Kiruminkanaja.Film Press Meet.

Tuesday, November 26, 2019

ಪೆನ್ ಡ್ರೈವ್  ಕನ್ನಡದಲ್ಲಿ ಕಿರು  ಮಿನ್ಕಣಜ         ಕಿರು ಅನ್ನುವದಕ್ಕೆ ಅರ್ಥ ಎಲ್ಲರಿಗೂ ತಿಳಿದಿದೆ. ಆದರೆ ಮಿನ್ಕಣಜ ಪದಕ್ಕೆ ತಾತ್ಪರ್ಯ  ಸಿಗುವುದಿಲ್ಲ. ಇವರೆಡು ಸೇರಿಕೊಂಡಿರುವ ‘ಕಿರು ಮನ್ಕಣಜ’ ಚಿತ್ರವೊಂದು ತೆರೆಗೆ ಬರಲು ಸಜ್ಜಾಗಿದೆ. ಶೀರ್ಷಿಕೆ ಅರ್ಥ ವಸ್ತುವಿನ ಹೆಸರು ಆಗುತ್ತದೆ. ಆಂಗ್ಲ ಭಾಷೆಯಲ್ಲಿ ಪೆನ್ ಡ್ರೈವ್ ಎನ್ನುತ್ರಾರೆ. ಮೀನು ಚಿಕ್ಕದಾಗಿದ್ದರೂ ಅದರ ಹೊಟ್ಟೆ ಒಳಗೆ ಎಷ್ಟು ಮೊಟ್ಟೆಗಳು ಇರುತ್ತದೆಂದು ಯಾರು ಅಂದಾಜು ಮಾಡಲಿಕ್ಕೆ ಆಗುವುದಿಲ್ಲ. ಅದೇ ರೀತಿ ಪೆನ್ ಡ್ರೈವ್ ಒಬ್ಬೋಬ್ಬರ ಜೀವನದಲ್ಲಿ ಇರುತ್ತದೆ. ಅದಕ್ಕೆ ಪುರಾವೆಗಳು ಏನು ಬೇಕಾದರೂ ಇರಬಹುದು. ಪ್ರತಿಯೊಬ್ಬರಲ್ಲಿ ಅದು ಆಳವಾಗಿ ತುಂಬಿರುತ್ತದೆ. ಇದೇ ರೀತಿ ....

1071

Read More...

Film-i1.Film Trailer Rel.

Monday, November 25, 2019

  ಐ ೧ಗೆ ಸುದೀಪ್ ಸಾಥ್       ಹೊಸಬರ ಚಿತ್ರಕ್ಕೆ ಸದಾ ಬೆಂಬಲ ನೀಡುತ್ತಿರುವ ಸುದೀಪ್ ‘ಐ೧’ ಚಿತ್ರದ ಟ್ರೈಲರ್‌ನ್ನು ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ ಒಂದು ಕಾಲದಲ್ಲಿ ನಾನು ಸಹ ಹೊಸಬನಾಗಿದ್ದಾಗ ಹೀಗೆ ವೇದಿಕೆ ಮೇಲೆ ನಿಂತಿದ್ದೆ. ನೀವುಗಳು ನಾಳೆ ಏನಾಗ್ತಿರೆಂದು ಹೇಳಲಿಕ್ಕೆ ಆಗದು.  ತುಣುಕುಗಳನ್ನು ನೋಡಿದಾಗ ಪರಿಕಲ್ಪನೆ ಚೆನ್ನಾಗಿ ಬಂದಿದೆ. ಒಂದು ಜಾಗದಲ್ಲಿ ನಡೆಯುತ್ತದೆ ಎಂದು ತಿಳಿದುಬಂದಿದೆ. ಶಿಕ್ಷಕಿ ನಿರ್ಮಾಣದ ಕಡೆಗೆ ಬಂದಿದ್ದಾರೆ ಒಳ್ಳೆಯದಾಗಲಿ ಎಂದರು.  ಚಿತ್ರದ ಕತೆಯಲ್ಲಿ  ಮೂವರು ಅಮಾಯಕ ಹುಡುಗರನ್ನು ಒಬ್ಬನು  ಟೆಂಪೋ ಟ್ರಾವಲ್ (ಟಿಟಿ)ದಲ್ಲಿ ಬಂದಿಯಾಗಿಸುತ್ತಾನೆ. ಅದನ್ನು ಮಾಡಲು ಕಾರಣವಾದರೂ ಏನು? ....

518

Read More...

Gulal.com.Film Press Meet.

