ಅದ್ದೂರಿಯಾಗಿ ಸೆಟ್ಟೇರಿತು ’ಅಯೋಗ್ಯ-2' ಸಿನಿಮಾ 'ಅಯೋಗ್ಯ 2'ಗೆ ಅದ್ದೂರಿ ಮುಹೂರ್ತ ಮತ್ತೆ ಅಭಿಮಾನಿಗಳ ಮುಂದೆ ಸೂಪರ್ ಸಕ್ಸಸ್ ಜೋಡಿ ಸತೀಶ್-ರಚಿತಾ ಸ್ಯಾಂಡಲ್ ವುಡ್ ನ ಸೂಪರ್ ಸಕ್ಸಸ್ ಜೋಡಿಗಳಲ್ಲಿ ಒಂದಾಗಿರುವ ರಚಿತಾ ರಾಮ್ ಹಾಗೂ ಸತೀಶ್ ನೀನಾಸಂ ಮತ್ತೆ ಅಭಿಮಾನಿಗಳ ಮುಂದೆ ಸಜ್ಜಾಗಿದ್ದಾರೆ. ಹೌದು ‘ಅಯೋಗ್ಯ 2’ ಸಿನಿಮಾಗಿ ರಚಿತಾ ರಾಮ್ ಮತ್ತು ಸತೀಶ್ ನೀನಾಸಂ ಒಂದಾಗಿದ್ದಾರೆ. ಸೂಪರ್ ಹಿಟ್ ಅಯೋಗ್ಯ ಸಿನಿಮಾ ಮೂಲಕ ಮೋಡಿ ಮಾಡಿದ್ದ ಈ ಜೋಡಿ ಇದೀಗ 6 ವರ್ಷಗಳ ಬಳಿಕ ಮತ್ತೆ ಅಭಿಮಾನಿಗಳನ್ನು ರಂಜಿಸಲು ರೆಡಿಯಾಗಿದ್ದಾರೆ. ಅಯೋಗ್ಯ-2 ಸಿನಿಮಾ ಅದ್ದೂರಿಯಾಗಿ ಸೆಟ್ಟೇರಿದೆ. ಇಂದು ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ನಡೆದ ಅದ್ದೂರಿ ಮುಹೂರ್ತ ....
*ಜನವರಿ 10ರಂದು ಶರಣ್ ಅಭಿನಯದ "ಛೂಮಂತರ್"* *ಸಂಕ್ರಾಂತಿ ಸಮಯಕ್ಕೆ ಬಹಳ ವರ್ಷಗಳ ನಂತರ ಕನ್ನಡ ಚಿತ್ರವೊಂದರ ಬಿಡುಗಡೆ* ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ತರುಣ್ ಶಿವಪ್ಪ ಹಾಗೂ ಮಾನಸ ತರುಣ್ ನಿರ್ಮಿಸಿರುವ, "ಕರ್ವ" ಖ್ಯಾತಿಯ ನವನೀತ್ ನಿರ್ದೇಶನದಲ್ಲಿ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಛೂ ಮಂತರ್" ಚಿತ್ರ ಹೊಸವರ್ಷದ ಆರಂಭದಲ್ಲಿ ಹಾಗೂ ಸಂಕ್ರಾಂತಿ ಸಮೀಪದಲ್ಲಿ ಅಂದರೆ ಜನವರಿ 10 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಂಕ್ರಾಂತಿ ಸಮಯದಲ್ಲಿ ತೆಲುಗು, ತಮಿಳಿನ ದೊಡ್ಡದೊಡ್ಡ ಚಿತ್ರಗಳು ಬಿಡುಗಡೆಯಾಗುತ್ತಿದ್ದವು. ಆದರೆ ಕನ್ನಡದಲ್ಲಿ ಯಾವುದೇ ಚಿತ್ರಗಳು ಸಂಕ್ರಾಂತಿ ಸಮಯದಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಿಡುಗಡೆಯಾಗಿಲ್ಲ. ಬಹಳ ....
