ಒಂದು ಸುಂದರ ದೆವ್ವದ ಕಥೆ ಚಿತ್ರಕ್ಕೆ ಲೀಲಾವತಿ ದೇಗುಲದಲ್ಲಿ ಚಾಲನೆ ಆರ್ಯ ಫಿಲಂಸ್ ಲಾಂಛನದಲ್ಲಿ ಆರ್. ಲಕ್ಷ್ಮಿ ನಾರಾಯಣಗೌಡ್ರು ನಿರ್ಮಿಸುತ್ತಿರುವ, ನೃತ್ಯ ಸಂಯೋಜಕ ಎಂ.ಆರ್. ಕಪಿಲ್ ಅವರು ನಿರ್ದೇಶಿಸುತ್ತಿರುವ ಒಂದು ಸುಂದರ ದೆವ್ವದ ಕಥೆ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಭೈರನಹಳ್ಳಿ ಬಳಿ ಇರುವ ಹಿರಿಯನಟಿ ಲೀಲಾವತಿ ಅವರ ಸ್ಮಾರಕದ ಮುಂದೆ ನೆರವೇರಿತು. ಚಿತ್ರದ ಮುಹೂರ್ತ ದೃಶ್ಯಕ್ಕೆ ನಟ ವಿನೋದ್ ರಾಜ್ ಅವರು ಕ್ಲಾಪ್ ಮಾಡಿದರು. ಫಿಲಂ ಚೆಂಬರ್ ಅಧ್ಯಕ್ಷ ನರಸಿಂಹಲು, ವೆಂಕಟೇಶ್ , ಬಾಮ ಹರೀಶ್, ನಟ ಪ್ರಥಮ್ ಹಾಗೂ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು. ಈಗಾಗಲೇ ದಾಸರಹಳ್ಳಿ, ಹಸಿವು, ದೇವದೂತದಂಥ ವಿಭಿನ್ನ ಚಿತ್ರಗಳನ್ನು ....
*'ಮೆಟ್ರೋ...ಇನ್ ದಿನೋ’ ಚಲನಚಿತ್ರ ತಂಡದಿಂದ ಬೆಂಗಳೂರಿನಲ್ಲಿ ಪ್ರಚಾರ*
ಅನುರಾಗ್ ಬಸು ನಿರ್ದೇಶನದ ಬಹು ನಿರೀಕ್ಷಿತ ಚಲನಚಿತ್ರ ‘ಮೆಟ್ರೋ...ಇನ್ ದಿನೋ’ ತಂಡವು ಜೂನ್ 24 ರಂದು ಬೆಂಗಳೂರಿಗೆ ಆಗಮಿಸಿತ್ತು. ಆದಿತ್ಯ ರಾಯ್ ಕಪೂರ್ ಮತ್ತು ಸಾರಾ ಅಲಿ ಖಾನ್, ಪ್ರೀತಮ್, ಗಾಯಕ ಶಶ್ವತ್ ಸಿಂಗ್ ಅವರು ಈ ಪ್ರಚಾರದಲ್ಲಿ ಭಾಗವಹಿಸಿದ್ದರು.
ಹಂಸಲೇಖ ನಿರ್ದೇಶನದ ‘ಓಕೆ’ ಸಿನಿಮಾಗೆ ರವಿಚಂದ್ರನ್ ಹಾರೈಕೆ; ಕಥೆಗಳಲ್ಲಿ ಕನ್ನಡದ DNA ಇದ್ರೆ ಜನ ಚಿತ್ರ ನೋಡ್ತಾರೆ ಎಂದ ನಾದಬ್ರಹ್ಮ ಕನ್ನಡ ಚಿತ್ರರಂಗದ ದಿಗ್ಗಜರೊಬ್ಬರಲ್ಲಿ ಒಬ್ಬರು ಹಂಸಲೇಖ. ಸಂಗೀತ ನಿರ್ದೇಶಕರಾಗಿ, ಚಿತ್ರ ಸಾಹಿತಿಯಾಗಿ ಗೆದ್ದಿರುವ ಹಂಸಲೇಖ ಈಗ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಹಂಸಲೇಖ ಈಗ ಡೈರೆಕ್ಟರ್ ಕುರ್ಚಿ ಅಲಂಕರಿಸಿದ್ದು, ‘ಓಕೆ’ ಎಂಬ ಚಿತ್ರ ನಿರ್ದೇಶನಕ್ಕೆ ಇಳಿದಿದ್ದಾರೆ. ‘ಓಕೆ’ ಚಿತ್ರದ ಲಾಂಚ್ ಹಾಗೂ ಸುದ್ದಿಗೋಷ್ಠಿ ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕ್ರೇಜಿಸ್ಟಾರ್ ರವಿಚಂದ್ರನ್ ವಿಶೇಷ ಅತಿಥಿಯಾಗಿ ಹಂಸಲೇಖ ಸಿನಿಮಾಗೆ ಸಾಥ್ ಕೊಟ್ಟರು. ಬಳಿಕ ....
