45 Film News

Tuesday, January 14, 2025

  *ಆಗಸ್ಟ್ 15 ರಂದು ಬಿಡುಗಡೆಯಾಗಲಿದೆ ಬಹು ನಿರೀಕ್ಷಿತ "45" ಚಿತ್ರ* .     *ವಿಭಿನ್ನ ವಿಡಿಯೋ ಮೂಲಕ ಚಿತ್ರದ ಬಿಡುಗಡೆ ದಿನಾಂಕ ತಿಳಿಸಿದ ಚಿತ್ರತಂಡ* .   ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ‌ ಹಾಗೂ 2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ "45" ಚಿತ್ರ ಆಗಸ್ಟ್ 15,  ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆ ಮಾಡುತ್ತಾರೆ. ಆದರೆ "45" ಚಿತ್ರತಂಡ ವಿಭಿನ್ನವಾಗಿ ದಿನಾಂಕ ಘೋಷಣೆ ಮಾಡಿದೆ. ಡೇಟ್ ಅನೌನ್ಸ್ ಮೆಂಟ್ ಗಾಗಿಯೇ ನಿರ್ದೇಶಕ ಅರ್ಜುನ್ ಜನ್ಯ ಪ್ರಜ್ವಲ್ ಅರಸ್ ಎಂಬ ಯುವ ಪ್ರತಿಭೆಯಿಂದ 3D ತಂತ್ರಜ್ಞಾನದಲ್ಲಿ ವಿಭಿನ್ನ ವಿಡಿಯೋ ಮಾಡಿಸಿದ್ದಾರೆ. ....

156

Read More...

Rudra Garuda Purana.New

Wednesday, January 15, 2025

  *ನಟ ರಾಕ್ಷಸ ಡಾಲಿ ಧನಂಜಯ ಅವರಿಂದ "ರುದ್ರ ಗರುಡ ಪುರಾಣ" ಚಿತ್ರದ ಟ್ರೇಲರ್ ಅನಾವರಣ* .      *ರಿಷಿ ಅಭಿನಯದ ಈ ಚಿತ್ರ ಜನವರಿ 24 ರಂದು ತೆರೆಗೆ* .   ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿರುವ ರಿಷಿ ನಾಯಕರಾಗಿ ನಟಿಸಿರುವ "ರುದ್ರ ಗರುಡ ಪುರಾಣ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ನಟ ರಾಕ್ಷಸ ಡಾಲಿ ಧನಂಜಯ ಅನಾವರಣ ಮಾಡಿದರು. ನಿರ್ಮಾಪಕ ಕೆ.ಮಂಜು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.  ಟ್ರೇಲರ್ ಕುತೂಹಲ ಮೂಡಿಸಿದ್ದು,‌ ಜನವರಿ 24 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಚಿತ್ರವನ್ನು ನೋಡುವ ಕಾತುರವನ್ನು ಹೆಚ್ಚಿಸಿದೆ. ಟ್ರೇಲರ್ ಬಿಡುಗಡೆ ನಂತರ ಗಣ್ಯರು ....

167

Read More...

Monk The Young.News

Thursday, January 16, 2025

  *"ಮಾಂಕ್ ದಿ ಯಂಗ್" ಚಿತ್ರದ  "ಮಾಯೆ" ಹಾಡು ಬಿಡುಗಡೆ* .          *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿಯಲ್ಲಿ ತೆರೆಗೆ* . .*    ವಿಭಿನ್ನ ಕಥಾಹಂದರ ಹೊಂದಿರುವ "ಮಾಂಕ್ ದಿ ಯಂಗ್" ಚಿತ್ರದಿಂದ "ಮಾಯೆ" ಎಂಬ ಮನಮೋಹಕ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪ್ರತಾಪ್ ಭಟ್ ಬರೆದಿರುವ ಈ ಹಾಡನ್ನು ಸಿರಿ ಕಟ್ಟೆ ಹಾಡಿದ್ದಾರೆ. ಸ್ವಾಮಿನಾಥನ್ ಸಂಗೀತ ನೀಡಿದ್ದಾರೆ. "ಮಾಯೆ" ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಹಾಡು  ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಎನ್ ಜಿ ಓ ಉಷಾ ಅವರು ಮುಖ್ಯ ಅತಿಥಿಗಳಾಗಿ ‌ಆಗಮಿಸಿದ್ದರು.    ಆರಂಭದಿಂದಲೂ ....