*ದಾಸರಹಳ್ಳಿ ಟ್ರೇಲರ್ ರಿಲೀಸ್: ಕ್ಯಾಡ್ಬರಿ ಮಾಸ್ ಎಂಟ್ರಿ..!* *'ದಾಸರಹಳ್ಳಿ’ ಟ್ರೇಲರ್ ಔಟ್ : ಥ್ರಿಲ್ಲರ್ ಮಂಜು ಫೈಟ್.. ಧರ್ಮ ಆಕ್ಷನ್.. ಸೂಪರ್ ಕಿಕ್..!* ಪಿ.ಉಮೇಶ ನಿರ್ಮಾಣದ ಎಂ. ಆರ್. ಶ್ರೀನಿವಾಸ್ ನಿರ್ದೇಶನದ ದಾಸರಹಳ್ಳಿ ಸಿನಿಮಾದ ಟ್ರೇಲರ್ ರಿಲೀಸ್ ಆಗಿದೆ. ಮಾಸ್ ಪ್ರಿಯರಿಗೊಂದು ಕಿಕ್ಕೇರಿಸುವಂತ ಟ್ರೇಲರ್ ಇದಾಗಿದೆ. ಧರ್ಮ ಕೀರ್ತಿರಾಜ್ ಮುಖ್ಯಭೂಮಿಕೆಯಲ್ಲಿರುವ ಸಿನಿಮಾ ಇದಾಗಿದ್ದು, ಚಾಕ್ಲೇಟ್ ಬಾಯ್ ದೊಣ್ಣೆ ಹಿಡಿದರೆ ಎದುರಿದ್ದವರ ಮೀಟರ್ ಆಫ್ ಆಗೋದು ಗ್ಯಾರಂಟಿ. ಟ್ರೇಲರ್ ನಲ್ಲಿ ಮಾಸ್ ಎಲಿಮೆಂಟ್ಸ್ ಎದ್ದು ಕಾಣಿಸುತ್ತಿದೆ. ಟ್ರೇಲರ್ ಲಾಂಚ್ ವೇಳೆ ಸಿನಿಮಾದ ಹಿರಿಯ ಕಲಾವಿದರು ಕೂಡ ಭಾಗಿಯಾಗಿದ್ದರು. ಈ ವೇಳೆ ನಿರ್ದೇಶಕ ಎಂ. ಆರ್. ....
ಬಿಡುಗಡೆ ಆಯ್ತು
*ಔಟ್ ಆಫ್ ಸಿಲಬಸ್* Trailer..
ಶ್ರೀಮತಿ ವಿಜಯಕಲಾ ಸುಧಾಕರ್,ತನುಷ್ ಎಸ್ ವಿ,
ದೇಸಾಯಿ ಗೌಡ ಜಂಟಿಯಾಗಿ ನಿರ್ಮಾಣ ಮಾಡಿರುವ,
ಪ್ರದೀಪ್ ದೊಡ್ಡಯ್ಯ ನಟಿಸಿ,ನಿರ್ದೇಶನ ಮಾಡಿರುವ
*ಔಟ್ ಆಫ್ ಸಿಲಬಸ್* ಚಿತ್ರದ ಟ್ರೈಲರ್ ಬಿಡುಗಡೆ ಜೊತೆಗೆ ಚಿತ್ರ ಬಿಡುಗಡೆಯ ದಿನಾಂಕವನ್ನು ಸಹ ಚಿತ್ರ ತಂಡ ಅಧಿಕೃತವಾಗಿ ಘೋಷಣೆ ಮಾಡಿತು..
*ಔಟ್ ಆಫ್ ಸಿಲಬಸ್*
ಟ್ರೈಲರ್ ಸಖತ್ ಇಂಟರೆಸ್ಟಿಂಗ್ ಆಗಿದ್ದು,ಯುವ ಜನತೆಯನ್ನು ಕೇಂದ್ರವಾಗಿಟ್ಟು,ಭರ್ಜರಿ ಮನೋರಂಜನೆ ಕೊಡುವ ಎಲ್ಲ ಅಂಶಗಳನ್ನು ಒಳಗೊಂಡಿದೆ, ಚಿತ್ರವೂ ರಾಜ್ಯಾದ್ಯಂತ ಇದೇ ಡಿಸೆಂಬರ್ 27ಕ್ಕೆ ಬಿಡುಗಡೆ ಆಗುತ್ತಿದೆ..
*ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ "ಅಪಾಯವಿದೆ ಎಚ್ಚರಿಕೆ"* . *ನಾಯಕನಾಗಿ "ಅಣ್ಣಯ್ಯ" ಧಾರಾವಾಹಿಯ ಜನಪ್ರಿಯ ನಟ ವಿಕಾಶ್ ಉತ್ತಯ್ಯ* . ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ. ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ "ಅಪಾಯವಿದೆ ಎಚ್ಚರಿಕೆ" ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಅಣ್ಣಯ್ಯ" ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ. ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ ಗೌಡ ಈ ನಿರ್ಮಾಣ ....
