Gopilola.Film News

Sunday, September 22, 2024

  *ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು "ಗೋಪಿಲೋಲ" ಚಿತ್ರದ ಟ್ರೇಲರ್* * .    *ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ.* .   ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ "ಗೋಪಿಲೋಲ" ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ‌ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ‌. ಚಿತ್ರ ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ....

234

Read More...

Bhairadevi.Film News

Saturday, September 21, 2024

  *‘‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ* .     *ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ** .    ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ "ಭೈರಾದೇವಿ" ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ....

224

Read More...

Balya.Film News

Saturday, September 21, 2024

 

*ಪೋಷಕರು ಹಾಗೂ ಮಕ್ಕಳು ನೋಡಲೇ ಬೇಕಾದ ಚಿತ್ರ "ಬಾಲ್ಯ"* .

 

  ಪ್ರತಿಯೊಬ್ಬರ ಜೀವನದಲ್ಲೂ ಬಾಲ್ಯ ಅಮೂಲ್ಯ. ಆ ಬಾಲ್ಯದ ದಿನಗಳು ಹೇಗಿರಬೇಕು? ಮಕ್ಕಳ ಬಾಲ್ಯದ ದಿನಗಳಲ್ಲಿ ಪೋಷಕರ ಪಾತ್ರ ಏನು?  ಎಂಬ ವಿಷಯಗಳನ್ನು ತಿಳಿಸುವ "ಬಾಲ್ಯ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸತ್ಯನಾರಾಯಣಾಚಾರ್ ನಿರ್ಮಾಣದ ಈ ಚಿತ್ರವನ್ನು ವಿ.ಎಂ.ರಾಜು(ಸುಲ್ತಾನ್ ರಾಜು) ನಿರ್ದೇಶಿಸಿದ್ದಾರೆ. ಇತ್ತೀಚಿಗೆ ನಡೆದ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು "ಬಾಲ್ಯ" ದ ಬಗ್ಗೆ ಮಾತನಾಡಿದರು.  

312

Read More...

Aa Ee & Raja Deva Sindhu.News

Friday, September 20, 2024

ಒಂದೇ ಮುಹೂರ್ತದಲ್ಲಿ ಎರಡು ಸಿನಿಮಾಗಳು      ಅಪರೂಪಕ್ಕೆ ಎನ್ನುವಂತೆ ಶುಭ ಶುಕ್ರವಾರದಂದು  ‘ಆ..ಈ..’  ಮತ್ತು ‘ರಾಜ ದೇವ ಸಿಂಧು’ ಚಿತ್ರಗಳ ಮುಹೂರ್ತ ಸಮಾರಂಭವು ರೇಣುಕಾಂಬ ಸ್ಟುಡಿಯೋದಲ್ಲಿ ಕಿಕ್ಕಿರಿದ ಆಹ್ವಾನಿತರ ಸಮ್ಮುಖದಲ್ಲಿ ನಡೆಯಿತು. ಎರಡು ಸಿನಿಮಾಗಳಿಗೆ ನಿರ್ದೇಶಕರಾಗಿ ದುರ್ಗ ಮೋಹನ್ ಹಾಗೂ ಆರ್‌ಎಸ್‌ಪಿ ಪ್ರೊಡಕ್ಷನ್ಸ್-ಚಿನ್ಮಯ್ ಸಿನಿ ಕ್ರಿಯೇಶನ್ಸ್ ಸಂಸ್ಥೆಯು ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ.         ನಿರ್ದೇಶಕರು ಮಾತನಾಡುತ್ತಾ ಕಥೆಗೆ ಪೂರಕವಾದ ‘ಆ’ ದಿನಗಳು, ‘ಈ’ ದಿನಗಳು ಶೀರ್ಷಿಕೆಯನ್ನು ಪ್ರೇಕ್ಷಕರ ಕುತೂಹಲಕ್ಕಾಗಿ ‘ಆ..ಈ..’ ಅಂತ ಇಡಲಾಗಿದೆ.  ....

216

Read More...

Hosatara.Film News

Saturday, September 21, 2024

  *ಅಫ್ಜಲ್ ಚೊಚ್ಚಲ ನಿರ್ದೇಶನದ "ಹೊಸತರ" ಚಿತ್ರದ ಚಿತ್ರೀಕರಣ ಮುಕ್ತಾಯ.*    *ಚಿತ್ರೀಕರಣ ಮುಗಿಸಿದ ಖುಷಿಯಲ್ಲಿ ಚಿತ್ರತಂಡ** .   ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), "ಹೊಸತರ" ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.   "ಹೊಸತರ" ನನ್ನ ನಿರ್ದೇಶನದ ಮೊದಲ ಚಿತ್ರ. ಆರ್ ಜಿ ವಿ ಎಂಬ ಪ್ರಮುಖಪಾತ್ರದ ಸುತ್ತ ಈ ಚಿತ್ರದ ಕಥೆ ನಡೆಯುತ್ತದೆ. ಸಸ್ಪೆನ್ಸ್, ಥ್ರಿಲ್ಲರ್, ಕಾಮಿಡಿ ಮುಂತಾದ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ....

213

Read More...

Prakarana Tanikha Hantadallide.News

Saturday, September 21, 2024

  ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಲಾಂಚ್ ಆಯ್ತು ಟ್ರೈಲರ್! ಶೀರ್ಷಿಕೆಯ ಮೂಲಕವೇ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ’. ಈಗಾಗಲೇ ಮೋಷನ್ ಪೋಸ್ಟರ್, ಪೋಸ್ಟರ್, ಟೈಟಲ್ ಟ್ರ್ಯಾಕ್ ಸೇರಿದಂತೆ ಒಂದಷ್ಟು ವಿಚಾರಗಳ ಮೂಲಕ ಈ ಚಿತ್ರದ ಟ್ರೈಲರ್ ಇದೀಗ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾ ಗೋಷ್ಠಿಯ ಮೂಲಕ ಅನಾವರಣಗೊಂಡ ಟ್ರೈಲರ್ ಆರಂಭಿಕವಾಗಿಯೇ ಮೆಚ್ಚುಗೆ ಪಡೆದುಕೊಂಡಿದೆ. ಒಂದಿಒಡೀ ಚಿತ್ರತಂಡ ಈ ಸಂದರ್ಭದಲ್ಲಿ ಹಾಜರಿದ್ದು, ಸಿನಿಮಾದ ಬಗ್ಗೆ ಒಂದಷ್ಟು ಇಂಟರೆಸ್ಟಿಂಗ್ ಆದ ಮಾಹಿತಿಗಳನ್ನು ಹಂಚಿಕೊಂಡಿದೆ. ಇದರೊಂದಿಗೆ ತನಿಖಾ ಹಂತದಲ್ಲಿರುವ ಪ್ರಕರಣದ ಆಂತರ್ಯದ ಅಂದಾಜೊಂದು ಪ್ರೇಕ್ಷಕರತ್ತ ದಾಟಿಕೊಂಡಿದೆ. ಅಕ್ಟೊಬರ್ 18ರಂದು ಈ ಚಿತ್ರ ....

216

Read More...

Rashi.Film News

Friday, September 20, 2024

  **ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ "ರಾಶಿ" ಉಡುಗೊರೆ* .    *ಹಲವು ಗಣ್ಯರಿಂದ ಶೀರ್ಷಿಕೆ ಅನಾವರಣ* .   ಧುವನ್ ಫಿಲಂಸ್ ಲಾಂಛನದಲ್ಲಿ  ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ "ರಾಶಿ" ಎಂದು ಹೆಸರಿಡಲಾಗಿದೆ. ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ....

195

Read More...

UI Film.News

Wednesday, September 18, 2024

  *ತಮ್ಮ ಹುಟ್ಟುಹಬ್ಬದ ದಿನ  "UI" ಚಿತ್ರದ ಬಗ್ಗೆ ಮಾಹಿತಿ ನೀಡಿದ ರಿಯಲ್ ಸ್ಟಾರ್.*    *ಉಪೇಂದ್ರ ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ* .   ಸೆಪ್ಟೆಂಬರ್‌ 18 ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬ. ಈ ದಿನದಂದು ಅವರು ನಟಿಸಿ, ನಿರ್ದೇಶಿಸಿರುವ ಬಹು ನಿರೀಕ್ಷಿತ "UI" ಚಿತ್ರದ ಬಗ್ಗೆ ಮಾತನಾಡಿ, ಹೆಚ್ಚಿನ ಮಾಹಿತಿ ನೀಡಿದ್ದಾರೆ‌. ಹುಟ್ಟುಹಬ್ಬದ ದಿನ ಅವರ ನಿವಾಸದಲ್ಲಿ ಆಯೋಜಿಸಲಾಗಿದ್ದ "UI" ಚಿತ್ರದ  ಪತ್ರಿಕಾಗೋಷ್ಠಿಯಲ್ಲಿ  ನಟ, ನಿರ್ದೇಶಕ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್, ಕೆ.ಪಿ.ಶ್ರೀಕಾಂತ್,  ಸಹ ನಿರ್ಮಾಪಕರಾದ ನವೀನ್, ತುಳಸಿರಾಮ ನಾಯ್ಡು(ಲಹರಿ ವೇಲು), ನಾಯಕಿ ರೀಶ್ಮಾ ನಾಣಯ್ಯ, ಸಂಗೀತ ನಿರ್ದೇಶಕ ....