152

Read More...

Hyena,Film News

Thursday, January 16, 2025

  *ಸಂಸದ ತೇಜಸ್ವಿ ಸೂರ್ಯ ಅವರಿಂದ ಅನಾವರಣವಾಯಿತು ದೇಶಪ್ರೇಮದ ಕಥಾಹಂದರ ಹೊಂದಿರುವ "ಹೈನ" ಚಿತ್ರದ ಟ್ರೇಲರ್*   ವೆಂಕಟ್ ಭಾರದ್ವಾಜ್ ಚಿತ್ರಕಥೆ ಬರೆದು ನಿರ್ದೇಶಿಸಿರುವ ವಿಭಿನ್ನ ಕಥಾಹಂದರ ಹೊಂದಿರುವ "ಹೈನ" ಚಿತ್ರ ಪೆಟ್ರಿಯಾಟಿಕ್ ಕಥಾಹಂದರ ಹೊಂದಿರುವ ಚಿತ್ರ. ಇದೇ ತಿಂಗಳ 31 ರಂದು ತೆರೆಗೆ ಬರಲು ಸಜ್ಜಾಗಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ "ಹೈನ" ಚಿತ್ರದ ಟ್ರೇಲರ್  ಅನಾವರಣ ‌ಮಾಡಿ ಶುಭ ಹಾರೈಸಿದ್ದಾರೆ‌    ಸಮಾಜಕ್ಕೆ ಉತ್ತಮ ಸಂದೇಶ ನೀಡಲು "ಹೈನ" ಚಿತ್ರ ಮಾಡಿದ್ದಾರೆ‌. ಪ್ರಚಲಿತ ವಿಷಯ ಮುಂದಿಟ್ಟುಕೊಂಡು ಜನರಲ್ಲಿ‌ ಅರಿವು ಮೂಡಿಸುವ ಪ್ರಯತ್ನ ಕೂಡ ಈ ಚಿತ್ರದ‌ ಮೂಲಕ ....

184

Read More...

Vishnu Priya.News

Thursday, January 16, 2025

  'ಏಳು ಗಿರಿಗಳ  ಏಳು ಕಡಲಿನ ಆಚೆ’ ವಿಷ್ಣು ಪ್ರಿಯಾ  ಪ್ರೇಮಗೀತೆ....        ಪಡ್ಡೆಹುಲಿ ಖ್ಯಾತಿಯ ಶ್ರೇಯಸ್ ಮಂಜು, ಮತ್ತು ಮಲೆಯಾಳಂನ ಕಣ್ಸನ್ನೆ ಚೆಲುವೆ ಪ್ರಿಯಾ ವಾರಿಯರ್ ಅಭಿನಯದ  ತೊಂಭತ್ತರ ದಶಕದಲ್ಲಿ ನಡೆಯುವ ಉತ್ಕಟ ಪ್ರೇಮ ಕಥೆ ಹೇಳುವ ಚಿತ್ರ ವಿಷ್ಣುಪ್ರಿಯ. ಬಿಂದ್ಯಾ ಮೂವೀಸ್ ಮೂಲಕ ಈ ಚಿತ್ರವನ್ನು  ಡಾ. ಕೆ.ಮಂಜು‌ ನಿರ್ಮಿಸಿದ್ದಾರೆ. ಈ ಚಿತ್ರದ ಏಳು ಗಿರಿಗಳ ಏಳು ಕಡಲಿನ ಎಂಬ ಪ್ರೇಮಗೀತೆಯನ್ನು  ಬಘೀರ ಖ್ಯಾತಿಯ ಶ್ರೀಮುರಳಿ ಬಿಡುಗಡೆ ಮಾಡಿದರು. ಚಿತ್ರದ ಹಾಡು ಮತ್ತು ಬಿಡುಗಡೆಯ ದಿನಾಂಕ ಘೋಷಣೆ ಕಾರ್ಯಕ್ರಮದಲ್ಲಿ  ಶ್ರೀಮುರುಳಿ, ನಟಿ ಸಪ್ತಮಿ ಗೌಡ, ನಿರ್ಮಾಪಕ ರಮೇಶ್ ರೆಡ್ಡಿ, ಗೀತ ಸಾಹಿತಿ ಕವಿರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸಿ   ....

