Jigar.Film News

Tuesday, July 02, 2024

 

*ಈ ವಾರ ತೆರೆಗೆ ಪ್ರವೀಣ್ ತೇಜ್ ಅಭಿನಯದ "ಜಿಗರ್"* . 

 

   ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ " ಜಿಗರ್" ಚಿತ್ರ ಈ ವಾರ (ಜುಲೈ 5) ರಂದು ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ.    

217

Read More...

Sambavami Yuge Yuge.News

Saturday, June 29, 2024

  *ಉತ್ತಮ ಸಂದೇಶವಿರುವ ‘ಸಂಭವಾಮಿ ಯುಗೇ ಯುಗೇ’ ಚಿತ್ರವನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಡುವುದರ ಮೂಲಕ ಪ್ರೋತ್ಸಾಹಿಸಿ. ಇದು ಚಿತ್ರತಂಡದ ಮನವಿ.*   ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ಅವರು ನಿರ್ಮಿಸಿರುವ, ಚೇತನ್ ಚಂದ್ರಶೇಖರ್ ಶೆಟ್ಟಿ ನಿರ್ದೇಶನದಲ್ಲಿ ಜಯ್ ಶೆಟ್ಟಿ ನಾಯಕನಾಗಿ ನಟಿಸಿರುವ "ಸಂಭಾವಮಿ ಯುಗೇಯುಗೇ" ಚಿತ್ರ ಇತ್ತೀಚಿಗೆ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಆದರೆ ನಿರೀಕ್ಷಿಸಿದಷ್ಟು ಜನರು ಚಿತ್ರ ನೋಡುತ್ತಿಲ್ಲ ಎಂಬ ಬೇಸರ ಚಿತ್ರತಂಡಕ್ಕಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಈ ಕುರಿತು ಮಾತನಾಡಿದರು.   ಪಕ್ಕಾ ಗ್ರಾಮೀಣ ಶೈಲಿಯ, ಉತ್ತಮ ಕಥಾಹಂದರ ಹೊಂದಿರುವ ನಮ್ಮ ಚಿತ್ರದ ಬಗ್ಗೆ ಉತ್ತಮ ....

218

Read More...

Billari.Film News

Monday, July 01, 2024

ಅಮ್ಮನ ಸನ್ನಿದಿಯಲ್ಲಿ ಬಿಲ್ಲಾರಿ ಮುಹೂರ್ತ ಬಹುತೇಕ ಹೊಸಬರೇ ಸೇರಿಕೊಂಡು ಸಿದ್ದಪಡಿಸುತ್ತಿರುವ ‘ಬಿಲ್ಲಾರಿ’ ಚಿತ್ರದ ಮುಹೂರ್ತ ಸಮಾರಂಭವು ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿಅದ್ದೂರಿಯಾಗಿ ನಡೆಯಿತು.ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದಅಧ್ಯಕ್ಷಉಮೇಶ್ ಬಣಕಾರ್‌ಮೊದಲದೃಶ್ಯಕ್ಕೆಕ್ಲಾಪ್ ಮಾಡಿತಂಡಕ್ಕೆಶುಭ ಹಾರೈಸಿದರು.ನಿರ್ಮಾಪಕತಾಯಿ ಲಕ್ಷೀಧನಪಾಲ್‌ಕ್ಯಾಮಾರಆನ್ ಮಾಡಿದರು.ಎವಿಕೆ ಪ್ರೊಡಕ್ಷನ್‌ಅಡಿಯಲ್ಲಿ ರಿಶ್ವಿಕ್‌ಶೆಟ್ಟಿ ಕತೆ ಬರೆದು ನಿರ್ಮಾಣ ಮಾಡುವುದರಜತೆಗೆ ನಾಯಕನಾಗಿಅಭಿನಯಿಸುತ್ತಿದ್ದಾರೆ.ಗೋಕಾಕ್ ಮೂಲದ ಪಿ.ಎಲ್.ಭರಮಣ್ಣಚಿತ್ರಕತೆ-ನಿರ್ದೆಶನದಜವಬ್ದಾರಿಯನ್ನು ....

229

Read More...