Monday, November 25, 2019

ಗುಲಾಲ್‌ದಲ್ಲಿ ಹುಡುಗಿ ಹಾಡು ವೈರಲ್           ಚಿತ್ರ ಬಿಡುಗಡೆ ಮುಂಚೆ ಹಾಡುಗಳು ಹಿಟ್ ಆದರೆ ಅದು ಮೊದಲ ಯಶಸ್ಸು ಎಂದು ಹೇಳುತ್ತಾರೆ. ಅದರಂತೆ ‘ಗುಲಾಲ್.ಕಾಂ’ ಚಿತ್ರದ ‘ಹುಡುಗಿ ಹುಡುಗಿ’ ಗೀತೆಯು ಹದಿನೈದು ದಿನದೊಳಗೆ ಮೂರುವರೆ ಲಕ್ಷ ಜನರು ವೀಕ್ಷಿಸಿ ವೈರಲ್ ಆಗಿದೆ. ಇದರಿಂದ ಗೀತೆಗೆ ಧ್ವನಿಯಾಗಿರುವ ನಿರ್ಮಾಪಕ ಡಾ.ಗೋಪಾಲಕೃಷ್ಣಹವಲ್ದಾರ ಅವರಿಗೆ ಖುಷಿ ಆಗಿದೆ.  ಉತ್ತರ ಕರ್ನಾಟಕ ಭಾಗದಲ್ಲಿ ಹುಟ್ಟಿದಾಗ ಗುಲಾಲ್ ಬಣ್ಣ ಹಾರಿಸ್ತಾರೆ, ಸತ್ತಾಗ ಗೌರವ ಸಲ್ಲಿಸಲು ಇದನ್ನೆ ಏರಿಸ್ತಾರೆ. ಬದುಕಲ್ಲಿ ಸಾವು ಅಂದರೆ ಕಷ್ಟ, ಹುಟ್ಟುಗೆ ಅರ್ಥ ಸುಖ ಕೊಡುತ್ತದೆ. ಇವೆರಡನ್ನು ಬಿಂಬಿಸುವುದೇ ಕತೆಯಾಗಿದೆ. ಬೆಂಗಳೂರು, ಬೆಳಗಾಂ,ಕಿತ್ತೂರು  ಮುಂತಾದ ....

857

Read More...

Directors Association.Press Meet.

Monday, November 25, 2019

ನಿರ್ದೇಶಕರ  ಸಂಘಕ್ಕೆ  ನೂತನ  ಸಾರಥಿ

        ಕಳೆದೆರಡು ವರ್ಷದಿಂದ ಸಾಹಿತಿ,ನಿರ್ದೇಶಕ ಡಾ.ನಾಗೇಂದ್ರಪ್ರಸಾದ್ ನಿರ್ದೇಶಕರ ಸಂಘಕ್ಕೆ ಅಧ್ಯಕ್ಷರಾಗಿದ್ದರು. ಮೊನ್ನೆ ನಡೆದ ಸರ್ವಸದಸ್ಯರ ಸಭೆಯಲ್ಲಿ  ಹಾಲಿ ಅಧ್ಯಕ್ಷರು  ವಿಸರ್ಜನೆ ಮಾಡಿದ್ದರಿಂದ ಟಿ.ಶಿ.ವೆಂಕಟೇಶ್  ಅಧ್ಯಕ್ಷ  ಸ್ಥಾನಕ್ಕೆ ಅವಿರೋಧವಾಗಿ  ಆಯ್ಕೆಯಾಗಿದ್ದಾರೆ. 

441

Read More...

Naane Raja.Film Press Meet.

Monday, November 25, 2019

 

        

ಬರುತ್ತಿದ್ದಾನೆ ನಾನೇ ರಾಜ

        ‘ನಾನೇ ರಾಜ’ ಚಿತ್ರವು  ಮನರಂಜನೆ, ಸಾಹಸ ಮತ್ತು ಪ್ರೀತಿ ಕತೆ ಹೊಂದಿದೆ. ಅಜ್ಜಿಯ ಮುದ್ದಿನ ಮೊಮ್ಮಗ, ಸ್ನೇಹಿತರ ಅಚ್ಚುಮೆಚ್ಚಿನ ಗೆಳೆಯ ರಾಜ, ಮನೆಗೆ ಮಾರಿ ಊರಿಗೆ ಉಪಕಾರಿ ಎನ್ನುವ ಹಾಗೆ ಯಾರೇ ಯಾವ ಸಮಯದಲ್ಲೂ ಸಹಾಯ ಕೇಳಿದರೂ ಮುಂದಾಗುವ ಅಪಾಯವನ್ನು ಲೆಕ್ಕಿಸದೆ ಸಹಾಯ ಮಾಡುವ ಗುಣವುಳ್ಳವನು.  ಅಕಸ್ಮಾತ್ ಸಿಕ್ಕ ಹುಡುಗಿಯೊಬ್ಬಳು  ತನ್ನ ಕಷ್ಟವನ್ನು ಹೇಳಿ ಸಹಾಯವನ್ನು ಮಾಡಲು ಕೋರಿಕೊಳ್ಳುತ್ತಾಳೆ. ಅವಳನ್ನು ರಕ್ಷಿಸಲು ಹೋಗಿ ತಾನೇ ಕಷ್ಟಕ್ಕೆ ಸಿಲುಕುತ್ತಾನೆ. ಅವೆಲ್ಲಾವನ್ನು ಎದುರಿಸಿ, ಹೋರಾಡಿ ಹೇಗೆ ಹೊರಬರುತ್ತಾ ನೆಂಬುದು ಒಂದು ಏಳೆಯ ಸಾರಾಂಶವಾಗಿದೆ.

449

Read More...

Tempar.Film Pooja and Press Meet.