155

Read More...

Punit Nivasa.News

Saturday, January 18, 2025

  'ಪುನೀತ್ ನಿವಾಸ‌’ಕ್ಕೆ ಚಾಲನೆ    ಇದು ಅಪ್ಪುಅಭಿಮಾನಿಯ ಕಥೆ...      ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿತ್ರರಂಗದ ದಂತ ಕಥೆಯಾಗಿದ್ದಾರೆ. ಅವರನ್ನು, ಅವರ ಆದರ್ಶಗಳನ್ನು ನೆನಪಿಸುವ ಅನೇಕ ಚಲನಚಿತ್ರಗಳು ಈಗಾಗಲೇ ನಿರ್ಮಾಣವಾಗಿವೆ. ಇದೀಗ ಮತ್ತೊಂದು ತಂಡ ಅಂಥ ಪ್ರಯತ್ನಕ್ಕೆ ಕೈಹಾಕಿದೆ. ’ಪುನೀತ್ ನಿವಾಸ’ ಎಂಬ ಹೆಸರಿಟ್ಟುಕೊಂಡು ಚಲನಚಿತ್ರವೊಂದನ್ನು ಪ್ರಾರಂಭಿಸಿದೆ. ಅಶ್ವಿನಿ ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಅವರ‌ ಶುಭ ಹಾರೈಕೆಯೂ ಈ ಚಿತ್ರಕ್ಕಿದೆ.    ಪುಟ್ಟಣ್ಣ ಕಣಗಾಲ್ ರಂಥ ಹಿರಿಯ ನಿರ್ದೇಶಕರ ಜತೆ ಸಹಾಯಕರಾಗಿ ಕೆಲಸ ಮಾಡಿದ ನಾಗೇಂದ್ರ ಪ್ರಸಾದ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ....

188

Read More...

Choo Mantar.News

Monday, January 13, 2025

  *ಸುಗ್ಗಿ ಹಬ್ಬಕ್ಕೆ ಸಂತಸದ ಸುದ್ದಿ ಕೊಟ್ಟ "ಛೂಮಂತರ್" ಚಿತ್ರತಂಡ*    *ಶರಣ್ ಅಭಿನಯದ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ "ಛೂ ಮಂತರ್" ಚಿತ್ರ ಕಳೆದ ಜನವರಿ 10ರಂದು ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಸಕ್ಸಸ್ ಮೀಟ್ ನಲ್ಲಿ ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.ಪತ್ರಿಕಾಗೋಷ್ಠಿಗೂ ಮುನ್ನ ವಿಷ್ಣುವರ್ಧನ್ ಹಾಗೂ ದ್ವಾರಕೀಶ್ ಅವರ ....

159

Read More...

Nimagondu Sihi Suddi.News

Monday, January 13, 2025

       *ಗಂಡ್ಸು ಗರ್ಭಧರಿಸಿದಾಗ..?* *ಮಹಾಶಿವರಾತ್ರಿಗೆ ನಿಮಗೊಂದು ಸಿಹಿಸುದ್ದಿ*   ನಿಮಗೊಂದು ಸಿಹಿಸುದ್ದಿ ಮೋಷನ್ ಪೋಸ್ಟರ್ ಲಾಂಚ್   ನಿಮಗೊಂದು ಸಿಹಿ ಸುದ್ದಿ ಈ ವರ್ಷದ ಅಚ್ಚರಿ ಮತ್ತು ವಿಶೇಷ ಈ ಸಿನಿಮಾ. ಬಿಡುಗಡೆಗೆ ಸಿದ್ದವಿರೋ ಈ ಚಿತ್ರದ ಮೋಷನ್ ಪೋಸ್ಟರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ರಿಲೀಸ್ ಆಗಿದೆ.   ಯುವಕನೊಬ್ಬ ಗರ್ಭಧರಿಸಿ‌ ಜಗತ್ತಿನಲ್ಲಿ ಅದ್ಭುತ ಅಚ್ಚರಿ  ಹುಟ್ಟಿಸೋ ವಿಚಾರದ ಸುತ್ತಾ ಹೆಣೆದಿರೋ ಚಿತ್ರ ನಿಮಗೊಂದು ಸಿಹಿ ಸುದ್ದಿ. ಚಿತ್ರರಂಗದಲ್ಲಿ ಒಂದಷ್ಟು ಅನುಭವ ಹೊಂದಿ, ಈ ಮೂಲಕ‌ ಸ್ವತಂತ್ರ ಸಿನಿಮಾ ಮಾಡಿದ್ದಾರೆ ನಟ ನಿರ್ದೇಶಕ ಬರಹಗಾರ ಬಹುಮುಖ ಪ್ರತಿಭೆ ರಘು ಭಟ್.   ಅವ್ಯಕ್ತ ಸಿನಿಮಾಸ್ ಸಂಸ್ಥೆಯ ಹರೀಶ್ ಎನ್ ....

