Samaya.Film News

Saturday, June 01, 2024

ಅಪ್ಪ ಮಗನ ಬಾಂಧವ್ಯ ಸಾರುವ ಸಮಯ       ಸದಭಿರುಚಿಯ ಸಿನಿಮಾಗಳನ್ನು ನೀಡುತ್ತಾ ಬಂದಿರುವ ನಿರ್ದೇಶಕ, ನಿರ್ಮಾಪಕ ಹಾಗೂ ನಾಯಕನೆಂದು ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಎಸ್.ಆರ್.ಪ್ರಮೋದ್ ಐದನೇ ಪ್ರಯತ್ನದ ಫಲ ‘ಸಮಯ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಶ್ರೀ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್.ಕೆ.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.      ನಂತರ ಮಾತನಾಡುತ್ತಾ ಯಾವುದೇ ಸಿನಿಮಾವನ್ನು ಸಣ್ಣದು, ದೊಡ್ಡ ಬಜೆಟ್ ಅಂತ ವಿಂಗಡಣೆ ಮಾಡಬಾರದು. ೯೦ರ ದಶಕದಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದ ಕೆ.ವಿ.ಜಯರಾಂ ....

336

Read More...

Maarige Daari.News

Friday, May 24, 2024

  ಬಿಡುಗಡೆಯಾಯ್ತು ಮಾರಿಗೆ ದಾರಿ ಫಸ್ಟ್ ಲುಕ್ ಟೀಸರ್! ಸ್ಯಾಂಡಲ್ ವುಡ್ ಗೆ ಮತ್ತೊಂದು ಹೊಸಾ ತಂಡದ ಆಗಮನವಾಗಿದೆ. `ಮಾರಿಗೆ ದಾರಿ’ ಶೀರ್ಷಿಕೆಯ ಈ ಸಿನಿಮಾವೀಗ ಸದ್ದಿಲ್ಲದೆ ಚಿತ್ರೀಕರಣ ಮುಗಿಸಿಕೊಂಡು, ಫಸ್ಟ್ ಲುಕ್ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಹೊಸತೇನನ್ನೋ ಹೇಳ ಹೊರಟಿರುವಂತೆ ಭಾಸವಾಗುವ ಈ ಟೀಸರ‍್ನಲ್ಲಿ ಕಥೆಯ ಸುಳಿವನ್ನು ಬಿಟ್ಟು ಕೊಡದೆ, ಹೀರೋ ಕ್ಯಾರೆಕ್ಟರಿನ ಒಂದಷ್ಟು ಚಹರೆಗಳನ್ನು ಪ್ರೇಕ್ಷಕರ ಮುಂದಿಡಲಾಗಿದೆ. ಸದರಿ ಫಸ್ಟ್ ಲುಕ್ ಟೀಸರ್ ಮೂಲಕ ಮಾರಿಗೆ ದಾರಿ ಪಕ್ಕಾ ಮಾಸ್ ಕಂಟೆಂಟ್ ಹೊಂದಿರುವ ಚಿತ್ರವೆಂಬುದನ್ನು ಸಾರಿ ಹೇಳುವಂತಿದೆ. ಕಥೆ, ಚಿತ್ರಕಥೆ, ಸಂಭಾಷಣೆಯೊಂದಿಗೆ ಈ ಚಿತ್ರವನ್ನು ಅಗಸ್ತ್ಯ ನಿರ್ದೇಶನ ಮಾಡಿದ್ದಾರೆ. ವಿಶೇಷವೆಂದರೆ, ಅವರೇ ....

286

Read More...

Back Benchers.News

Wednesday, May 29, 2024

  *ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ "ಬ್ಯಾಕ್ ಬೆಂಚರ್ಸ್"!*   ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ " ಬ್ಯಾಕ್ ಬೆಂಚರ್ಸ್ ". ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ "ಬ್ಯಾಕ್ ಬೆಂಚರ್ಸ್" ಚಿತ್ರದ "ಯಲ್ಲೋ ಯಲ್ಲೋ"  ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ "ಬ್ಯಾಕ್ ಬೆಂಚರ್ಸ್" ....

267

Read More...