Gowri.Film News

Saturday, June 29, 2024

  *ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ "ಗೌರಿ" ಆಗಮನ..* .    *ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ ಅಭಿನಯದ ಚೊಚ್ಚಲ ಚಿತ್ರ ಆಗಸ್ಟ್ 15 ರಂದು ತೆರೆಗೆ.*   ಪತ್ರಕರ್ತ, ನಿರ್ದೇಶಕ ಹಾಗೂ ನಿರ್ಮಾಪಕ ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಲಂಕೇಶ್ "ಗೌರಿ" ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಆಗಸ್ಟ್ 15  ಸ್ವತಂತ್ರ ದಿನಾಚರಣೆ ದಿನ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಲು ಇಂದ್ರಜಿತ್ ಲಂಕೇಶ್ ಅವರು ರಾಜಾಜಿನಗರದ ....

276

Read More...

Kadaadi.Film News

Saturday, June 29, 2024

  ತೆರೆಗೆ ಸಿದ್ದ ಕಾದಾಡಿ          ಸುಪ್ರೀಂ ಹೀರೋ ಶಶಿಕುಮಾರ್ ಪುತ್ರ ಅಕ್ಷಿತ್ ಶಶಿಕುಮಾರ್ ಈಗ ಆದಿತ್ಯ ಶಶಿಕುಮಾರ್ ಅಂತ ಹೆಸರು ಬದಲಾಯಿಸಿಕೊಂಡಿದ್ದು, ’ಕಾದಾಡಿ’ ಎನ್ನುವ ಚಿತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಸಿದ್ದಗೊಂಡಿರುವ ಸಿನಿಮಾವನ್ನು ಸತೀಶ್ ಮಾಲೆಂಪಾಟಿ ನಿರ್ದೇಶಿಸಿ, ಅರುಣಂ ಫಿಲಿಂಸ್ ಮುಖಾಂತರ ನಿರ್ಮಾಣ ಮಾಡಿದ್ದಾರೆ. ಪ್ರಚಾರದ ಕೊನೆ ಹಂತದ ಸಲುವಾಗಿ ಮೊನ್ನೆಯಷ್ಟೇ ನಾಯಕ, ನಿರ್ದೇಶಕ ಹಾಗೂ ವಿಶ್ವ ಫಿಲಂಸ್‌ನ ವಿಶ್ವನಾಥ್ ಮಾಧ್ಯಮದ ಎದುರು ಹಾಜರಾಗಿ ಮಾಹಿತಿ ಹಂಚಿಕೊಂಡರು. ಇದಕ್ಕೂ ಮುನ್ನ ಸಿನಿಮಾದ ನಾಲ್ಕು ಹಾಡುಗಳು ಹಾಗೂ ಟ್ರೇಲರ್ ಅನಾವರಣಗೊಂಡಿತು.         ಸದ್ಯ ನನ್ನ ಹೆಸರನ್ನು ....

249

Read More...

Adavikatte.Film News

Friday, June 28, 2024

  *ಡಿ.ಕೆ.ಸುರೇಶ್ ಅವರಿಂದ ಅನಾವರಣವಾಯಿತು "ಅಡವಿಕಟ್ಟೆ" ಚಿತ್ರದ ಟ್ರೇಲರ್* .      *ಫ್ಯಾಮಿಲಿ ಸ್ಟಾರ್ ಅಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ* .    ಉಮ ಎಸ್ ನಿರ್ಮಿಸಿರುವ, ಸಂಜೀವ್ ಗಾವಂಡಿ ನಿರ್ದೇಶನದ ಹಾಗೂ ಹಿರಿಯನಟ ಆಭಿಜಿತ್ ಹಾಗೂ ನಾಗರಾಜು ಪ್ರಮುಖಪಾತ್ರದಲ್ಲಿ ನಟಿಸಿರುವ "ಅಡವಿಕಟ್ಟೆ" ಚಿತ್ರದ ಟ್ರೇಲರ್ ‌ಇತ್ತೀಚೆಗೆ ಬಿಡುಗಡೆಯಾಯಿತು. ಕಾಂಗ್ರೆಸ್ ಮುಖಂಡರಾದ ಡಿ.ಕೆ.ಸುರೇಶ್ ಈ ಚಿತ್ರದ ಟ್ರೇಲರ್ ಅನಾವರಣ ಮಾಡಿದರು.   ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಡಿ.ಕೆ.ಸುರೇಶ್ ಅವರು, ಕನ್ನಡದಲ್ಲಿ ಸಾಕಷ್ಟು ಉತ್ತಮ ಕಂಟೆಂಟ್ ವುಳ್ಳ ಚಿತ್ರಗಳು ಬರುತ್ತಿದೆ. ಆ ಸಾಲಿಗೆ ಈ ಚಿತ್ರ ಕೂಡ ....

