*ವಿಕ್ಕಿ ವರುಣ್ - ಧನ್ಯಾ ರಾಮಕುಮಾರ್ ಅಭಿನಯದ "ಕಾಲಾಪತ್ಥರ್" ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆ* . ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ "ಕಾಲಾಪತ್ಥರ್" ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ಬಿಡುಗಡೆಯಾಗಲಿದೆ. ಹಿರಿಯ ಪತ್ರಕರ್ತ ಕೆ.ಎಸ್.ವಾಸು ’ಕಾಲಾಪತ್ಥರ್’ ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆರಂಭದಿಂದಲೂ ತಾವು ನಮ್ಮ ಚಿತ್ರಕ್ಕೆ ....
. *ಟೈಗರ್ ಅಭಿನಯದ ’ಬಲರಾಮನ ದಿನಗಳು’ ಚಿತ್ರಕ್ಕೆ ಸಂತೋಷ್ ನಾರಾಯಣನ್ ಸಂಗೀತ* . *ಈ ಚಿತ್ರದ ಮೂಲಕ "ಕಲ್ಕಿ" ಚಿತ್ರದ ಮ್ಯೂಸಿಕ್ ಡೈರೆಕ್ಟರ್ ಕನ್ನಡಕ್ಕೆ ಎಂಟ್ರಿ* . ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ನಾಯಕರಾಗಿ ನಟಿಸುತ್ತಿರುವ 25 ನೇ ಚಿತ್ರ "ಬಲರಾಮನ ದಿನಗಳು". ಕಳೆದ ಕೆಲವು ತಿಂಗಳ ಹಿಂದಷ್ಟೇ ಈ ಚಿತ್ರದ ಘೋಷಣೆಯಾಗಿತ್ತು. ಈಗ ಈ ಚಿತ್ರದ ಕುರಿತು ಮತ್ತೊಂದು ಮಹತ್ವದ ಸುದ್ದಿ ಹೊರಬಂದಿದೆ. ಭಾರತದ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಹೆಸರಾಂತ ಸಂಗೀತ ....
*"ಬಿಟಿಎಸ್" ನಲ್ಲಿ ಐದು ಜನ ನಿರ್ದೇಶಕರ ಐದು ಕಥೆಗಳು* .. *ಹೊಸ ಪ್ರಯತ್ನಕ್ಕೆ ರಾಜ್ ಬಿ ಶೆಟ್ಟಿ ಸಾಥ್* . ಒಂದು ಚಿತ್ರವನ್ನು ಇಬ್ಬರು ನಿರ್ದೇಶಕರು ಸೇರಿ ನಿರ್ದೇಶಿಸಿರುವ ಉದಾಹರಣೆ ಸಾಕಷ್ಟಿದೆ. ಆದರೆ ಐದು ಜನ ನಿರ್ದೇಶಕರು, ಐದು ಕಥೆಗಳನ್ನಿಟ್ಟುಕೊಂಡು "ಬಿ ಟಿ ಎಸ್" ಎಂಬ ಸಿನಿಮಾ ಮಾಡಿದ್ದಾರೆ. ಆಸಕ್ತಿಕರ ವಿಷಯಗಳನ್ನಿಟ್ಟುಕೊಂಡು ಜನರ ಮನಸ್ಸು ಗೆಲ್ಲಲ್ಲು ಮುಂದಾಗಿದ್ದಾರೆ.ಯುವ ಪ್ರತಿಭಾನ್ವಿತರ ತಂಡಕ್ಕೆ ನಟ ರಾಜ್ ಬಿ ಶೆಟ್ಟಿ ಸಾಥ್ ನೀಡಿ, ಪ್ರಯತ್ನ ಯಶಸ್ವಿ ಆಗಲಿ ಎಂದು ಹಾರೈಸಿದ್ದಾರೆ. ಟ್ರೇಲರ್ ಅನ್ನು "ಭೀಮ" ಚಿತ್ರದ ನಿರ್ಮಾಪಕ ಕೃಷ್ಣ ಸಾರ್ಥಕ್ ಬಿಡುಗಡೆ ಮಾಡಿದ್ದಾರೆ. ಬಿಟಿಎಸ್ ( ಬಿಹೈಂಡ್ ದಿ ಸ್ಕ್ರೀನ್ ) ಚಿತ್ರವನ್ನು ....