*ಭರವಸೆಯೇ ಬದುಕಿನ ಹೊಸಬೆಳಕು* ಮನ ಸೆಳೆಯುವ ಶೀರ್ಷಿಕೆ *ಭರವಸೆ* ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಉಚ್ಚ ನ್ಯಾಯಲಯದ ವಕೀಲರು, ಸರ್ಕಾರಿ ಅಧಿಕಾರಿಗಳು, ರಾಜಕೀಯ ಧುರೀಣರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ’ಪ್ರೀತ್ಸೋ ಹೃದಯಕ್ಕೆ’ ಎಂಬ ಕ್ಯಾಚಿ ಅಡಬರಹ ಇರಲಿದೆ. ಆರ್.ಆರ್.ಮೂವೀ ಮೇಕರ್ಸ್ ಅಡಿಯಲ್ಲಿ ಶಿವಮೊಗ್ಗದ ಕಂಟ್ರಾಕ್ಟರ್, ಉದ್ಯಮಿ ನಾಗರಾಜ್ ಅವರು ಪತ್ನಿ ಲಕ್ಷೀನಾಗರಾಜ್ ಹೆಸರಿನಲ್ಲಿ ನಿರ್ಮಾಣ ಮಾಡಿರುವುದು ಹೊಸ ಅನುಭವ. ಮುತ್ತು ಗಂಗೂರ ಸಿನಿಮಾಕ್ಕೆ ಕಥೆ,ಚಿತ್ರಕಥೆ, ಸಂಭಾಷಣೆ ಬರೆದು ಮೊದಲ ಬಾರಿ ನಿರ್ದೇಶನ ಮಾಡಿದ್ದಾರೆ. ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ "ಅಪ್ಪು ಕಪ್ ಸೀಸನ್ 3" ಗೆ ಅದ್ದೂರಿ ಚಾಲನೆ* . ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ "ಅಪ್ಪು ಕಪ್"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಎರಡು ಸೀಸನ್ ಅದ್ದೂರಿಯಾಗಿ ನಡೆದಿದೆ. ಜುಲೈನಲ್ಲಿ " ಅಪ್ಪು ಕಪ್ ಸೀಸನ್ 3" ಲೀಗ್ ಪಂದ್ಯಗಳು ಆರಂಭವಾಗಲಿದೆ. ಇತ್ತೀಚೆಗೆ "ಅಪ್ಪು ಕಪ್ ಸೀಸನ್ 3" ಉದ್ಘಾಟನೆ ಹಾಗೂ ಟೀಮ್ ಆಕ್ಷನ್ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಅಶ್ವಿನಿ ಪುನೀತ್ ರಾಜಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸರವಣ, ಕನ್ನಡಪರ ಹೋರಾಟಗಾರರಾದ ಸಾ.ರಾ.ಗೋವಿಂದು ಹಾಗೂ ಶಾಸಕರಾದ ರಾಜು ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ....
ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನೋತ್ಸವವನ್ನು ’ಯಜಮಾನರ ಅಮೃತ ಮಹೋತ್ಸವ’ವೆಂದು ಆಚರಿಸಲು ಡಾ. ವಿಷ್ಣು ಸೇನಾ ಸಮಿತಿಯು ನಿರ್ಧರಿಸಿದೆ. ಈ ಅಮೃತ ಮಹೋತ್ಸವದ ನೇತೃತ್ವವನ್ನು ಖ್ಯಾತ ಚಲನಚಿತ್ರ ನಿರ್ದೇಶಕರು ಮತ್ತು ಡಾ. ವಿಷ್ಣುವರ್ಧನ್ ಅವರ ಆಪ್ತರೂ ಆದಂತಹ ಎಸ್. ನಾರಾಯಣ್ ಅವರು ವಹಿಸಿಕೊಂಡಿದ್ದು, ಮಾರ್ಗದರ್ಶಕರಾಗಿ ಎಸ್. ವಿ. ರಾಜೇಂದ್ರಸಿಂಗ್ ಬಾಬು ಅವರು ಜೊತೆಯಾಗಿದ್ದಾರೆ. ಈ ವಿಷಯವಾಗಿ ಇಂದು (22-06-2025) ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿಯನ್ನು ಕರೆಯಲಾಗಿತ್ತು. ಈ ಗೋಷ್ಠಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾದ ಶ್ರೀ ನರಸಿಂಹಲು, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಉಮೇಶ್ ಬಣಕಾರ್, ಮತ್ತೊಬ್ಬ ನಿರ್ಮಾಪಕರಾದ ರಮೇಶ್ ....
*ದಿಗ್ಗಜ ಕಲಾವಿದರ ಅಭಿಮಾನಿಗಳಿಂದ ಫಸ್ಟ್ ಡೇ ಫಸ್ಟ್ ಶೋ ಟ್ರೇಲರ್ ರಿಲೀಸ್...ಕನ್ನಡ ಚಿತ್ರರಂಗದ ಸುತ್ತ ಸಾಗುವ ಸಿನಿಮಾ* *ಗಿರೀಶ್ ಹೊಸ ಪ್ರಯತ್ನದ ಫಸ್ಟ್ ಡೇ ಫಸ್ಟ್ ಶೋ ಟ್ರೇಲರ್ ರಿಲೀಸ್* ಕನ್ನಡ ಚಿತ್ರರಂಗ ನಿಧಾನವಾಗಿ ಬದಲಾಗುತ್ತಿದೆ. ಜನ ಥಿಯೇಟರ್ ಗೆ ಬರ್ತಿಲ್ಲ. ಮನೆಮಂದಿ ಕುಳಿತು ಒಟಿಟಿಯಲ್ಲಿಯೇ ಸಿನಿಮಾ ನೋಡುವ ಕಾಲಘಟ್ಟಕ್ಕೆ ತಲುಪಿದ್ದೇವೆ. ಹೀಗಾಗಿ ಚಿತ್ರಮಂದಿರದ ಸಂಪ್ರದಾಯ ಕೊಂಚವಾಗಿ ಮರೆಯುತ್ತಿದೆ ಎಂದರೆ ತಪ್ಪಾಗಲಿಕ್ಕಿಲ್ಲ. ಅದರಲ್ಲಿಯೂ ಫಸ್ಟ್ ಡೇ ಫಸ್ಟ್ ಶೋ ಎಂಬ ಸಂಸ್ಕೃತಿ ಇತ್ತೀಚೆಗೆ ಕಡಿಮೆಯಾಗುತ್ತಿದೆ. ಈ ಬೆಳವಣಿಗೆ ನಡುವೆ ಕನ್ನಡ ಚಿತ್ರರಂಗದ ಸುತ್ತ ಸಾಗುವ ಫಸ್ಟ್ ಡೇ ಫಸ್ಟ್ ಶೋ ಎಂಬ ಚಿತ್ರವೀಗ ....