183

Read More...

Langoti Man.News

Thursday, September 12, 2024

  *ಸೆಪ್ಟಂಬರ್ 20ಕ್ಕೆ ಬಿಡುಗಡೆಯಾಗಲಿದೆ ಸಂಜೋತ ಭಂಡಾರಿ ನಿರ್ದೇಶನದ  "ಲಂಗೋಟಿ ಮ್ಯಾನ್"* .    ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಸಂಜೋತ ಭಂಡಾರಿ ನಿರ್ದೇಶನದ " ಲಂಗೋಟಿ ಮ್ಯಾನ್" ಚಿತ್ರದ ಟ್ರೇಲರ್ ಬಿಡುಗಡೆ,  ಹಾಡಿನ ಪ್ರದರ್ಶನ ಮತ್ತು ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ಚಿತ್ರ ಸೆಪ್ಟೆಂಬರ್ 20ರಂದು ಬಿಡುಗಡೆಯಾಗಲಿದೆ. ಈ ವೇಳೆ ಚಿತ್ರತಂಡ "ಲಂಗೋಟಿ ಮ್ಯಾನ್ " ಬಗ್ಗೆ ಮಾಹಿತಿ ಹಂಚಿಕೊಂಡಿತ್ತು.   ನಿರ್ದೇಶಕಿ ಸಂಜೋತ ಭಂಡಾರಿ ಮಾತನಾಡಿ, ’ಲಂಗೋಟಿ ಮ್ಯಾನ್’ ಚಿತ್ರ ಅನಗತ್ಯ ಕಾರಣಕ್ಕೆ ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಚಿತ್ರ ನೋಡಿದ ಮೇಲೆ  ಶೀರ್ಷಿಕೆ ಸೂಕ್ತ ಅಂತ ಗೊತ್ತಾಗಲಿದೆ. ಯಾವ ಸಮಯದಾಯವನ್ನು ಅವಮಾನ ಮಾಡುವ ಮತ್ತು ....

306

Read More...

Look Back.Film News

Tuesday, September 17, 2024

  ಹಂಸಲೇಖ ಅವರಿಂದ ‘ಲುಕ್ ಬ್ಯಾಕ್’ ಟ್ರೇಲರ್ ಬಿಡುಗಡೆ   ಕಳರಿ ಪಯಟ್ಟು ಕುರಿತಾದ ಚಿತ್ರ ಸೆ. 27ರಂದು ತೆರೆಗೆ   ಕೇರಳದಲ್ಲಿ ಹೆಚ್ಚಾಗಿ ಬಳಕೆಯಲ್ಲಿರುವ ಕಳರಿ ಪಯಟ್ಟು ಎಂಬ ಯುದ್ದ ಕಲೆ ಕುರಿತಾದ ಸಿನಿಮಾವೊಂದು ಸಿದ್ಧವಾಗಿದೆ. ಆ ಚಿತ್ರದ ಹೆಸರು ‘ಲುಕ್ ಬ್ಯಾಕ್’. ಮಲಯಾಳಂ, ಕನ್ನಡ, ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಸಿನಿಮಾ ತಯಾರಾಗಿದ್ದು, ಕನ್ನಡದಲ್ಲಿ ಚಿತ್ರಕ್ಕೆ ‘ನೆನೆ ಮನವೆ’ ಎಂದು ಹೆಸರು ಇಡಲಾಗಿದೆ. ಇದೇ ಸೆಪ್ಟೆಂಬರ್ 27ರಂದು ಕರ್ನಾಟಕ ಮತ್ತು ಕೇರಳದಲ್ಲಿ ರಿಲೀಸ್ ಆಗಲಿರುವ ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಟ್ರೇಲರ್ ಬಿಡುಗಡೆ ಮಾಡಿದ ಹಿರಿಯ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ‘ನಾನು ಇದರಲ್ಲಿ ....