*"ರಾನಿ" ನೋಡಲು ಆಗಸ್ಟ್ 30 ಅಲ್ಲ. ಇನ್ನೂ ಎರಡು ವಾರ ಕಾಯಬೇಕು* . ಕಿರಣ್ ರಾಜ್ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ’ರಾನಿ’ ಆಗಸ್ಟ್ 30 ರ ಬದಲು ಸೆಪ್ಟೆಂಬರ್ 12 ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ. ಮೊದಲು ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಭೀಮ’ ....
*ಕವೀಶ್ ಶೆಟ್ಟಿ ಹಾಗೂ ಮೇಘಾ ಶೆಟ್ಟಿ ಅಭಿನಯದ ಆಪರೇಷನ್ ಲಂಡನ್ ಕೆಫೆ ಚಿತ್ರದ ಟೀಸರ್ ಬ್ಯಾಂಗ್* ! *ಮೊದಲ ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮನಬಿಚ್ಚಿ ಮಾತನಾಡಿದ ಚಿತ್ರತಂಡ* . ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ, ಮರಾಠಿ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ’ಆಪರೇಷನ್ ಲಂಡನ್ ಕೆಫೆ’ ಚಿತ್ರದ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡು ಪೋಸ್ಟ್ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರದ ಟೀಸರ್ ಬಿಡುಗಡೆಯಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರೇಕ್ಷಕರಿಂದ ಭರ್ಜರಿ ಫಲಿತಾಂಶವನ್ನು ಕಾಣುತ್ತಿದೆ. ಟೀಸರ್ ಬಿಡುಗಡೆ ಮಾಡಿದ ....
*ಎರಡು ಉಪಕಥೆಗಳ ನಡುವೆ ನಡೆಯುತ್ತದೆ "ರುದ್ರ ಗರುಡ ಪುರಾಣ" ಕಥೆ* . *ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ರಿಷಿ ಅಭಿನಯದ ಚಿತ್ರ* . ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ಹಾಗೂ ಪ್ರಸ್ತುತ ತೆಲುಗು ಚಿತ್ರರಂಗದಲ್ಲೂ ಮನೆಮಾತಾಗಿರುವ ನಟ ರಿಷಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ "ರುದ್ರ ಗರುಡ ಪುರಾಣ" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ನಿರ್ದೇಶಕ ಜೇಕಬ್ ವರ್ಗೀಸ್ ಮುಂತಾದವರು ಟೀಸರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿದ್ದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. 914 ವಿಮಾನ 1955 ರಲ್ಲಿ ನ್ಯೂಯಾರ್ಕ್ ನಿಂದ ಮಿಯಾನ್ ಸಿಟಿಗೆ ....
ಶೀರ್ಷಿಕೆ ಹಳೇದು ಕಥೆ ಹೊಸತು
೮೦ರ ದಶಕದಲ್ಲಿ ಡಾ.ರಾಜ್ಕುಮಾರ್ ಅಭಿನಯದ ‘ಧ್ರುವತಾರೆ’ ಚಿತ್ರವು ಬಿಡುಗಡೆಗೊಂಡು ಹಿಟ್ ಆಗಿತ್ತು. ನಾಲ್ಕು ದಶಕದ ನಂತರ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಜಿ.ಪಿ.ಫಿಲಂಸ್ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ಗಣೇಶ್ಕುಮಾರ್ ನಿರ್ಮಾಣ ಮಾಡಿದ್ದಾರೆ. ಮೈಸೂರು ಮೂಲದ ಪ್ರತೀಕ್ ನಿರ್ದೇಶನದ ಜೊತೆಗೆ ನಾಯಕನ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಹಾಡುಗಳು ಹೊರಬಂದಿದ್ದು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎಂ.ಎನ್.ಸುರೇಶ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಂಡಕ್ಕೆ ಶುಭ ಹಾರೈಸಿದರು.