ಫ್ಯಾಮಿಲಿ ಥ್ರಿಲ್ಲರ್ ಚಿತ್ರದಲ್ಲಿ ಕೃಷ್ಣ ಅಜಯರಾವ್ ಯೋಗರಾಜ ಭಟ್- ದಿನಕರ್ ಚಾಲನೆ ನನ್ ಮಗಳೇ ಹೀರೋಯಿನ್ ಸೇರಿದಂತೆ ಹಲವು ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್.ಕೆ. ಬಾಹುಬಲಿ ಇದೀಗ ಕೃಷ್ಣ ಅಜೇಯ್ ರಾವ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪಿ.ಕೆ. ಪ್ರೊಡಕ್ಷನ್ಸ್ ಮೂಲಕ ನಿರ್ಮಾಪಕ ಕಿರಣ್ ಅವರು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಪ್ರಥಮ ದೃಶ್ಯಕ್ಕೆ ಯೋಗರಾಜ ಭಟ್ಟರು ಕ್ಲಾಪ್ ಮಾಡಿದರೆ, ದಿನಕರ್ ತೂಗುದೀಪ ಕ್ಯಾಮೆರಾ ಚಾಲನೆ ಮಾಡಿದರು. ನಿರ್ದೇಶಕ ಎಂ.ಡಿ. ಶ್ರೀಧರ್, ಎಸ್. ನಾರಾಯಣ್, ಶಿವತೇಜಸ್ ....
*ಶಿವಣ್ಣ, ರಮ್ಯಾ, ಧ್ರುವ ಸರ್ಜಾ ಸಾಥ್ ಕೊಟ್ಟ ‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ* ವಿಶೇಷ ಕಥಾಹಂದರ ಹೊಂದಿದ್ದ ‘ಪಪ್ಪಿ’ ಸಿನಿಮಾ ಬಿಡುಗಡೆಯಾಗಿ 50 ದಿನ ಪೂರೈಸಿದೆ. ಈ ಖುಷಿಯಲ್ಲಿ ಚಿತ್ರತಂಡ ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಂಡಿತ್ತು. 50 ದಿನ ಸಂಭ್ರಮದ ಕಾರ್ಯಕ್ರಮಕ್ಕೆ ನಿರ್ಮಾಪಕರಾದ ಯೋಗಿ ಜಿ ರಾಜ್, ನಾಯಕಿ ಸಂಜನಾ ಆನಂದ್ ಸಾಥ್ ಕೊಟ್ಟರು. ಇದೇ ವೇಳೆ ಇಡೀ ಚಿತ್ರತಂಡ ಕಾರ್ಯಕ್ರಮದಲ್ಲಿ ಹಾಜರಾಗಿತ್ತು. ಈ ವೇಳೆ ಮಾತನಾಡಿದ ಕೆಆರ್ ಜಿ ಸ್ಟುಡಿಯೋದ ಯೋಗಿ ಜಿ ರಾಜ್, ಪಪ್ಪಿ ಸಿನಿಮಾ ಒಂದೊಳ್ಳೆ ಜರ್ನಿ. ಚಿತ್ರದ ಟ್ರೇಲರ್ ನ್ನು ಸತ್ಯಹೆಗ್ಡೆ ಸರ್ ಕಳಿಸಿದ್ರು. ನೋಡಿ ಚೆನ್ನಾಗಿದೆ ಎಂದರು. ಟ್ರೇಲರ್ ....
*ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಕಥಾಹಂದರವನ್ನು ನಮ್ಮ "X&Y" ಚಿತ್ರ ಹೊಂದಿದೆ ನಿರ್ದೇಶಕ ಡಿ.ಸತ್ಯಪ್ರಕಾಶ್* . "ರಾಮಾ ರಾಮಾ ರೇ" ಖ್ಯಾತಿಯ ನಿರ್ದೇಶಕ ಡಿ.ಸತ್ಯಪ್ರಕಾಶ್ "ಒಂದಲ್ಲಾ ಎರಡಲ್ಲಾ" ಮತ್ತು "ಮ್ಯಾನ್ ಆಫ್ ದಿ ಮ್ಯಾಚ್ " ಚಿತ್ರಗಳ ಮೂಲಕ ಜನಪ್ರಿಯರಾದವರು. ಪ್ರಸ್ತುತ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ಚಿತ್ರ "X&Y". ಇತ್ತೀಚೆಗೆ ಈ ಚಿತ್ರದ ಹಾಡು ಬಿಡುಗಡೆ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಡಿ.ಸತ್ಯಪ್ರಕಾಶ್, ವಿಭಿನ್ನ ಕಥಾಹಂದರ ಹೊಂದಿರುವ " X&Y", ನನ್ನ ನಿರ್ದೇಶನದ ನಾಲ್ಕನೇ ಚಿತ್ರ. ಚಿತ್ರದ ಮತ್ತೊಂದು ....
