ಲಕ್ಷಿಯಾಗಿ ಪದ್ಮಜರಾವ್
‘ಲಕ್ಷೀ’ ಎಂಬ ಕಿರುಚಿತ್ರಕ್ಕೆ ರಚನೆ,ಚಿತ್ರಕಥೆ, ಸಂಭಾಷಣೆ, ಸಂಕಲನ, ನಿರ್ದೇಶನ ಜೊತೆಗೆ ಪುರೋಹಿತ್ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ಮೊನ್ನೆಯಷ್ಟೇ ಚಿತ್ರದ ಪ್ರದರ್ಶನ ನಡೆಯಿತು. ಇದರಲ್ಲಿ ಅಭಿಜಿತ್, ಒಬ್ಬ ಮಗ ತನ್ನ ತಾಯಿಯ ಕನಸನ್ನು ನನಸು ಮಾಡುವ ಹಾಗೂ ಪೂರ್ವಜರ ಸಂಸ್ಕ್ರತಿ, ಆಚಾರ ವಿಚಾರಗಳನ್ನು ತೆರೆದಿಡುವ ಪ್ರಯತ್ನ ಮಾಡಿದ್ದಾರೆ. ಅಂದಹಾಗೆ ಇದು ನಿರ್ದೇಶಕರ ತಾಯಿ ಲಕ್ಷೀಕಂಬದ ನೈಜ ಘಟನೆ ಎಂಬುದು ವಿಶೇಷ. ಅವರ ಪ್ರತಿರೂಪವಾಗಿ ಹಿರಿಯ ನಟಿ ಪದ್ಮಜರಾವ್ ನಟಿಸಿದ್ದಾರೆ.
ಕಡಲ ತಡಿಯಲ್ಲಿ `ಕಲ್ಜಿಗ’ ಟ್ರೈಲರ್ ಅನಾವರಣ! ಸುಮನ್ ಸುವರ್ಣ ನಿರ್ದೇಶನದ `ಕಲ್ಜಿಗ’ ಚಿತ್ರವೀಗ ಬಿಡುಗಡೆಗೆ ತಯಾರಾಗಿ ನಿಂತಿದೆ. ಕಡಲ ಕಿನಾರೆಯಲ್ಲಿ ಘಟಿಸುವ ಬೆರಗಿನ ಕಥೆ ಮತ್ತು ಆ ಭಾಗದ ಕಲಾವಿದರೇ ತುಂಬಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರೆಲ್ಲ ಕಾತರರರಾಗಿದ್ದಾರೆ. ಇದೀಗ ಒಂದು ಅರ್ಥವತ್ತಾದ ಕಾರ್ಯಕ್ರಮದ ಮೂಲಕ ಕಲ್ಜಿಗದ ಟ್ರೈಲರ್ ಅನಾವರಣಗೊಂಡಿದೆ. ಎ೨ ಫಿಲಂಸ್ ಯೂಟ್ಯೂಬ್ ಚಾನೆಲ್ ಮೂಲಕ ಬಿಡುಗಡೆಗೊಂಡಿರೋ ಈ ಟ್ರೈಲರ್ ಕಂಡವರೆಲ್ಲ ಅಕ್ಷರಶಃ ಥ್ರಿಲ್ ಆಗಿದ್ದಾರೆ. ಎಲ್ಲ ದಿಕ್ಕುಗಳಿಂದಲೂ ಭರಪೂರ ಪ್ರತಿಕ್ರಿಯೆ ಹರಿದು ಬರಲಾರಂಭಿಸಿದೆ. ಇದರೊಂದಿಗೆ ಕಲ್ಜಿಗ ಕನ್ನಡದ ಬಹುನಿರೀಕ್ಷಿತ ಚಿತ್ರವಾಗಿ ದಾಖಲಾಗಿದೆ. ಹಿಮಾನಿ ಫಿಲಂಸ್ ಬ್ಯಾನರಿನಲ್ಲಿ ....