. *ಹಾಡಿನಲ್ಲೇ ಮೋಡಿ ಮಾಡಿದ "ಕೋರ"* *ಸುನಾಮಿ ಕಿಟ್ಟಿ ಅಭಿನಯದ, ಪಿ.ಮೂರ್ತಿ ನಿರ್ಮಾಣ ಹಾಗೂ ಒರಟ ಶ್ರೀ ನಿರ್ದೇಶನದ ಈ ಚಿತ್ರ ಜನವರಿಯಲ್ಲಿ ತೆರೆಗೆ* ರತ್ನಮ್ಮ ಮೂವೀಸ್ ಲಾಂಛನದಲ್ಲಿ ಪಿ.ಮೂರ್ತಿ ನಿರ್ಮಿಸಿರುವ, ಒರಟ ಶ್ರೀ ನಿರ್ದೇಶನದ ಹಾಗೂ ರಿಯಾಲಿಟಿ ಶೋ ಮೂಲಕ ನಾಡಿನ ಜನರ ಗಮನ ಸೆಳೆದಿದ್ದ ಸುನಾಮಿ ಕಿಟ್ಟಿ ನಾಯಕನಾಗಿ ನಟಿಸಿರುವ "ಕೋರ" ಚಿತ್ರದ "ಒಪ್ಪಿಕೊಂಡಳು" ಹಾಡು ಇತ್ತೀಚಿಗೆ ಬಿಡುಗಡೆಯಾಗಿ, ಒಂದು ಮಿಲಿಯನ್ ಗೂ ಅಧಿಕ ವೀಕ್ಷಣೆಯಾಗಿದೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜನವರಿಯಲ್ಲಿ ಬಿಡುಗಡೆಯಾಗಲಿದೆ. ಹಾಡು ಗೆದ್ದಿರುವ ಖುಷಿಯನ್ನು ಹಂಚಿಕೊಳ್ಳಲು ಹಾಗೂ ಚಿತ್ರದ ....
*ಧಿಕ್ಕಾರಕ್ಕಿಂತ ಆಧಿಕಾರ ಮುಖ್ಯ ಎಂದು "ವಾರ್ನರ್" ಮೂಲಕ ಹೇಳಿದ ರಿಯಲ್ ಸ್ಟಾರ್* . *ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಾಣದ ಹಾಗೂ ಉಪೇಂದ್ರ ನಿರ್ದೇಶಿಸಿ, ನಟಿಸಿರುವ "UI" ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ* . ಜಿ.ಮನೋಹರನ್ ಮತ್ತು ಕೆ.ಪಿ.ಶ್ರೀಕಾಂತ್ ನಿರ್ಮಿಸಿರುವ, ಸುಮಾರು ವರ್ಷಗಳ ಬಳಿಕ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ "UI" ಚಿತ್ರದ ವಾರ್ನರ್ ಬಿಡುಗಡೆಯಾಗಿದೆ. ಎಲ್ಲಾ ಚಿತ್ರಗಳಲ್ಲೂ ಸಾಮಾನ್ಯವಾಗಿ ಟೀಸರ್ ಹಾಗೂ ಟ್ರೇಲರ್ ಬಿಡುಗಡೆ ಮಾಡುತ್ತಾರೆ. ಆದರೆ ಉಪೇಂದ್ರ ಅವರು ಇವೆರಡನ್ನೂ ಬಿಡುಗಡೆ ಮಾಡದೆ ವಾರ್ನರ್ ಬಿಡುಗಡೆ ಮಾಡಿದ್ದಾರೆ. ಈ ವಾರ್ನರ್ ನಲ್ಲಿ 2040ರ ಕಾಲಘಟ್ಟದ ಪರಿಸ್ಥಿತಿಯನ್ನು ತೋರಿಸುವ ....