206

Read More...

Bhairadevi.Film News

Wednesday, September 18, 2024

 

*ನವರಾತ್ರಿ ಮೊದಲ ದಿನವೇ "ಭೈರಾದೇವಿ" ಆಗಮನ* .     

 

 *ಚಿತ್ರದ ಪ್ರಚಾರಕ್ಕೆ ಚಾಲನೆ ನೀಡಿದ ರಾಧಿಕಾ ಕುಮಾರಸ್ವಾಮಿ* .* .

 

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿರುವ ಹಾಗೂ ನಾಯಕಿಯಾಗೂ ನಟಿಸಿರುವ  ಬಹು ನಿರೀಕ್ಷಿತ "ಭೈರಾದೃವಿ" ಚಿತ್ರ ಅಕ್ಟೋಬರ್ 3 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ನಾಡಹಬ್ಬ ನವರಾತ್ರಿಯ ಮೊದಲ ದಿನವೇ ಈ ಚಿತ್ರ ಬಿಡುಗಡೆಯಾಗುತ್ತಿರುವುದು ವಿಶೇಷ.

197

Read More...

Upendra Birthday.Neww

Wednesday, September 18, 2024

 

*ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಬಹು ನಿರೀಕ್ಷಿತ "45" ಚಿತ್ರದ ವಿಶೇಷ ಪೋಸ್ಟರ್* .

 

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ "45" ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ.

209

Read More...

Ntte Road.Film News

Tuesday, September 17, 2024

  *ನೈಸ್ ರೋಡ ಅಲ್ಲ ಈಗ ನೈಟ್ ರೋಡ್*   ನೈಸ್ ರೋಡ್ ಎಂದು ಸಿನಿಮಾಕ್ಕೆ ಹೆಸರಿಟ್ಟುಕೊಂಡು ಬಿಡುಗಡೆಗೆ ಸಿದ್ಧವಾಗಿದ್ದಾಗಲೇ ನೈಸ್ ರೋಡ್ ಕಂಪನಿಯವರಿಂದ ಟೈಟಲ್ ಬದಲಾಯಿಸಿ ಎಂದು ನೋಟೀಸ್ ಬಂದಿದ್ದರಿಂದ ಈಗ ನೈಸ್ ರೋಡ್ ಬದಲಾಗಿ ನೈಟ್ ರೋಡ್ ಎಂದು ಚಿತ್ರಕ್ಕೆ ಮರು ನಾಮಕರಣ ಮಾಡಿ ಈಗ ಬಿಡುಗಡೆಗೆ ಸಿದ್ದಮಾಡಿದ್ದಾರೆ.. ಈ ಹಿಂದೆ ನೈಸ್ ರೋಡ್ ಎಂದು ಸಿನಿಮಾ ಬಿಡುಗಡೆಗೆ ಸಿದ್ದವಾಗಿತ್ತು ಈ ಸಂದರ್ಭದಲ್ಲಿ ನೈಸ್ ರೋಡ್ ಕಂಪನಿಯವರು ಸಿನಿಮಾ ಟೈಟಲ್ ಬದಲಿಸುವಂತೆ ನೋಟೀಸ್ ನೀಡಿದ್ದರು, ಸಿನಿಮಾ ತಂಡದವರು ಈ ಸಿನಿಮಾಗೂ ನೈಸ್ ರೋಡ್ ಗು ಯಾವುದೇ ಸಂಬಂಧವಿಲ್ಲ ಎಂದು ಮನವರಿಕೆ ಮಾಡಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ, ಆದ್ದರಿಂದ ಕೊನೆಗೆ ಸಿನಿಮಾ ಟೈಟಲ್ ಬದಲಿಸಲು ....

180

Read More...