265

Read More...

One and Haif.Film News

Thursday, June 27, 2024

  *ಶೂಟಿಂಗ್ ಮುಗಿಸಿದ ’ಒನ್ ಅಂಡ್ ಹಾಫ್’...ನಿರ್ಮಾಪಕ ಹುಟ್ಟುಹಬ್ಬಕ್ಕೆ ಸಾಂಗ್ ಗ್ಲಿಂಪ್ಸ್ ಉಡುಗೊರೆ*   ಸ್ಯಾಂಡಲ್ ವುಡ್ ನಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ R. ಚರಣ್ ’ಒನ್ ಅಂಡ್ ಹಾಫ್’ ಸಿನಿಮಾ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಇವರ ಜನ್ಮದಿನದ ಪ್ರಯುಕ್ತ ಹಾಡಿನ ಗ್ಲಿಂಪ್ಸ್ ಬಿಡುಗಡೆ ಮಾಡಲಾಯಿತು. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ....

340

Read More...

Nange Allava Music Video.

Wednesday, June 26, 2024

  *ಸಂಜಿತ್ ಹೆಗ್ಡೆ-ಸಂಜನಾ ದಾಸ್ ರೋಮ್ಯಾಂಟಿಕ್ ಗಾನಬಜಾನ...’ನಂಗೆ ಅಲ್ಲವ’ ಎಂದು ಹಾಡಿ ಕುಣಿದ ಸ್ಟಾರ್ ಸಿಂಗರ್*   ಕನ್ನಡದ ಸ್ಟಾರ್ ಸಿಂಗರ್ ಸಂಜಿತ್ ಹೆಗ್ಡೆ ಬರೀ ಕನ್ನಡಕ್ಕೆ ಸೀಮಿತವಾಗದೇ ತಮಿಳು, ತೆಲುಗು ಹಾಗೂ ಹಿಂದಿರಂಗದಲ್ಲಿಯೂ ತಮ್ಮ ಗಾಯನದ ಮೂಲಕ ಸಂಗೀತ ಪ್ರಿಯರನ್ನು ರಂಜಿಸುತ್ತಿದ್ದಾರೆ. ರಿಯಾಲಿಟಿ ಶೋ ಮೂಲಕ ಬೆಳಕಿಗೆ ಬಂದ ಸಂಜಿತ್ ಅತಿ ಕಡಿಮೆ ಅವಧಿಯಲ್ಲಿ ಭಾರೀ ಜನಪ್ರಿಯತೆ ಪಡೆದುಕೊಂಡರು. ಬರೀ ಗಾಯನಕ್ಕೆ ಸೀಮಿತವಾಗದೇ ನಟನೆಯಲ್ಲಿಯೂ ತೊಡಗಿಸಿಕೊಂಡಿರುವ ಸಂಜಿತ್ ಈಗ ಮತ್ತೊಂದು ಹೊಸ ಹಾಡಿನ ಮೂಲಕ ಪ್ರತ್ಯಕ್ಷರಾಗಿದ್ದಾರೆ.   'ನಂಗೆ ಅಲ್ಲವ’ ಅಂತಾ ಸಂಚಿತ್ ಹೆಗ್ಡೆ ಯುವ ನಟಿ ಸಂಜನಾ ದಾಸ್ ಜೊತೆಗೂಡಿ ಹಾಡಿ ಕುಣಿದಿದ್ದಾರೆ. ಹಾಗಂತ ಇದು ಸಿನಿಮಾ ....

176

Read More...

Kaagada.Film News

Tuesday, June 25, 2024

  *ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ "ಕಾಗದ" ಜುಲೈ 5 ರಂದು ತೆರೆಗೆ* ..    *ಇದು 2005ರ ಪ್ರೇಮಕಥೆ* .   ವಿನೋದ್ ಪ್ರಭಾಕರ್ ಅಭಿನಯದ "ರಗಡ್" ಸಿನಿಮಾ ನಿರ್ಮಾಪಕರಾದ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ’ಕಾಗದ’ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಬಿಜೆಪಿ ಮುಖಂಡರಾದ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಕಾಗದ", 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, "ಕಾಗದ" ದಲ್ಲೇ ಪ್ರೀತಿ ....

