Avatara Purusha 2.News

Thursday, March 21, 2024

  *"ಅವತಾರ ಪುರುಷ 2" ಚಿತ್ರದಲ್ಲೊಂದು ಭರ್ಜರಿ ರಾಪ್ ಸಾಂಗ್*    *ಶರಣ್ ಅಭಿನಯದ ಈ ಚಿತ್ರ ಏಪ್ರಿಲ್ 5 ರಂದು ಬಿಡುಗಡೆ* ..   ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನದ ಹಾಗೂ ಶರಣ್ ನಾಯಕರಾಗಿ ನಟಿಸಿರುವ "ಅವತಾರ ಪುರುಷ 2" ಚಿತ್ರದಿಂದ "ಇವನೇ ಅವತಾರ ಪುರುಷ" ಎಂಬ ಭರ್ಜರಿ ರಾಪ್ ಸಾಂಗ್ ಬಿಡುಗಡೆಯಾಗಿದೆ. ರಾಪ್ ಸಾಂಗ್ ನಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಎಂ.ಸಿ.ಬಿಜ್ಜು ಈ ಹಾಡನ್ನು ಹಾಡಿದ್ದಾರೆ. ಔರಾ ಹಾಗೂ ಅಭಿನಂದನ್ ಕಶ್ಯಪ್ ಕೂಡ ಗಾಯನಕ್ಕೆ ಬಿಜ್ಜು ಅವರ ಜೊತೆಯಾಗಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಅದ್ದೂರಿಯಾಗಿ ನೆರವೇರಿತು. ಅಭಿನಂದನ್ ಕಶ್ಯಪ್ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ....

201

Read More...

Belake.Music Video.News

Thursday, March 21, 2024

  *ಜಾಗತಿಕ ತಾಪಮಾನದ ಕುರಿತು ಜಾಗೃತಿ ಮೂಡಿಸುವ "ಬೆಳಕೆ"* .    *ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಹಾಡಿಗೆ ದನಿಯಾಗಿದ್ದಾರೆ ಆದರ್ಶ ಅಯ್ಯಂಗಾರ್* .   ಈಗಷ್ಟೇ ಬೇಸಿಗೆ ಆರಂಭ. ಅಗಲೇ ಎಲ್ಲೆಡೆ ನೀರಿಗೆ ಹಾಹಾಕಾರ.‌ ಇದಕ್ಕೆ ಕಾರಣ ಪರಿಸರ ನಾಶ ಹಾಗೂ ಜಾಗತಿಕ ತಾಪಮಾನದ ಏರಿಕೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ  "ಬೆಳಕೆ" ಹಾಡು ಬಿಡುಗಡೆಯಾಗಿದೆ. "ಹೊಂಬಣ್ಣ" ಚಿತ್ರದ ಖ್ಯಾತಿಯ ರಕ್ಷಿತ್ ತೀರ್ಥಹಳ್ಳಿ ನಿರ್ದೇಶಿಸಿರುವ ಈ ಹಾಡಿಗೆ ಆದರ್ಶ ಅಯ್ಯಂಗಾರ್, ದನಿಯಾಗುವುದರ ಜೊತೆಗೆ ನಟನೆಯನ್ನು ಮಾಡಿದ್ದಾರೆ. ಈ ಹಾಡಿನ ಕುರಿತು ಚಿತ್ರತಂಡದವರು ಹೇಳಿದ್ದು ಹೀಗೆ.   ನಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಮೂಲಕ ಈಗಾಗಲೇ ಜನರಿಗೆ ....

190

Read More...

Misguide.Film News

Tuesday, March 19, 2024

  *"ಮಿಸ್ ಗೈಡ್" ಮಾಡಿದ್ದಾರೆ ಮಂಜುಕವಿ* .    *ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾ||ವಿ.ನಾಗೇಂದ್ರ ಪ್ರಸಾದ್* .    ಸೀಟಡೀಲ್ ಫಿಲಂಸ್ ಹಾಗೂ  ರಾಜ್ ಫಿಲಂಸ್ ಬ್ಯಾನರ್ ಅಡಿಯಲ್ಲಿ ನಾಗರಾಜ್ ಹಾಗೂ ಸುಬ್ಬು ನಿರ್ಮಿಸಿರುವ ಮಿಸ್ ಗೈಡ್ ಚಿತ್ರಕ್ಕೆ ಮಂಜುಕವಿ   ಕಥೆ, ಚಿತ್ರಕಥೆ, ಸಾಹಿತ್ಯ ಹಾಗೂ ಸಂಭಾಷಣೆ ಬರೆದು, ಸಂಗೀತವನ್ನು ನೀಡಿರುವ "ಮಿಸ್ ಗೈಡ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ಸಾಹಿತಿ ಡಾ||ವಿ.ನಾಗೇಂದ್ರ ಪ್ರಸಾದ್ ಟೀಸರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಗಗನ್ ರಾಜ್ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಂತರ ಚಿತ್ರತಂಡದವರು "ಮಿಸ್ ಗೈಡ್" ಬಗ್ಗೆ ಮಾಹಿತಿ ನೀಡಿದರು.   ಇದು ನಾನು ....