ಕಂಠೀರವ ಸ್ಟುಡಿಯೋದಲ್ಲಿ ಸಂಜು ವೆಡ್ಸ್ ಗೀತಾ ಚಿತ್ರಕ್ಕೆ ಕುಂಬಳಕಾಯಿ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್ ಬಿಡಿಸುತ್ತಿರುವ ದೃಶ್ಯದೊಂದಿಗೆ ಮಾಧ್ಯಮಗಳ ಸಮ್ಮುಖದಲ್ಲಿ ಕುಂಬಳಕಾಯಿ ಒಡೆಯುವ ಶಾಸ್ತ್ರ ಮಾಡಲಾಯಿತು. ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರದಲ್ಲಿ ಸಂಜು ಹಾಗೂ ಗೀತಾರ ನವೀನ ಪ್ರೇಮಕಥೆಯನ್ನು ರೇಶ್ಮೆ ಬೆಳೆಯುವ ರೈತರ ಹೋರಾಟದ ಹಿನ್ನೆಲೆ ಇಟ್ಟುಕೊಂಡು ಹೇಳಹೊರಟಿದ್ದಾರೆ. ಈ ಚಿತ್ರದಲ್ಲಿ ....
ಆಗಸ್ಟ್ 30ಕ್ಕೆ ಬರುತ್ತಿರುವ "ಟೇಕ್ವಾಂಡೋ ಗರ್ಲ್ " ಚಿತ್ರದ ಟೀಸರ್ ಬಿಡುಗಡೆ ಮಾಡಿದ ಇಂದ್ರಜಿತ್ ಲಂಕೇಶ್ . ಇವತ್ತಿನ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರದ ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ. ಇದರಿಂದ ಹೆಣ್ಣು ಮಕ್ಕಳು ತಮ್ಮನ ತಾವು ರಕ್ಷಿಸಿಕೊಳ್ಳುವುದಕ್ಕೆ ಒಂದು ದಾರಿ ಆಗುತ್ತದೆ. ಅಂತದ್ದೇ ಒಂದು ಸಮರಭ್ಯಾಸ ಕಲೆಯ ಚಿತ್ರವಾದ "ಟೇಕ್ವಾಂಡೋ ಗರ್ಲ್" ಎಂಬ ಚಿತ್ರ ಇದೆ ಆಗಸ್ಟ್ 30ರಂದು ರಾಜ್ಯಾದ್ಯಂತ ....
"ಓ ಏ ಲಡ್ಕಿ" ಸ್ಟೈಲಿಷ್ ಆಲ್ಬಮ್ ಸಾಂಗ್ ನಟಿ ರಾಗಿಣಿ ದ್ವಿವೇದಿ ಬಿಡುಗಡೆ ಇತ್ತೀಚಿನ ದಿನಗಳಲ್ಲಿ ಆಲ್ಬಂ ಸಾಂಗ್ ಹೆಚ್ಚು ಜನಪ್ರಿಯವಾಗುತ್ತಿದೆ. ಅಧೀರ ಸಂತು ಅವರು ಬಾಲಿವುಡ್ ಸ್ಟೈಲ್ ನಲ್ಲಿ ಕನ್ನಡ ಆಲ್ಬಂ ಸಾಂಗ್ ಮಾಡಿದ್ದಾರೆ. ಅದರ ಹೆಸರು ಕೂಡ ವಿಭಿನ್ನವಾಗಿದೆ. ತುಂಬಾ ಸ್ಟೈಲಿಶ್ ಆಗಿ ಮೂಡಿಬಂದಿರುವ ’ಈ ಏ ಲಡ್ಕಿ’ ಎಂಬ ಕ್ಯಾಚಿ ಟೈಟಲ್ ಹೊಂದಿರೋ ಈ ಹಾಡನ್ನು ನಟಿ ರಾಗಿಣಿ ದ್ವಿವೇದಿ ಅವರು ಬಿಡುಗಡೆ ಮಾಡಿದರು. ವಿಶೇಷವಾಗಿ ಈ ಹಾಡಲ್ಲಿ ಉಗ್ರಂ ರವಿ ಖಳನಾಯಕನಾಗಿ ನಟಿಸಿದ್ದಾರೆ. ಎನ್ನಾರೈ ಯುವತಿಯಾಗಿ ಅಮೃತ, ಡಿಲವರಿ ಬಾಯ್ ಆಗಿ ಸಮೀರ್ ನಗರದ್ ಅಭಿನಯಿಸಿದ್ದಾರೆ. ಈ ಹಾಡಿನ ಜೊತೆಗೆ ಇದರ ಲಿರಿಕಲ್ ವಿಡಿಯೋ ಹಾಗೂ ರೀಮಿಕ್ಸ್ ವರ್ಷನ್ ....