ಸುದೀಪ್ ಮಾತಲ್ಲಿ ಮ್ಯಾಕ್ಸ್ ಅನುಭವಗಳು ಈ ವರ್ಷದ ಡಿಸೆಂಬರ್ ತಿಂಗಳ ಬಹು ನಿರೀಕ್ಷೆಯ ಚಿತ್ರಗಳಲ್ಲಿ ‘ಮ್ಯಾಕ್ಸ್’ ಕೂಡ ಸೇರ್ಪಡೆಯಾಗಿದೆ. ಇದೇ ೨೫ರಂದು ವಿಶ್ವದಾದ್ಯಂತ ತೆರೆಗೆ ಬರುತ್ತಿರುವುದರಿಂದ, ತಂಡವು ಮೊದಲ ಬಾರಿ ಮಾಧ್ಯಮದ ಮುಂದೆ ಹಾಜರಾಗಿ ಅನುಭವಗಳನ್ನು ಹೇಳಿಕೊಂಡರು. ಕಿಚ್ಚ ಸುದೀಪ್ ಮಾತನಾಡಿ ಕಲೈಪುಲಿ ಥನು ಈಗಾಗಲೇ ನಲವತ್ತೇಳು ಚಿತ್ರಗಳನ್ನು ನಿರ್ಮಿಸಿದ್ದಾರೆ. ಅವರು ಕನ್ನಡ ಚಿತ್ರರಂಗಕ್ಕೆ ಬಂದಿರುವುದು ಹೆಮ್ಮೆಯ ವಿಷಯ. ನಿರ್ದೇಶಕ ವಿಜಯ್ ಕಾರ್ತಿಕೇಯನ್ ಕಥೆ ಹೇಳಲು ಚೆನ್ನೈನಿಂದ ಬೆಂಗಳೂರಿಗೆ ಬಂದವರು. ನನಗೆ ಇಷ್ಟವಾಗದಿದ್ದಲ್ಲಿ ಮಾತುಕತೆ ಸ್ಪಲ್ಪ ಹೊತ್ತಿನಲ್ಲೆ ಮುಗಿದು ....
*"ಮುಂಗಾರು ಮಳೆ" ನಂತರ "ಮನದ ಕಡಲು"* . *ಇದು ಯೋಗರಾಜ್ ಭಟ್ ಹಾಗೂ ಇ.ಕೃಷ್ಣಪ್ಪ ಕಾಂಬಿನೇಷನ್ ನಲ್ಲಿ ಮೂಡಿಬರುತ್ತಿರುವ ಮತ್ತೊಂದು ವಿಭಿನ್ನ ಪ್ರೇಮ ಕಥಾನಕ* . ಹದಿನೆಂಟು ವರ್ಷಗಳ ಹಿಂದೆ ಇ.ಕೆ. ಎಂಟರ್ ಟೈನರ್ಸ್ ಲಾಂಛನದಲ್ಲಿ ಇ. ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಸೂಪರ್ ಹಿಟ್ ಚಲನಚಿತ್ರ "ಮುಂಗಾರು ಮಳೆ". ಇಷ್ಟು ವರ್ಷಗಳ ಬಳಿಕ ಈ ಜೋಡಿ ಮತ್ತೆ ಒಂದಾಗಿದೆ. ಇ.ಕೃಷ್ಣಪ್ಪ ನಿರ್ಮಾಣದಲ್ಲಿ ಯೋಗರಾಜ್ ಭಟ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಹೆಸರು "ಮನದ ಕಡಲು". ಸುಮುಖ ಈ ಚಿತ್ರದ ನಾಯಕನಾಗಿ, ರಾಶಿಕಾ ಶೆಟ್ಟಿ ಮತ್ತು ಅಂಜಲಿ ಅನೀಶ್ ನಾಯಕಿಯರಾಗಿ ಹಾಗೂ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ....
ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ* . ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.* . ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ "ತಮಟೆ" ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ ....
*ರೇವಣ ಸಿದ್ದೇಶ್ವರ ಬೆಟ್ಟದಲ್ಲಿ "ಕುಲದಲ್ಲಿ ಕೀಳ್ಯಾವುದೊ" ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್* .* . *ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು."* ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ "ಕುಲದಲ್ಲಿ ಕೀಳ್ಯಾವುದೋ" ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ....