Dasappa.Film News

Wednesday, May 29, 2024

  *"ತಿಥಿ" ಚಿತ್ರದ ಖ್ಯಾತಿಯ ತಮ್ಮಣ್ಣ ಅಭಿನಯದ "ದಾಸಪ್ಪ" ಚಿತ್ರದ ಟ್ರೇಲರ್ ಬಿಡುಗಡೆ* .    *ಕನ್ನಡದಲ್ಲಿ ಮತ್ತೊಂದು ಗ್ರಾಮೀಣ ಸೊಗಡಿನ ಚಿತ್ರ* .   ರಾಷ್ಟ್ರಪ್ರಶಸ್ತಿ ವಿಜೇತ "ತಿಥಿ" ಚಿತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ನಟ ತಮ್ಮಣ್ಣ ಪ್ರಮುಖಪಾತ್ರದಲ್ಲಿ ನಟಿಸಿರುವ "ದಾಸಪ್ಪ" ಚಿತ್ರದ ಟ್ರೇಲರ್ ಸಿರಿ ಮ್ಯೂಸಿಕ್ ಮೂಲಕ ಇತ್ತೀಚಿಗೆ ಬಿಡುಗಡೆಯಾಯಿತು. ಖ್ಯಾತ ನಿರ್ದೇಶಕ ಹಾಗೂ ಗೀತರಚನೆಕಾರ ಚೇತನ್ ಕುಮಾರ್(ಬಹದ್ದೂರ್) ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.   ನಾನು ಮಂಡ್ಯ ಜಿಲ್ಲೆಯ ಕೀಲಾರದವನು ಎಂದು ಮಾತನಾಡಿದ ನಿರ್ದೇಶಕ ವಿಜಯ್ ಕೀಲಾರ, "ದಾಸಪ್ಪ" ಪಕ್ಕಾ ಗ್ರಾಮೀಣ ....

282

Read More...

KD The Devil.Film News

Sunday, May 26, 2024

ಕೆಡಿ ಹೆಚ್ಚಿನ ಮೊತ್ತಕ್ಕೆ ಆಡಿಯೋ ಸೇಲ್       ‘ಕೆಡಿ’ ಚಿತ್ರದ ಆಡಿಯೋ ಹಕ್ಕುಗಳನ್ನು ಆನಂದ್ ಆಡಿಯೋದವರು ೧೭.೭೦ ಕೋಟಿಗೆ ಖರೀದಿ ಮಾಡಿರುವುದು ಸುದ್ದಿಯಾಗಿದೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ತಂಡವು ಮಾಹಿತಿಯನ್ನು ಹಂಚಿಕೊಂಡಿತು. ರಚನೆ,ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ  ಪ್ರೇಮ್ ಮಾತನಾಡಿ ನಾವು ಗುಣಮಟ್ಟದಲ್ಲಿ ಎಂದೂ ರಾಜಿಯಾಗಿಲ್ಲ. ಮೊದಲಬಾರಿ ೨೫೬ ಪೀಸ್ ಆರ್ಕೆಸ್ಟ್ರಾ ಬಳಸಲಾಗಿದೆ. ಈ ಹಿಂದೆ ಶಾರುಕ್‌ಖಾನ್‌ರವರ ‘ಜವಾನ್’ ಚಿತ್ರಕ್ಕೆ ೧೮೦ ಪೀಸ್ ಆರ್ಕೆಸ್ಟ್ರಾ ಬಳಸಲಾಗಿತ್ತು. ಅದರಿಂದ ಭಾರತೀಯ ಚಿತ್ರರಂಗದಲ್ಲಿ ಮೊದಲು ನಮ್ಮದು ದಾಖಲೆ ಆಗಿದೆ. ಇಲ್ಲಿಯವರೆಗೂ ೧೫೦ ದಿನಗಳ ....

257

Read More...

Janaka.Audio.News

Saturday, May 25, 2024

ಜನಕ ಟ್ರೇಲರ್ ಹಾಡು ಬಿಡುಗಡೆ      ಯುವ ಪ್ರತಿಭೆ ಮನು ‘ಜನಕ’ ಸಿನಿಮಾಕ್ಕೆ ಚಿತ್ರಕಥೆ, ನಿರ್ದೇಶನ ಜತೆಗೆ ನಾಯಕನಾಗಿ ಅಭಿನಯಿಸಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ಟ್ರೇಲರ್ ಹಾಗೂ ಹಾಡು ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ನಡೆಯಿತು. ಹಿರಿಯ ನಿರ್ದೇಶಕ ಸಾಯಿಪ್ರಕಾಶ್, ಡಿಂಗ್ರಿನಾಗರಾಜ್ ತಂಡಕ್ಕೆ ಶುಭಹಾರೈಸಿದರು. ಮಗನ ಕನಸಿಗೆ ತಾಯಿ ಎ.ಪ್ರೇಮಾ ನಿರ್ಮಾಣ ಮಾಡಿದ್ದಾರೆ.      ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು ಅಮ್ಮನ ಆಸೆಯಂತೆ ಎರಡು ಜವಬ್ದಾರಿಯನ್ನು ನಿಭಾಯಿಸಿದ್ದೇನೆ. ತಂದೆಗೆ ತನ್ನ ಮಗನನ್ನು ಡಾಕ್ಟರ್ ಮಾಡಬೇಕೆಂಬ ಬಯಕೆ ಇರುತ್ತದೆ. ಅದಕ್ಕಾಗಿ ಆತನನ್ನು ಮೆಡಿಕಲ್ ಓದಿಸುತ್ತಾನೆ. ಆದರೆ ತಾನೊಂದು ....

253

Read More...

The Judgement.News

Saturday, May 25, 2024

ಜಡ್ಜ್‌ಮೆಂಟ್‌ಗೆ ಉಘೇ ಉಘೇ ಅಂದರು ಪ್ರೇಕ್ಷಕರು       ಶುಕ್ರವಾರ ತೆರೆಕಂಡ ‘ಜಡ್ಜ್‌ಮೆಂಟ್’ ಚಿತ್ರವನ್ನು ಪ್ರೇಕ್ಷಕರು ಅಪ್ಪಿಕೊಂಡಿದ್ದಾರೆ. ಹಾಗಾಗಿ ಬಿಡುಗಡೆಯಾದ ಮಾರನೆ ದಿನವೇ ತಂಡವು ಮಾಧ್ಯಮದ ಮುಂದೆ ಸಂತಸವನ್ನು ಹಂಚಿಕೊಂಡಿತು. ನಿರ್ದೇಶಕ ಗುರುರಾಜ ಕುಲಕರ್ಣಿ ಹೇಳುವಂತೆ ಬಹಳಷ್ಟು ನಿರೀಕ್ಷೆಯೊಂದಿಗೆ ರಿಲೀಸ್ ಮಾಡಿದೆವು. ಜನರಿಂದ ಅದ್ಬುತ ಪ್ರತಿಕ್ರಿಯೆ ಸಿಕ್ಕಿದೆ. ಚಿತ್ರಮಂದಿರಗಳಿಗೆ ಭೇಟಿ ನೀಡಿದಾಗ ನನಗೆ ಕಂಡುಬಂದದ್ದು ಹೆಚ್ಚಾಗಿ ಫ್ಯಾಮಿಲಿ ಸಮೇತ ಜನ ಚಿತ್ರ ನೋಡಲು ಬರ‍್ತಾ ಇದ್ದುದು. ಪತ್ರಿಕೆಗಳು ಒಳ್ಳೆ ವಿಮರ್ಶೆ ನೀಡಿದ್ದಾರೆ. ಇದರಿಂದ ನಮಗೆ ....

248

Read More...

Martin.Film News

Friday, May 24, 2024

ಅಕ್ಟೋಬರ್ ೧೧ಕ್ಕೆ ಮಾರ್ಟಿನ್        ಬಹುದಿನಗಳಿಂದ ‘ಮಾರ್ಟಿನ್’ ಚಿತ್ರವು ಎಂದು ಬಿಡುಗಡೆಯಾಗುತ್ತದೆ ಎಂದು ಸಿನಿಪ್ರೇಮಿಗಳು ಬಕಪಕ್ಷಿಯಂತೆ ಕಾಯುತ್ತಿದ್ದು, ಅದಕ್ಕೆ ಉತ್ತರ ಸಿಕ್ಕಿದೆ. ಮೊನ್ನೆ ನಡೆದ ಸುದ್ದಿಗೋಷ್ಟಿಯಲ್ಲಿ ತಂಡವು ಎಲ್ಲಾ ಮಾಹಿತಿಗಳನ್ನು ಹಂಚಿಕೊಂಡಿತು. ನಾಯಕ ಧ್ರುವಸರ್ಜಾ ಹೇಳುವಂತೆ, ಎರಡೂವರೆ ವರ್ಷಗಳ ಪ್ರಯಾಣದಲ್ಲಿ ೨೪೦ ದಿನ ಚಿತ್ರೀಕರಣ ನಡೆಸಲಾಗಿದೆ. ಇದು ಅಪ್ಪಟ ತಂತ್ರಜ್ಘರ ಸಿನಿಮಾ. ಎಲ್ಲರೂ ಶೇಕಡ ೧೦೦ರಷ್ಟು ಶ್ರಮ ಹಾಕಿದ್ದಾರೆ. ಅದಕ್ಕಾಗಿ ಸಿನಿಮಾ ಚೆನ್ನಾಗಿ ಬಂದಿದೆ. ನಿರ್ದೇಶಕರು ಏನು ಹೇಳುವರೋ ಅದನ್ನು ಅಚ್ಚು ಕಟ್ಟಾಗಿ ಮಾಡಬೇಕು ಅನ್ನುವುದಿತ್ತು. ನಮ್ಮ ಹಿರಿಯರು ಮಾಡಿದಂತ ಕಥೆಗೆ  ....

287

Read More...

Sambavami Yuge Yuge.News

Friday, May 24, 2024

ಶೀರ್ಷಿಕೆ ಹಳೇದು ಕಥೆ ಹೊಸತು

       ೮೦ರ ದಶಕದಲ್ಲಿ ಸಿದ್ದಲಿಂಗಯ್ಯ ನಿರ್ದೇಶನದ ‘ಸಂಭವಾಮಿ ಯುಗೇ ಯುಗೇ’ ಚಿತ್ರವು ತೆರೆ ಕಂಡಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸಿದ್ದಗೊಂಡಿದೆ. ಮೊನ್ನೆಯಷ್ಟೇ ಡೋಲು ತಮಟೆ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಜಾನಪದ ಶೈಲಿಯಲ್ಲಿ ಮೂಡಿಬಂದಿರುವ ಸಾಂಗ್‌ನ್ನು ಶೃತಿಹರಿಹರನ್ ಅನಾವರಣಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಅರಸುಅಂತಾರೆ ಸಾಹಿತ್ಯ, ಗೀತಾ ನೃತ್ಯ, ಪೂರನ್ ಶೆಟ್ಟಿಗಾರ್ ಸಂಗೀತ, ನಕಾಶ್ ಹಾಗೂ ಸ್ಪರ್ಶ ಧ್ವನಿ ಇರಲಿದೆ. ಪ್ರತಿಭಾ ನಿರ್ಮಾಣ ಮಾಡಿದ್ದಾರೆ.

289

Read More...

Simhaguhe.News

Wednesday, May 22, 2024

  ಸಿಂಹಗುಹೆಯಲ್ಲಿ ವಿಡಿಯೋ ಪೆನ್ ಡ್ರೈವ್ ಸದ್ದು !       ರಾಜ್ಯದಲ್ಲಿ  ನಡೆಯುತ್ತಿರುವ   ವಿದ್ಯಮಾನಗಳನ್ನೇ ಹೋಲುವ ಝಲಕ್ ಒಳಗೊಂಡ ಸಿಂಹಗುಹೆ ಚಿತ್ರದ ಟೀಸರ್ ಇದೀಗ ಭಾರೀ ಸದ್ದು ಮಾಡುತ್ತಿದೆ. ಅಶ್ಲೀಲ ವಿಡಿಯೋ ಪ್ರಕರಣ, ಪೆನ್ ಡ್ರೈವ್ ನಂಥ ವಿಚಾರಗಳೂ  ಈ ಟೀಸರ್ ನಲ್ಲಿದೆ. ಈಗಾಗಲೇ ಬಿಡುಗಡೆಯಾದ ಈ ಟೀಸರ್ ಹಲವಾರು ಪ್ರಶ್ನೆ ಹಾಗು ಕುತೂಹಲ ಹುಟ್ಟು ಹಾಕಿದೆ.     ಸಮರ್ಥ, ತಾಜಾ  ಚಿತ್ರಗಳ ನಂತರ  ಎಸ್‌.ಜಿ.ಆರ್. ಅವರ  ನಿರ್ದೇಶನದಲ್ಲಿ ಮೂಡಿ ಬಂದಿರುವ  ಸಿಂಹಗುಹೆ ಚಿತ್ರದ ಟೀಸರ್  ಸದ್ಯ ಒಂದಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.     ನಿರ್ದೇಶಕ ಎಸ್‌ಜಿಆರ್ ಮಾತನಾಡಿ,  ಸಸ್ಪೆನ್ಸ್, ಕ್ರೈಂ, ಮರ್ಡರ್ ಮಿಸ್ಟ್ರಿ ಕಥೆ ....

311

Read More...

Evidence.Film News

Monday, May 20, 2024

  ಈವಾರ  ತೆರೆಗೆ ಥ್ರಿಲ್ಲರ್ ಎವಿಡೆನ್ಸ್        ಕ್ರೈಂ, ಸಸ್ಪೆನ್ಸ್, ಥ್ರಿಲ್ಲರ್  ಜೊತೆಗೊಂದು ತ್ರಿಕೋನ ಪ್ರೇಮಕಥಾಹಂದರ  ಒಳಗೊಂಡ  ಚಿತ್ರ ಎವಿಡೆನ್ಸ್ ಈ ಶುಕ್ರವಾರ (ಮೇ.24) ರಾಜ್ಯಾದ್ಯಂತ ತೆರೆ ಕಾಣಲಿದೆ.  ನಟ, ನಿರ್ದೇಶಕ ಉಪೇಂದ್ರ ಅವರ ಜೊತೆ ಷ್.. ಚಿತ್ರದಿಂದ ಉಪೇಂದ್ರ-2 ವರೆಗೂ ಕೆಲಸ ಮಾಡಿದ ಪ್ರವೀಣ್ ಸಿ. ಪಿ. ಅವರು  ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ.          ಶ್ರೀಧೃತಿ ಪ್ರೊಡಕ್ಷನ್ ಲಾಂಛನದಲ್ಲಿ  ಡಾ.ಕೊಡ್ಲಾಡಿ ಸುರೇಂದ್ರ ಶೆಟ್ಟಿ ಅವರು ಅರ್ಪಿಸಿ, ಶ್ರೀನಿವಾಸ್‌ ಪ್ರಭು ಕೆ.ಮಾದೇಶ್(ಕೋಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಅವರ ನಿರ್ಮಾಣದ  ಎವಿಡೆನ್ಸ್  ಚಿತ್ರಕ್ಕೆ ಅರವಿಂದ್ ಅಚ್ಚು, ....

278

Read More...

Chilli Chicken.News

Tuesday, May 21, 2024

  ಚೈನೀಸ್ ಹೋಟೆಲ್ ಹುಡುಗರ   "ಚಿಲ್ಲಿ ಚಿಕನ್" ಟೀಸರ್ ಬಿಡುಗಡೆ         ಮೆಟನೋಯ್  ಸ್ಟುಡಿಯೋಸ್ ಪ್ರೊಡಕ್ಷನ್ ಅಡಿಯಲ್ಲಿ ದೀಪ್ ಭೀಮಜಿಯಾನಿ ಮತ್ತು ಸುಧಾ ನಂಬಿಯಾರ್ ಅವರು ನಿರ್ಮಾಣದ, ಪ್ರತೀಕ್ ಪ್ರಜೋಶ್ ಅವರ ನಿರ್ದೇಶನದ, ಬೆಂಗಳೂರಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಚಿಲ್ಲಿ ಚಿಕನ್. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು.     ಕೆಲಸಕ್ಕೆಂದು ಉತ್ತರ ಭಾರತದಿಂದ ಬಂದ ಐವರು ಹುಡುಗರು  ಬೆಂಗಳೂರಿನಲ್ಲಿ  ಚೈನೀಸ್ ರೆಸ್ಟೋರೆಂಟ್ ವೊಂದರಲ್ಲಿ ಕೆಲಸ ಮಾಡುತ್ತ, ತಾವೇ ಸ್ವಂತ ಹೋಟೆಲ್  ತೆರೆಯಲು ಮುಂದಾಗುತ್ತಾರೆ. ಅನಿರೀಕ್ಷಿತ ಘಟನೆಯೊಂದು ಇವರ ಪ್ರಯತ್ನಕ್ಕೆ ಅಡ್ಡಿಯಾಗುತ್ತದೆ. ಕೊನೆಗೆ ಅದೆಲ್ಲದರಿಂದ ಪಾರಾಗಿ ....

302

Read More...