*ಆಗಸ್ಟ್ 30 ಕ್ಕೆ ಬರಲಿದ್ದಾನೆ "ಮೈ ಹೀರೋ"* . ಅವಿನಾಶ್ ವಿಜಯಕುಮಾರ್ ನಿರ್ಮಿಸಿ, ನಿರ್ದೇಶಿಸಿರುವ "ಮೈ ಹೀರೋ" ಚಿತ್ರ ಇದೇ ಆಗಸ್ಟ್ 30 ರಂದು ಬಿಡುಗಡೆಯಾಗಲಿದೆ. ಬಿಡುಗಡೆಗೆ ಪೂರ್ವಭಾವಿಯಾಗಿ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು "ಮೈ ಹೀರೋ" ಬಗ್ಗೆ ಮಾತನಾಡಿದರು. ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಅವಿನಾಶ್ ವಿಜಯ ಕುಮಾರ್, ನಟಿ ಅಂಕಿತ ಅಮರ್ ಹಾಗೂ ಸಂಗೀತ ನಿರ್ದೇಶಕ ಗಗನ್ ಭಡೇರಿಯಾ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಹಾಲಿವುಡ್ ಕಲಾವಿದರಾದ ಜಿಲಾಲಿ ರಜ್ ಕಲ್ಲಹ್, ಎರಿಕ್ ರಾಬರ್ಟ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಮೈ ಹೀರೋ ಚಿತ್ರದ ಪ್ರಮುಖ ....
*ನಟ ಶರಣ್ ಅವರಿಂದ ಅನಾವರಣವಾಯಿತು "ಲಂಗೋಟಿ ಮ್ಯಾನ್" ಚಿತ್ರದ ಟೀಸರ್* . ತನು ಟಾಕೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಸಂಜೋತ ಭಂಡಾರಿ ಕಥೆ ಬರೆದು ನಿರ್ದೇಶಿಸಿರುವ "ಲಂಗೋಟಿ ಮ್ಯಾನ್" ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಟ ಶರಣ್ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಹತ್ತು ವರ್ಷಗಳ ಹಿಂದೆ "ಮಿರ್ಚಿ ಮಂಡಕ್ಕಿ ಖಡಕ್ ಚಾಯ್" ಚಿತ್ರವನ್ನು ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ ಎಂದು ಮಾತನಾಡಿದ ನಿರ್ದೇಶಕಿ ಸಂಜೋತ ಭಂಡಾರಿ, ನಾನು ಬೇರೆ ಒಂದು ಚಿತ್ರದ ಕಥೆ ಮಾಡುತ್ತಿದ್ದಾಗ ಈ ಕಾನ್ಸೆಪ್ಟ್ ಬಂತು. ಆ ಚಿತ್ರದ ಕಥೆ ....
ಸತ್ಯ ಘಟನೆಯ ದ ರೂಲರ್ಸ್ ೨೦೧೭ರಂದು ನಡೆದ ನೈಜ ಘಟನೆಯನ್ನು ‘ದ ರೂಲರ್ಸ್’ ಚಿತ್ರದಲ್ಲಿ ಬಳಸಲಾಗಿದೆ. ಎಂ.ಎನ್.ಮೂವೀಸ್ ಬ್ಯಾನರ್ ಅಡಿಯಲ್ಲಿ ಅಶ್ವಥ್ ಬಳಗೆರೆ ನಿರ್ಮಾಣ ಮಾಡಿದ್ದು, ಉದಯ್ ಭಾಸ್ಕರ್ ಛಾಯಾಗ್ರಹಣ, ಸಂಕಲನ ಜತೆಗೆ ಆಕ್ಷನ್ ಕಟ್ ಹೇಳಿದ್ದಾರೆ. ಸಂವಿಧಾನದ ಶಕ್ತಿ ಎಂದು ಅಡಿಬರಹದಲ್ಲಿ ಹೇಳಲಾಗಿದೆ. ಸಿನಿಮಾವು ಆಗಸ್ಟ್ ೩೦ರಂದು ತೆರೆ ಕಾಣುತ್ತಿರುವುದರಿಂದ ತಂಡವು ಮಾಹಿತಿ ಹಂಚಿಕೊಳ್ಳಲು ಮಾಧ್ಯಮದ ಮುಂದೆ ಹಾಜರಾಗಿತ್ತು. ನಿರ್ದೇಶಕರು ಮಾತನಾಡುತ್ತಾ, ರಾಜ್ಯದ ಎಲ್ಲಾ ಪತ್ರಿಕೆಗಳಲ್ಲಿ ಪ್ರಕಟವಾದ ಸುದ್ದಿಗಳನ್ನು ಆರಿಸಿಕೊಂಡು ಸ್ಕ್ರೀನ್ಪ್ಲೇ ....
ಜಂಬೂ ಸರ್ಕಸ್ ಮನಸೋತೆ ಮನಸಾರೆ ಹಾಡು ಬಂತು ಕನ್ನಡದ ಚಲನಚಿತ್ರದ ಸುಪ್ರಸಿದ್ದ ನಿರ್ದೇಶಕ ಎಂ ಡಿ ಶ್ರೀಧರ್ ಇದುವರೆವಿಗೂ ನಿರ್ದೇಶನ ಮಾಡಿದ ಸಿನಿಮಗಳೆಲ್ಲ ಸೂಪರ್ ಹಿಟ್. ಈಗ ಅವರ ‘ಜಂಬೂ ಸರ್ಕಸ್’ ಕೂಡ ಆ ನಿಟ್ಟಿನಲ್ಲಿ ಸಾಗುವಂತಿದೆ. ಅದಕ್ಕೆ ಸಾಕ್ಷಿಯಾಗಿ ಒಂದು ಇಂಪಾದ ಹಾಡು ‘ಮನಸೂತೆ ಮನಸಾರೆ.. ಕವಿರಾಜ್ ಅವರ ಗೀತ ಸಾಹಿತ್ಯದಲ್ಲಿ ನಕುಲ ಅಭಯಂಕರ ಹಾಡಿರುವ ಈ ಹಾಡನ್ನು ವಾಸುಕಿ ವೈಭವ ಸಂಯೋಜನೆ ಮಾಡಿದ್ದಾರೆ. ಈ ಹಾಡನ್ನು ಬಿಡುಗಡೆ ಮಾಡುತ್ತಾ ಚಿತ್ರದ ಇನ್ನೆರಡು ಹಾಡು ‘ಗ್ರಹಚಾರ.. ಹಾಗೂ ಗಾಂಚಲಿ ಗಂಗವ್ವ.. ಸಹ ಮಾಧ್ಯಮದರ ಮುಂದೆ ಕಳೆದ ಶನಿವಾರ ಎಂ ಎಂ ಬಿ ಲೆಗಸಿ ಸಭಾಂಗಣದಲ್ಲಿ ಅನಾವರಣ ಮಾಡಲಾಯಿತು. ‘ಜಂಬೂ ಸರ್ಕಸ್’ ಚಿತ್ರಕ್ಕೆ ಕಥಾ ಹಂದರ ಮೊದಲು ಬಂದಿದ್ದು ಹಾಸ್ಯ ....
*ಮಂಸೋರೆ "ದೂರ ತೀರ ಯಾನ" ಕ್ಕೆ ಜೊತೆಯಾದ ವಿಜಯ್ ಕೃಷ್ಣ - ಪ್ರಿಯಾಂಕ ಕುಮಾರ್* . *ಡಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಸೆಪ್ಟೆಂಬರ್ ನಿಂದ ನಿರಂತರ ಚಿತ್ರೀಕರಣ* . ಡಿ.ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ "ಹರಿವು", " ನಾತಿಚರಾಮಿ", "ಆಕ್ಟ್ 1978", "19.20.21" ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸುತ್ತಿರುವ ಮುಂದಿನ ಚಿತ್ರ "ದೂರ ತೀರ ಯಾನ". ವಿಜಯ್ ಕೃಷ್ಣ ಹಾಗೂ ....