*"ಕುಂಭ ಸಂಭವ" ದಲ್ಲಿ ಮತ್ತೆ ಪೊಲೀಸ್ ಅಧಿಕಾರಿಯಾದ "ಭೀಮ" ಖ್ಯಾತಿಯ ಪ್ರಿಯ* . *ಸಾಮಾಜಿಕ ಸಮಸ್ಯೆಯ ಸುತ್ತಲ್ಲಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಟಿ.ಎನ್.ನಾಗೇಶ್ ನಿರ್ದೇಶನ* . "ಭೀಮ" ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯ ಅವರು ಟಿ.ಎನ್.ನಾಗೇಶ್ ನಿರ್ದೇಶನದ "ಕುಂಭ ಸಂಭವ" ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗೆ ಈ ಚಿತ್ರದ ಮುಹೂರ್ತ ಸಮಾರಂಭ ವಿಜಯನಗರದ ಶ್ರೀಗಣಪತಿ ದೇವಸ್ಥಾನದಲ್ಲಿ ಆರಂಭವಾಯಿತು. ನರೇಶ್ ಅವರು ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ನಂತರ ಚಿತ್ರತಂಡದ ಸದಸ್ಯರು ....
ಸತೀಶ್ ನೀನಾಸಂರಿಂದ ‘ಧೀರ ಭಗತ್ ರಾಯ್’ ಚಿತ್ರದ ಹಾಡು ಬಿಡುಗಡೆ ʼಆಕಾಶದ ನೀಲಿ ಎದ್ದುʼ ಹಾಡಿಗೆ ಕವಿರಾಜ್ ಸಾಹಿತ್ಯ, ನವೀನ್ ಸಜ್ಜು ಗಾಯನ ‘ಧೀರ ಭಗತ್ ರಾಯ್’ ಚಿತ್ರವು ಡಿ. ೬ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಈ ಮಧ್ಯೆ, ಚಿತ್ರದ ʼಆಕಾಶದ ನೀಲಿ ಎದ್ದುʼ ಎಂಬ ಹಾಡು ಬಿಡುಗಡೆ ಆಗಿದೆ. ಖ್ಯಾತ ಗೀತರಚನೆಕಾರ ಕವಿರಾಜ್ ಬರೆದು, ನವೀನ್ ಸಜ್ಜು ಹಾಡಿರುವ ಈ ಹಾಡಿಗೆ ಪೂರ್ಣಚಂದ್ರ ತೇಜಸ್ವಿ ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಇತ್ತೀಚೆಗೆ ಸತೀಶ್ ನೀನಾಸಂ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ಹಾಡು ಬಿಡುಗಡೆ ಮಾಡಿ ಮಾತನಾಡಿದ ಸತೀಶ್ ನೀನಾಸಂ, ʼಈ ಸಿನಿಮಾ ಹೊಸಬರದ್ದಿರಬಹುದು. ಆದರೆ, ....
*"ಮಫ್ತಿ" ಚಿತ್ರದ "ಭೈರತಿ ರಣಗಲ್" ಪಾತ್ರ ಇಷ್ಟಪಟ್ಟಿದ್ದಿರಿ. "ಭೈರತಿ ರಣಗಲ್" ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ** . *ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ* ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ....
*ಒಂದೇ ದಿನ ಆರಂಭವಾಯಿತು ಹರಿ ಸಂತೋಷ್ ಸಾರಥ್ಯದ ಎರಡು ಚಿತ್ರಗಳು* . *"ಡಿಸ್ಕೊ" ಚಿತ್ರದಲ್ಲಿ ವಿಕ್ಕಿ ವರುಣ್* . *ಹೊಸತಂಡದೊಂದಿಗೆ "congratulations ಬ್ರದರ್* " "ಅಲೆಮಾರಿ" ಚಿತ್ರದೊಂದಿಗೆ ನಿರ್ದೇಶಕನಾಗಿ ಸಿನಿ ಜರ್ನಿ ಆರಂಭಿಸಿ, ಇಲ್ಲಿಯವರೆಗೂ ಹತ್ತು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಹರಿ ಸಂತೋಷ್, ಸಾರಥ್ಯದ ಎರಡು ಚಿತ್ರಗಳ ಆರಂಭೋತ್ಸವ ಕಾರ್ತಿಕ ಸೋಮವಾರದ ಶುಭದಿನದಂದು ನೆರವೇರಿತು. ಕೆ.ವಿ.ಎನ್ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ವೆಂಕಟ್ ನಾರಾಯಣ್ ಹಾಗೂ ರವಿಕುಮಾರ್ ಪೋಸ್ಟರ್ ಅನಾವರಣ ಮಾಡುವ ಮೂಲಕ ನೂತನ ಚಿತ್ರಗಳಿಗೆ ಚಾಲನೆ ನೀಡಿದರು. ಡಿ.ಎಸ್ ಮ್ಯಾಕ್ಸ್ ನ ದಯಾನಂದ್ ಸೇರಿದಂತೆ ಹಲವು ಗಣ್ಯರು ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ....