*ಸಾಮಾಜಿಕ ಕಳಕಳಿಯ "ವಿಕಾಸ ಪರ್ವ" ಕ್ಕೆ ಸಾಥ್ ನೀಡಿದ ಪ್ರಣಯರಾಜ* . ಸಾಮಾಜಿಕ ಕಳಕಳಿಯ ಜೊತೆಗೆ ಸಮಾಜಕ್ಕೆ ಒಂದು ಉತ್ತಮ ಸಂದೇಶವನ್ನು ಹೊತ್ತು ತರುತ್ತಿದೆ "ವಿಕಾಸ ಪರ್ವ". ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನೆರವೇರಿತು. ಕನ್ನಡದ ಹಿರಿಯ ನಟ ಪ್ರಣಯರಾಜ ಶ್ರೀನಾಥ್ "ವಿಕಾಸ ಪರ್ವ" ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಈ ಸಂದರ್ಭದಲ್ಲಿ ಚಿತ್ರದ ಹಾಡುಗಳನ್ನು ಪ್ರದರ್ಶಿಸಲಾಯಿತು. ಹಾಡು ಬರೆದಿರುವ ಡಾ||ವಿ.ನಾಗೇಂದ್ರಪ್ರಸಾದ್ ಹಾಗೂ ಆಡಿಯೋ ಹಕ್ಕು ಪಡೆದಿರುವ ಲಹರಿ ಸಂಸ್ಥೆಯ ವೇಲು ಅವರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು "ವಿಕಾಸ ಪರ್ವ" ದ ಕುರಿತು ಮಾತನಾಡಿದರು. "ವಿಕಾಸ ....
*ಮಡನೂರ್ ಮನು ಅಭಿನಯದ "ಕೇದಾರ್ ನಾಥ್ ಕುರಿಫಾರಂ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ* . ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎಂ ನಟರಾಜ್ ಅವರು ನಿರ್ಮಿಸಿರುವ, ಶೀನು ಸಾಗರ್ ನಿರ್ದೇಶನದಲ್ಲಿ "ಕಾಮಿಡಿ ಕಿಲಾಡಿಗಳು" ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸಿರುವ "ಕೇದಾರ್ ನಾಥ್ ಕುರಿಫಾರಂ" ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕಣ್ಣೂರ್ ಜಗದೀಶ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಬಿಡುಗಡೆ ಸಮಾರಂಭದ ನಂತರ ಚಿತ್ರತಂಡದ ಮಾತನಾಡಿದರು. ನಾನು "ದುನಿಯಾ" ಸೂರಿ ಅವರ ನಿರ್ದೇಶನದ ಚಿತ್ರಗಳಲ್ಲಿ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಗುರುತಿಸುಕೊಂಡಿದ್ದೆ. ಛಾಯಾಗ್ರಾಹಕ ಸತ್ಯ ಹೆಗಡೆ ಅವರ ಬಳಿ ....