ಶಾಸಕ ಭೈರತಿ ಬಸವರಾಜ್ ಶಿಶ್ಯ ಈಗ ಕುರಿ ಕಾಯೋನು.. ಕಳೆದ ಎರಡು ದಶಕಗಳಿಂದಲೂ ಚಿತ್ರರಂಗದಲ್ಲಿ ಕಲಾವಿದ, ಸಹಾಯಕ ನಿರ್ದೇಶಕನಾಗಿ ತೊಡಗಿಕೊಂಡಿರುವ ಮಹೇಶ್(ಓಂ) ಈಗ ಸ್ವತಂತ್ರ ನಿರ್ದೇಶಕನಾಗುತ್ತಿದ್ದಾರೆ. ಜೊತೆಗೆ ಹೀರೋ ಕೂಡ ಆಗುತ್ತಿದ್ದಾರೆ. ಅವರ ನಟನೆ ಹಾಗೂ ನಿರ್ದೇಶನದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಅನಿವಾಸಿ ಕನ್ನಡಿಗರಾದ ರಾಜೇಶ್, ಪ್ರಿಯಾ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಸಮಾರಂಭದಲ್ಲಿ ಶಾಸಕ ಭೈರತಿ ಬಸವರಾಜ್ ಅವರು ’ಕುರಿ ಕಾಯೋನು’ ಚಿತ್ರದ ಟೈಟಲ್ ಲಾಂಚ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಇದಕ್ಕೂ ಮೊದಲು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ....
*"ರಕ್ಕಸಪುರದೋಳ್" ರಾಜ್ ಬಿ ಶೆಟ್ಟಿ* . *ಸಾಹಸ ನಿರ್ದೇಶಕ ಕೆ.ರವಿವರ್ಮ ನಿರ್ಮಾಣದ ಹಾಗೂ ರವಿ ಸಾರಂಗ ನಿರ್ದೇಶನದ ಈ ಚಿತ್ರಕ್ಕೆ ರಕ್ಷಿತ - ಪ್ರೇಮ್ ಸಾಥ್* . ಸಾಹಸ ನಿರ್ದೇಶಕರಾಗಿ ಭಾರತದಾದ್ಯಂತ ಜನಪ್ರಿಯರಾಗಿರುವ ಕನ್ನಡದ ಹೆಮ್ಮೆಯ ಸಾಹಸ ನಿರ್ದೇಶಕ ಡಾ||ಕೆ.ರವಿವರ್ಮ ಅವರ ಪ್ರಥಮ ನಿರ್ಮಾಣದ, ರವಿ ಸಾರಂಗ ಚೊಚ್ಚಲ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಖ್ಯಾತರಾಗಿರುವ ರಾಜ್ ಬಿ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ "ರಕ್ಕಸಪುರದೋಳ್" ಚಿತ್ರದ ಮುಹೂರ್ತ ಸಮಾರಂಭ ನೆಟಕಲ್ಲಪ್ಪ ಸರ್ಕಲ್ ನಲ್ಲಿರುವ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಹಬ್ಬದಂದು ಅದ್ದೂರಿಯಾಗಿ ನೆರವೇರಿತು. ನಟಿ ರಕ್ಷಿತ ಹಾಗೂ ನಿರ್ದೇಶಕ ಪ್ರೇಮ್ ಚಿತ್ರದ ಮೊದಲ ....
‘ಕ್ರೆಡಿಟ್ ಕುಮಾರ’ನಾಗಿ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಪತ್ರಕರ್ತ ಹರೀಶ್ ಆಕ್ಷನ್ ಪ್ರಿನ್ ಧ್ರುವ ಸರ್ಜಾ ಲಾಂಚ್ ಮಾಡಿದ ಹೊಸ ಹೀರೋ ಹರೀಶ್ ಸೀನಪ್ಪ ಕ್ರೆಡಿಟ್ ಕುಮಾರ ಮೂಲಕ ಸಿನಿಮಾರಂಗಕ್ಕೆ ಹೊಸ ಹೀರೋ ಎಂಟ್ರಿ 'ಕ್ರೆಡಿಟ್ ಕುಮಾರ’, ಸ್ಯಾಂಡಲ್ ವುಡ್ ನಲ್ಲಿ ಸೆಟ್ಟೇರಿರುವ ಹೊಸ ಸಿನಿಮಾ. ’ಬಾಂಡ್ ರವಿ’ ಖ್ಯಾತಿಯ ನಿರ್ದೇಶಕ ಪ್ರಜ್ವಲ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 2ನೇ ಸಿನಿಮಾ. ಈ ಸಿನಿಮಾ ಮೂಲಕ ನಾಯಕನಾಗಿ ಹರೀಶ್ ಸೀನಪ್ಪ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. 10ವರ್ಷಕ್ಕೂ ಅಧಿಕ ಸಮಯ ಸಿನಿಮಾ ಪತ್ರಕರ್ತರಾಗಿ ಕೆಲಸ ಮಾಡುತ್ತಿದ್ದ ಹರೀಶ್ ಇದೀಗ ಬೆಳ್ಳಿ ಪರದೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಮೊದಲ ಹೆಜ್ಜೆಯಾಗಿ ....
ಮೃದುಲ ಮನಸ್ಸಿಗೆ ಗಾಢವಾಗಿ ತಟ್ಟುತ್ತದೆ - ದತ್ತಣ್ಣ ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಲೈಫ್ ಆಫ್ ಮೃದುಲ’ ಚಿತ್ರವನ್ನು ಮದನ್ ಮೂವೀಸ್ ಬ್ಯಾನರ್ ಅಡಿಯಲ್ಲಿ ಮದನ್ಕುಮಾರ್.ಸಿ ನಾಯಕ ಮತು ನಿರ್ಮಾಪಕ. ಸಂಭಾಷಣೆ ಬರೆದಿರುವ ಯೋಗಿದೇವಗಂಗೆ ನಿರ್ಮಾಣದಲ್ಲಿ ಕೈ ಜೋಡಿಸಿದ್ದಾರೆ. ಇವರೊಂದಿಗೆ ತೇಜಸ್ವಿನಿ.ಆರ್.ಗೌಡ ಪ್ರೋತ್ಸಾಹವಿದೆ. ಹಲವು ನಿರ್ದೇಶಕರ ಬಳಿ ಕೆಲಸ ಕಲಿತಿರುವ ಕೋಲಾರದ ಚೇತನ್ ತ್ರಿವೇಣ್ ಸಿನಿಮಾಕ್ಕೆ ರಚನೆ,ಚಿತ್ರಕಥೆ, ಸಾಹಸ ಹಾಗೂ ಆಕ್ಷನ್ ಕಟ್ ಹೇಳಿದ್ದಾರೆ. ಕಳೆದ ತಿಂಗಳು ಹಾಡುಗಳು ಹೊರಬಂದಿದ್ದು, ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಈಗ ಪ್ರಚಾರದ ಎರಡನೇ ....
*ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು ಅನಿವಾಸಿ ಕನ್ನಡಿಗರ "ಹನಿ ಹನಿ" ಆಲ್ಬಂ ಸಾಂಗ್* . *ಇದು ಮೊಟ್ಟಮೊದಲ ಬಾರಿಗೆ ಯೂರೋಪ್ ನಲ್ಲಿ ಚಿತ್ರೀಕರಣವಾಗಿರುವ ಮೊದಲ ಕನ್ನಡದ ಆಲ್ಬಂ ಸಾಂಗ್ ಕೂಡ* . ಪಾಯಿಂಟ್ ಬ್ಲಾಂಕ್ ಕ್ರಿಯೇಷನ್ಸ್ ಜರ್ಮನಿ ಪ್ರಸ್ತುತ ಪಡಿಸಿರುವ, ರಾಘವ ರೆಡ್ಡಿ ನಿರ್ದೇಶನದ, ವಿಶಾಲ್ ನೈದೃವ್ ಸಂಗೀತ ನಿರ್ದೇಶನದ ಹಾಗೂ ರಕ್ಕಿ ಸುರೇಶ್ ಅಭಿನಯದ "ಹನಿ ಹನಿ" ಮ್ಯೂಸಿಕಲ್ ವಿಡಿಯೋ ಆಲ್ಬಂ ಇತ್ತೀಚೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಅನಾವರಣವಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಗೌರವ ಕಾರ್ಯದರ್ಶಿ ಭಾ.ಮ.ಗಿರೀಶ್ ಹಾಗೂ ಹಿರಿಯ ನಿರ್ಮಾಪಕರಾದ ಎಸ್ ಎ ಚಿನ್ನೇಗೌಡ ....