*ಡಾರ್ಲಿಂಗ್ ಕೃಷ್ಣ ಅವರಿಂದ ಬಿಡುಗಡೆಯಾಯಿತು ಕೆಂಪೇಗೌಡ ಅಭಿನಯದ "ಕಟ್ಲೆ" ಸಿನಿಮಾದ ಮೊದಲ ಹಾಡು* . *ಭರತ್ ಗೌಡ ನಿರ್ಮಾಣದ ಹಾಗೂ ಶ್ರೀವಿದ ನಿರ್ದೇಶನದ ಈ ಚಿತ್ರ ಸದ್ಯದಲ್ಲೇ ತೆರೆಗೆ* . ಭರತ್ ಗೌಡ ಹೊಸಕೋಟೆ ನಿರ್ಮಾಣದ, ಶ್ರೀವಿದ ನಿರ್ದೇಶನದ ಹಾಗೂ ಹಾಸ್ಯನಟನಾಗಿ ಜನಮನ ಗೆದ್ದಿರುವ ಕೆಂಪೇಗೌಡ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಟ್ಲೆ" ಚಿತ್ರದ ಮೊದಲ ಹಾಡನ್ನು ನಟ ಡಾರ್ಲಿಂಗ್ ಕೃಷ್ಣ ಇತ್ತೀಚೆಗೆ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಯಾರೋ ನಾ ಕಾಣೆ. ಚಂದಾಗೌಳೆ ಶಾಣೆ" ಎಂಬ ಈ ಹಾಡನ್ನು ಖ್ಯಾತ ಗಾಯಕ ಟಿಪ್ಪು ಅವರು ಹಾಡಿದ್ದು, ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ....
*ಅರಕೆರೆಯಲ್ಲಿ ಆರಂಭವಾಯಿತು ನಟ ಕಮಲ್ ಸಾರಥ್ಯದ "MYTH FX" ಸ್ಟುಡಿಯೋ* . *ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಅವರಿಂದ ಅನಾವರಣ* . ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ "MYTH FX" ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು. ನಂತರ ಗಣ್ಯರು ಹಾಗೂ ಸ್ಟುಡಿಯೋ ಮುಖ್ಯಸ್ಥರು ಮಾತನಾಡಿದರು. ವಿಡಿಯೋ ಕಾನ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ....
ಲವ್ ರೆಡ್ಡಿ Lovers Show & Pre Release Event Highlights Points For Article
ದುನಿಯಾ ವಿಜಯ್ ಎದುರು ಕಣ್ಣೀರಿಟ್ಟ ಪ್ರೇಮಿಗಳು
ಲವ್ ರೆಡ್ಡಿ ಲವರ್ಸ್ ಶೋ ನೋಡಿ ಭಾವುಕರಾದ ಯುವ ಜೋಡಿಗಳು
ಲವ್ ರೆಡ್ಡಿ ನೋಡಿ ಎದ್ದು ನಿಂತು ಚಪ್ಪಾಳೆ ಹೊಡೆದ ಪ್ರೇಕ್ಷಕರು
ಲವ್ ರೆಡ್ಡಿ ಲವ್ವರ್ಸ್ ಶೋಗೆ ಆಗಮಿಸಿದ ಹಲವಾರು ಜೋಡಿಗಳು ಸಿನಿಮಾ ನೋಡಿ ಕಣ್ಣೀರಿಟ್ಟ ಘಟನೆ ನಿನ್ನೆ ಕಲಾವಿದ್ರ ಸಂಘದಲ್ಲಿ ನಡಿತು..
ಇದೇ ಶುಕ್ರವಾರ ಅಂದ್ರೆ ನಾಳೆ ರಿಲೀಸ್ ಆಗ್ತಿರೋ ಲವ್ ರೆಡ್ಡಿ ಚಿತ್ರತಂಡ ಲವರ್ಸ್ ಗೆ ಅಂತ ವಿಶೇಷ ಶೋ ಏರ್ಪಡಿಸಿತ್ತು... ಈವೇಳೆ ಆಗಮಿಸಿದ್ದ ಪ್ರೇಮುಗಳು ,ಫ್ಯಾಮಿಲಿಗಳು ಸಿನಿಮಾ ನೋಡಿ ಅಕ್ಷರಃ ಭಾವುಕರಾಗಿ ಎದ್ದು ನಿಂತು ಚಪ್ಪಾಳೆ ತಟ್ಟಿದರು..
*ಮತದಾನದ ಮಹತ್ವ ತಿಳಿಸುವ "ಪ್ರಭುತ್ವ".* . *ಚೇತನ್ ಚಂದ್ರ ನಾಯಕನಾಗಿ ನಟಿಸಿರುವ ಈ ಚಿತ್ರ ನವೆಂಬರ್ 22 ರಂದು ತೆರಗೆ* . ಇತ್ತೀಚೆಗೆ ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಸಿನಿಮಾಗಳನ್ನು ಜನ ಹೆಚ್ಚಾಗಿ ಮೆಚ್ಚಿಕೊಳ್ಳುತ್ತಿದ್ದಾರೆ. ಅಂತಹುದೇ ಉತ್ತಮ ಕಂಟೆಂಟ್ ವುಳ್ಳ , ಮತದಾನದ ಮಹತ್ವ ತಿಳಿಸುವ " "ಪ್ರಭುತ್ವ" ಈ ವಾರ(ನವೆಂಬರ್ 22) ತೆರೆ ಕಾಣುತ್ತಿದೆ. ಚೇತನ್ ಚಂದ್ರ ನಾಯಕರಾಗಿ ನಟಿಸಿರುವ ಈ ಚಿತ್ರವನ್ನು ರವಿರಾಜ್ ಎಸ್ ಕುಮಾರ್ ನಿರ್ಮಿಸಿದ್ದಾರೆ. ಮೇಘಡಹಳ್ಳಿ ಶಿವಕುಮಾರ್ ಕಥೆ ಬರೆದಿದ್ದಾರೆ. ಬಿಡುಗಡೆಯ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಪ್ರತಿಯೊಬ್ಬ ಮತದಾರರು ಈ ....
*ನಾ ನಿನ್ನ ಬಿಡಲಾರೆ* ಟ್ರೈಲರ್ ಲಾಂಚ್ ಶ್ರೀಮತಿ ಭಾರತಿ ಬಾಲಿ ನಿರ್ಮಾಣದ,ನವೀನ್ ಜಿ ಎಸ್ ನಿರ್ದೇಶನದ *ನಾ ನಿನ್ನ ಬಿಡಲಾರೆ* ಚಿತ್ರದ ಟ್ರೈಲರ್ ಇಂದು ಬಿಡುಗಡೆಯಾಗಿದ್ದು, ಚಿತ್ರ ಬಹಳ ಒಳ್ಳೆಯ ಪ್ರಶಂಸೆಗೆ ಪಾತ್ರವಾಗಿದೆ ಅಂಬಾಲಿ ಭಾರತಿ,ಪಂಚಿ, ಕೆ ಎಸ್ ಶ್ರಿಧರ್,ಶ್ರೀನಿವಾಸ್ ಪ್ರಭು,ಮದನ್ ಹರಿಣಿ,ಮಹಾಂತೇಶ್ ಸೇರಿ ಸಾಕಷ್ಟು ಪ್ರತಿಭಾವಂತ ಕಲಾವಿದರ ದಂಡು ಇದರಲ್ಲಿ ಇದ್ದು, ಟ್ರೈಲರ್ ನಲ್ಲಿ ನಿರ್ದೇಶಕರು ಬಿಟ್ಟ ಕೆಲವು ತುಣುಕುಗಳನ್ನು ನೋಡಿದಾಗ ದೇವರು,ದೈವತ್ವ, ಮತ್ತು ಸಸ್ಪೆನ್ಸ್ ಥ್ರಿಲ್ಲಿಂಗ್ ಅಂಶಗಳು ತುಂಬಾ ಇವೆ ಎಂಬುದು ಎಲ್ಲರ ಗಮನಕ್ಕೆ ಬರುತ್ತಿದೆ.ಡಿಫರೆಂಟ್ ಡ್ಯಾನಿ ಸಾಹಸ ಚಿತ್ರಕ್ಕೆ ಮತ್ತೊಂದು ಪ್ಲಸ್ ಪಾಯಿಂಟ್.. ....