239

Read More...

Justice.Film Teaser.News

Saturday, January 11, 2025

 

ಕಥೆ, ಚಿತ್ರಕಥೆ, ಸಂಭಾಷಣೆ, ಸಂಗೀತ, ಸಾಹಿತ್ಯ, ಡಬ್ಬಿಂಗ್ ಇಂಜಿನಿಯರ್ ಮತ್ತು ನಿರ್ದೇಶಕ:—-

*ಆರನ್ ಕಾರ್ತಿಕ್*

 

DOP :- ಮೈಸೂರು ಸ್ವಾಮಿ

 

ಸಂಪಾದನೆ :-

ಭಾರ್ಗವ್.ಕೆ.ಎಂ., ವೆಂಕಿ ಯು.ಡಿ.ವಿ

 

VFX, Di :- ಭಾರ್ಗವ್.ಕೆ.ಎಂ

 

 Dts :- ಮುನೀಬ್

 

ನೃತ್ಯ ಸಂಯೋಜನೆ :- ಕಂಬಿ ರಾಜು, ಮೈಸೂರು ರಾಜು ಮತ್ತು ಸ್ಟಾರ್ ನಾಗಿ

 

ಸಾಹಸ :- ಸುಪ್ರೀಂ ಸುಬ್ಬು ಮತ್ತು ಮಾಗಡಿ ಮಾರುತಿ

159

Read More...

Venkateshaya Namaha.News

Thursday, January 09, 2025

  ಹರೀಶ್ ರಾಜ್ ನಿರ್ದೇಶನದ "ವೆಂಕಟೇಶಾಯ ನಮಃ" ಟೀಸರ್ ಬಿಡುಗಡೆ.      ಚಂದನವನದ ಕಲಾಕರ್  ನಟ , ನಿರ್ದೇಶಕ ಹರೀಶ್ ರಾಜ್ ಸಾರಥ್ಯದ "ವೆಂಕಟೇಶಾಯ ನಮಃ"  ಚಿತ್ರದ ಪತ್ರಿಕಾಗೋಷ್ಠಿಯನ್ನು ರೇಣುಕಾಂಬ ಸ್ಟುಡಿಯೋದಲ್ಲಿ ಆಯೋಜನೆ ಮಾಡಿದ್ದು, ತಮ್ಮ ಚಿತ್ರದ ಕುರಿತು ಮಾಹಿತಿ ನೀಡಲು ಇಡೀ ಚಿತ್ರತಂಡ ಹಾಜರಿದ್ದು, ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಚಿತ್ರದ ಟೀಸರ್ ಪ್ರದರ್ಶಿಸಲಾಯಿತು.   ಈ ಚಿತ್ರದ ಕುರಿತು ನಟ , ನಿರ್ದೇಶಕ ಹರೀಶ್ ರಾಜ್ ಮಾತನಾಡುತ್ತಾ , ನಮ್ಮ ವೆಂಕಟೇಶಾಯ ನಮಃ ಚಿತ್ರಕ್ಕೆ ಸ್ಪೂರ್ತಿಯೇ ನಾನು ಹಿಂದೆ ಅಭಿನಯಿಸಿದಂತ ಗೋವಿಂದಾಯ ನಮಃ ಚಿತ್ರ ಎನ್ನಬಹುದು. ಹಾಗಾಗಿಯೇ ಮತ್ತೆ ಪ್ಯಾರ್ ಗೆ ಆಗ್ಬಿಟ್ಟೈತೆ... ಅನ್ನೋ ಅಡಿಬರ ಕೂಡ ಬಳಸಿಕೊಂಡಿದ್ದೇವೆ. ....