196

Read More...

Film Prod Association.News

Monday, June 24, 2024

 

*ಜೂನ್ 30 ರಂದು ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ "ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘ" ದ ನೂತನ ಕಟ್ಟಡ ಉದ್ಘಾಟನೆ* .

 

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡ(ಶಿವಾನಂದ ಸರ್ಕಲ್) ಉದ್ಘಾಟನಾ ಸಮಾರಂಭ ಇದೇ ಜೂನ್ 30 ರಂದು ನಡೆಯಲಿದೆ. ಸನ್ಮಾನ್ಯ ಮುಖ್ಯಮಂತ್ರಿಗಾಳಾದ ಸಿದ್ದರಾಮಯ್ಯ ಅವರು ಹೊಸ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಲು ನಿರ್ಮಾಪಕರ ಸಂಘದಲ್ಲಿ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು.

196

Read More...

Naa Ninna Bidalare.News

Monday, June 24, 2024

  *"ನಾ ನಿನ್ನ ಬಿಡಲಾರೆ" ಎನ್ನುತ್ತಿದ್ದಾರೆ ಹೇಮಂತ್ ಹೆಗಡೆ* .             *ಕನ್ನಡದ ಸೂಪರ್ ಹಿಟ್ ಚಿತ್ರದ ಶೀರ್ಷಿಕೆ ಮತ್ತೊಮ್ಮೆ** .                       ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹೇಮಂತ್ ಹೆಗಡೆ ನಿರ್ದೇಶಿಸಿ ಪ್ರಮುಖಪಾತ್ರದಲ್ಲೂ ನಟಿಸುತ್ತಿರುವ "ನಾ ನಿನ್ನ ಬಿಡಲಾರೆ" ಚಿತ್ರದ ಮುಹೂರ್ತ ಸಮಾರಂಭ ಪದ್ಮನಾಭನಗರದ ಶ್ರೀ ಲಕ್ಷ್ಮೀಕಾಂತ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಆರಂಭ ಫಲಕ ತೋರಿದರು. ನೈಸ್ ಸಂಸ್ಥೆಯ ಅಶೋಕ್ ಖೇಣಿ ಅವರು ಕ್ಯಾಮೆರಾ ಚಾಲನೆ ಮಾಡಿದರು. ....

221

Read More...

Monster.Film News

Monday, June 24, 2024

 

*ನಾಲ್ಕು ‌ತಲೆಮಾರಿನ ಕಥೆ ಹೇಳುವ "ಮಾನ್ ಸ್ಟರ್" ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ* . ‌‌

 

ಪುಟ್ಟರಾಜ ರೆಡ್ಡಿ ಅವರ ನಿರ್ಮಾಣದ, ಆರನ್ ಕಾರ್ತಿಕ್ ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ಸಂಗೀತ ‌ಸಂಯೋಜಿಸುವುದರೊಂದಿಗೆ ನಿರ್ದೇಶನವನ್ನು ಮಾಡಿರುವ "ಮಾನ್ ಸ್ಟರ್" ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನೆರವೇರಿತು. ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ಮುನೇಗೌಡ, ನಿರ್ಮಾಪಕ ಹರೀಶ್, ನಟ ರಕ್ಷಕ್ ಬುಲೆಟ್ , ಸಿರಿ ಮ್ಯೂಸಿಕ್ ಸಿರಿ ಚಿಕ್ಕಣ್ಣ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಹಾಡು‌ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

188

Read More...

Shathabisha.Film News

Monday, June 24, 2024

  ಶತಭಿಷ ಟ್ರೈಲರ್, ಕಳ್ಳ ಪೊಲೀಸ್ ಆಟ        'ಶತಭಿಷ’ ಮಳೆ ನಕ್ಷತ್ರದ ಹೆಸರು. ಇದೇ ಶೀರ್ಷಿಕೆಯಡಿ ಚಲನಚಿತ್ರವೊಂದು ನಿರ್ಮಾಣವಾಗಿದ್ದು ಇದೇ ತಿಂಗಳಲ್ಲಿ ತೆರೆಗೆ ಬರಲು ಸಿದ್ದವಾಗಿದೆ‌. ಅದರಂಗವಾಗಿ ಚಿತ್ರದ  ಟ್ರೈಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಪೊಲೀಸರು, ಟೆರರಿಸ್ಟ್ ಗಳು ಹಾಗೂ ಒಂದಷ್ಟು ಯುವಕರು  ಅನಿರೀಕ್ಷಿತವಾಗಿ ಒಂದು ಕಡೆ ಸೇರುವಂತಾಗಿ, ಅಲ್ಲಿ ಒಂದಷ್ಟು ಸಮಸ್ಯೆಗಳು ಎದುರಾಗುತ್ತವೆ. ಅದನ್ನೆಲ್ಲ  ಎದುರಿಸಿ ಅವರು ಹೇಗೆ ಹೊರಬರುತ್ತಾರೆ ಎನ್ನುವುದೇ ಶತಭಿಷ ಚಿತ್ರದ ಕಥಾಹಂದರ. ವೆಂಕಟೇಶ್  ಅವರ ನಿರ್ದೇಶನದಲ್ಲಿ‌ ಮೂಡಿಬಂದಿರುವ ’ಶತಭಿಷ’ ಚಿತ್ರವನ್ನು  ಶ್ರೀ ದುರ್ಗಿ ವಿಷ್ಣು ಕಂಬೈನ್ಸ್ ಮೂಲಕ ಕಾಶಿ ಶೇಖರ್ ಅವರು  ನಿರ್ಮಾಣ ....

185

Read More...

The Present.Film News

Saturday, June 22, 2024

ಕಂಠೀರವದಲ್ಲಿ ಸೆಟ್ಟೇರಿದ ‘ದ ಪ್ರಸೆಂಟ್’        ಹೊಸ ಪ್ರತಿಭೆಗಳಿಗೆ ಅಂತಲೇ ತೆರೆದುಕೊಂಡಿರುವ ಗ್ಲೋಬಲ್ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ (ಜೆನ್) ಸಂಸ್ಥೆಯು ‘ದ ಪ್ರಸೆಂಟ್’ ಸಿನಿಮಾವನ್ನು ಮೊದಲ ಹೆಜ್ಜೆಯಾಗಿ ನಿರ್ಮಾಣ ಮಾಡುತ್ತಿದೆ. ಶುಭ ಶನಿವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಮುಹೂರ್ತ ನಡೆಯಿತು. ಮಾಜಿ ಸಂಸದ ಎಲ್.ಶಿವರಾಮೇಗೌಡ ಅಳಿಯ ರಾಜೀವ್‌ರಾಥೋಡ್ ನಾಯಕನಾಗಿ ನಟಿಸುತ್ತಿರುವುದರಿಂದ, ಸಮಾರಂಭಕ್ಕೆ ಆಗಮಿಸಿ ಪ್ರಥಮ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ರಾಷ್ಟ್ರ ಪ್ರಶಸ್ತಿ ವಿಜೇತ ತುಮಕೂರು ಜಿಲ್ಲೆಯ ಯುವ ರೈತ ರಮೇಶ್ ಕ್ಯಾಮಾರಾ ಆನ್ ಮಾಡಿದರು. ಹಾಗೂ ....

202

Read More...

Jigar.Film News

Saturday, June 22, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ "ಜಿಗರ್" ಚಿತ್ರ ಜುಲೈ 5 ರಂದು ಬಿಡುಗಡೆ* .     ಪೂಜಾ ವಸಂತಕುಮಾರ್ ನಿರ್ಮಾಣದ, ಸೂರಿ ಕುಂದರ್ ನಿರ್ದೇಶನದ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ "ಜಿಗರ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಈ ಚಿತ್ರ ಜುಲೈ 5ರಂದು ತೆರೆಗೆ ಬರುತ್ತಿದೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.               ಪ್ರೇಮಕಥೆಗಳಿಗೆ ಸೀಮಿತನಾಗಿದ್ದ ನನ್ನನ್ನು ನಿರ್ದೇಶಕರು ಈ ಚಿತ್ರದ ಮೂಲಕ ಆಕ್ಷನ್ ಹೀರೋ ಮಾಡಿದ್ದಾರೆ ....

195

Read More...