Monday, November 25, 2019

ಟೆಂಪರ್ ಹುಡುಗನ ಬದುಕು ಬವಣೆ         ಪ್ರತಿಭೆ ಇರುವವರು  ಒಂದು ಕ್ಷೇತ್ರದಲ್ಲಿ ಗುರುತಿಸಿಕೊಂಡ ನಂತರ ಅವರ ಗುರಿ ಆಕ್ಷನ್ ಕಟ್ ಹೇಳುವುದು. ಇದರಲ್ಲಿ ಕೊರಿಯೋಗ್ರಾಫರ್, ಛಾಯಾಗ್ರಾಹಕ, ಸಂಗೀತ ನಿರ್ದೇಶಕ, ಸಂಕಲನಕಾರ ಇವರೆಲ್ಲರೂ ಸದ್ಯ  ನಿರ್ದೇಶಕ ಸ್ಥಾನವನ್ನು ಅಲಂಕರಿಸಿದ್ದಾರೆ. ಈ ಸರಪಣಿಗೆ ಸಾಹಿತಿ ಮಂಜುಕವಿ ಸೇರ್ಪಡೆಯಾಗಿದ್ದಾರೆ.  ‘ಟೆಂಪರ್’ ಚಿತ್ರಕ್ಕೆ ರಚನೆ,ಚಿತ್ರಕತೆ, ಸಾಹಿತ್ಯ,ಸಂಭಾಷಣೆ  ಬರೆದು ನಿರ್ದೇಶನ ಮಾಡುತ್ತಿದ್ದಾರೆ.  ಕತೆಯಲ್ಲಿ ಆತನಿಗೆ ಅಪ್ಪ-ಅಮ್ಮ-ತಂಗಿ ಜೊತೆಗೆ ಕಷ್ಟ ಸುಖ ಹಂಚಿಕೊಳ್ಳಲು ಇಬ್ಬರು  ಪ್ರಾಣ ಸ್ನೇಹಿತರು. ಬಾಲ್ಯದಿಂದಲೂ ಯಾರೇ ತಪ್ಪು ಮಾಡಿದರೂ ಅದಕ್ಕೆ ತಕ್ಕಂತೆ ನ್ಯಾಯ ಒದಗಿಸೋ ಗುಣವುಳ್ಳವನು.  ಮುಂದೆ ....

477

Read More...

Mookajjiya Kanasugalu.Film Press Meet.

Saturday, November 23, 2019

ಉತ್ತಮ  ಚಿತ್ರಗಳನ್ನು  ಜನರಿಗೆ  ತಲುಪಿಸುವುದು  ಸವಾಲಿನ  ಕೆಲಸ         ಹಿರಿಯ ಸಾಹಿತಿ ಡಾ.ಶಿವರಾಮಕಾರಂತರು ೧೯೬೮ರಲ್ಲಿ ಬರೆದ ‘ಮೂಕಜ್ಜಿಯ ಕನಸುಗಳು’ ಕಾದಂಬರಿ ರೂಪದಲ್ಲಿ ಪ್ರಕಟಗೊಂಡಿತ್ತು. ಇದೇ ಕೃತಿಗೆ ಜ್ಘಾನಪೀಠ ಪ್ರಶಸ್ತಿ ಲಭಿಸಿ ಐವತ್ತು ವರ್ಷವಾಗಿದೆ.  ಅಲ್ಲದೆ  ಪಠ್ಯಪುಸ್ತಕವಾಗಿ ಬಂದಿತ್ತು.  ಆ ಕಾಲಕ್ಕೆ ಸ್ತ್ರೀ ಸ್ವಾತಂತ್ರ ಪ್ರತಿನಿಧಿಯಾಗಿ ಮೂಕಜ್ಜಿಗೆ ಒಂದು ಅತೀಂದ್ರಿಯ ಶಕ್ತಿಯನ್ನು ಕೊಟ್ಟು, ಅವಳ ಕನಸುಗಳ ಮೂಲಕ ಮಾನವ ಇತಿಹಾಸದ ದೃಶ್ಯಗಳನ್ನು ಮೂರ್ತಿಕರಿಸುವ ಕಲ್ಪನೆಯನ್ನು ಕೃತಿಯಲ್ಲಿ ಹೇಳಿದ್ದರು. ಅದು ಪ್ರಸಕ್ತ  ಕಾಲಘಟ್ಟಕ್ಕೆ ಅನ್ವಯವಾಗುತ್ತದೆ. ಇಂತಹ ಮೇರು ಕಾದಂಬರಿಯು ಚಿತ್ರರೂಪದಲ್ಲಿ ಬರಲು ....

449

Read More...

Om Shree Swastik.Film Teeser Rel.

Saturday, November 23, 2019

ಮೂರು  ಚಿಹ್ನೆಯ  ಚಿತ್ರ           ಉಪೇಂದ್ರ ಓಂ, ಸ್ವಸ್ತಿಕ್ ಚಿತ್ರಗಳನ್ನು ಚಿಹ್ನೆಯ ಮೂಲಕ ಶೀರ್ಷಿಕೆಯಾಗಿ ಬಳಸಿಕೊಂಡಿದ್ದರು.  ಇದರಲ್ಲಿ ಒಂದು ಹೆಸರು ಮಾಡಿದರೆ, ಮತ್ತೋಂದು ಸಾಧಾರಣ ಅನಿಸಿಕೊಂಡಿತ್ತು. ಈಗ ಹಿರಿಯ ನಿರ್ದೇಶಕ ಪುಟಾಣೆ ರಾಮರಾವ್ ಇನ್ನೋಂದು  ಹೆಜ್ಜೆ ಮುಂದಕ್ಕೆ  ಹೋಗಿ ‘ಓಂ ಶ್ರೀ ಸ್ವಸ್ತಿಕ್’ ಹೆಸರುಗಳನ್ನು ಚಿಹ್ಮೆಗಳೊಂದಿಗೆ ಹೆಸರಿನಲ್ಲಿ  ಗುರುತಿಸಿಕೊಂಡು  ನಿರ್ಮಾಣ ಮಾಡಿದ್ದಾರೆ. ತ್ರಿಸಂಗಮ ಹಂಗಾಮವೆಂದು ಉಪಶೀರ್ಷಿಕೆಯಾಗಿ ಹೇಳಿಕೊಂಡಿದೆ.  ಹೊಸಕೋಟೆ, ರಾಮೋಹಳ್ಳಿ ಕಡೆಗಳಲ್ಲಿ ಶೇಕಡ ೭೫ರಷ್ಟು ಚಿತ್ರೀಕರಣ ಮುಗಿಸಿ, ಎರಡು ಹಾಡುಗಳು, ಸಾಹಸ ಮತ್ತು ಮಾತಿನ ಭಾಗದ ಕೆಲಸವನ್ನು ಉಳಿಸಿಕೊಂಡಿದೆ. ಅಡಿಬರಹದಲ್ಲಿ ....

1159

Read More...

Krutha.Film Press Meet.

Friday, November 22, 2019

ಹೊಸಬರ  ಕೃಥ        ಇದಂ ಕೃತ್ಯಂ ಎಂದು ಹಿರಿಯರು ಹೇಳುತ್ತಾರೆ. ಈಗ ಹೊಸಬರ ತಂಡವೊಂದು ಸೇರಿಕೊಂಡು ‘ಕೃಥ’ ಎನ್ನುವ ಚಿತ್ರವನ್ನು ಸದ್ದಿಲ್ಲದೆ ಬೆಂಗಳೂರು, ಮಂಗಳೂರು ಕಡೆಗಳಲ್ಲಿ ಎರಡು ಹಂತದಂತೆ ಚಿತ್ರೀಕರಣ ಮುಗಿಸಿದ್ದಾರೆ. ಮೊದಲು ‘ಡು ಇಟ್’ ಹೆಸರು ಇಡಲು  ಚಿಂತನೆ ನಡೆಸಿದ್ದರು.  ಅದು ಸರಿಬರುವುದಿಲ್ಲವೆಂದು ಕೊನೆಗೆ ಮೇಲಿನಂತೆ  ಸಂಸ್ಕ್ರತ ಶೀರ್ಷಿಕೆಯನ್ನು ಬಳಸಿಕೊಂಡಿದ್ದಾರೆ. ಒಂದು ರಾತ್ರಿಯಲ್ಲಿ ನಡೆಯುವ ಕತೆಯಲ್ಲಿ ನಾಲ್ಕು ವರ್ಷ ಮಗುವಿನೊಂದಿಗೆ ಶಕ್ತಿಶಾಲಿ ತಾಯಿ ಗಂಡನಿಲ್ಲದ ಸಂದರ್ಭದಲ್ಲಿ ಎದುರಾದ ಸಮಸ್ಯೆಯನ್ನು ಹೇಗೆ ನಿಭಾಯಿಸುತ್ತಾಳೆ  ಎಂಬುದನ್ನು ಸೆಸ್ಪನ್ಸ್, ಥ್ರಿಲ್ಲರ್ ಮೂಲಕ ೧೧೦ ನಿಮಿಷದಲ್ಲಿ ತೋರಿಸಲಾಗಿದೆ. ‘ಧನಂ ....

447

Read More...

Alidu Ulidavaru.Movie Trailer Rel.

Wednesday, November 20, 2019

ಪ್ರೀತಿ ಮತ್ತು  ಭಯದ ಸಂವೇದನೆಗಳು          ಪ್ರೀತಿ ಇದ್ದಾಗ ಚಿಕ್ಕದೊಂದು ಭಯ ಇರುತ್ತದೆ. ಆ ಭಯವು ನಮಗೆ ಜವಬ್ದಾರಿ ಕೊಡುತ್ತದೆ. ಅಂತಹ ಜವಬ್ದಾರಿಯು ಚೆನ್ನಾಗಿರುತ್ತದೆ. ಹುಟ್ಟು-ಸಾವು, ನೋವು-ನಲಿವು. ಕಾಣಿಸುವುದರ ಬಗ್ಗೆ ಯಾರು ಚಿಂತೆ ಮಾಡೋಲ್ಲ. ಅದೇ ಕಾಣದೇ ಇರುವುದರ ಕುರಿತಂತೆ ಭ್ರಮೆ-ಹೆದರಿಕೆ ಆವರಿಸುತ್ತದೆ. ಇರೋದು ಯಾಕಿಂಗೆ, ಇಲ್ಲದೆ ಇರೋದು ಯಾಕಿಲ್ಲ. ಬದುಕಿನಲ್ಲಿ ವಿಚಿತ್ರ ಅಂದರೆ ಇವೆಲ್ಲವೂ ಸಂಘಟಿತವಾಗಿ  ಬರುತ್ತದೆ. ಇಂತಹ ಅಂಶಗಳು ‘ಅಳಿದು ಉಳಿದವರು’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಅನಂತ್ ವರ್ಸಸ್ ನುಸ್ರತ್ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದ  ಸುಧೀರ್‌ಶ್ಯಾನ್‌ಭೋಗ್  ‘ಬದುಕು ಜಟಾಕ ಬಂಡಿ’ ರಿಯಾಲಿಟಿ ....