*ಹಾಡಿನಲ್ಲೇ ಮೋಡಿ ಮಾಡಿದ "ಲಾಫಿಂಗ್ ಬುದ್ಧ"* ರಿಷಬ್ ಶೆಟ್ಟಿ ನಿರ್ಮಾಣ ಮಾಡಿರುವ, ಭರತ್ ರಾಜ್ ನಿರ್ದೇಶನ ಹಾಗೂ ಪ್ರಮೋದ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಲಾಫಿಂಗ್ ಬುದ್ಧ" ಚಿತ್ರಕ್ಕಾಗಿ ಕೆ.ಕಲ್ಯಾಣ್ ಬರೆದಿರುವ "ಎಂಥಾ ಚಂದಾನೇ" ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ವಿಷ್ಣು ವಿಜಯ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಹಾಡು ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನನ್ನ ಅಭಿನಯದ "ಹೀರೋ" ಚಿತ್ರವನ್ನು ನಿರ್ದೇಶಿಸಿದ್ದ ಭರತ್ ರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಅವರು ಈ ಚಿತ್ರದ ಕಥೆ ಹೇಳಿದಾಗ ಮನಸ್ಸಿಗೆ ಹತ್ತಿರವಾಯಿತು. ಪ್ರಮೋದ್ ಶೆಟ್ಟಿ ಅವರನ್ನೇ ಈ ಚಿತ್ರದ ನಾಯಕನನ್ನಾಗಿ ನಾನು ಹಾಗೂ ....
ಭಾರತೀಯ ಚಿತ್ರರಂಗಕ್ಕೆ ಕಾಂತಾರ ಸ್ಪೂರ್ತಿ
ಪ್ಯಾನ್ ಇಂಡಿಯಾ ‘ತಂಗಲಾನ್’ ಚಿತ್ರವು ಆಗಸ್ಟ್ ೧೫ರಂದು ತೆರೆ ಕಾಣುತ್ತಿದೆ. ಅದರನ್ವಯ ಪ್ರಚಾರದ ಸಲುವಾಗಿ ನಾಯಕ ವಿಕ್ರಮ್ ಬೆಂಗಳೂರಿಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ಕಂಟೆಂಟ್ ಇದ್ದರೆ ಜಗತ್ತಿನ ಯಾವ ಮೂಲೆಗಾದರೂ ಸಿನಿಮಾವನ್ನು ತೆಗೆದುಕೊಂಡು ಹೋಗಬಹುದು ಅಂತ ತೋರಿಸಿಕೊಟ್ಟಿದ್ದು ಕಾಂತಾರ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಥೆ ಜಾಗತಿಕ ಮಟ್ಟದಲ್ಲಿ ಯಶಸ್ವಿಯಾಗಿದ್ದು ನಮಗೆ ಸ್ಪೂರ್ತಿಯಾಯಿತು. ಶೂಟಿಂಗ್ ಸಮಯದಲ್ಲಿ ಕಾಂತಾರ ಬಿಡುಗಡೆಯಾಗಿತ್ತು.
ಭೀಮನಿಗೆ ಶಿವಣ್ಣ ಶುಭಹಾರೈಕೆ ದುನಿಯಾವಿಜಯ್ ನಿರ್ದೇಶನ ಮತ್ತು ನಾಯಕನಾಗಿ ನಟಿಸಿರುವ ‘ಭೀಮ’ ಚಿತ್ರವು ಆಗಸ್ಟ್ ೯ಕ್ಕೆ ತೆರೆಕಾಣಲು ಸಿದ್ದತೆಗಳು ನಡೆಯುತ್ತಿದೆ. ಕೃಷ್ಣಸಾರ್ಥಕ್ ಮತ್ತು ಜಗದೀಶ್ಗೌಡ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಶನಿವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಶಿವರಾಜ್ಕುಮಾರ್ ಟ್ರೇಲರ್ ಬಿಡುಗಡೆ ಮಾಡಿದರು. ನಂತರ ಮಾತನಾಡುತ್ತಾ ನನ್ನ ಮತ್ತು ವಿಜಯ್ ಪರಿಚಯ ಸುಮಾರು ೨೦ ವರ್ಷಗಳದ್ದು. ಅವರು ಹೀರೋ ಆಗುವುದಕ್ಕೆ ಮೊದಲೇ ನಾನು ನಟಿಸಿದ ‘ರಾಕ್ಷಸ’, ‘ಜೋಗಿ’ ಸಿನಿಮಾಗಳಲ್ಲಿ ನನ್ನೊಂದಿಗೆ ತೆರೆ ಹಂಚಿಕೊಂಡಿದ್ದರು. ಅಪ್ಪಾಜಿ ತೀರಿಕೊಂಡಿದ್ದರಿಂದ ‘ದುನಿಯಾ’ ಮುಹೂರ್ತಕ್ಕೆ ಬರಲಾಗಲಿಲ್ಲ. ಚಿತ್ರ ....