184

Read More...

Manada Kadalu.News

Wednesday, January 08, 2025

  *ನಮ್ಮೂರಿನ ಹುಚ್ಚ ಹೇಳುತ್ತಿದ್ದ ಪದವೇ "ತುರ್ರಾ" ಹಾಡಿಗೆ ಸ್ಪೂರ್ತಿ ಯೋಗರಾಜ್ ಭಟ್..* .    *"ಮನದ ಕಡಲಿ" ನಿಂದ ಬಂತು ಮತ್ತೊಂದು ಹಾಡು** .     E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ "ಮುಂಗಾರು ಮಳೆ" ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಚಿತ್ರ "ಮನದ ಕಡಲು". ಇತ್ತೀಚೆಗಷ್ಟೇ ಈ ಚಿತ್ರದ "ಹೂ ದುಂಬಿಯ ಕಥೆಯ" ಹಾಡು ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಹೊತ್ತಿನಲ್ಲಿ ಚಿತ್ರದ ಮತ್ತೊಂದು ಗೀತೆ "ತುರ್ರಾ" ಬಿಡುಗಡೆಯಾಗಿದೆ. ನೆಲಮಂಗಲದ ಬಳಿಯಿರುವ ನಿರ್ಮಾಪಕ ಈ ಕೃಷ್ಣಪ್ಪ ರವರ ತೋಟದಲ್ಲಿ ಈ ಹಾಡು ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರೆ ....

198

Read More...

Choo Mantar.News

Tuesday, January 07, 2025

  *ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು "ಛೂಮಂತರ್" ಚಿತ್ರದ ಪ್ರೀ ರಿಲೀಸ್ ಇವೆಂಟ್*    *ಶರಣ್ ಅಭಿನಯದ ಈ ಚಿತ್ರ ಜನವರಿ 10ರಂದು ಬಿಡುಗಡೆ.*   ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ"‌ ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನಸಿನ ರಾಣಿ ಮಾಲಾಶ್ರೀ, ಡಾಲಿ ಧನಂಜಯ, ಗುರುಕಿರಣ್, ರಿಷಿ, ಪ್ರಥಮ್, ಅಮೂಲ್ಯ, ಧೀರೇನ್ ರಾಮಕುಮಾರ್, ತಿಲಕ್, ಮಾಲಾಶ್ರೀ ಪುತ್ರಿ ಆರಾಧನಾ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ನರಸಿಂಹಲು, ಪದಾಧಿಕಾರಿಗಳಾದ ....

230

Read More...

Kuchuku.Film News

Saturday, January 04, 2025

  *ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು "ಕುಚುಕು" ಚಿತ್ರದ ಟೀಸರ್ ಹಾಗೂ ಹಾಡುಗಳು.*         *ಸ್ನೇಹದ ಮಹತ್ವ ಸಾರುವ ಈ ಚಿತ್ರ ಫೆಬ್ರವರಿ 14 ರಂದು ತೆರೆಗೆ* .     ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ "ಕುಚುಕು" ಚಿತ್ರದ ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಎಂ.ಎನ್ ಕುಮಾರ್, ನಿರ್ಮಾಪಕ ಎಂ.ಡಿ.ಪಾರ್ಥಸಾರಥಿ, ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಮುಂತಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸ್ನೇಹದ ಮಹತ್ವ ಸಾರುವ ಈ ಚಿತ್ರ  ಫೆಬ್ರವರಿ 14ರ ಪ್ರೇಮಿಗಳ ದಿನದಂದು ಬಿಡುಗಡೆಯಾಗುತ್ತಿದೆ. ಇದೇ ....

235

Read More...