439

Read More...

Dhandupalya-4.Film Success Meet.

Wednesday, November 20, 2019

ಪ್ರತಿಭೆ  ಸಾಬೀತು ಪಡಿಸಲು  ಚಿತ್ರ  ನಿರ್ಮಾಣ        ಹಿಂದಿನ ದಂಡು ಪಾಳ್ಯ ನಿರ್ಮಾಣ ಮಾಡಿದ್ದ ವೆಂಕಟ್ ಅವರಿಗೆ ನಿರ್ದೇಶಕರಿಂದ ದ್ರೋಹ,ಮೋಸ ಆಗಿತ್ತು.  ಇವರಿಗೇನು ಗೊತ್ತಿಲ್ಲವೆಂದು ಆ ಸಮಯದಲ್ಲಿ ಆಟ ಆಡಿಸಿದ್ದಾರೆ. ನಾನೇನು ಕಮ್ಮಿ ಇಲ್ಲ. ನನ್ನಲ್ಲೂ ಪ್ರತಿಭೆ ಎಂದು ತೋರಿಸುವ ಸಲುವಾಗಿ ‘ದಂಡು ಪಾಳ್ಯಂ-೪’  ಚಿತ್ರಕ್ಕೆ ಕತೆ,ಚಿತ್ರಕತೆ ಬರೆದು ಬಂಡವಾಳ ಹಾಕಿದ್ದೇನೆಂದು ಸಂತೋಷಕೂಟದಲ್ಲಿ  ಅನ್ನದಾತರು  ಅಂತರಾಳದ ನೋವನ್ನು ಮಾದ್ಯಮದ ಎದುರು ಹೇಳಿಕೊಂಡರು.  ಇನ್ನು ಖುಷಿಯ ವಿಚಾರ ಅಂದರೆ,  ಎಸಿಪಿ ಯಾಗಿ ಕಾಣಿಸಿಕೊಂಡಿದ್ದರಿಂದ  ಒಂದರೆಡು ಚಿತ್ರಗಳಲ್ಲಿ ಅಭಿನಯಿಸಲು ಕರೆ ಬಂದಿದೆ.  ಸ್ಟಾರ್ ನಟರ  ಕಾಲ್‌ಶೀಟ್ ಸಿಕ್ಕಿದೆ. ಇದರ ನಂತರ ....

688

Read More...

Dhruva Sarja.Marriage Press Meet.

Sunday, November 17, 2019

 ನವೆಂಬರ್ ೨೪ರಂದು ಆಕ್ಷನ್ ಪ್ರಿನ್ಸ್ ಮದುವೆ        ಸ್ಟಾರ್ ನಟ ಧ್ರುವಸರ್ಜಾ ಅವರ ಮದುವೆಯು  ಪ್ರೇರಣಶಂಕರ್ ಅವರೊಂದಿಗೆ ನಡೆಯಲಿದೆ.   ಹನ್ನೆರಡು ಇಂಚು ಉದ್ದ, ಮೂರೂವರೆ ಇಂಚು ಎತ್ತರದ ಆಹ್ವಾನಪತ್ರಿಕೆಯಲ್ಲಿ  ಸರ್ಜಾ ಕುಟುಂಬವು ಆಹ್ವಾನಿಸುತ್ತಿದೆ ಎನ್ನುವ ಎರಡು ಬಾಟಲ್‌ಗಳ ಪೈಕಿ ಒಂದರಲ್ಲಿ ಅಕ್ಕಿ, ಚಾಕಲೇಟ್, ಹರಿಶಿನ-ಕುಂಕುಮ, ಎರಡನೆಯದಲ್ಲಿ ಕೇಸರಿ ಬಣ್ಣ ಇರುವ ಸಣ್ಣದಾದ ಪ್ಯಾಕೆಟ್. ಮತ್ತೋಂದು ಕಡೆ ಹರಿಶಿನಕೊಂಬು, ಹಸಿರುಬಣ್ಣದ ಗಾಜಿನ ಬಳೆ, ಮರದಲ್ಲಿ ಮಾಡಲಾದ ಚಿಕ್ಕದಾದ ಪೆಂಡೆಂಟ್. ಒಂದು  ಪುಟ ಪೂರ್ತಿ ಹಳೇಬೀಡು ಗೋಪುರಗಳ  ಮಧ್ಯೆ ವಧು-ವರ ನಿಂತಿರುವ ಭಾವಚಿತ್ರ. ಆಹ್ವಾನ ಪತ್ರಿಕೆಯಲ್ಲಿ ಸಂಪೂರ್ಣ ಮದುವೆ ವಿವರ, ....

435

Read More...

Kannad Gottilla.Film Rel On 22th Nove 2019.