*ಕಿಚ್ಚ ಸುದೀಪ್ ಅವರಿಂದ ಅನಾವರಣವಾಯಿತು ಬಹು ನಿರೀಕ್ಷಿತ "ಗೌರಿ" ಚಿತ್ರದ ಟ್ರೇಲರ್* . *ಸಮರ್ಜಿತ್ ಲಂಕೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ತೆರೆಗೆ* . ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸಿರುವ ‘ಗೌರಿ’ ಚಿತ್ರ ಇದೇ ಆಗಸ್ಟ್ 15ರಂದು ಬಿಡುಗಡೆಯಾಗುತ್ತಿದೆ. ಬಿಡುಗಡೆಯ ಪೂರ್ವಭಾವಿಯಾಗಿ "ಗೌರಿ" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ಕಿಚ್ಚ ಸುದೀಪ್ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ. ನಟಿ ಪ್ರಿಯಾಂಕ ಉಪೇಂದ್ರ, ನಿರ್ಮಾಪಕರಾದ ರಮೇಶ್ ರೆಡ್ಡಿ, ಸಂಜಯ್ ಗೌಡ, ಹಿರಿಯ ವಕೀಲರಾದ ಶ್ಯಾಮ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಸಮಾರಂಭದಲ್ಲಿ ....
ಮುರುಗ ಸನ್ ಆಫ್ ಕಾನೂನುಗೆ ಪ್ರೇಮ ಸಾಥ್
‘ಅಗ್ನಿಸಾಕ್ಷಿ’ ಧಾರವಾಹಿಯಲ್ಲಿ ಹೆಸರು ಗಳಿಸಿದ್ದ ಮುನಿಕೃಷ್ಣ ನಾಯಕನಾಗಿ ನಟಿಸಿದ್ದ ‘ಕೊಡೆಮುರುಗ’ ಹಿಟ್ ಆಗಿತ್ತು. ಇದರಿಂದ ಪ್ರೇರಿತಗೊಂಡ ಮುನಿಕೃಷ್ಣ ಅವರು ಎ.ಎಸ್.ಎ.ಪ್ರೊಡಕ್ಷನ್ ಬ್ಯಾನರ್ ಸಂಸ್ಥೆ ಶುರು ಮಾಡಿ ‘ಮುರುಗ ಸನ್ ಆಫ್ ಕಾನೂನು’ ಚಿತ್ರಕ್ಕೆ ನಾಯಕನ ಜತೆಗೆ ಬಂಡವಾಳ ಹೂಡಿದ್ದಾರೆ. ಪ್ರಚಾರದ ಸಲುವಾಗಿ ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ನಟಿ ಪ್ರೇಮಾ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ವಿಜಯ್ ಪ್ರವೀಣ್ ಆಕ್ಷನ್ ಕಟ್ ಹೇಳಿದ್ದಾರೆ. ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ಟೈಟಲ್ ಲಾಂಚ್ ಮಾಡುವ ಮೂಲಕ ಚಾಲನೆ ನೀಡಿದ್ದರಂತೆ.
*ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ "ಕೃಷ್ಣಂ ಪ್ರಣಯ ಸಖಿ"* . *ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ* . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ "ಕೃಷ್ಣಂ ಪ್ರಣಯ ಸಖಿ" ಪ್ರೇಕ್ಷಕರ ಮನ ....