Glopixs OTT.News

Saturday, January 04, 2025

  *ಡಿಜಿಟಲ್‌ ಮನರಂಜನೆ ಕ್ಷೇತ್ರಕ್ಕೆ ಹೊಸದಾದ Glopixs ಒಟಿಟಿ*    *ಏಕಕಾಲಕ್ಕೆ ಮೂರು ರಾಜ್ಯಗಳಲ್ಲಿ ಗಣ್ಯರಿಂದ ಲೋಗೊ ಅನಾವರಣ* .    ಡಿಜಿಟಲ್‌ ಒಟಿಟಿ ವೇದಿಕೆಗೆ ಇದೀಗ ಹೊಸದೊಂದು ಒಟಿಟಿಯ ಆಗಮನವಾಗುತ್ತಿದೆ.  ಅದುದೇ Global Pix Incನ *ಗ್ಲೋಪಿಕ್ಸ್‌* (Glopixs). ಈ ಹೊಸ ಒಟಿಟಿ ವೇದಿಕೆ ಇದೀಗ ಅಧಿಕೃತವಾಗಿ ಅನಾವರಣಗೊಂಡಿದೆ. ಇತ್ತೀಚೆಗೆ "ಗ್ಲೋಪಿಕ್ಸ್‌"ನ ಲೋಗೋ ಅನಾವರಣವಾಗಿದೆ. ಕರ್ನಾಟಕ, ಕೇರಳ ಹಾಗೂ ಹೈದರಾಬಾದ್ ನಲ್ಲಿ ಏಕಕಾಲಕ್ಕೆ ಲೋಗೊ ಬಿಡುಗಡೆಯಾಗಿದ್ದು ವಿಶೇಷ. ಬೆಂಗಳೂರಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಾಗೂ ಹಿರಿಯ ಛಾಯಾಗ್ರಾಹಕ, ಸೆನ್ಸಾರ್ ಬೋರ್ಡ್ ....

186

Read More...

Pinaka.Film News

Thursday, January 02, 2025

ಕ್ಷುದ್ರ ರುದ್ರನಾಗಿ ಗಣೇಶ್

       ‘ಕೃಷ್ಣಂ ಪ್ರಣಯ ಸಖಿ’ ಯಶಸ್ಸಿನ ಖುಷಿಯಲ್ಲಿರುವ ಗಣೇಶ್ ಈಗ ‘ಪಿನಾಕ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಶೀರ್ಷಿಕೆ ಹಾಗೂ ಟೀಸರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ತೆಲುಗು, ಕನ್ನಡ ಸೇರಿದಂತೆ ಅನೇಕ ಚಿತ್ರಗಳನ್ನು ನಿರ್ಮಾಣ ಮಾಡಿರುವ ಟಿ.ಜಿ.ವಿಶ್ವಪ್ರಸಾದ್ ಅವರು ಪೀಪಲ್ ಮೀಡಿಯಾ  ಫ್ಯಾಕ್ಟರಿಯಿಂದ ೪೯ನೇ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಹಲವು ಚಿತ್ರಗಳಿಗೆ ನೃತ್ಯ ಸಂಯೋಜನೆ ಮಾಡಿರುವ ಧನಂಜಯ್ ನಿರ್ದೇಶಕರಾಗಿ ಬಡ್ತಿ ಹೊಂದಿದ್ದಾರೆ.

176

Read More...

Film 31 Days.News

Tuesday, December 31, 2024

  *ಡಿಸೆಂಬರ್ 31 ರಂದು ಬಿಡುಗಡೆಯಾಯಿತು ನಿರಂಜನ್ ಶೆಟ್ಟಿ ಅಭಿನಯದ "31 DAYS" ಚಿತ್ರದ ಒಪೇರ ಸಾಂಗ್* .    *ಇದು ಜನಪ್ರಿಯ ಸಂಗೀತ ನಿರ್ದೇಶಕ ವಿ.ಮನೋಹರ್ ಸಂಗೀತ ಸಂಯೋಜನೆಯ 150ನೇ ಚಿತ್ರ*   "ಜಾಲಿಡೇಸ್" ಚಿತ್ರದ ಖ್ಯಾತಿಯ ನಿರಂಜನ್ ಶೆಟ್ಟಿ ನಾಯಕನಾಗಿ ನಟಿಸಿರುವ "31 DAYS" ಚಿತ್ರಕ್ಕಾಗಿ ವಿ.ಮನೋಹರ್ ಬರೆದು, ಹಾಡಿ, ಸಂಗೀತ ಸಂಯೋಜಿಸಿ, ನಿರಂಜನ್ ಶೆಟ್ಟಿ ಅವರೊಂದಿಗೆ ನಟಿಸಿರುವ ಒಪೇರ ಶೈಲಿಯ ಗೀತೆ ಡಿಸೆಂಬರ್ 31 ನೇ ತಾರೀಖು ಬಿಡುಗಡೆಯಾಯಿತು. ಇದು ವಿ.ಮನೋಹರ್ ಅವರು ಸಂಗೀತ ಸಂಯೋಜಿಸಿರುವ 150ನೇ ಚಿತ್ರ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ಮೊದಲು ಮಾತನಾಡಿದ ಸಂಗೀತ ನಿರ್ದೇಶಕ ವಿ.ಮನೋಹರ್, ಇಂದು ಬಿಡುಗಡೆಯಾಗಿರುವ ಒಪೇರ(ಕಥನಾ ಗೀತೆ) ಶೈಲಿಯ ....