Tuesday, November 19, 2019

ಈ ವಾರ ತೆರೆಗೆ ‘ಕನ್ನಡ್ ಗೊತ್ತಿಲ್ಲ‘     ರಾಮರತ್ನ ಪ್ರೊಡಕ್ಷನ್ಸ್ ಮೂಲಕ  ಕುಮಾರ ಕಂಠೀರವ ಅವರು ನಿರ್ಮಿಸಿರುವ ‘ಕನ್ನಡ್ ಗೊತ್ತಿಲ್ಲ‘ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.    ಆರ್ ಜೆ ಮಯೂರ್ ನಿರ್ದೇಶನದಲ್ಲಿ ಮೂಡಿಬಂದಿರುವ ‘ಕನ್ನಡ್ ಗೊತ್ತಿಲ್ಲ‘ ಕನ್ನಡ ಭಾಷಾ ಪ್ರೇಮವನ್ನು ಸಾರುವ ಚಿತ್ರವಾಗಿದೆ. ಈ ....

462

Read More...

Kanneri.Film Press Meet.

Tuesday, November 19, 2019

ಕಾಡು ನಾಡಿನ ಮಿಶ್ರಣ           ಮೂಕಹಕ್ಕಿ ನಿರ್ದೇಶನ ಮಾಡಿರುವ ನೀನಾಸಂ ಮಂಜು ಈಗ ಕಾಡು, ನಾಡು ನಡುವಿನ ಕತೆಯನ್ನು ಆರಿಸಿಕೊಂಡು ‘ಕನ್ನೇರಿ’ ಅಡಿಬರಹದಲ್ಲಿ ಕಾಡಿನ ವಸಂತಗಳು ಎಂದು ಹೇಳಿಕೊಂಡಿರುವ ನೈಜ ಘಟನೆಯ ಚಿತ್ರವನ್ನು ಮುಗಿಸಿದ್ದಾರೆ.  ಕಾಡಿನ ಮಕ್ಕಳಿಗೆ, ವನವೇ  ವಾಸತಾಣ. ಅಲ್ಲೇ ನೆಲೆ ಕಂಡುಕೊಂಡಿರುವ ಬುಡಕಟ್ಟು ಸಮುದಾಯಗಳು ತಮ್ಮದೇ ಆದ ಆಚಾರ, ವಿಚಾರ, ಸಂಸ್ಕೃತಿಯನ್ನು ಬೆಳೆಸಿಕೊಂಡವರು. ಆದರೆ ದಿನಕಳೆದಂತೆ ಅವರನ್ನೇ ಹೊರ ಹಾಕುವ ಷಡ್ಯಂತರ ನಡೆಯುತ್ತಿದೆ.  ಕಾಡಿನ ಜೊತೆ ನಾಡಿನ ಕಥೆಯೂ ಬರಲಿದೆ.  ಉದ್ಯೋಗ ಬಯಸಿ ನಾಡಿಗೆ ಬರುವ ಮುಗ್ದ  ಜನರಿಗೆ ಇಲ್ಲಿನ ಪರಿಸರ, ರೀತಿ, ನೀತಿ ಎಲ್ಲವು ಹೊಸತಾಗಿರುತ್ತದೆ. ಮುಂದೆ ಪಟ್ಟಣ್ಣ ಇವರ ಮಧ್ಯೆ ....

494

Read More...

Kaalidaasa Kannada Mestru.Film Press Meet.

Tuesday, November 19, 2019

ಕಾಳಿದಾಸ ಕನ್ನಡ ಮೇಷ್ಟ್ರು ಬಿಡುಗಡೆ ಮೋಕ್ಷ         ‘ಕಾಳಿದಾಸ ಕನ್ನಡ ಮೇಷ್ಟ್ರು’ ಚಿತ್ರವು ಕನ್ನಡ ದಿನದಂದು ಬರಬೇಕಾಗಿತ್ತು. ಆದರೆ ಅದೇ ದಿನದಂದು ದೊಡ್ಡ ಚಿತ್ರ ಬಂದ ಕಾರಣ ಮುಂದೂಡಲಾಗಿತ್ತು.  ಸಾಹಿತಿ, ನಿರ್ದೇಶಕ ಕವಿರಾಜ್ ಎರಡನೇ ಪ್ರಯತ್ನ.  ಪ್ರಮೋಷನ್ ಗೀತೆಗೆ  ಹತ್ತೋಂಬತ್ತು ನಾಯಕಿಯರು ಸಂಭಾವನೆರಹಿತ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಹರಿಪ್ರಿಯಾ, ಕಾರುಣ್ಯರಾಮ್, ರೂಪಿಕಾ, ಮಾನ್ವಿತಾಹರೀಶ್, ಅದಿತಿಪ್ರಭುದೇವ.ಅದಿತಿರಾವ್,ಸಂಯುಕ್ತಹೂರನಾಡು,ಸೋನುಗೌಡ  ಮುಂತಾದವರು ಇರುವುದು ವಿಶೇಷ. ಶೀರ್ಷಿಕೆ ಹೇಳುವಂತೆ ಜಗ್ಗೇಶ್ ಕನ್ನಡ ಶಿಕ್ಷಕನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಚಲಿತ ಸ್ಥಿತಿಯಲ್ಲಿ ಪೋಷಕರಾದವರು ಮಕ್ಕಳಿಗೆ ಸ್ವಾತಂತ್ರ ....

428

Read More...

Manoroopa.Film Rel On 22th Nove 2019.

Tuesday, November 19, 2019

ಜನರ ಎದುರು ಮನರೂಪ        ೧೯೮೧ ರಿಂದ ೨೦೦೦ರ  ಅವಧಿಯಲ್ಲಿ ಹುಟ್ಟಿದ ಮನುಷ್ಯರ ಮನಸ್ಸಿನ ವಿವಿಧ ಛಾಯೆಗಳು ಹೇಗಿರುತ್ತವೆ ಎಂಬುದನ್ನು  ‘ಮನರೂಪ’ ಚಿತ್ರದಲ್ಲಿ ತೋರಿಸುವ  ಪ್ರಯತ್ನ ಮಾಡಿರುವುದು  ನಿರ್ದೇಶಕ, ನಿರ್ಮಾಪಕ ಕಿರಣ್‌ಹೆಗಡೆ. ಇವರು ಸಹ ಇದೇ ಇಸವಿಯಲ್ಲಿ ಜನ್ಮತಾಳಿದ್ದಾರಂತೆ.  ಇದರ ಅನುಭವದಲ್ಲಿ   ಹಾರರ್ ಅಲ್ಲದ, ಸೈಕಲಾಜಿಕಲ್ ಚಿತ್ರಕ್ಕೆ  ಕತೆ, ಸಂಭಾಷಣೆ ಬರೆದಿರುವುದು ವಿಶೇಷ. ಕಾಡಿನ ಹಿನ್ನಲೆಯಲ್ಲಿ ನಡೆಯಲಿರುವುದರಿಂದ ಸಿದ್ದಾಪುರ, ಸಿರ್ಸಿ  ಕಡೆಗಳಲ್ಲಿ ನಲವತ್ತ ಮೂರು ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ.  ಐದು ಸಮಾನ ಮನಸ್ಕರ ಯುವ ತಂಡವೊಂದು ಕಾಲ್ಪನಿಕ ಸ್ಥಳ ಪಶ್ಚಿಮ ಘಟ್ಟದ ಕರಡಿಗುಹೆ  ಹೋಗಲು ಚಾರಣ ....

469

Read More...

Nuron.Film Press Meet.

Tuesday, November 19, 2019

                                ನ್ಯೂರಾನ್ ವಿನೂತನ ಪ್ರಚಾರ          ಸೈಂಟಿಫಿಕ್ ಸೆಸ್ಪನ್ಸ್, ಥ್ರಿಲ್ಲರ್ ‘ನ್ಯೂರಾನ್’ ಚಿತ್ರ ೨೯ರಂದು ಬಿಡುಗಡೆಯಾಗುತ್ತಿರುವುದರಿಂದ ಜನರಿಗೆ ತಲುಪಲು ವಿಭಿನ್ನ ರೀತಿಯ ಪ್ರಚಾರವನ್ನು ಮಾಡಲಾಗುತ್ತಿದೆ. ಐದು ಲಕ್ಷ ಕಾಫಿ ಕಪ್‌ಗಳನ್ನು ಎಲ್ಲಾ ಕಡೆಗಳಲ್ಲಿ ವಿತರಿಸಲಾಗಿದೆ. ಹೆಸರಿಗೆ ತಕ್ಕಂತೆ ಅದರ ಅರ್ಥ ತಿಳಿಸಲು ಅದರಂತೆ ವಸ್ತ್ರಾಭರಣ ತೊಟ್ಟುಕೊಂಡ ನಾಲ್ವರು ಮುಖ್ಯ ರಸ್ತೆಗಳು,  ಚಿತ್ರಮಂದಿರದ ಮುಂದೆ ಹಾಗೂ ಜನಸಂದಣಿ ಇರುವ ಕಡೆ ಓಡಾಡುತ್ತಿದ್ದಾರೆ.   ಕತೆ, ಚಿತ್ರಕತೆ ಬರೆದು  ಪ್ರಥಮಬಾರಿ ನಿರ್ದೇಶನ ಮಾಡಿರುವುದು  ವಿಕಾಸ್‌ಪುಷ್ಪಗಿರಿ.   ....

441

Read More...

Mundina Nildana.Film Trailer Rel.

Monday, November 18, 2019

ವಿದೇಶದಲ್ಲಿ ಮುಂದಿನ ನಿಲ್ದಾಣ ಪ್ರೀಮಿಯರ್ ಷೋ          ೧೯೮೪ರ ನಂತರ ಹುಟ್ಟಿದ ಜನರ ಮನಸ್ಥಿತಿ ಹೇಗಿರುತ್ತದೆ ಎಂಬುದನ್ನು ‘ಮುಂದಿನ ನಿಲ್ದಾಣ’ ಚಿತ್ರದಲ್ಲಿ ತೋರಿಸುವ ಪ್ರಯತ್ನ ಮಾಡಲಾಗಿದೆ. ಕತೆಯಲ್ಲಿ ಮೂರು ಮುಖ್ಯ ಪಾತ್ರಗಳು ಕಾಣಿಸಿಕೊಳ್ಳುತ್ತವೆ.  ಪಾರ್ಥ ಎನ್ನುವ ಇಂಜಿನಿಯರ್ ಇಂದಿನ ಯುವಜನಾಂಗದ ಪ್ರತಿನಿಧಿಯಾಗಿ ಬರುತ್ತಾರೆ. ಸದರಿ ಪಾತ್ರದಲ್ಲಿ ನಾಯಕ ಪ್ರವೀಣ್‌ತೇಜ್  ೨೬,೨೮,೩೦ ಮತ್ತು ೩೨ ವಯಸ್ಸಿನ ನಾಲ್ಕು ಶೇಡ್‌ಗಳಲ್ಲಿ ವರ್ತಮಾನ, ಭೂತ,ಭವಿಷ್ಯತ್ ಕಾಲದಲ್ಲಿ ಇರುವಂತೆ ನಟಿಸಿದ್ದಾರೆ.  ವೃತ್ತಿಯಲ್ಲಿ ಕುಂಚ ಕಲಾವಿದೆ. ತನಗೆ ಹೊಂದಿಕೊಳ್ಳುವಂತ ಗುಣ ಇರುವ ಹುಡುಗ ಸಿಕ್ಕರೆ ಮದುವೆಯಾಗುವ ಬಯಕೆ ಹೊಂದಿರುವ ಮೀರಾಳಾಗಿ ....

408

Read More...

Gift Box.Film Trailor Rel.

Monday, November 18, 2019

ಎರಡು  ಗಂಭೀರ ವಿಷಯಗಳ  ಕಥನ            ಮಾನವ ಕಳ್ಳ ಸಾಗಾಣಿಕೆ ಮತ್ತು ಲಾಕ್‌ಡ್ ಇನ್ ಸಿಂಡ್ರೋಮ್ ಎನ್ನುವ ನರರೋಗ ಸಮಸ್ಯೆ ಕುರಿತಾದ ಕತೆಯು ‘ಗಿಫ್ಟ್ ಬಾಕ್ಸ್’ ಚಿತ್ರದಲ್ಲಿ ತೋರಿಸಲಾಗಿದೆ. ಸವಾಲು, ಹೋರಾಟ ಮತ್ತು ಬೆಳವಣಿಗೆಗಳು ಜೀವನದಲ್ಲಿ ಬರುವ ಕಷ್ಟಗಳು.  ಇವು ಒಂದಕ್ಕೊಂದು ನಂಟು ಹೊಂದಿರುವ ಘಟನೆಗಳು, ಭಯಾನಕ ಅನುಭವಗಳು, ಸಂಬಂದಗಳ ನಡುವೆ ಸಂಬಂದವಿಲ್ಲದ ಸಂವಹನ, ಮಾನವ ಜೀವನದ ಅನಾವರಣವನ್ನು ಹೇಳ ಹೊರಟಿದೆ.  ಸನ್ನಿವೇಶಗಳು ನೈಜವಾಗಿರಲೆಂದು ಮಾನವ ಕಳ್ಳ ಸಾಗಾಣಿಕೆ ಮಾಡಿದ್ದಕ್ಕೆ ಶಿಕ್ಷೆ ಅನುಭವಿಸಿ ಹೊರಬಂದವನಿಂದ ಮಾಹಿತಿ  ಪಡೆದುಕೊಂಡು ಅದರಂತೆ ದೃಶ್ಯಗಳನ್ನು ರೂಪಿಸಲಾಗಿದೆ. ಪಲ್ಲಟ ಚಿತ್ರಕ್ಕೆ ೨೦೧೬ರ ರಾಜ್ಯ ಪ್ರಶಸ್ತಿ ಪಡೆದ ....

420

Read More...

Kabja.Film Pooja and Press Meet.

Monday, November 18, 2019

ಕಬ್ಜ ಮಹೂರ್ತಕ್ಕೆ ಚಾಲನೆ          ಉಪೇಂದ್ರ,  ಆರ್.ಚಂದ್ರು ಕಾಂಬಿನೇಶನ್‌ದಲ್ಲಿ  ವಿಭಿನ್ನತೆ, ವಿಶೇಷತೆ ಇರುವ ‘ಕಬ್ಜ’ ಚಿತ್ರವು ಏಳು ಭಾಷೆಗಳಾದ ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಹಿಂದಿ, ಮರಾಠಿ ಮತ್ತು ಬೆಂಗಾಲಿ ಭಾಷೆಗಳಲ್ಲಿ ಸಿದ್ದಗೊಳ್ಳುತ್ತಿರುವುದು ಸುದ್ದಿಯಾಗಿತ್ತು. ಕತೆಯು ೮೦ರ ದಶಕದ ಭೂಗತಲೋಕವನ್ನು ಹೇಳಲಿದೆ. ಹಾಗಂತ ಒಂದೇ ರಾಜ್ಯದ ಕತೆಯಾಗಿರದೆ ಎಲ್ಲಾ ಕಡೆ ಅನ್ವಯವಾಗುವಂತೆ ಚಿತ್ರಕತೆ ರೂಪಿಸಲಾಗಿದೆ. ಹೊಸ ರೀತಿಯ ಭೂಗತಲೋಕದ ನೋಟವೆಂದು ಇಂಗ್ಲೀಷ್ ಅಡಿಬರಹವಿದೆ. ಮೊದಲು ಒಂದು ಏಳೆಯನ್ನು ಶಿವರಾಜ್‌ಕುಮಾರ್‌ಗೆ ಹೇಳಿದಾಗ ಇದೊಂದು ಇಂಡಿಯನ್ ಸಿನಿಮಾವಾಗುತ್ತದೆಂದು ಪ್ರಶಂಸೆ ವ್ಯಕ್ತಿಪಡಿಸಿದರು. ನಂತರ ಉಪೇಂದ್ರ ಕೇಳಿ ಇವತ್ತಿನ ....

387

Read More...
Copyright@2018 Chitralahari | All Rights Reserved. Photo Journalist K.S. Mokshendra,