Appu Cup 2.News

Tuesday, June 18, 2024

  *ಜುಲೈನಲ್ಲಿ ಅದ್ದೂರಿಯಾಗಿ ನಡೆಯಲಿದೆ "ಅಪ್ಪು ಕಪ್ ಸೀಸನ್  2"* .       *ಟೀಮ್ ಬಿಲ್ಡಿಂಗ್ ಇವೆಂಟ್ ಗೆ ಆಗಮಿಸಿ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್* .      ಕನ್ನಡ ಚಿತ್ರರಂಗದೊಂದಿಗೆ ಒಂದು ದಶಕದಿಂದ ಒಡನಾಟ ಹೊಂದಿರುವ  ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ " ಅಪ್ಪು ಕಪ್ ಸೀಸನ್ 2"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ)  ಜುಲೈ  ಅಂತ್ಯದಲ್ಲಿ ನಡೆಯಲಿದೆ. ಇತ್ತೀಚಿಗೆ ಈ ಟೂರ್ನಿಯ ಟೀಮ್ ಬಿಲ್ಡಿಂಗ್ ಇವೆಂಟ್ ನಡೆಯಿತು. ಅಶ್ವಿನಿ ಪುನೀತ್ ರಾಜಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಸಾಯಿ ಗೋಲ್ಡ್ ಪ್ಯಾಲೆಸ್  ಮಾಲೀಕರು ಹಾಗೂ ವಿಧಾನ ಪರಿಷತ್ ಸದಸ್ಯರು ಶರವಣ(MLC) ಸೇರಿದಂತೆ ....

176

Read More...

Ramarasa.Film News

Sunday, June 16, 2024

  *ನಾಯಕ ನಟನ ಅನಾವರಣದ ವಿಶೇಷ ವಿಡಿಯೋ ಬಿಡುಗಡೆ ಮಾಡಿ "ರಾಮರಸ" ಚಿತ್ರದ ನಾಯಕನನ್ನು ಪರಿಚಯಿಸಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್* .    *ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಈ ಚಿತ್ರದ ನಾಯಕ* .   ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ "ಜಿ ಅಕಾಡೆಮಿ"ಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳೊಂದಿಗೆ ಖ್ಯಾತ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಈಗ "ರಾಮರಸ" ಚಿತ್ರಕ್ಕೆ ನಾಯಕನ‌ ಆಯ್ಕೆಯಾಗಿದೆ. ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ "ರಾಮರಸ" ಚಿತ್ರದ ....

170

Read More...

Nassab.Film News

Sunday, June 16, 2024

  *ಕುತೂಹಲ ಮೂಡಿಸಿದೆ "ನಸಾಬ್" ಚಿತ್ರದ ಟ್ರೇಲರ್* .‌    *ಅಪ್ಪನ ಕಥೆಗೆ ಮಗನೇ ನಾಯಕ ಹಾಗೂ ನಿರ್ದೇಶಕ* .   ಕನ್ನಡದಲ್ಲಿ ಒಳ್ಳೆಯ ಕಂಟೆಂಟ್ ಚಿತ್ರಗಳು ಹೆಚ್ಚು ಬರುತ್ತಿದೆ. ಅಂತಹುದೇ ಉತ್ತಮ‌ ಕಂಟೆಂಟ್ ಹೊಂದಿರುವ "ನಸಾಬ್" ಕನ್ನಡ ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ಅದ್ದೂರಿಯಾಗಿ ನಡೆಯಿತು. ಟ್ರೇಲರ್ ಹಾಗೂ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂಜಾರ ಶಕ್ತಿಪೀಠದ ಶ್ರೀ ಕುಮಾರ ಮಹಾರಾಜರು, ಮಾಜಿ ಉಪ ಸಭಾಪತಿ ರುದ್ರಪ್ಪ ಎಂ ಲಮ್ಮಾಣಿ, ಐ ಎ ಎಸ್ ಅಧಿಕಾರಿ ಜಗದೀಶ್ ಜಿ, ಮಾಜಿ ಶಾಸಕ ಪಿ.ರಾಜೀವ್, ಡಾ||ಶೋಭ ಜಿ , ಶೋಭಾ ಟಿ.ಆರ್ , ಹರೀಶ್ ಮುಂತಾದವರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಹಾಗೂ ....

174

Read More...

V Cinemas.News

Friday, June 14, 2024

  *ರಮೇಶ್ ಅರವಿಂದ್ ಹಾಗೂ ಡಾಲಿ ಧನಂಜಯ ಅವರಿಂದ "ವಿ‌ ಸಿನಿಮಾಸ್" ಅನಾವರಣ* ..    *ರಾಮಮೂರ್ತಿನಗರದಲ್ಲಿ ಆರಂಭವಾಯಿತು ಸುಸಜ್ಜಿತ ಮಲ್ಟಿಪ್ಲೆಕ್ಸ್* .   ಕನ್ನಡ ಚಿತ್ರರಂಗದಲ್ಲಿ ಇದೊಂದು ಉತ್ತಮ ಬೆಳವಣಿಗೆ ಎಂದರೆ ತಪ್ಪಾಗಲಾರದು. ಚಿತ್ರಮಂದಿರಗಳು ಮುಚ್ಚುತ್ತಿರುವ ಈ ಸಂದರ್ಭದಲ್ಲಿ ನೂತನ ಚಿತ್ರಮಂದಿರ ಪ್ರಾರಂಭವಾಗಿರುವುದು ನಿಜಕ್ಕೂ ಖುಷಿಯ ವಿಚಾರ.  ಹೌದು. ಇತ್ತೀಚಿಗೆ ಹೊಯ್ಸಳ ನಗರ, ರಾಮಮೂರ್ತಿ ನಗರದ ಮುಖ್ಯರಸ್ತೆಯಲ್ಲಿ "ವಿ ಸಿನಿಮಾಸ್" ಎಂಬ ನಾಲ್ಕು ಆಡಿಗಳ ಸುಸಜ್ಜಿತ ಮಲ್ಟಿಪ್ಲೆಕ್ಸ್ ಆರಂಭವಾಯಿತು.‌ ರಮೇಶ್ ಅರವಿಂದ್ ಚಿತ್ರಮಂದಿರವನ್ನು ಉದ್ಘಾಟಿಸಿ ಮೊದಲ ಶೋ ಗೆ ಟಿಕೇಟ್ ಪಡೆದರು. ಡಾಲಿ ಧನಂಜಯ ಪ್ರೊಜೆಕ್ಟರ್ ಚಾಲನೆ ಮಾಡಿದರು. ಹಿರಿಯ ವಿತರಕ ....

181

Read More...

Abhinava Kempegowda.News

Thursday, June 13, 2024

  *ಅಭಿನವ ಕೆಂಪೇಗೌಡ ಹೆಚ್ ಎಂ ಕೃಷ್ಣಮೂರ್ತಿ(ಜೇಡ್ರಳ್ಳಿ ಕೃಷ್ಣಪ್ಪ) ಅವರು ನಟಿಸಿ, ನಿರ್ಮಿಸಿರುವ "ನಾಡಸಿಂಹ ಕೆಂಪೇಗೌಡ" ಹಾಡು ಲೋಕಾರ್ಪಣೆ* .   ತಮ್ಮ‌ ಸಾಮಾಜಿಕ ಕಾರ್ಯಗಳ‌ ಮೂಲಕ ಜನರ‌ ಮನ‌ ಗೆದ್ದಿರುವ ಹೆಚ್ ಎಂ ಕೃಷ್ಣಮೂರ್ತಿ ಅವರು ನಿರ್ಮಿಸಿ ಹಾಗು ಕೆಂಪೇಗೌಡರ ಪಾತ್ರದಲ್ಲೂ ಅಭಿನಯಿಸಿರುವ ನಾಡಪ್ರಭು ಶ್ರೀಕೆಂಪೇಗೌಡರ ಕುರಿತಾದ "ನಾಡಸಿಂಹ ಕೆಂಪೇಗೌಡ" ಎಂಬ ಹಾಡಿನ ಲೋಕಾರ್ಪಣೆ ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿಯಾಗಿ ನೆರವೇರಿತು. ಜೆ.ಕೆ ಶರ್ಮ ಗುರೂಜಿ, ನಟ ವಸಿಷ್ಠ ಸಿಂಹ, ಹಿರಿಯ ನಟ ಅಶೋಕ್, ನಿರ್ದೇಶಕ ಟಿ.ಎಸ್. ನಾಗಾಭರಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಟರಾದ ಧರ್ಮ, ತಬಲ ನಾಣಿ, ನೀನಾಸಂ ....

173

Read More...
Copyright@2018 Chitralahari | All Rights Reserved. Photo Journalist K.S. Mokshendra,