164

Read More...

Desai.Film News

Monday, March 18, 2024

  *ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಅವರಿಂದ ಬಿಡುಗಡೆಯಾಯಿತು  "ದೇಸಾಯಿ" ಚಿತ್ರದ ಟೀಸರ್* .    *ಇದು "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಚಿತ್ರ*   ಶ್ರೀವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳಚಗುಡ್ಡ ಕಥೆ ಬರೆದು ನಿರ್ಮಿಸಿರುವ, ನಾಗಿರೆಡ್ಡಿ ಭಡ ನಿರ್ದೇಶನದ ಹಾಗೂ "ಲವ್ 360" ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸಿರುವ "ದೇಸಾಯಿ" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಯಿತು. ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಶಾಸಕ ಶ್ರೀ ಲಕ್ಷ್ಮಣ್ ಸವದಿ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಮಲ್ಲಿಕಾರ್ಜುನ ಲೋನಿ, ವಿಜಯಕುಮಾರ್ ಪಿ.ಜಿ ಮುಂತಾದ ಗಣ್ಯರು ಸಮಾರಂಭದಲ್ಲಿ ....

249

Read More...

Tapassi.Film News

Monday, March 18, 2024

  *ಮಹಿಳಾಪ್ರಧಾನ ಸಿನಿಮಾದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್…ಸೆಟ್ಟೇರಿತು ‘ತಪಸ್ಸಿ’..*   *ಸೆಟ್ಟೇರಿತು ಕ್ರೇಜಿಸ್ಟಾರ್ ಹೊಸ ಸಿನಿಮಾ..ಮಹಿಳಾ ಪ್ರಧಾನ ’ತಪಸ್ಸಿ’ ಚಿತ್ರದಲ್ಲಿ ರವಿಚಂದ್ರನ್*   ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಹೆಸರು ತಪಸ್ಸಿ..ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.   ತಪಸ್ಸಿ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ ರವಿಚಂದ್ರನ್, ಮಹಿಳಾ ಪ್ರಧಾನ ಸಿನಿಮಾ ಅಂದರೆ ರವಿಚಂದ್ರನ್ ಕರೆಯಬೇಕು ಅಲ್ವಾ ಅವರು? ಈ ಸಿನಿಮಾ ಮಾಡಿ ಮುಗಿಸಿದ್ದಾರೆ. ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿ ....

205

Read More...

Yuva.Film News

Friday, March 15, 2024

  *ಹೊಂಬಾಳೆ ಫಿಲಂಸ್ ನಿರ್ಮಾಣದ "ಯುವ" ಚಿತ್ರದ "ಅಪ್ಪುಗೆ" ಹಾಡು ಪುನೀತ್ ರಾಜಕುಮಾರ್ ಪುತ್ರಿ ವಂದಿತ ಅವರಿಂದ ಬಿಡುಗಡೆ‌* .    ಹೊಂಬಾಳೆ ಫಿಲಂಸ್ ಲಾಂಛನಲ್ಲಿ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ, ಸಂತೋಷ್ ಆನಂದರಾಮ್ ನಿರ್ದೇಶನದ ಹಾಗೂ ಯುವ ರಾಜಕುಮಾರ್ ನಾಯಕನಾಗಿ ನಟಿಸಿರುವ "ಯುವ" ಚಿತ್ರದ "ಅಪ್ಪುಗೆ" ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಪುನೀತ್ ರಾಜಕುಮಾರ್ ಅವರ ದ್ವಿತೀಯ ಪುತ್ರಿ ವಂದಿತ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.        "ಯವ", ಕೌಟುಂಬಿಕ ಹಾಗೂ ಆಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ - ಮಗನ ಬಾಂಧವ್ಯದ ಚಿತ್ರವೂ ಹೌದು. ಒಂದು ಕುಟುಂಬಕ್ಕಾಗಿ ಅಪ್ಪ ಏನೆಲ್ಲಾ ....