250

Read More...

Max.Film News

Monday, December 30, 2024

  *ಅಭಿಮಾನಿಗಳ ಹಾಗೂ ಚಿತ್ರತಂಡದವರ ಗೆಲುವಿನ ನಗುವನ್ನು ನೋಡಿ ನಾನು ಸಂಭ್ರಮಿಸುತ್ತಿದ್ದೇನೆ* .    *“ಮ್ಯಾಕ್ಸ್” ಚಿತ್ರತಂಡದಿಂದ ಆಯೋಜಿಸಲಾಗಿದ್ದ “ಥ್ಯಾಂಕ್ಸ್ ಗಿವಿಂಗ್” ಸಮಾರಂಭದಲ್ಲಿ ಕಿಚ್ಚ ಸುದೀಪ್ ಹೇಳಿಕೆ* .   ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ ನಾಯಕರಾಗಿ ನಟಿಸಿರುವ  "ಮ್ಯಾಕ್ಸ್" ಚಿತ್ರ ಡಿಸೆಂಬರ್ 25ರಂದು ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತೋಷವನ್ನು ಸಂಭ್ರಮಿಸಲು ಥ್ಯಾಂಕ್ಸ್ ಗಿವಿಂಗ್ ಸಮಾರಂಭ ಆಯೋಜಿಸಲಾಗಿತ್ತು.   ಈ ಸಂದರ್ಭದಲ್ಲಿ ಮಾತನಾಡಿದ ಕಿಚ್ಚ ಸುದೀಪ್, ಎರಡೂವರೆ ....

175

Read More...

Mr Jack.Film News

Monday, December 30, 2024

‘Rank Star’ ಗುರುನಂದನ್‍ಗೆ ಹುಟ್ಟಹಬ್ಬದ ಸಂಭ್ರಮ   ಹುಟ್ಟುಹಬ್ಬಕ್ಕೆ ಚಿತ್ರತಂಡದಿಂದ ವಿಶೇಷ ಉಡುಗೊರೆ   ಹೊಸ ಚಿತ್ರದ ಶೀರ್ಷಿಕೆ ಟೀಸರ‍್ ಅನಾವರಣ   ಗುರುನಂದನ್‍ ಹೊಸ ಚಿತ್ರ ‘ಮಿಸ್ಟರ್ ಜಾಕ್‍’   ‘Rank Star’ ಗುರುನಂದನ್‍, ಮಂಡಿಮನೆ ಟಾಕೀಸ್‍ ಎಂಬ ನಿರ್ಮಾಣ ಸಂಸ್ಥೆಯನ್ನು ಪ್ರಾರಂಭಿಸಿ, ಅದರಡಿ ಸ್ನೇಹಿತರೊಂದಿಗೆ ಜೊತೆಗೂಡಿ ಒಂದು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಈ ಚಿತ್ರಕ್ಕೆ ಅಶ್ವಿನಿ‌ ಪುನೀತ್ ರಾಜ್‍ಕುಮಾರ್ ಕೆಲವು ತಿಂಗಳುಗಳ ಹಿಂದೆ ಕ್ಲ್ಯಾಪ್ ಮಾಡುವ ಮೂಲಕ ಚಾಲನೆ ನೀಡಿದ್ದರು. ಇದೀಗ ಚಿತ್ರದ ಚಿತ್ರೀಕರಣ ಮುಕ್ತಾಯದ ಹಂತಕ್ಕೆ ಬಂದಿದೆ.   ಸೋಮವಾರ, ಗುರುನಂದನ್‍ ತಮ್ಮ ಹುಟ್ಟುಹಬ್ಬವನ್ನು ....

182

Read More...

Gor Gad.Film News

Monday, December 30, 2024

  ಗೋರ್ ಗಡ್ ಟೀಸರ್ ಬಿಡುಗಡೆ           ಪ್ರಸ್ತುತ ಚಂದನವನದಲ್ಲಿ ಎಲ್ಲಾ ಕೆಲಸ ಮುಗಿಸಿದ ನಂತರ ಮಾಧ್ಯಮದ ಮುಂದೆ ಬರುವುದು. ಪ್ರಾರಂಭದಿಂದಲೂ ಸದಾ ಸುದ್ದಿಯಲ್ಲಿರುವುದು. ಅದೇ ರೀತಿಯಲ್ಲಿ ’ಗೋರ್ ಗಡ್’ ಎನ್ನುವ ಚಿತ್ರವು ಎರಡನೇ ಸಾಲಿಗೆ ಸೇರಿಕೊಳ್ಳುತ್ತದೆ. ಶೂಟಿಂಗ್‌ಗೆ ಹೋಗುತ್ತಿದ್ದೇವೆಂದು ಹೇಳಿಕೊಳ್ಳಲೆಂದು ಟೀಸರ್ ಬಿಡುಗಡೆ ಸಮಾರಂಭವನ್ನು ಏರ್ಪಾಟು ಮಾಡಿದ್ದರು. ದಾವಣಗೆರೆಯ ಶಶಿಕುಮಾರ್.ಜೆ.ಕೆ ಸಿನಿಮಾಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು ನಾಲ್ಕನೇ ಬಾರಿ ನಿರ್ದೇಶನ ಮಾಡುತ್ತಿದ್ದಾರೆ.         ಹೊಸೂರುನಲ್ಲಿ ಅಪ್ಪ ಕಾರು ಚಾಲಕರಾಗಿದ್ದರು. ಡಿಎಸ್‌ಕೆ ಗ್ರೂಪ್ ಶುರು ಮಾಡಿ ಉದ್ಯಮದಲ್ಲಿ ಯಶಸ್ಸು ಕಂಡಿದ್ದರಿಂದ ಸಮಾಜ ಸೇವೆಯಲ್ಲಿ ....

202

Read More...

Sanju weds Geetha 2.News

Sunday, December 29, 2024

  ಶಿಡ್ಲಘಟ್ಟದಿಂದ ಸ್ವಿಟ್ಜರ್ ಲ್ಯಾಂಡ್ ವರೆಗೆ   ಸಂಜು ವೆಡ್ಸ್ ಗೀತಾ ಕಥೆ..   ಮಳೆಯಂತೇ ಬಾ... ಬೆಳಕಂತೇ ಬಾ... ಸುದೀಪ್ ಹರಸಿದ ಹಾಡು   ಸಂಜು ವೆಡ್ಸ್ ಗೀತಾ ಕಥೆ ಸುದೀಪ್ ಕೊಟ್ಟಿದ್ದು !      ಪವಿತ್ರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ  ಚಲವಾದಿ ಕುಮಾರ್ ಅವರ  ನಿರ್ಮಾಣದ  ಬಹು ನಿರೀಕ್ಷಿತ ಸಂಜು ವೆಡ್ಸ್  ಗೀತಾ-2  ಜನವರಿ 10ರಂದು  ಪ್ರಪಂಚದಾದ್ಯಂತ  ಬಿಡುಗಡೆಯಾಗಲಿದೆ. ಶಿಡ್ಲಘಟ್ಟದ ರೇಶ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್  ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರೆ. ಆನಂದ  ಆಡಿಯೋ ಮೂಲಕ ರಿಲೀಸಾಗಿರುವ ಹಾಡುಗಳು ಕೇಳುಗರ ಮನ ಗೆದ್ದಿವೆ. ಇದೀಗ ಈ ಚಿತ್ರದ ಮತ್ತೊಂದು  ....

227

Read More...
Copyright@2018 Chitralahari | All Rights Reserved. Photo Journalist K.S. Mokshendra,