ಹೊಸ ಚಿತ್ರಕ್ಕೆ ಸಹಿ ಹಾಕಿದ ಗುರುನಂದನ್
‘ಫಸ್ಟ್ರ್ಯಾಂಕ್ ರಾಜು’ ಖ್ಯಾತಿಯ ಗುರುನಂದನ್ ಹೆಸರಿಡದ ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಕಳೆದವಾರ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯಿತು. ಮೊದಲ ದೃಶ್ಯಕ್ಕೆ ಅಶ್ವಿನಿ ಪುನೀತ್ರಾಜ್ಕುಮಾರ್ ಕ್ಲಾಪ್ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ವಿಶೇಷ ಅಧಿಕಾರಿ ವೆಂಕಟೇಶ್ ಮತ್ತು ಗೋಲ್ಡ್ ಫಿಂಚ್ ಹೋಟೆಲ್ ಮಾಲೀಕ ಪ್ರಕಾಶ್ ಶೆಟ್ಟಿ ಉಪಸ್ತಿತರಿದ್ದರು. ಮಂಡಿಮನೆ ಟಾಕೀಸ್ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಸುಮಂತ್ಗೌಡ್ರು ನಿರ್ದೇಶನ ಮಾಡುತ್ತಿದ್ದಾರೆ.
ಮದ್ದಾನೆ ಇದು ಚಿತ್ರದ ಹೆಸರು
‘ಮದ್ದಾನೆ’ ಚಿತ್ರದ ಮುಹೂರ್ತ ಸಮಾರಂಭ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನಡೆಯಿತು. ಪತಿ ನಾಯಕನಾಗಿ ನಟಿಸುತ್ತಿರುವ ಕಾರಣ ಪ್ಯಾಂಥರ್ಸ್ ಕ್ರಿಯೇಟೀವ್ ಸಿನಿಮಾಸ್ ಲಾಂಛನದಲ್ಲಿ ರಂಜನ.ಎಂ.ಕುಮಾವತ್ ನಿರ್ಮಾಣ ಮಾಡುತ್ತಿದ್ದು, ಸತೀಶ್.ಎಸ್.ಚೊಚ್ಚಲ ನಿರ್ದೇಶನದ ಜವಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ರಂಗಭೂಮಿ ಕಲಾವಿದ. ‘ರಾಣಾ’ ‘ವಿಷ್ಣುಪ್ರಿಯ’ ಚಿತ್ರಗಳಲ್ಲಿ ನಟಿಸಿದ ಅನುಭವ ಹೊಂದಿರುವ ನಿಹಾಲ್ ರಾಜ್ ಹೀರೋ ಆಗಿ ಬಡ್ತಿ ಹೊಂದಿದ್ದಾರೆ.
ಅಪ್ಪ ಮಗಳ ಬೆಸುಗೆ ಹಾಗೂ ಮೆಡಿಕಲ್ ಮಾಫಿಯಾ
ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ‘ಸಿ’ ಚಿತ್ರದ ಟ್ರೇಲರ್ ಹಾಗೂ ಹಾಡಿನ ಬಿಡುಗಡೆ ಕಾರ್ಯಕ್ರಮ ನಡೆಯಿತು. ಅನೇಕ ಚಿತ್ರಗಳಲ್ಲಿ ಕೆಲಸ ಮಾಡಿದ ಅನುಭವ ಇರುವ ಕಿರಣ್ ಸುಬ್ರಮಣಿ ಚೊಚ್ಚಲ ನಿರ್ದೇಶನ ಜತೆಗೆ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಮಗ ನಾಯಕ ಆಗಿರುವುದರಿಂದ ಸುಬ್ರಮಣಿ ನಿರ್ಮಾಣ ಮಾಡುತ್ತಿದ್ದಾರೆ. ನಟ ರಾಜವರ್ಧನ್ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಕೆ.ಕೃಷ್ಣೇಗೌಡ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.