194

Read More...

Bhuvanam Gaganam.News

Saturday, March 16, 2024

  *’ಭುವನಂ ಗಗನಂ’ ಸಿನಿಮಾಗೆ ಧ್ರುವ ಸರ್ಜಾ ಸಾಥ್..ಮಾನ್ಸೂನ್ ಗೆ ಪೃಥ್ವಿ-ಪ್ರಮೋದ್ ಸಿನಿಮಾ ತೆರೆಗೆ*   *ಟೀಸರ್ ನಲ್ಲಿ ‘ಭುವನಂ ಗಗನಂ’.. ಪ್ರಮೋದ್-ಪೃಥ್ವಿ ಸಿನಿಮಾಗೆ ಆಕ್ಷನ್ ಪ್ರಿನ್ಸ್ ಬೆಂಬಲ..*   *ನೋವು-ನಲಿವುಗಳ ‘ಭುವನಂ ಗಗನಂ’ ಟೀಸರ್ ರಿಲೀಸ್…ಮಾನ್ಸೂನ್ ಗೆ ಬರ್ತಿದೆ ಪ್ರಮೋದ್-ಪೃಥ್ವಿ ಸಿನಿಮಾ..*   *’ಭುವನಂ ಗಗನಂ’ಜೊತೆಯಾದ ಮಾರ್ಟಿನ್..ಪ್ರಮೋದ್-ಪೃಥ್ವಿ ಸಿನಿಮಾ ಮಾನ್ಸೂನ್ ಗೆ ರಿಲೀಸ್..*     ಸ್ಯಾಂಡಲ್ ವುಡ್ ಅಂಗಳದ ಇಬ್ಬರು ಪ್ರತಿಭಾನ್ವಿತ ನಟರಾದ ಸಲಾರ್ ಪ್ರಮೋದ್ ಹಾಗೂ ದಿಯಾ ಪೃಥ್ವಿ ಅಂಬಾರ್ ನಟನೆಯ ಬಹುನಿರೀಕ್ಷಿತ ಸಿನಿಮಾ ಭುವನಂ ಗಗನಂ. ಈ ಚಿತ್ರದ ನಿರ್ಮಾಪಕ ಎಂ. ಮುನೇಗೌಡ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡ ಟೀಸರ್ ....

188

Read More...

Ratna.Film News

Saturday, March 16, 2024

  *ಅಪ್ಪು ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ’ರತ್ನ’ ಚಿತ್ರದ ಟ್ರೇಲರ್* .                 *ಇದು ಪುನೀತ್ ರಾಜಕುಮಾರ್ ಅಭಿಮಾನಿಯ ಚಿತ್ರ*   ಬಸವರಾಜ್ ಬಳ್ಳಾರಿ ನಿರ್ಮಿಸಿ, ನಿರ್ದೇಶಿಸಿರುವ "ರತ್ನ" ಚಿತ್ರದ ಟ್ರೇಲರ್ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರಿತ್ತಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು "ಸೀನ" ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿದ್ದೇನೆ.  "ಸೀನ" ಚಿತ್ರಕ್ಕೆ ಆರಂಭ ಫಲಕ ತೋರುವ ಮೂಲಕ ಚಾಲನೆ ನೀಡಿದ್ದು, ಪುನೀತ್ ರಾಜಕುಮಾರ್ ಅವರೆ.  ಆನಂತರ ಚಿತ್ರೀಕರಣದ ವೇಳೆ ಕೆಲವು ....

185

Read More...

Bharjari Gandu.News

Friday, March 15, 2024

  *ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ "ಭರ್ಜರಿ ಗಂಡು" ಏಪ್ರಿಲ್ 5 ಕ್ಕೆ ತೆರೆಗೆ ಬರುತ್ತಿದ್ದಾನೆ* .    *ಇದು ಕಿರಣ್ ರಾಜ್ ಅಭಿನಯದ ಚಿತ್ರ* *   ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ದ್ ನಿರ್ದೇಶನದ "ಭರ್ಜರಿ ಗಂಡು" ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.  ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.   "ರತ್ನ ಮಂಜರಿ" ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ....

180

Read More...