ಜಂಬೂ ಸರ್ಕಸ್ ಟೀಸರ್ ಬಿಡುಗಡೆ ಸ್ನೇಹ ಪ್ರೀತಿಯ ಸುತ್ತ ಕಾಮಿಡಿ ಕಥಾನಕ.. ಸ್ನೇಹದ ಮಹತ್ವ ಹಾಗೂ ಪ್ರೀತಿಯ ಸುತ್ತ ನಡೆಯುವ ಕಥಾಹಂದರ ಇಟ್ಟುಕೊಂಡು ನಿರ್ದೇಶಕ ಎಂಡಿ.ಶ್ರೀಧರ್ ಅವರು ’ಜಂಬೂಸರ್ಕಸ್’ ಎಂಬ ಕಾಮಿಡಿ ಡ್ರಾಮಾ ಚಿತ್ರವನ್ನು ನಿರ್ದೇಶಿಸಿದ್ದಾರೆ. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ಬುಲ್ ಬುಲ್, ಕೃಷ್ಣ, ಚೆಲ್ಲಾಟ, ಪೊರ್ಕಿ, ಒಡೆಯ ಸೇರಿದಂತೆ ಸ್ಟಾರ್ ಚಿತ್ರಗಳನ್ನೇ ಹೆಚ್ಚಾಗಿ ನಿರ್ದೇಶಿಸಿದ ಶ್ರೀಧರ್ ಅವರು ಒಡೆಯ ನಂತರ ಗ್ಯಾಪ್ ತಗೊಂಡು ಆ್ಯಕ್ಷನ್-ಕಟ್ ಹೇಳಿರುವ ಚಿತ್ರವಿದು. ಮೂರು ದಶಕಗಳಿಂದ ಚಿತ್ರೋದ್ಯಮದಲ್ಲಿ ಸೇವೆ ಸಲ್ಲಿಸುತ್ತಿರುವ ಹೆಚ್.ಸಿ.ಸುರೇಶ್ ಅವರು ....
*ಟೀಸರ್ ನಲ್ಲೇ ಮೋಡಿಮಾಡಿದ "ಕಪಟಿ"* *ಟೀಸರ್ ಬಿಡುಗಡೆ ಮಾಡಿ ಶುಭಕೋರಿದ ಡಾರ್ಲಿಂಗ್ ಕೃಷ್ಣ** . ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ S.P ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಪಟಿ" ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ....
ಮುಂಬೈದಲ್ಲಿ ಮಾರ್ಟಿನ್ ೧೩ ಭಾಷೆಗಳ ಟ್ರೈಲರ್ ಬಹುದಿನಗಳಿಂದ ‘ಮಾರ್ಟಿನ್’ ಚಿತ್ರವು ಎಂದು ಬಿಡುಗಡೆಯಾಗುತ್ತದೆ ಎಂದು ಸಿನಿಪ್ರೇಮಿಗಳು ಬಕಪಕ್ಷಿಯಂತೆ ಕಾಯುತ್ತಿದ್ದು, ಅದಕ್ಕೆ ಉತ್ತರ ಸಿಕ್ಕಿದೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ತಂಡವು ಎಲ್ಲಾ ಮಾಹಿತಿಗಳನ್ನು ಹಂಚಿಕೊಂಡಿತು. ನಾಯಕ ಧ್ರುವಸರ್ಜಾ ಹೇಳುವಂತೆ ‘ಮಾರ್ಟಿನ್’ ಪ್ರತಿಯೊಂದು ದೇಶಕ್ಕೂ ತಲುಪಿಸಬೇಕೆಂದು ಆಗಸ್ಟ್ ೫ರಂದು ಬಾಂಬೆದಲ್ಲಿ ಅಂತರರಾಷ್ಟ್ರೀಯ ಸುದ್ದಿಗೋಷ್ಟಿಯನ್ನು ಹಮ್ಮಿಕೊಳ್ಳಲಾಗಿದೆ. ಪ್ರಪಂಚದ ೨೧ ದೇಶಗಳ ಮಾಧ್ಯಮ ಮಿತ್ರರು ಆಗಮಿಸಲಿರುವರು. ಭಾರತದ ಮೊದಲ ಇಂಟರ್ ನ್ಯಾಷನಲ್ ಪ್ರೆಸ್ಮೀಟ್ ಎಂಬುದು ಹೆಮ್ಮೆಯ ....
*ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು "ಕೋಟಿ ಕೋಟಿ ರೊಕ್ಕ ಗಳಿಸಿ" ಹಾಡು* . *ಹೂಡಿ ಚಿನ್ನಿ ಅವರ ಕಂಠಸಿರಿಯಲ್ಲಿ ಮೂಡಿಬಂದಿದೆ ಮಂಜುಕವಿ ಬರೆದಿರವ ಈ ಗೀತೆ* . ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನಪ್ರಿಯರಾಗಿರುವ ಹಾಗೂ ಭಾರತೀಯರ ಸೇವಾ ಸಮಿತಿ ಸ್ಥಾಪಕರೂ ಆಗಿರುವ ಹೆಚ್ ಎಂ ರಾಮಚಂದ್ರ (ಹೂಡಿ ಚಿನ್ನಿ) ಅವರು ಈಗ ಗಾಯಕರಾಗಿದ್ದಾರೆ. ಮಂಜುಕವಿ ಅವರು ಬರೆದು ಸಂಗೀತ ನೀಡಿರುವ ಸಾಮಾಜಿಕ ಸಂದೇಶ ಸಾರುವ "ಕೋಟಿ ಕೋಟಿ ರೊಕ್ಕ ಗಳಿಸಿ" ಹಾಡಿಗೆ ಧ್ವನಿಯಾಗಿದ್ದಾರೆ. ಇತ್ತೀಚೆಗೆ ಈ ಹಾಡು ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಶ್ರೀಮಹದೇವ ಸ್ವಾಮಿಜಿ, ....
*"ಜೀನಿಯಸ್ ಮುತ್ತ" ನಿಗೆ ಸಾಥ್ ನೀಡಿದ "ಚಿನ್ನಾರಿ ಮುತ್ತ"* . *ನಾಗಿಣಿ ಭರಣ ನಿರ್ದೇಶನದ ಈ ಚಿತ್ರ ಆಗಸ್ಟ್ ನಲ್ಲಿ ತೆರೆಗೆ* . ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ "ಜೀನಿಯಸ್ ಮುತ್ತ" ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ "ಜೀನಿಯಸ್ ಮುತ್ತ" ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ "ಚಿನ್ನಾರಿಮುತ್ತ"ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ....
ಆಗಸ್ಟ್ ೯ರಂದು ಭೀಮನ ಆಟ ಶುರು ದುನಿಯಾವಿಜಯ್ ನಿರ್ದೇಶನ ಮತ್ತು ನಾಯಕನಾಗಿ ನಟಿಸಿರುವ ‘ಭೀಮ’ ಚಿತ್ರವು ಆಗಸ್ಟ್ ೯ಕ್ಕೆ ತೆರೆಕಾಣಲು ಸಿದ್ದತೆಗಳು ನಡೆಯುತ್ತಿದೆ. ಸದು ಸ್ಟಾರ್ ಸಿನಿಮಾಗಳು ಇಲ್ಲದೆ ಸೊರಗಿ ಹೋಗಿರುವ ಚಿತ್ರರಂಗಕ್ಕೆ ಭೀಮ ಟಾನಿಕ್ನಂತೆ ಬರುತ್ತಿದೆ. ಅಲ್ಲದೆ ನಿರ್ಮಾಪಕರು ಮುಚ್ಚಿ ಹೋಗಿರುವ ೧೮ ಟಾಕೀಸ್ಗಳಲ್ಲಿ ಬಿಡುಗಡೆ ಮಾಡುತ್ತಿದ್ದಾರಂತೆ. ಒಟ್ಟಾರೆ ರಾಜ್ಯಾದ್ಯಂತ ೪೦೦ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಜನರಿಗೆ ತೋರಿಸಲು ಸಜ್ಜಾಗುತ್ತಿದೆ. ಕೃಷ್ಣಸಾರ್ಥಕ್ ಮತ್ತು ಜಗದೀಶ್ಗೌಡ ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ವರ್ಷದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಇದು ....
ವ್ಯವಸಾಯದ ಸಮಸ್ಯೆ ಸಾರುವ ಕಬಂಧ ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ‘ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ....