Black Sheep.News

Saturday, June 07, 2025

  *ಬ್ಲ್ಯಾಕ್ ಶೀಪ್ ಟೀಸರ್,ಟ್ರೈಲರ್ ಮತ್ತು ಹಾಡು*          ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ *ಬ್ಲ್ಯಾಕ್ ಶೀಪ್*  ಚಿತ್ರವೊಂದು ಬಿಡುಗಡೆಗೆ ಸಜ್ಜಾಗಿದೆ. ಪ್ರಚಾರದ ಮೊದಲ ಹಂತವಾಗಿ ಟೀಸರ್, ಟ್ರೇಲರ್ ಮತ್ತು ಹಾಡು ಅನಾವರಣ ಕಾರ್ಯಕ್ರಮ ಎಸ್‌ಆರ್‌ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ಮೂಲತ: ಡ್ಯಾನ್ಸರ್, ’ಹರೇ ರಾಮ ಹರೇ ಕೃಷ್ಣ’ದಲ್ಲಿ ಶೃತಿಹರಿಹರನ್, ’ದೇವ್ ಸನ್ ಆಫ್ ಮುದ್ದೆಗೌಡ’ದಲ್ಲಿ ಚಾರ್ಮಿಕೌರ್‌ಗೆ ಜೋಡಿ, ’ಎಲ್ಲಿಗೆ ಪಯಣ ಯಾವುದೋ ದಾರಿ’ ಚಿತ್ರಕ್ಕೆ ಡ್ಯಾನ್ಸ್ ಕೋರಿಯಾಗ್ರಾಫರ್ ಆಗಿದ್ದ *ಜೀವನ್ ಹಳ್ಳಿಕಾರ್* ಇದೆಲ್ಲಾ ಅನುಭವದಿಂದ ಈಗ ಸಿನಿಮಾಕ್ಕೆ *ರಚನೆ,ಚಿತ್ರಕಥೆ, ನಿರ್ದೇಶನ ಹಾಗೂ ನೃತ್ಯ ಸಂಯೋಜನೆ* ....

125

Read More...

Karikaada.News

Friday, June 06, 2025

   ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆ ಕಾರ್ಯಕ್ರಮ   ಮುಖ್ಯಾಂಶಗಳು •           ಖ್ಯಾತ ನಿರ್ದೇಶಕ ಸಂತೋಷ್ ಅನಂದ್ ರಾಮ್ ರಿಂದ ಕರಿಕಾಡ ಚಿತ್ರದ ಟೈಟಲ್ ಟೀಸರ್ ಬಿಡುಗಡೆ •           ಹೊಸ ತಂಡದ ಹೊಸ ಬಗೆಯ ಸಾಹಸಮಯ ದೃಶ್ಯಕಾವ್ಯಕ್ಕೆ ಸಂತೋಷ್ ಶುಭಹಾರೈಕೆ •           ಕರಿಕಾಡ ಚಿತ್ರದಲ್ಲಿ ಅಭಿನಯಿಸಿರೋ ದಿ.ರಾಕೇಶ್ ಪೂಜಾರಿ ಹಾಗೂ ಆರ್ .ಸಿ.ಬಿ ಸಂಭ್ರಮದ ದುರಂತದಲ್ಲಿ ಜೀವತೆತ್ತವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿ ಕಾರ್ಯಕ್ರಮ ಆರಂಭ •           ಕನ್ನಡ ಹಾಗೂ ತಮಿಳು ಎರಡೂ ಭಾಷೆಯಲ್ಲಿ ಬಿಡುಗಡೆಯಾಗಲಿರುವ ಕರಿಕಾಡ •           ಕರಿಕಾಡ ಚಿತ್ರದ ....

131

Read More...

Choobaana.News

Thursday, June 05, 2025

  *ಕಾಶಿ ವಿಶ್ವನಾಥನ ಸನ್ನಿದಿಯಲ್ಲಿ ಛೂ ಬಾಣ ಮುಹೂರ್ತ*    *ಛೂ ಬಾಣ* ಚಿತ್ರದ ಮುಹೂರ್ತ ಸಮಾರಂಭವು ಬಸವೇಶ್ವರ ನಗರದಲ್ಲಿರುವ ಕಾಶಿ ವಿಶ್ವನಾಥನ ಸನ್ನಿದಿಯಲ್ಲಿ ಅದ್ದೂರಿಯಾಗಿ ನಡೆಯಿತು. ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದರೆ, ಚಲನಚಿತ್ರ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಜೆ.ಜಿ.ಕೃಷ್ಣ ಕ್ಯಾಮಾರ ಚಾಲನೆ ಮಾಡಿ ತಂಡಕ್ಕೆ ಶುಭ ಹಾರೈಸಿದರು.         ಎಸ್.ಕೆ.ಭಾಷಾ ಫಿಲಂಸ್ ಅಡಿಯಲ್ಲಿ ವಿಜಯವಾಡದ ಇಂಜಿನಿಯರ್ *ಎಸ್.ಕೆ.ಫಿರೋಜ್‌ಭಾಷ ಬಂಡವಾಳ ಹೂಡುವುದರ ಜತೆಗೆ ನಾಯಕನಾಗಿ ಅಭಿನಯಿಸುತ್ತಿರುವುದು* ಹೊಸ ಅನುಭವ. *ಎಸ್.ಆರ್.ಪ್ರಮೋದ್ ಕಥೆ, ಸಾಹಿತ್ಯ ರಚಿಸಿ ಒಂಬತ್ತನೇ ಸಿನಿಮಾಕ್ಕೆ ನಿರ್ದೇಶನ* ....

123

Read More...

Guri.Film News

Sunday, June 01, 2025

*ಗುರಿ ಟೀಸರ್ ಮತ್ತು ಹಾಡುಗಳ ಲೋಕಾರ್ಪಣೆ*          80ರ ದಶಕದಲ್ಲಿ ಡಾ.ರಾಜ್‌ಕುಮಾರ್ ಅಭಿನಯಸಿದ್ದ *ಗುರಿ* ಚಿತ್ರವು ಸೂಪರ್ ಹಿಟ್ ಆಗಿತ್ತು. 4 ದಶಕದ ತರುವಾಯ ಇದೇ ಹೆಸರಿನಲ್ಲಿ ಸಿನಿಮಾವೊಂದು ಸದ್ದಿಲ್ಲದೆ ಸಿದ್ದಗೊಂಡಿದೆ. ’ನನ್ನ ಶಾಲೆಯನ್ನು ಪ್ರೀತಿಸುತ್ತೇನೆ’ ಎಂಬ ಅಡಿಬರಹ ಇಂಗ್ಲೀಷ್‌ನಲ್ಲಿ ಹೇಳಿಕೊಂಡಿದೆ. ವಿಷ್ಣುದುರ್ಗಾ ಪ್ರೊಡಕ್ಷನ್ ಅಡಿಯಲ್ಲಿ *ರಾಧಿಕಾ.ಎಸ್.ಆರ್ ಮತ್ತು ಚಿತ್ರಲೇಖಾ.ಎಸ್ ನಿರ್ಮಾಣ* ಮಾಡಿರುವುದು ಹೊಸ ಅನುಭವ. *ಸೆಲ್ವಂ ಮಾದಪ್ಪನ್ ಸಿನಿಮಾಕ್ಕೆ ಕಥೆ,ಚಿತ್ರಕತೆ, ಛಾಯಾಗ್ರಹಣ ಹಾಗೂ ನಿರ್ದೇಶನದ* ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಲಹರಿವೇಲು ಹೊಸದಾಗಿ ಸ್ಥಾಪನೆ ಮಾಡಿರುವ ’ಎಂಆರ್‌ಟಿ ಮ್ಯೂಸಿಕ್’ ಆಡಿಯೋ ಹಕ್ಕುಗಳನ್ನು ....

127

Read More...

Devssaya.Film News

Monday, June 02, 2025

  'ದೇವಸಸ್ಯ’ ಟೈಟಲ್ ಟೀಸರ್ ಬಿಡುಗಡೆ      ದೇವಸಸ್ಯ ಒಂದು ವಿಶಿಷ್ಠ ಕಥಾಹಂದರವನ್ನು ಹೇಳುವ ಹಾಗೂ ಅಪರೂಪದ ಗಿಡದ ಸುತ್ತ ನಡೆಯುವ ಘಟನೆಗಳ ಗುಚ್ಛ. ಬಹುತೇಕ ಉತ್ತರ ಕನ್ನಡದವರೇ ಸೇರಿ ಮಾಡಿರುವ ಪ್ಯಾನ್ ಇಂಡಿಯಾ  ಚಿತ್ರವಿದು. ಕನ್ನಡ, ತೆಲುಗು, ಹಿಂದಿ ಸೇರಿದಂತೆ 5 ಭಾಷೆಗಳಲ್ಲಿ ದೇಶಾದ್ಯಂತ ತೆರೆಗೆ ಬರುತ್ತಿದೆ.    ಅನಂತ ಫಿಲಂಸ್ ಅಡಿಯಲ್ಲಿ ಅನಂತಕುಮಾರ್ ಹೆಗ್ಡೆ ಅವರು ನಿರ್ಮಾಣ ಮಾಡಿರೋ ಈ ಚಿತ್ರಕ್ಕೆ ಕಾರ್ತೀಕ್ ಭಟ್ ಆಕ್ಷನ್ ಕಟ್ ಹೇಳಿದ್ದಾರೆ. ನಟ ನವೀನ್ ಕೃಷ್ಣ ಅವರು ಈ ಚಿತ್ರದ 5 ಭಾಷೆಯ ಟೀಸರನ್ನು ಬಿಡುಗಡೆ ಮಾಢಿದರು.      ವೇದಿಕೆಯಲ್ಲಿ ನಿರ್ದೇಶಕ ಕಾರ್ತೀಕ್ ಭಟ್ ಮಾತನಾಡಿ ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ....

151

Read More...

September 10.News

Monday, June 02, 2025

ಸೆಪ್ಟೆಂಬರ್ 10: ಎಲ್ಲಾ ಸಮಸ್ಯೆಗಳಿಗೆ  ಆತ್ಮಹತ್ಯೆ ಒಂದೇ ಪರಿಹಾರವಲ್ಲ     *  ಸಾಯಿಪ್ರಕಾಶ್ ನಿರ್ದೇಶನದ 105ನೇ ಚಿತ್ರ   ಜೀವನದಲ್ಲಿ ಎದುರಾಗುವಂಥ ಹಲವಾರು  ಸಮಸ್ಯೆಗಳಿಗೆ  ಆತ್ಮಹತ್ಯೆ ಒಂದೇ ಪರಿಹಾರವಲ್ಲ  ಎಂಬ ಉತ್ತಮ ಸಂದೇಶ ಇಟ್ಟುಕೊಂಡು ಶತ ಸಿನಿಮಾಗಳ ಸರದಾರ ಓಂ ಸಾಯಿ ಪ್ರಕಾಶ್ ಅವರು ’ಸೆಪ್ಟೆಂಬರ್ 10' ಎಂಬ ಚಿತ್ರವನ್ನು  ನಿರ್ದೇಶನ ಮಾಡಿದ್ದಾರೆ. ಶ್ರೀದೇವಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ರಾಜಮ್ಮ ಸಾಯಿಪ್ರಕಾಶ್ ಅವರು ನಿರ್ಮಾಣ ಮಾಡಿರುವ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಈ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತಿರುವ, ಕೋವಿಡ್ ಸಮಯದಲ್ಲಿ ಲಕ್ಷಾಂತರ ....

147

Read More...

Navika World Kannada Summit 2025.News

Wednesday, May 28, 2025

  *ಅಮೆರಿಕದ ಪ್ಲೋರಿಡಾದಲ್ಲಿ  8ನೇ ನಾವಿಕ ವಿಶ್ವ ಕನ್ನಡ ಸಮಾವೇಶ...*   ಅಮೆರಿಕದ ಫ್ಲೋರಿಡಾ ರಾಜ್ಯದ ಲೇಕ್‌ಲ್ಯಾಂಡ್‌ ನಗರದಲ್ಲಿ ನಡೆಯಲಿರುವ 8ನೇ ನಾವಿಕ ವಿಶ್ವ ಕನ್ನಡ ಸಮಾವೇಶ 2025ಕ್ಕೆ ಪೂರ್ಣ ಪ್ರಮಾಣದ ಸಿದ್ಧತೆಗಳು ಭರದಿಂದ ಸಾಗುತ್ತಿದೆ. ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ RP ಪಂಡಿಂಗ್ ಕನ್ವೆನ್ಸನ್ ಸೆಂಟರ್‌ನಲ್ಲಿ ಆಗಸ್ಟ್ 29ರಿಂದ 31ರವರೆಗೆ ಈ ಐತಿಹಾಸಿಕ ಸಮಾವೇಶ ನಡೆಯಲಿದೆ.‌ ಈ ಕುರಿತು ನಿನ್ನೆ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಸುದ್ದಿಗೋಷ್ಠಿಯಲ್ಲಿ ನಾವಿಕ ಅಧ್ಯಕ್ಷರಾದ ಶಿವಕುಮಾರ್, ಸಮಾವೇಶ ಸಂಚಾಲಕರಾದ ಹರ್ಷಿತ್ ಗೌಡ,  ಹಿರಿಯ ನಟ ಪ್ರಣಯರಾಜ ಶ್ರೀನಾಥ್, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಗಾಯಕ ....

177

Read More...

Tayavva.Film News

Thursday, May 29, 2025

  *--- 'ತಾಯವ್ವ’ ಚಿತ್ರದ ಬಿಡುಗಡೆಯ ಪತ್ರಿಕಾ ಪ್ರಕಟಣೆ---*   *ಮೇ. 30ರಂದು ’ತಾಯವ್ವ’ ತೆರೆಗೆ*   *ಗೀತಪ್ರಿಯಾ ನಟನೆ, ನಿರ್ಮಾಣದ ಚೊಚ್ಚಲ ಚಿತ್ರ ಬಿಡುಗಡೆಗೆ ಸಿದ್ದ*   *ಗ್ರಾಮೀಣ ಸೊಗಡಿನ, ಸಾಮಾಜಿಕ ಕಥಾಹಂದರ ಚಿತ್ರ*   ನವ ಪ್ರತಿಭೆ ಗೀತಪ್ರಿಯಾ ಮೊದಲ ಬಾರಿಗೆ ನಿರ್ಮಿಸಿ ಜೊತೆಗೆ ನಾಯಕಿಯಾಗಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ’ತಾಯವ್ವ’ ಚಿತ್ರ ರಾಜ್ಯದಾದ್ಯಂತ ಇದೇ ಮೇ. 30 ರ ಶುಕ್ರವಾರ ತೆರೆಗೆ ಬರಲಿದೆ.   ಸುಮಾರು ಮೂರು ದಶಕದ ಹಿಂದೆಯೇ ’ತಾಯವ್ವ’ ಎಂಬ ಹೆಸರಿನಲ್ಲಿ ಚಿತ್ರವೊಂದು ತೆರೆಗೆ ಬಂದಿದ್ದು, ಆ ಚಿತ್ರದಲ್ಲಿ ಹಿರಿಯ ನಟಿ ಉಮಾಶ್ರೀ ಮತ್ತು ನಟ ಕಿಚ್ಚ ಸುದೀಪ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದರು. ಈಗ ಅದೇ ....

174

Read More...

College Kalavida.News

Wednesday, May 28, 2025

  "ಕಾಲೇಜ್ ಕಲಾವಿದ" ಟ್ರೈಲರ್ ಬಿಡುಗಡೆ ಮಾಡಿದ ಖಳನಟ ಕೋಟೆ ಪ್ರಭಾಕರ್.       ಬೆಳ್ಳಿ ಪರದೆ ಮೇಲೆ ಮತ್ತೊಂದು ಮ್ಯೂಸಿಕಲ್ ಲವ್ ಸ್ಟೋರಿ ಚಿತ್ರ ತೆರೆಗೆ ಬರಲು ಸಜ್ಜಾಗಿದೆ. ಯುವ ಪಡೆಗಳ ತಂಡ ಸೇರಿಕೊಂಡು ಸಿದ್ದಪಡೆಸಿರುವಂತಹ ಚಿತ್ರ "ಕಾಲೇಜ್ ಕಲಾವಿದ". ನಗರದ  ಎಸ್. ಆರ್. ವಿ . ಪ್ರಿವ್ಯೂ ಥಿಯೇಟರ್ನಲ್ಲಿ ನಾಲ್ಕು ಹಾಡುಗಳನ್ನ ತೋರಿಸುವ ಮೂಲಕ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜನೆ ಮಾಡಿತ್ತು. ಈ ಒಂದು ಕಾರ್ಯಕ್ರಮಕ್ಕೆ ಖಳನಟ ಕೋಟೆ ಪ್ರಭಾಕರ್ , ನಟ ನಿರ್ದೇಶಕ ನಾಗೇಂದ್ರ ಅರಸ್, ನಟರಾದ ಪ್ರಥಮ್ , ದಿನೇಶ್ , ಜಯ ಕರ್ನಾಟಕ ಮುಖ್ಯಸ್ಥರಾದ  ಜಗದೀಶ್ ಸೇರಿದಂತೆ ಅನೇಕ ಗಣ್ಯರು ಆಗಮಿಸಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದರು.   ....

151

Read More...

Video.Film News

Saturday, May 24, 2025

 

ಬ್ಲಿಂಕ್ ತಂಡದಿಂದ ಮತ್ತೊಂದು ವಿನೂತನ ಸಾಹಸ ವಿಡಿಯೋ ಹಾರರ್ ಫಿಲಂ

 

ಬ್ಲಿಂಕ್ ಹಿಟ್ ಕೊಟ್ಟ ದೀಕ್ಷಿತ್ ಶೆಟ್ಟಿ ಮತ್ತು

ನಿಧಿ ಬೆಂಗಳೂರು ಜೊತೆಯಾಗಿ ಎರಡನೇ ಸಿನ್ಮಾ ವಿಡಿಯೋ

 

ವೀಡಿಯೋ ಚಿತ್ರದ ಮೊದಲ‌ ಟೀಸರ್ ಹಾಗೂ ಥೀಮ್ ಮ್ಯೂಸಿಕ್ ಬಿಡುಗಡೆ

 

   ಹೊಸ ತಲೆಮಾರಿನ ನಿರ್ದೇಶಕರು ಹಾಗೂ ನಟಿಯರಿಂದ ಟೀಸರ್ ಬಿಡುಗಡೆ ಮಾಡಿದ್ದು ವಿಶೇಷ.

 

ದೆವ್ವದ ಹಾಡು ಹಾಡೋ ಮೂಲಕ ವಿಡಿಯೋ ಟೀಸರ್ ಲಾಂಚ್ ಕಾರ್ಯಕ್ರಮಕ್ಕೆ ಚಾಲನೆ ಕೊಟ್ಟ ವಿಡಿಯೋ ಚಿತ್ರತಂಡ.

 

ಧೀ ಸಿನಿಮಾಸ್ ಬ್ಯಾನರ್ ನಡಿಯಲ್ಲಿ ದಿಯಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಚೊಚ್ಚಲ ನಿರ್ಮಾಣ ವಿಡಿಯೋ ಚಿತ್ರವನ್ನ ಬ್ಲಿಂಕ್ ಖ್ಯಾತಿಯ ಶ್ರೀನಿಧಿ ಬೆಂಗಳೂರು ನಿರ್ದೇಶಿಸುತ್ತಿದ್ದಾರೆ.

172

Read More...

Maadeva.Film News

Monday, May 26, 2025

  *ಜೂನ್ 6 ರಂದು ಬಿಡುಗಡೆಯಾಗಲಿದೆ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ "ಮಾದೇವ" ಚಿತ್ರ* .    ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ಮಾದೇವ" ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಮಾತನಾಡಿದರು.   "ಮಾದೇವ" ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ "ಹ್ಯಾಂಗ್ ಮ್ಯಾನ್" ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ....

177

Read More...

Taane.Film News

Friday, May 23, 2025

  *ಮಾಲತಿ ಸುಧೀರ್ ಅವರಿಂದ "ಠಾಣೆ" ಚಿತ್ರದ ಟ್ರೇಲರ್ ಅನಾವರಣ*                                 *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಮೇ 30 ರಂದು ತೆರೆಗೆ* .   ಪಿ.ಸಿ.ಡಿ 2 ಫಿಲಂ ಫ್ಯಾಕ್ಟರಿ ಲಾಂಛನದಲ್ಲಿ ಗಾಯತ್ರಿ ಎಂ ನಿರ್ಮಿಸಿರುವ, ಎಸ್.ಭಗತ್ ರಾಜ್ ನಿರ್ದೇಶನದ ಹಾಗೂ ಪ್ರವೀಣ್ ನಾಯಕನಾಗಿ ನಟಿಸಿರುವ "ಠಾಣೆ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹೆಸರಾಂತ ನಟಿ ಮಾಲತಿ ಸುಧೀರ್ "ಠಾಣೆ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಕನ್ನಡ ಸಾಹಿತ್ಯ ಪರಿಷತ್ ನ ಕಾರ್ಯದರ್ಶಿ ಸಂತೋಷ್ ಹಾನಗಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ನಲ್ಲೇ ಸಾಕಷ್ಟು ....

199

Read More...

Septomber 21.News

Friday, May 23, 2025

  *21 ವರ್ಷದ ಹುಡುಗಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ "ಸೆಪ್ಟೆಂಬರ್‌ 21" ಬಾಲಿವುಡ್ ಚಿತ್ರಕ್ಕೆ ಇಂದ್ರಜಿತ್ ಲಂಕೇಶ್ ಅವರಿಂದ ಚಾಲನೆ*   *ಆಲ್ಝೈಮರ್ ರೋಗದ ಸುತ್ತಲ್ಲಿನ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ ಪ್ರಿಯಾಂಕ ಉಪೇಂದ್ರ ನಟನೆ*   21 ವರ್ಷದ ಕನ್ನಡತಿ ಕರೆನ್ ಕ್ಷಿತಿ ಸುವರ್ಣ ಇದೀಗ ʻಸೆಪ್ಟೆಂಬರ್‌ 21ʼ ಹೆಸರಿನ ಬಾಲಿವುಡ್‌ ಸಿನಿಮಾ ನಿರ್ದೇಶಿಸುತ್ತಿದ್ದಾರೆ. ಆಲ್ಝೈಮರ್ ರೋಗಿ ಮತ್ತು ಆತನ ಆರೈಕೆ ಮಾಡುವ ನರ್ಸ್‌ವೊಬ್ಬಳ ನಡುವಿನ ಕಥೆಯನ್ನು ಹೊಂದಿರುವ ಈ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಪತ್ರಕರ್ತ, ನಟ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಚಿತ್ರದ ಮೊದಲ ....

150

Read More...

Sanju weds Geetha 2.News

Thursday, May 22, 2025

  ಹೊಸ ರೂಪದಲ್ಲಿ , ’ಸಂಜು ವೆಡ್ಸ್ ಗೀತಾ -2' ಜೂನ್  6 ರಂದು ಬಿಡುಗಡೆ      ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದ  ನಾಗಶೇಖರ್  ನಿರ್ದೇಶನದ  ಸಂಜು ವೆಡ್ಸ್ ಗೀತಾ -2 ಹಲವಾರು ಅಡೆತಡೆಗಳನ್ನು ಎದುರಿಸಿ, ಜ.17ರಂದು ತರಾತುರಿಯಲ್ಲಿ ಬಿಡುಗಡೆಯಾಗಿತ್ತು.ಪ್ರೇಕ್ಷಕರು ಸಂಜು ವೆಡ್ಸ್ ಗೀತಾ-2 ಚಿತ್ರದ ಕಂಟೆಂಟ್, ಸಾಂಗ್ಸ್, ಅದ್ದೂರಿ ಮೇಕಿಂಗ್ ಎಲ್ಲವನ್ನೂ ತುಂಬಾ ಇಷ್ಟ ಪಟ್ಟಿದ್ದರು. ಚಿತ್ರದ ನಿರೂಪಣೆ, ಕ್ಯಾಮೆರಾ ವರ್ಕ್ ಎಲ್ಲಾ ಅದ್ಭುತವಾಗಿದ್ದರೂ, ಎಲ್ಲೋ ಒಂದು ಕಡೆ  ಚಿತ್ರವನ್ನು ಇನ್ನೂ  ಚೆನ್ನಾಗಿ  ಮಾಡಬಹುದಿತ್ತು  ಎಂಬ ಅಭಿಪ್ರಾಯ ಕೆಲವರಿಂದ ಕೇಳಿಬಂದಿತ್ತು,  ಬಿಡುಗಡೆ  ಸಂದರ್ಭದಲ್ಲಿ ಒಂದಷ್ಟು ಆತಂಕ ....

151

Read More...

Dude.Film News

Thursday, May 22, 2025

  *DUDE* ಚಿತ್ರಕ್ಕೆ ನಾನೇ ಸಾರಥಿ ಅಂದ್ರು ತೇಜ್   ಕನ್ನಡ ಸೇರಿದಂತೆ ತೆಲುಗು ಹಾಗೂ ಮಲಯಾಳಂ ಭಾಷೆಯಲ್ಲಿ ಸಿದ್ಧವಾಗುತ್ತಿರುವ, ನಟ ನಿರ್ದೇಶಕ ತೇಜ್ ಸಾರಥ್ಯದಲ್ಲಿ ಬರುತ್ತಿರುವ *DUDE* ಚಿತ್ರದ ಶೀರ್ಷಿಕೆಯು ಯಾವುದೇ ವಿವಾದವಿಲ್ಲದೇ ಬಗೆ ಹರಿದ ಬಗ್ಗೆ,ಪತ್ರಿಕಾ ಗೋಷ್ಟಿಯಲ್ಲಿ ತೇಜ್ ಸ್ಪಷ್ಟ ಪಡಿಸಿದರು   ಕನ್ನಡ ಭಾಷೆಯಲ್ಲಿ *DUDE* ಚಿತ್ರವನ್ನೂ ರಿಲೀಸ್ ಮಾಡಿ, ಅದೇ ಸಮಯದಲ್ಲಿ ತೆಲುಗು ಹಾಗೂ ಮಲಯಾಳಂ ನಲ್ಲಿಯೂ ತಮ್ಮ *DUDE* ಅನ್ನೂ ಡಬ್ ಮಾಡಿ ಬಿಡುಗಡೆ ಮಾಡಬೇಕು ಎಂದಿದ್ದ ತೇಜ್ ಗೆ,ಸ್ವಲ್ಪ ಬೇಸರವಾಗಿದ್ದು ನಿಜ..   ಮೈತ್ರಿ ಮೂವೀ ಮೇಕರ್ಸ್ ಬ್ಯಾನರ್ ಅಡಿಯಲ್ಲಿ *DUDE* ಹೆಸರಿನ ಶೀರ್ಷಿಕೆ ನೋಂದಣಿ ಆದಂತಹ ವಿಚಾರ ತಿಳಿದ ತಕ್ಷಣ,ನಟ ನಿರ್ದೇಶಕ ತೇಜ್, ತಕ್ಷಣ ಆ ವಿಚಾರಕ್ಕಾಗಿ ....

145

Read More...

45 Film News

Thursday, May 22, 2025

  *ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರಿಂದ ಬಹು ನಿರೀಕ್ಷಿತ "45" ಚಿತ್ರದ "ಶಿವಂ ಶಿವಂ ಸನಾತನಂ" ಹಾಡು ಬಿಡುಗಡೆ* .   ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ, ವಿಜಯ್ ಪ್ರಕಾಶ್ ಹಾಡಿರುವ ಹಾಗೂ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿರುವ  "ಶಿವಂ ಶಿವಂ ಸನಾತನಂ" ಚಿತ್ರದ ಹಾಡು ....

151

Read More...

Seeskaddi.Film News

Thursday, May 22, 2025

  ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆ! ರತನ್ ಗಂಗಾಧರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಸೀಸ್ ಕಡ್ಡಿ ಚಿತ್ರದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಕುರಿತಾದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಿನಿಮಾ ಬಗೆಗಿನ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿದೆ. ಐವರು ಪ್ರತಿಭಾನ್ವಿತ ನಿರ್ದೇಶಕರು ಅತಿಥಿಗಳಾಗಿ ಆಗಮಿಸಿದ್ದು ವಿಶೇಷ. ಬೀರ್ ಬಲ್ ಖ್ಯಾತಿಯ ಶ್ರೀನಿ, ಮಹಿರಾ ಖ್ಯಾತಿಯ ನಿರ್ದೇಶಕ ಮಹೇಶ್ ಗೌಡ, ಡೊಳ್ಳು ಖ್ಯಾತಿಯ ನಿರ್ದೇಶಕ ಸಾಗರ್ ಪುರಾಣಿಕ್, ಆಯುಷ್ ಮಲ್ಲಿ, ಚೆಲುವರಾಜ್ ಮುಂತಾದವರು ಈ ಪತ್ರಿಕಾಗೋಷ್ಠಿಯಲ್ಲಿ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತಾನಾಡಿದ ನಿರ್ದೇಶ ರತನ್ ಗಂಗಾಧರ್, ಈ ಸಿನಿಮಾ ಕಥೆಗೆ ಸ್ಫೂರ್ತಿಯಾದ ವಿಚಾರವನ್ನು ....

146

Read More...

Kothalavadi.Film News

Wednesday, May 21, 2025

  *ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಟೀಸರ್ ರಿಲೀಸ್..ಸಾಥ್ ಕೊಟ್ಟ ನಟ ಶರಣ್*     *ಟೀಸರ್‌ನಲ್ಲಿ ’ಕೊತ್ತಲವಾಡಿ’...ಯಶ್‌ ನಿರ್ಮಾಣದ ಚೊಚ್ಚಲ ಪ್ರಯತ್ನಕ್ಕೆ ಶರಣ್‌ ಸಾಥ್!̇*     ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ತಮ್ಮದೇ  PA Productions  ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್‌ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರೆಯನ್‌ ಮಾಲ್‌ ನಲ್ಲಿ ನಡೆಯಿತು. ಟೀಸರ್‌ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಯಶ್‌ ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬರ್‌, ....

215

Read More...

Athani.Film News

Tuesday, May 20, 2025

  *ರೈತನಿಂದಲೇ ನಿರ್ಮಾಣವಾಗಿದೆ ರೈತನ ಬದುಕು ಬವಣೆ ತಿಳಿಸುವ "ಅಥಣಿ" ಚಿತ್ರ.* .         *ಸಮರ್ಥ್ ಎಂ ನಟಿಸಿ, ನಿರ್ದೇಶಿಸಿರುವ ಈ ಚಿತ್ರದ ಟ್ರೇಲರ್ ನಾಗೇಂದ್ರ ಅರಸ್ ಅವರಿಂದ ಅನಾವರಣ*   ಅಭಯ್ ಖುಷಿ ಮೂವೀಸ್ ಬ್ಯಾನರ್ ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ "ಅಥಣಿ" ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಸಂಕಲನಕಾರ, ನಟ ಹಾಗೂ ನಿರ್ದೇಶಕ ನಾಗೇಂದ್ರ ಅರಸ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು. "ಅಥಣಿ" ಒಂದು ಊರಿನ ಹೆಸರಾಗಿದ್ದು, ರೈತನ ಬದುಕು ಬವಣೆಗಳನ್ನು ಪ್ರೇಕ್ಷಕರಿಗೆ  ತೋರಿಸುವ ಪ್ರಯತ್ನವನ್ನು ಈ ಚಿತ್ರದ ಮೂಲಕ ....

138

Read More...

Akrosha.Short Film.News

Saturday, May 17, 2025

  *ಗೌರಿಶ್ರೀ ನಿರ್ದೇಶನದ "ಆಕ್ರೋಶ" ಕಿರುಚಿತ್ರದ ಮೂಲಕ ಅಭಿನಯ ಆರಂಭಿಸಿದ ನವನಟ ಯಶ್ವಂತ್* .               ಕಿರುಚಿತ್ರ ಎಂಬುದು ಅನೇಕ ಪ್ರತಿಭಾವಂತರ ಪ್ರದರ್ಶನಕ್ಕೆ ಉತ್ತಮ ವೇದಿಕೆ. ಅದರಲ್ಲಿ ಅಭಿನಯಿಸಿ ಸೈ ಎನಿಸಿಕೊಂಡವರು ಹಿರಿತೆರೆಯ ಮೇಲೆ‌ ಲೀಲಾಜಾಲವಾಗಿ ಅಭಿನಯಿಸುತ್ತಾರೆ. ಯಶ್ವಂತ್ ಎಂಬ ಯುವನಟ, ಗೌರಿಶ್ರೀ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ 30 ನಿಮಿಷಗಳ "ಆಕ್ರೋಶ" ಎಂಬ ಕಿರುಚಿತ್ರದಲ್ಲಿ ನಟಿಸುವ ಮೂಲಕ ಅಭಿನಯ‌ ಆರಂಭಿಸಿದ್ದಾರೆ.‌ ಜಗದೀಶ್ ವರ್ಮ ನಿರ್ಮಾಣದ ಈ ಕಿರುಚಿತ್ರದ ಪ್ರದರ್ಶನ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಹಿರಿಯ ನಿರ್ದೇಶಕರಾದ ಓಂಸಾಯಿಪ್ರಕಾಶ್ , ಪುರುಷೋತ್ತಮ್ ಓಂಕಾರ್, ರತ್ನಮಾಲ ಮುಂತಾದವರು ....

162

Read More...
Copyright@2018 Chitralahari | All Rights Reserved. Photo Journalist K.S. Mokshendra,