Kenda.Film News

Thursday, March 14, 2024

  ತಾಜಾ ಸುದ್ದಿಯ ಲಿರಿಕಲ್ ವೀಡಿಯೋ ಮೂಲಕ ನಿಗಿನಿಗಿಸಿತು ಗಂಟುಮೂಟೆ ತಂಡದ `ಕೆಂಡ’!   `ಗಂಟುಮೂಟೆ’ ಚಿತ್ರತಂಡದ ಕಡೆಯಿಂದ ರೂಪುಗೊಂಡಿರುವ `ಕೆಂಡ’ ಚಿತ್ರ ಹಂತ ಹಂತವಾಗಿ ಕುತೂಹಲದ ಕಾವೇರಿಸಿಕೊಂಡು ಸಾಗಿ ಬಂದಿತ್ತು. ಇದೀಗ ಕೆಂಡ ಬಿಡುಗಡೆಯ ಹೊಸ್ತಿಲಿನಲ್ಲಿ ನಿಂತಿದೆ. ಈ ಹೊತ್ತಿನಲ್ಲಿ ಜಯಂತ್‍ಕಾಯ್ಕಣಿ ರಚಿಸಿದ `ತಾಜಾ ತಾಜಾ ಸುದ್ದಿ’ ಗೀತೆಗೆ ಪುತ್ರ ರಿತ್ವಿಕ್‍ಕಾಯ್ಕಣಿ ಪ್ರಥಮ ಬಾರಿ ಸಂಗೀತ ಸಂಯೋಜಿಸಿರುವ ಲಿರಿಕಲ್ ವಿಡಿಯೋ ಹಾಡಿನ ಬಿಡುಗಡೆ ಕಾರ್ಯಕ್ರಮ ಎಸ್‍ಆರ‍್ವಿ ಚಿತ್ರಮಂದಿರದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡಕ್ಕೆ ಶುಭಹಾರೈಸಲು ಯೋಗರಾಜಭಟ್, ಸಂಗೀತ ಸಂಯೋಜಕ ವಿ.ಹರಿಕೃಷ್ಣ, ಡಿ.ಬೀಟ್ಸ್‍ನ ಶೈಲಜಾನಾಗ್ ಮತ್ತು ಜಯಂತ್‍ಕಾಯ್ಕಣಿ ಆಗಮಿಸಿದ್ದರು. ....

182

Read More...

Kappe Raaga.News

Wednesday, March 13, 2024

  *ಕಣ್ಮನ ಸೆಳೆಯುವ "ಕಪ್ಪೆ ರಾಗ"* .    *ಇದು ಗ್ರೀನ್ ಆಸ್ಕರ್ ಪ್ರಶಸ್ತಿ ವಿಜೇತ ಮ್ಯೂಸಿಕಲ್ ವೈಲ್ಡ್  ಲೈಫ್ ಕಿರು ಚಿತ್ರ* .   ಕನ್ನಡದ ಪ್ರಪ್ರಥಮ ಗ್ರೀನ್ ಆಸ್ಕರ್ ಪ್ರಶಸ್ತಿ ಪುರಸ್ಕೃತ ಕಿರು ಚಿತ್ರ ’ಕಪ್ಪೆ ರಾಗ’. ಪ್ರಶಾಂತ್ ಎಸ್ ನಾಯಕ್ ಅವರ ಆರುವರ್ಷಗಳ ಶ್ರಮದಿಂದ ಆರು ನಿಮಿಷಗಳ ಈ ಸುಂದರ ದೃಶ್ಯ ಕಾವ್ಯ ನಿರ್ಮಾಣವಾಗಿದೆ‌. ಈ ಕುರಿತು ಪ್ರಶಾಂತ್ ಎಸ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ವಿವರಣೆ ನೀಡಿದರು.    ವಲ್ಡ್ ವೈಲ್ಡ್ ಫೋಟೊಗ್ರಾಫಿ ನನ್ನ ಹವ್ಯಾಸ ಎಂದು ಮಾತನಾಡಿದ ನಿರ್ದೇಶಕ ಪ್ರಶಾಂತ್ ಎಸ್ ನಾಯಕ್, ಜಗತ್ತಿನ ಎಲ್ಲಾ ಪರಿಸರ ಚಿತ್ರಕಲಾಸಕ್ತರ ಮನಸ್ಸನ್ನು ಗೆದ್ದಿರುವ ಕಪ್ಪೆ ನಮ್ಮ ಪಶ್ಚಿಮ ಘಟ್ಟದ ಕರುನಾಡ ಕಪ್ಪೆ - ಈ ಕಪ್ಪೆಯನ್ನು ಕುಂಬಾರ ....

196

Read More...

Arabbie.Film News

Wednesday, March 13, 2024

  'ಅರಬ್ಬೀ’ ಕೈಗಳಿಲ್ಲದೆ ಈಜಿ ಗೆದ್ದ  ಸಾಧಕನ ಟ್ರೈಲರ್ ಬಿಡುಗಡೆ      ಸಾಧಿಸುವ ಛಲವಿದ್ದರೆ ಯಾವುದೂ ಅಸಾಧ್ಯವಲ್ಲ, ಅಂಗವಿಕಲತೆಯೂ ಸಹ  ಅಡ್ಡಿಯಾಗಲಾರದು ಎಂದು ವಿಶ್ವಾಸ್ ಎಂಬ ವಿಶೇಷಚೇತನ ಯುವಕನೊಬ್ಬ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಕಥೆಯನ್ನು ನಿರ್ದೇಶಕ ರಾಜ್‌ಕುಮಾರ್ ಅವರು  ಅರಬ್ಬೀ ಎಂಬ  ಚಿತ್ರದ ಮೂಲಕ  ಹೇಳಹೊರಟಿದ್ದಾರೆ, ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯ ಜೊತೆಗೆ ತನ್ನ ಎರಡೂ ಕೈಗಳನ್ನು ಕಳೆದುಕೊಳ್ಳುವ ವಿಶ್ವಾಸ್, ತನ್ನ ಅಂಗವಿಕಲತೆಯ ಕಾರಣದಿಂದಲೇ  ಸಮಾಜದಲ್ಲಿ ಸಾಕಷ್ಟು ಅವಮಾನ ಅನುಭವಿಸುತ್ತಾನೆ. ನಂತರ ತನ್ನನ್ನು ಅವಮಾನಿಸಿದವರೆದುರೇ ಸಾಧನೆಮಾಡಿ ತೋರಿಸಬೇಕೆಂದು ನಿರ್ಧರಿಸಿ, ಹಠ, ಆತ್ಮವಿಶ್ವಾಸದಿಂದಲೇ ಗೆಲುವು ....

165

Read More...

Sathya.Film News

Wednesday, March 13, 2024

  ಟ್ರೈಲರ್ ನಲ್ಲಿ ಸೈಕೋಕಿಲ್ಲರ್ ’ಸತ್ಯ’        ಸಿನಿಮಾ ಮಾಡಬೇಕೆಂಬ ಆಸಕ್ತಿಯಿಂದ ಐಟಿ ಕಂಪನಿಯಲ್ಲಿ ಒಳ್ಳೇ ಉದ್ಯೋಗವಿದ್ದರೂ ಸಹ  ಚಿತ್ರರಂಗಕ್ಕೆ ಬಂದಿದ್ದಾರೆ ಆನಂದ್ ಅಹಿಪತಿ. ಸಿನಿಮಾ ಮಾಡುವುದಕ್ಕೂ  ಮುನ್ನ ಅದೇ ಕ್ವಾಲಿಟಿಯಲ್ಲಿ ಸತ್ಯ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಒಳಗೊಂಡ  ಆ ಷಾರ್ಟ್ ಫಿಲಂನ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಇತ್ತೀಚೆಗೆ ಹಮ್ಮಿಕೊಳ್ಳಲಾಗಿತ್ತು.  ಆನಂದ್ ಅಹಿಪತಿ ಅವರೇ ಕಥೆ, ಚಿತ್ರಕಥೆ ಸಂಭಾಷಣೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಾಯಕನ ಪಾತ್ರದಲ್ಲೂ ಕಾಣಿಸಿಕೊಂಡಿದ್ದಾರೆ. ಯಾವುದೇ ಚಿತ್ರಕ್ಕೂ  ಕಮ್ಮಿಯಿಲ್ಲದ ಹಾಗೆ ಈ ಕಿರು ಚಿತ್ರವನ್ನು ನಿರ್ಮಾಣ ....

169

Read More...

Lineman.Film News

Monday, March 11, 2024

  *ಮಾರ್ಚ್ 22 ರಿಂದ ನೆಚ್ಚಿನ  ಚಿತ್ರಮಂದಿರಗಳಿಗೆ "ಲೈನ್ ಮ್ಯಾನ್" ಆಗಮನ* .   *ಪರ್ಪಲ್ ರಾಕ್ ಸಂಸ್ಥೆ ನಿರ್ಮಾಣದ ಈ ಚಿತ್ರಕ್ಕೆ ರಘು ಶಾಸ್ತ್ರಿ ನಿರ್ದೇಶನ.*   ಕನ್ನಡ ಚಿತ್ರರಂಗಕ್ಕೆ ಸದಭಿರುಚಿಯ ಚಿತ್ರಗಳನ್ನು ನೀಡುತ್ತಾ ಬಂದಿರುವ  ಪರ್ಪಲ್ ರಾಕ್ ಸಂಸ್ಥೆಯಿಂದ ನಿರ್ಮಾಣವಾಗಿರುವ "ಲೈನ್ ಮ್ಯಾನ್" ಚಿತ್ರ ಮಾರ್ಚ್ 22ರಂದು ಬಿಡುಗಡೆಯಾಗಲಿದೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಎರಡು ಭಾಷೆಗಳಲ್ಲೂ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಚಿತ್ರತಂಡದ ಸದಸ್ಯರು "ಲೈನ್ ಮ್ಯಾನ್" ಕುರಿತು ಮಾತನಾಡಿದರು.   ಇದು ಲಾಕ್ ಡೌನ್ ಸಮಯದಲ್ಲಿ ಹುಟ್ಟಿದ ಕಥೆ. ತುಂಬಾ ಜನರಿಗೆ ಲಾಕ್ ಡೌನ್ ಸಾಕಷ್ಟು ....

248

Read More...

Bhairathi Ranagal.News

Sunday, March 10, 2024

  *ಆಗಸ್ಟ್ 15ರಂದು ಬಿಡಗುಡೆಯಾಗಲಿದೆ ಬಹು ನಿರೀಕ್ಷಿತ ಶಿವರಾಜಕುಮಾರ್ ಅಭಿನಯದ "ಭೈರತಿ ರಣಗಲ್"*    ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸುತ್ತಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸುತ್ತಿರುವ ಬಹು ನಿರೀಕ್ಷಿತ "ಭೈರತಿ ರಣಗಲ್ " ಚಿತ್ರ ಆಗಸ್ಟ್ 15 ಸ್ವತಂತ್ರ ದಿನಾಚರಣೆ ದಿವಸ ಬಿಡುಗಡೆಯಾಗುತ್ತಿದೆ.  ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.    ‘ಭೈರತಿ ರಣಗಲ್‍’ ಚಿತ್ರ ಆರು ವರ್ಷಗಳ ಹಿಂದೆ ಬಿಡುಗಡೆಯಾದ ‘ಮಫ್ತಿ’ ಚಿತ್ರದ ಪ್ರೀಕ್ವೆಲ್‍ ಎಂದು ಈಗಾಗಲೇ ಸಾಕಷ್ಟು ಸುದ್ದಿಯಾಗಿದೆ. ಆದರೆ, ....

187

Read More...

Fire Fly.Film News

Sunday, March 10, 2024

  *ಶಿವಣ್ಣ ಪುತ್ರಿ ನಿರ್ಮಾಣದ ಚೊಚ್ಚಲ ಚಿತ್ರ ಬಿಡುಗಡೆಗೆ ರೆಡಿ...ಬೆಳಕಿನ ಹಬ್ಬಕ್ಕೆ ಫೈರ್ ಫ್ಲೈ ದರ್ಶನ*     *ಅಂತರಾಳದ ಕತ್ತಲನ್ನು ಬೆಳಗಿನ  ಬರ್ತಿದೆ ಫೈರ್ ಫ್ಲೈ...ದೀಪಾವಳಿ ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚಿತ್ರ ರಿಲೀಸ್...*     *ಬೆಳಕಿನ ಹಬ್ಬಕ್ಕೆ ಫೈರ್ ಫ್ಲೈ ದರ್ಶನ...ಇದು ಶಿವಣ್ಣ ಪುತ್ರಿ ಹೊಸ ಪ್ರಯತ್ನ*       ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.‌ ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್ ಮೂಲಕ ಮೂಡಿಬಂದಿರುವ ಫೈರ್ ಫ್ಲೈ ಬೆಳಕಿನ ಹಬ್ಬ ದೀಪಾವಳಿಗೆ ದರ್ಶನ ಕೊಡಲಿದೆ. ಈ ಬಗ್ಗೆ ಶಿವಣ್ಣನ ನಾಗವಾರ ....

211

Read More...

Photo.Film News

Saturday, March 09, 2024

  *150ರೂಪಾಯಿ ಇದ್ರೆ ಫೋಟೋ ಸಿನಿಮಾ ನೋಡಬಹುದು...ಮಾ.15ಕ್ಕೆ ಬರ್ತಿದೆ ಲಾಕ್ ಡೌನ್ ಕಥೆ*     *ಮಾರ್ಚ್.15ಕ್ಕೆ ಪ್ರಕಾಶ್ ರಾಜ್ ಮೆಚ್ಚಿದ ಫೋಟೋ ರಿಲೀಸ್..ಮಲ್ಟಿಪ್ಲೆಕ್ಸ್ ನಲ್ಲಿ ಟಿಕೆಟ್ ಬೆಲೆ ಎಷ್ಟು ಗೊತ್ತಾ?*     *ಫೋಟೋ ಅಂತರಂಗ ತೆರೆದಿಟ್ಟ ನಿಮ್ಮ ಸಂಗ ಹಾಡು*   *ಫೋಟೋ ಸಿನಿಮಾದ ಜನಪದ ಶೈಲಿಯ ಹಾಡು ರಿಲೀಸ್...ಮಾ.15ಕ್ಕೆ ತೆರೆಗೆ ಬರ್ತಿದೆ ಕೊರೋನಾ ನೋವಿನ ಕಥೆ*      *ಪ್ರಕಾಶ್ ರಾಮ್ ಪ್ರೆಸೆಂಟ್ ಮಾಡ್ತಿರುವ ಫೋಟೋ ಅಂಗಳದಿಂದ ಬಂತು ಜನಪದ ಶೈಲಿಯ ಹಾಡು*   *ಮಾ.15ಕ್ಕೆ ’ಫೋಟೋ’ ಬೆಳ್ಳಿತೆರೆಗೆ ಎಂಟ್ರಿ...*       ಕೋವಿಡ್‌ನ ಆರಂಭ ಘಟ್ಟದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಕೇಂದ್ರ ಸರ್ಕಾರವು ಘೋಷಿಸಿದ ಲಾಕ್‌ಡೌನ್‌ನ ....

196

Read More...

Kadeema.Film News

Thursday, March 07, 2024

  *ಟೀಸರ್ ನಲ್ಲಿ ’ಖದೀಮ’....ಜಿಮ್ ಟ್ರೈನರ್ ಈಗ ಹೀರೋ*     *ಹೀರೋ ಆದ ಜಿಮ್ ಟ್ರೈನರ್...ಖದೀಮನಾಗಿ ಯುವ ನಟ ಚಂದನ್ ಎಂಟ್ರಿ*     *ಬಂತು ಖದೀಮ ಟೀಸರ್...ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ ಜಿಮ್ ಟ್ರೈನರ್ ಚಂದನ್*     ಕನ್ನಡ ಚಿತ್ರರಂಗದಲ್ಲಿ ಹೊಸಬರ ಅಬ್ಬರ ಜೋರಾಗಿದೆ. ಹಲವು ಹೊಸಬರು ಕ್ವಾಲಿಟಿ ಜೊತೆಗೆ, ಕಂಟೆಂಟ್ ವುಳ್ಳ ಸಿನಿಮಾ ಮೂಲಕ ಚಿತ್ರರಂಗಕ್ಕೆ ಬರುತ್ತಿದ್ದಾರೆ. ದೊಡ್ಡ ಗೆಲುವು ಸಾಧಿಸದಿದ್ದರೂ ಪ್ರಶಂಸೆಯನ್ನು ಪಡೆದು ಪ್ರೇಕ್ಷಕರ ಆದರಣೆಗೆ ಪಾತ್ರರಾಗುತ್ತಿದ್ದಾರೆ. ಹೊಸ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಿದ್ದಾರೆ. ಈ ನಡುವೆ ಮತ್ತೊಂದು ಹೊಸಬರ ಸಿನಿಮಾ ಬಿಡುಗಡೆಗೆ ತಯಾರಾಗಿದೆ.     ಶಿವೇಶು ಪ್ರೊಡಕ್ಷನ್ ಚೊಚ್ಚಲ ....

202

Read More...

Switch Case N.News

Thursday, March 07, 2024

  ಟೆಕ್ಕಿಗಳು ಬಳಸುವ ಪದ ಸಿನಿಮಾದ ಶೀರ್ಷಿಕೆ          ವಿದ್ಯಾವಂತ ಹೊಸ ಪ್ರತಿಭೆಗಳೇ ಸೇರಿಕೊಂಡು ಸಿದ್ದಪಡಿಸಿರುವ ’switch {case n:' ಚಿತ್ರದ ಟ್ರೇಲರ್ ಹಾಗೂ ರ‍್ಯಾಪ್ ಸಾಂಗ್ ಬಿಡುಗಡೆ ಕಾರ್ಯಕ್ರಮವು ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ತಂಡದಲ್ಲಿ ಬಹುತೇಕ ಇಂಜಿನಿಯರ್‌ಗಳು ಕೆಲಸ ಮಾಡಿರುವುದು ವಿಶೇಷ. ಚೇತನ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ,ಸಾಹಿತ್ಯ ಬರೆದು ನಿರ್ದೇಶನ ಮಾಡಿದ್ದಾರೆ. ಒಂದಷ್ಟು ಘಟನೆಗಳು ಇವರ ಜೀವನದಲ್ಲಿ ನಡೆದಿರುವುದು. ಮಿಕ್ಕಂತೆ ನೋಡಿದ್ದು, ಕೇಳಿದ್ದನ್ನು ಮನರಂಜನೆ ಮೂಲಕ ತೋರಿಸಲಾಗಿದೆ. ಕೊಂಡಾಣ ಫಿಲಂಸ್ ಬ್ಯಾನರ್ ಅಡಿಯಲ್ಲಿ ಬೇಬಿ.ಎಸ್.ಶೆಟ್ಟಿ-ಕೆಮಂತ್.ಪಿ.ರೆಡ್ಡಿ-ಸುಧಾಂಶು ಶಂಕರ್ ಜಂಟಿಯಾಗಿ ಬಂಡವಾಳ ....

213

Read More...

Somu Sound Engineer.News

Wednesday, March 06, 2024

  *ಗಟ್ಟಿ ಕಥೆಯೊಂದಿಗೆ ಬಂದ ‘ಸೋಮು’..ಶಿಷ್ಯನ ಸಿನಿಮಾಗೆ ಸುಕ್ಕ ಸೂರಿ ಸಾಥ್.*.   *ಟ್ರೇಲರ್ ನಲ್ಲಿ ‘ಸೋಮು ಸೌಂಡ್ ಇಂಜಿನಿಯರ್’..ಮಾ.15ಕ್ಕೆ ತೆರೆಗೆ ಬರ್ತಿದೆ ಸೂರಿ ಶಿಷ್ಯನ ಸಿನಿಮಾ..*   *ಸೋಮುಗೆ ಸಾಥ್ ಕೊಟ್ಟ ಸುಕ್ಕ ಸೂರಿ..ಹೇಗಿದೆ ‘ಸೋಮು ಸೌಂಡ್ ಇಂಜಿನಿಯರ್’ ಮೊದಲ ನೋಟ..*?   *ಶಿಷ್ಯನ ಚೊಚ್ಚಲ ಕನಸಿಗೆ ಜೊತೆಯಾದ ಸುಕ್ಕ ಸೂರಿ..’ ಸೋಮು ಸೌಂಡ್ ಇಂಜಿನಿಯರ್’ ಟ್ರೇಲರ್ ರಿಲೀಸ್..*     ಗಟ್ಟಿ ಕಥೆಯೊತ್ತು ಪ್ರೇಕ್ಷಕರನ್ನು ಕಾಡುವುದಕ್ಕೆ ಸೋಮು ಸನ್ನದ್ದನಾಗಿದ್ದಾನೆ. ಹಾಡುಗಳ ಮೂಲಕ ಆಮಂತ್ರಣ ಕೊಟ್ಟಿದ್ದ ಸೋಮು ಸೌಂಡ್ ಇಂಜಿನಿಯರ್ ತಂಡವೀಗ ಟ್ರೇಲರ್ ಮೂಲಕ ಸಿನಿರಸಿಕರನ್ನು ಒಂಟಿಗಾಲಿನಲ್ಲಿ ನಿಲ್ಲಿಸಿದೆ. ಶಿಷ್ಯನ ಹೊಸ ಪ್ರಯತ್ನಕ್ಕೆ ....

191

Read More...
Copyright@2018 Chitralahari | All Rights Reserved. Photo Journalist K.S. Mokshendra,