ಕಪಟ ನಾಟಕ ಸೂತ್ರಧಾರಿಯ ಟ್ರೈಲರ್ ಬಿಡುಗಡೆ! ಧೀರಜ್ ಎಂ.ವಿ ನಿರ್ದೇಶನದ, ಅಭಿರಾಮ ಅರ್ಜುನ ಬ್ಯುಸಿನೆಸ್ ಹೆಡ್ ಆಗಿ ಕಾರ್ಯನಿರ್ವಹಿಸಿರುವ ಕಪಟ ನಾಟಕ ಸೂತ್ರಧಾರಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಜುಲೈ ೪ರಂದು ತೆರೆಗಾಣಲಿರುವ ಈ ಸಿನಿಮಾದ ಪ್ರಧಾನ ಕಥಾ ಸುಳಿವೊಂದು ಈ ಮೂಲಕ ಜಾಹೀರಾದಂತಾಗಿದೆ. ಭಾರತದ ಪ್ರಥಮ ನ್ಯೂ ಏಜ್ ಪೊಲಿಟಿಕಲ್ ಸಟೈರ್ ಸಿನಿಮಾ ಎಂಬುದೂ ಸೇರಿದಂತೆ ಒಂದಷ್ಟು ವಿಶೇಷತೆಗಳ ಮೂಲಕ ಗಮನ ಸೆಳೆದುಕೊಂಡಿದ್ದ ಚಿತ್ರವಿದು. ಬಿಡುಗಡೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಚಿತ್ರತಂಡ ಟ್ರೈಲರ್ ಅನ್ನು ಪ್ರೇಕ್ಷಕರ ಮುಂದಿಟ್ಟಿದೆ. ನಮ್ಮ ಸಮಾಜದಲ್ಲಿನ ಪ್ರಸ್ತುತ ಸ್ಥಿತಿಗತಿಗತಿಗಳನ್ನು ಕಣ್ಣೆದುರು ತರುವಂಥಾ ದೃಶ್ಯಗಳ ಮೂಲಕ ಈ ಟ್ರೈಲರ್ ಒಂದಷ್ಟು ಚರ್ಚೆಗೆ ....
ದೆವ್ವದ ಮನೆಯೊಳಗೆ ಊಹಿಸಲಾಗದ ಘಟನೆ : ಒಮೆನ್ ನಲ್ಲಿ ಫೌಂಡ್ ಫುಟೇಜ್ ಸ್ಟೈಲ್
ಚಂದನವನದಲ್ಲಿ ಒಳ್ಳೊಳ್ಳೆ ಸಿನಿಮಾಗಳು ಬರ್ತಾನೆ ಇರ್ತಾವೆ. ವಿಭಿನ್ನ ಕಂಟೆಂಟ್ ಗಳನ್ನೊಳಗೊಂಡ ಸಿನಿಮಾಗಳು ವೀಕ್ಷಕರ ಮುಂದೆ ತೆರೆದುಕೊಳ್ಳುತ್ತವೆ. ಅಂಥದ್ದೊಂದು ಸಿನಿಮಾ ಇದೀಗ ಗಾಂಧಿನಗರದಲ್ಲಿ ಎಲ್ಲರ ಚಿತ್ತ ಕದ್ದಿದೆ. ಅದುವೆ ಒಮೆನ್. ಹೆಸರು ಕೇಳುವುದಕ್ಕೇನೆ ವಿಭಿನ್ನವಾಗಿದೆ ಅಂತ ಅನ್ನಿಸೋದು ಸುಳ್ಳಲ್ಲ. ಕಥೆ ಕೂಡ ಅಷ್ಟೇ ವಿಭಿನ್ನವಾಗಿದೆ.