Hagga.Film News

Sunday, September 15, 2024

  *ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಅನು ಪ್ರಭಾಕರ್ ಅಭಿನಯದ "ಹಗ್ಗ" ಚಿತ್ರ ಈ ವಾರ ತೆರೆಗೆ* .   ಅನು ಪ್ರಭಾಕರ್ ಕನ್ನಡ ಚಿತ್ರರಂಗದಲ್ಲಿ ನಾಯಕಿಯಾಗಿ 25 ವರ್ಷಗಳನ್ನು ಪೂರೈಸಿದ್ದಾರೆ. ಅನು ಪ್ರಭಾಕರ್ ನಾಯಕಿಯಾಗಿ ಅಭಿನಯಿಸಿದ ಮೊದಲ ಚಿತ್ರ ‘ಹೃದಯ ಹೃದಯ’, 1999ರ ಸೆಪ್ಟೆಂಬರ್ 15ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಆ ಚಿತ್ರದ ಮೂಲಕ ವೃತ್ತಿ ಜೀವನ ಪ್ರಾರಂಭಿಸಿದ ಅವರು, ಈ 25 ವರ್ಷಗಳಲ್ಲಿ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅಂದಹಾಗೆ, ಅನು ಪ್ರಭಾಕರ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿರುವ ‘ಹಗ್ಗ’ ಚಿತ್ರವು ಸೆಪ್ಟೆಂಬರ್ 20ರಂದು ಬಿಡುಗಡೆಯಾಗುತ್ತಿದೆ. ಅನು ಅಭಿನಯದ ಮೊದಲ ಚಿತ್ರ ಬಿಡುಗಡೆಯಾದ ದಿನವೇ ‘ಹಗ್ಗ’ ಚಿತ್ರದ ....

192

Read More...

Naa Ninna Bidalare.News

Saturday, September 14, 2024

  "ನಾ ನಿನ್ನ ಬಿಡಲಾರೆ" ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಶರಣ್.     ಬೆಳ್ಳಿ ಪರದೆಗೆ ಮತ್ತೊಂದು ಹೊಸ ತಂಡ ಒಂದು ವಿಭಿನ್ನ ಪ್ರಯತ್ನದ ಚಿತ್ರದ ಮೂಲಕ ಚಿತ್ರ ಪ್ರೇಮಿಗಳನ್ನು ಸೆಳೆಯಲು ಮುಂದಾಗಿದೆ. ಗುಲ್ಬರ್ಗ ಮೂಲದ ಯುವ ಪ್ರತಿಭೆ ಅಂಬಾಲಿ ಭಾರತಿ ನಾಯಕಿಯಾಗಿ ನಟಿಸುವ ಮೂಲಕ ಅವರ ತಾಯಿ ಶ್ರೀಮತಿ ಭಾರತಿ ಬಾಳಿ ನಿರ್ಮಾಣದಲ್ಲಿ ಮೂಡಿ ಬರುತ್ತಿರುವಂತಹ ಚಿತ್ರ "ನಾ ನಿನ್ನ ಬಿಡಲಾರೆ". ಇತ್ತೀಚೆಗೆ ಈ ಚಿತ್ರದ ಟೀಸರ್ ಅನ್ನು ನಟ ಶರಣ್  ಬಿಡುಗಡೆ ಮಾಡಿ ಹೊಸ ತಂಡಕ್ಕೆ ಸಾಥ್ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶರಣ್ ಈ ಚಿತ್ರದ ನಟಿ , ನಿರ್ಮಾಪಕಿ ಭಾರತಿ ರವರ ಶ್ರಮಕ್ಕೆ ತಕ್ಕ ಚಿತ್ರ ಇದಾಗಿದೆ. ಬಹಳ ಸೌಮ್ಯ  ಸ್ವಭಾವವಿದ್ದರೂ ಆಸಕ್ತಿ , ಗುರಿ, ಶ್ರಮ ....

197

Read More...

Rummy Atta.News

Monday, September 16, 2024

  ರಮ್ಮಿ ಆಟ ಹಾಡು -ಟ್ರೈಲರ್ ಬಿಡುಗಡೆ      ವಿದ್ಯಾಸಂಸ್ಥೆಯನ್ನು ನಡೆಸುತ್ತಿರುವ ಉಮರ್ ಷರೀಫ್ ಅವರೀಗ ಚಿತ್ರರಂಗಕ್ಕೆ ಬಂದಿದ್ದಾರೆ‌. ಆನ್ ಲೈನ್ ಗೇಮ್ ಈಗಿನ‌ ಯುವ ಜನತೆಯನ್ನು ಹೇಗೆ ಹಾಳು ಮಾಡುತ್ತಿದೆ. ಅದರಿಂದ ಏನೆಲ್ಲ ಅನಾಹುತಗಳಾಗುತ್ತಿವೆ ಎಂಬ ಕಾನ್ಸೆಪ್ಟ್ ಇಟ್ಟುಕೊಂಡು "ರಮ್ಮಿ ಆಟ" ಎಂಬ  ಚಿತ್ರವನ್ನು ನಿರ್ಮಿಸಿದ್ದಾರೆ. ಅಲ್ಲದೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು  ಆಕ್ಷನ್ ಕಟ್ ಹೇಳಿದ್ದಾರೆ.  ರಮ್ಮಿ ಗೇಮ್ ನಂಥ ಆಟಗಳ ಚಟಕ್ಕೆ  ಕೆಲವರು ತಮ್ಮ ಮನೆ ಮಠ ಕಳೆದುಕೊಂಡು  ಜೀವನವನ್ನೇ ಸರ್ವನಾಶ ಮಾಡಿಕೊಂಡಿದ್ದಾರೆ. ಹಣದಾಸೆಗೆ ಬಿದ್ದು  ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಆನ್ ಲೈನ್ ರಮ್ಮಿ ಆಡುವುದರಿಂದ ಏನೇನು  ತೊಂದರೆಗಳಾಗುತ್ತವೆ, ಜನ ....

852

Read More...

Gangs Of UK.News

Monday, September 16, 2024

  ಪ್ರವರದೊಂದಿಗೆ ಪ್ರಾರಂಭವಾದ     " ಗ್ಯಾಂಗ್ಸ್ ಆಫ್ ಯುಕೆ "        ಡೆಡ್ಲಿ ಸೋಮ, ಮಾದೇಶ, ದಶಮುಖ ಹೀಗೆ ಬಹುತೇಕ ಸ್ಟಾರ್ ಚಿತ್ರಗಳನ್ನೇ ನಿರ್ದೇಶಿಸಿದ ರವಿ ಶ್ರೀವತ್ಸ ಅವರೀಗ ತಮ್ಮದೇ ಆದ ಹೊಸ ನಿರ್ಮಾಣ ಸಂಸ್ಥೆಯೊದನ್ನು ಸ್ಥಾಪಿಸಿದ್ದು,  ಆ ಮೂಲಕ ನಿರ್ಮಾಣವಾಗುತ್ತಿರುವ ’ಗ್ಯಾಂಗ್ಸ್ ಆಫ್ ಯುಕೆ’ ಚಿತ್ರದಲ್ಲಿ ಸಾಕಷ್ಟು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.     ಇತ್ತೀಚೆಗೆ ರವಿ ಶ್ರೀವತ್ಸ ಅವರ ’ಡೆಡ್ಲಿ ಆರ್ಟ್ಸ್’ ಸಂಸ್ಥೆಯ ಲಾಂಛನ ಬಿಡುಗಡೆ ಹಾಗೂ ಗ್ಯಾಂಗ್ಸ್ ಆಫ್ ಯುಕೆ ಚಿತ್ರದ ಪತ್ರಿಕಾಗೋಷ್ಠಿ ನಡೆಯಿತು. ನಿರ್ದೇಶಕ ಕೆವಿ.ರಾಜು ಅವರ ಧರ್ಮಪತ್ನಿ ನೂತನ ನಿರ್ಮಾಣ ಸಂಸ್ಥೆಯ ಲಾಂಛನಕ್ಕೆ ಚಾಲನೆ ನೀಡಿದರು. ಕನ್ನಡದ ....

287

Read More...

Gagana Kusuma.News

Saturday, September 14, 2024

 

ಗಗನ ಕುಸುಮ ಹಾಡುಗಳ ಬಿಡುಗಡೆ

 

’ಗಗನ ಕುಸುಮ’ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಬಿಡುಗಡೆಗೊಂಡಿತು. ಹಿರಿಯ ನಿರ್ಮಾಪಕ ಮತ್ತು ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎ.ಚಿನ್ನೆಗೌಡ ಕಾರ್ಯಕ್ರಮಕ್ಕೆ ಚಾಲನ ನೀಡಿದರು. ನಂತರ ಮಾತನಾಡುತ್ತಾ ನಿರ್ಮಾಪಕ ಹುಟ್ಟಿಕೊಂಡರೆ ನೂರಾರು ಜನರಿಗೆ ಕೆಲಸ ಸಿಗುತ್ತದೆ. ಮೊದಲು ಅವರು ಉಳಿಯಬೇಕು. ಟೈಟಲ್ ಚೆನ್ನಾಗಿದೆ. ಸಿನಿಮಾವು ಯಶಸ್ಸು ಗಳಿಸಲಿ ಅಂತ ಶುಭ ಹಾರೈಸಿದರು.

301

Read More...

Jaunty S/O Jayaraj.News

Friday, September 13, 2024

  ಜಾಂಟಿ ಸನ್ ಆಫ್ ಜಯರಾಜ್ ಟೀಸರ್ ಬಿಡುಗಡೆ          ’ಜಾಂಟಿ ಸನ್ ಆಫ್ ಜಯರಾಜ್’ ಚಿತ್ರದ ಪಾತ್ರಗಳ ಪರಿಚಯದ ಟೀಸರ್ ಹಾಗೂ ಟ್ರೈಲರ್ ಬಿಡುಗಡೆ ಸಮಾರಂಭವು ನಡೆಯಿತು. ನಟಿ ವಿನೋಧ್ ಪ್ರಭಾಕರ್ ಮತ್ತು ಶ್ರೀನಗರ ಕಿಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು. ಚಿತ್ರರಂಗದಲ್ಲಿ ಎರಡು ದಶಕಗಳ ಕಾಲ ಪ್ರಚಾರ ಕಾರ್ಯದಲ್ಲಿ ಅನುಭವ ಹೊಂದಿರುವ ಸುಗೂರುಕುಮಾರ್ ಪ್ರಥಮ ಅನುಭವ ಎನ್ನುವಂತೆ ನಿರ್ಮಾಣ ಮಾಡಿದ್ದಾರೆ.          ಕತೆ ಬರೆದು ನಿರ್ದೇಶನ ಮಾಡಿರುವ ಆನಂದರಾಜ್ ಮಾತನಾಡಿ ಜಯರಾಜ್ ನಂತರದ ದಿನಗಳ ಸಂದರ್ಭದಲ್ಲಿ ಹಣಕಾಸು ವ್ಯವಹಾರ, ಮಾರ್ಕೆಟ್ ದಂಧೆ ಎಲ್ಲವು ರಾರಾಜಿಸುತ್ತಿತ್ತು. ಇಂತಹ ವಿಷಯಗಳನ್ನು ಕೇಳಿದ್ದು, ನೋಡಿದ್ದು, ....

188

Read More...

Thaayine Devara.News

Thursday, September 12, 2024

  ಬಾಬಾನ ಸನ್ನಿಧಿಯಲ್ಲಿ ತಾಯಿನೇ ದೇವರ? ಮುಹೂರ್ತ          ಪ್ರಪಂಚದಲ್ಲಿ ತಾಯಿಯನ್ನು ದೇವರಿಗೆ ಹೋಲಿಸುತ್ತಾರೆ. ಅಂತಹುದೇ ಅಂಶಗಳನ್ನು ಹೆಕ್ಕಿಕೊಂಡು ’ತಾಯಿನೇ ದೇವರ?’ ಚಿತ್ರವೊಂದು ಸೆಟ್ಟೇರಿದೆ. ಶುಭ ಗುರುವಾರದಂದು ಮಾಗಡಿ ರಸ್ತೆ ಲಕ್ಷೀಪುರದಲ್ಲಿರುವ ’ದಕ್ಷಿಣ ಶಿರಡಿ ಶ್ರೀ ಸಾಯಿ ಮಂದಿರ’ದಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಪೂಜೆ ನಂತರ ತಂಡವು ಮಾಹಿತಿಗಳನ್ನು ಹಂಚಿಕೊಂಡಿತು.            ಡಾ.ಸಾಯಿ ಸತೀಶ್ ತೋಟಯ್ಯ ಮಾತನಾಡಿ, ಸಿನಿಮಾರಂಗದಲ್ಲಿ ಹದಿನಾರು ವರ್ಷ ಅನುಭವ ಹೊಂದಿದ್ದೇನೆ. ಸಿನಿಮಾಕ್ಕೆ ರಚನೆ,ಚಿತ್ರಕಥೆ ಬರೆದು ಶ್ರೀ ಸಾಯಿಶಕ್ತಿ ಸಿನಿ ಕಂಬೈನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡುತ್ತಿದ್ದೇನೆ. ....

273

Read More...
Copyright@2018 Chitralahari | All Rights Reserved. Photo Journalist K.S. Mokshendra,