಟ್ಟಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಹಾಗೂ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿರುವ "ಹಿಕೋರಾ" ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಖ್ಯಾತ ರಂಗಕರ್ಮಿ, ನಟ ಹಾಗೂ ನಿರ್ದೇಶಕ ಪ್ರಕಾಶ್ ಬೆಳವಾಡಿ ಟ್ರೇಲರ್ ಅನಾವರಣ ಮಾಡಿದರು. ಹೆಸರಾಂತ ನಿರ್ದೇಶಕ ದಿನೇಶ್ ಬಾಬು, ಮಾಜಿ ಶಾಸಕ ಬಾಲರಾಜ್, ವಿತರಕರ ಸಂಘದ ಅಧ್ಯಕ್ಷ ನವಶಕ್ತಿ ನಾಗರಾಜ್, ....
*ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ "ಲೂಸ್ ಮಾದ" ಚಿತ್ರಕ್ಕೆ ಚಾಲನೆ* . *ಕರಾವಳಿ ಭಾಗದಲ್ಲಿ ನಡೆಯುವ ಕಥೆಗೆ ಲೂಸ್ ಮಾದ ಯೋಗೇಶ್ ನಾಯಕ* . ಕನ್ನಡದ ಅತ್ಯಂತ ಜನಪ್ರಿಯ ಚಿತ್ರಗಳಲ್ಲಿ ಒಂದಾದ "ದುನಿಯಾ" ಚಿತ್ರದಲ್ಲಿ "ಲೂಸ್ ಮಾದ" ಎಂಬ ಪಾತ್ರವನ್ನು ಯೋಗೇಶ್ ಅವರು ಮಾಡಿದ್ದರು. ಆ ಪಾತ್ರಕ್ಕೆ ನೋಡುಗರು ಫಿದಾ ಆದರು ಅಂದಿನಿಂದಲೂ "ಲೂಸ್ ಮಾದ" ಯೋಗೇಶ್ ಅಂತಲೇ ಯೋಗೇಶ್ ಜನಪ್ರಿಯರಾದರು. ಈಗ "ಲೂಸ್ ಮಾದ" ಚಿತ್ರದ ಶೀರ್ಷಿಕೆಯಾಗಿದೆ. ಈ ಚಿತ್ರದ ನಾಯಕನಾಗಿ ಯೋಗೇಶ್ ಅವರೆ ಅಭಿನಯಿಸುತ್ತಿದ್ದಾರೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ಅವರು ....