*ಪ್ರಚಾರ ಅಖಾಡದಲ್ಲಿ ಎಕ್ಕ...ಜುಲೈ 18ಕ್ಕೆ ಯುವರಾಜ್ ಕುಮಾರ್ ಸಿನಿಮಾ ರಿಲೀಸ್* *ಯುವ ’ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್...ಜುಲೈ 18ಕ್ಕೆ ಚಿತ್ರ ರಿಲೀಸ್* ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗದ ಭರವಸೆಯ ನಟನಾಗಿ ಗುರುತಿಸಿಕೊಂಡಿದ್ದು, ಸದ್ಯ ತಮ್ಮ ಎರಡನೇ ಸಿನಿಮಾ ಬಿಡುಗಡೆಯಲ್ಲಿ ಬ್ಯುಸಿಯಾಗಿದ್ದಾರೆ. ಯುವ ನಟನೆಯ ‘ಎಕ್ಕ’ ಸಿನಿಮಾ ಚಿತ್ರೀಕರಣ ಮುಗಿಸಿದ್ದು ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾದ ಪ್ರಚಾರ ಕಾರ್ಯ ಪ್ರಾರಂಭ ಆಗಿದೆ. ಟೀಸರ್ , ಹಾಡುಗಳು ಬಿಡುಗಡೆಯಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ‘ಎಕ್ಕ’ ಸಿನಿಮಾದ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ....
ಪಕ್ಕಾ ಉಡಾಳನಾಗಿ ಬರ್ತಿದ್ದಾರೆ ಚಂದನ್ ರಾಜ್ ’ರಾಜರತ್ನಾಕರ’ ಟ್ರೇಲರ್ ರಿಲೀಸ್ ಚೌಮುದ ಬ್ಯಾನರ್ ನಡಿ ಜಯರಾಮ ಸಿ.ಮಾಲೂರು ಅವರು ಮೊದಲ ಬಾರಿಗೆ ಸಿನಿಮಾ ನಿರ್ಮಾಣ ಮಾಡಿದ್ದು, ರಾಜರತ್ನಾಕರ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಟ್ರೇಲರ್ ರಿಲೀಸ್ ಆಗಿದ್ದು, ಚಂದನ್ ರಾಜ್ ಪಕ್ಕಾ ಉಡಾಳನಾಗಿ ಕಾಣಿಸಿಕೊಂಡಿದ್ದಾರೆ. ದುಡಿಬೇಕು ಅನ್ನೋದೆಲ್ಲ ಏನಿಲ್ಲ. ದುಡ್ ಮಾಡ್ಬೇಕು ಅಷ್ಟೇ. ಅದು ಫ್ಯಾಮಿಲಿನ ಇಕ್ಕಟ್ಟಿಗೆ ಸಿಲುಕಿಸಿಯಾದರೂ ಸರಿ ಎಂಬ ಬುದ್ದಿ ಇರುವವನೇ ನಾಯಕ ನಟ. ಸಿನಿಮಾದ ನಾಯಕಿಯಾಗಿ ಅಪ್ಸರಾ ಕಾಣಿಸಿಕೊಂಡಿದ್ದಾರೆ. ಆದರೆ ಅಪ್ಸರಾ ಸಿನಿಮಾ ರಿಲೀಸ್ ಗೂ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಇಡೀ ತಂಡ ಅಪ್ಸರಾ ಅವರಿಗೆ ಕಂಬನಿ ....
*ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ "ಪೆನ್ ಡ್ರೈವ್" ಚಿತ್ರ ಜುಲೈ 4 ರಂದು ಬಿಡುಗಡೆ* . *ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ* . ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ "ಬಿಗ್ ಬಾಸ್" ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ "ಪೆನ್ ಡ್ರೈವ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ....
ಸಸ್ಪೆನ್ಸ್ ಥ್ರಿಲ್ಲರ್ ಉಸಿರು ಟೀಸರ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರುಗಳು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ, ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ, ಅಂಥವರಲ್ಲಿ ಆರ್.ಎಸ್.ಪಿ. ಪ್ರೊಡಕ್ಷನ್ಸ್ ನ ಲಕ್ಷ್ಮಿ ಹರೀಶ್ ಕೂಡ ಒಬ್ಬರು. ಆರ್ಎಸ್ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ ಅವರು ತಮ್ಮ ಆರ್ಎಸ್ಪಿ ಪ್ರೊಡಕ್ಷನ್ ಮೂಲಕ ಸಸ್ಪೆನ್ಸ್ , ಥ್ರಿಲ್ಲರ್ ಕಥಾಹಂದರ ಒಳಗೊಂಡ ಉಸಿರು ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ, ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ, ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ....
*ಡೆಡ್ಲಿ ಲವರ್ಸ್ ಟ್ರೇಲರ್ ಬಿಡುಗಡೆ* ಕ್ಯಾಚಿ ಟೈಟಲ್ ಹೊಂದಿರುವ *ಡೆಡ್ಲಿ ಲವರ್ಸ್* ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ’ಹುಲಿಯಾ’ ನಿರ್ಮಾಪಕ ಗೋವಿಂದರಾಜ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. *ನಾಗೇಂದ್ರ ಕಥೆ,ಚಿತ್ರಕಥೆ,ಸಂಭಾಷಣೆ,ಸಂಕಲನ, ನಿರ್ದೇಶನ ಜತೆಗೆ ಅನಘ ಎಂಟರ್ ಪ್ರೈಸಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ* ಅಖಿಲ್ ಕುಮಾರ್ ನಾಯಕ. ನವಪ್ರತಿಭೆ ತನುಪ್ರಸಾದ್ ನಾಯಕಿ. ಎಸಿಪಿಯಾಗಿ ಪ್ರೇಮಾಗೌಡ, ತಂದೆಯಾಗಿ ಭಾಸ್ಕರ್, ದುರಳನಾಗಿ ವಿನೋಧ್, ಗೃಹ ಮಂತ್ರಿಯಾಗಿ ಲಹರಿವೇಲು, ಎ.ಆರ್.ಲೋಕೇಶ್ ಮುಂತಾದವರು ನಟಿಸಿದ್ದಾರೆ. ಸಂಗೀತ ಲಯಕೋಕಿಲ, ಛಾಯಾಗ್ರಹಣ ಹೆಚ್.ಎನ್.ನರಸಿಂಹಮೂರ್ತಿ, ....
*ಉತ್ತರ ಕರ್ನಾಟಕ ಪ್ರತಿಭೆಗಳ ಹೆಬ್ಬುಲಿ ಕಟ್ ಟ್ರೇಲರ್ ರಿಲೀಸ್..ಸಿನಿಮಾ ಪ್ರೆಸೆಂಟ್ ಮಾಡುತ್ತಿರುವ ಸತೀಶ್ ನೀನಾಸಂ* *ಟ್ರೇಲರ್ನಲ್ಲಿ ಹೆಬ್ಬುಲಿ ಕಟ್...ಜುಲೈ 4ಕ್ಕೆ ಸಿನಿಮಾ ರಿಲೀಸ್* ತನ್ನ ಕಂಟೆಂಟ್ ಮೂಲಕ ಸುದ್ದಿ ಮಾಡುತ್ತಿರುವ ಸಿನಿಮಾ ಹೆಬ್ಬುಲಿ ಕಟ್. ಜುಲೈ 4ರಂದು ತೆರೆಗೆ ಬರ್ತಿರುವ ಉತ್ತರ ಕರ್ನಾಟಕ ಭಾಗದ ಪ್ರತಿಭೆಗಳ ಈ ಚಿತ್ರಕ್ಕೆ ಸತೀಶ್ ನೀನಾಸಂ ಸಾಥ್ ಕೊಟ್ಟಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್ನಡಿ ಹೆಬ್ಬುಲಿ ಕಟ್ ಚಿತ್ರ ಅರ್ಪಿಸುತ್ತಿದ್ದಾರೆ. ನಿನ್ನೆ ಬೆಂಗಳೂರಿನ ಮಲ್ಲೇಶ್ವರಂ ಎಸ್ ಆರ್ ವಿ ಚಿತ್ರಮಂದಿರದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಟ ನವೀಶ್ ಶಂಕರ್, ಸತೀಶ್ ನೀನಾಸಂ ....
'ಪ್ರಪಂಚವನ್ನು ಮೆಟ್ಟಿನಿಂತ ಮಾನವ’ ’ಸೆಪ್ಟೆಂಬರ್ 10' ಮೋಟಿವೇಷನ್ ಸಾಂಗ್ ಎಲ್ಲಾ ಸಮಸ್ಯೆಗಳಿಗೂ ಆತ್ಮಹತ್ಯೆ ಒಂದೇ ಪರಿಹಾರವಲ್ಲ,ಯೋಚನೆ ಮಾಡಿದಾಗ ಅದಕ್ಕೆ ಒಂದಲ್ಕ ಒಂದು ಪರಿಹಾರ ಸಿಕ್ಕೇ ಸಿಗುತ್ತೆ ಎಂಬ ಸಮಾಜಮುಖಿ ಸಂದೇಶ ಇಟ್ಟುಕೊಂಡು 105 ಸಿನಿಮಾಗಳನ್ನು ನಿರ್ದೇಶಿಸಿದ ಓಂ ಸಾಯಿ ಪ್ರಕಾಶ್ ಅವರು ಡೈರೆಕ್ಷನ್ ಮಾಡಿರುವ ಮತ್ತೊಂದು ಚಿತ್ರ ’ಸೆಪ್ಟೆಂಬರ್ 10' ಈ ಚಿತ್ರಕ್ಕಾಗಿ ಡಾ.ವಿ. ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಮೋಟೊವೇಶನಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕೇಂದ್ರ ಕಿಸಾನ್ ಸಮಿತಿಯ ನಿರ್ದೇಶಕರಾದ ಆರ್.ಎಸ್.ರಾಜು ಅವರು ಈ ಹಾಡನ್ನು ಬಿಡುಗಡೆಗೊಳಿಸಿ ಮಾತನಾಡುತ್ತ ನನ್ನ ಗುರುಗಳಾದ ....
ಇದೇ ಜೂನ್ 20ರಂದು "ಕಾಲವೇ ಮೋಸಗಾರ" ಚಿತ್ರ ಬಿಡುಗಡೆ. ಈ ಚಿತ್ರದ ಟ್ರೈಲರ್ ಹಾಗೂ ಪ್ರೋಮೋ ಸಾಂಗ್ ಬಿಡುಗಡೆ ಮಾಡಿದ ನಟ ವಸಿಷ್ಠ ಸಿಂಹ ಮತ್ತು ಕೆಂಪೇಗೌಡ ಸೇನೆಯ ರಾಜ್ಯಾಧ್ಯಕ್ಷ ರವಿ ಕುಮಾರ್ , ಸೇನೆಯ ಮಹಿಳಾ ಅಧ್ಯಕ್ಷೆ ಲಕ್ಷ್ಮೀ. ಸ್ಯಾಂಡಲ್ ವುಡ್ ಗೆ ಯುವ ಪ್ರತಿಭೆಗಳ ತಂಡ ಸೇರಿಕೊಂಡು ಒಂದು ಸೈಲೆಂಟ್ ಲವ್ ಸ್ಟೋರಿ ಯಲ್ಲಿ ವೈಲೆಂಟ್ ಅಂಶವನ್ನ ಸೇರಿಸಿಕೊಂಡು "ಕಾಲವೇ ಮೋಸಗಾರ" ಎಂಬ ಚಿತ್ರವನ್ನ ಸಿದ್ದಪಡಿಸಿ , ಈಗ ಚಿತ್ರದ ಟ್ರೈಲರ್ ಹಾಗೂ ಪ್ರೋಮೋ ಸಾಂಗ್ ಬಿಡುಗಡೆ ಕಾರ್ಯಕ್ರಮವನ್ನು ಜಿ.ಟಿ. ಮಾಲ್ ನಲ್ಲಿರುವ ಎಂ.ಎಂ. ಬಿ ಲೆಗಸಿಯಲ್ಲಿ ಆಯೋಜನೆ ಮಾಡಿತು. ಈ ಒಂದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಂಚಿನ ಕಂಠದ ನಟ ....