Blink.50 Days.News

Monday, May 20, 2024

  *ಹಾಫ್ ಸೆಂಚೂರಿ ಬಾರಿಸಿದ ಬ್ಲಿಂಕ್ ಸಿನಿಮಾ..ಅಮೇಜಾನ್ ಒಟಿಟಿಯಲ್ಲಿಯೂ ಚಿತ್ರಕ್ಕೆ ಭರಪೂರ ಮೆಚ್ಚುಗೆ*   ಶ್ರೀನಿಧಿ ಬೆಂಗಳೂರು ನಿರ್ದೇಶನದ ಟೈಮ್‌ ಟ್ರಾವೆಲ್‌ ಸಿನಿಮಾ "ಬ್ಲಿಂಕ್‌" ಅಮೇಜಾನ್ ಒಟಿಟಿಯಲ್ಲಿ ಬಿಡುಗಡೆಯಾಗಿದ್ದು,  ಅದ್ಭುತ ಪ್ರತಿಕ್ರಿಯೆ  ಪಡೆಯುತ್ತಿದೆ. ಈ ಸಿನಿಮಾದ ಕುರಿತು ಜನ ಸೋಷಿಯಲ್ ಮೀಡಿಯಾದಲ್ಲಿ ಒಳ್ಳೆ ಅಭಿಪ್ರಾಯಗಳನ್ನು ಹಂಚಿಕೊಳ್ತಿದ್ದಾರೆ. ಒಟಿಟಿಗೂ ಎಂಟ್ರಿ ಕೊಟ್ಟಿರುವ ಚಿತ್ರವೀಗ ಯಶಸ್ವಿಯಾಗಿ 50 ದಿನ ಪೂರೈಸಿದೆ. ಕನ್ನಡ ಸಿನಿಮಾಗಳನ್ನು ಪ್ರೇಕ್ಷಕ ನೋಡುತ್ತಿಲ್ಲ ಎಂಬ ಅಪವಾದದ ನಡುವೆ ಬ್ಲಿಂಕ್ ಆಫ್ ಸೆಂಚೂರಿ ಬಾರಿಸಿರುವುದು ಇಡೀ ತಂಡಕ್ಕೆ ಖುಷಿ ಕೊಟ್ಟಿದೆ. ಈ ಕ್ಷಣಗಳನ್ನು ಚಿತ್ರತಂಡ ಮಾಧ್ಯಮದವರೊಟ್ಟಿಗೆ ....

300

Read More...

Moorane Krishappa.News

Thursday, May 16, 2024

  'ಮೂರನೇ ಕೃಷ್ಣಪ್ಪ’ ಸಿನಿಮಾ ಸೀಕ್ರೆಟ್ ಬಿಚ್ಚಿಟ್ಟ ರಂಗಾಯಣ ರಘು ಹಾಗೂ ಸಂಪತ್ ಮೈತ್ರಿಯಾ..ಇದೇ 24ಕ್ಕೆ ಚಿತ್ರ ರಿಲೀಸ್ ಟ್ರೇಲರ್ ಮೂಲಕ ಗರಿಗೆದರಿರುವ ಮೂರನೇ ಕೃಷ್ಣಪ್ಪ ಇದೇ 24ಕ್ಕೆ ಬಿಡುಗಡೆ..ಪಾತ್ರದ ಬಗ್ಗೆ ಏನಂದ್ರು ರಂಗಾಯಣ ರಘು   ಕನ್ನಡ ಚಿತ್ರರಂಗದಲ್ಲೀಗ ನಮ್ಮ ನೆಲದ ಕಥೆಗಳ ಸಿನಿಮಾಗಳು ಹೊಸ ಕ್ರಾಂತಿ ಮಾಡುತ್ತೀವೆ. ಕಾಂತಾರ, ಕಾಟೇರ ಸಕ್ಸಸ್ ಬಳಿಕ ಇಲ್ಲಿನ ನೆಲದ ಘಮಲನ್ನು ಹೊತ್ತು ಬರ್ತಿರುವ ಚಿತ್ರ ಮೂರನೇ ಕೃಷ್ಣಪ್ಪ. ಕೋಲಾರ ಭಾಗದ ಭಾಷೆಯ ಸೊಗಡನ್ನು ಪ್ರೇಕ್ಷಕರಿಗೆ ಉಣಬಡಿಸಲು ಹೊರಟಿರುವ ಮೂರನೇ ಕೃಷ್ಣಪ್ಪ ಚಿತ್ರದ ಬಗ್ಗೆ ಚಿತ್ರತಂಡ ಸಾಕಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ಇತ್ತೀಚೆಗೆಷ್ಟೇ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮೂರನೇ ಕೃಷ್ಣಪ್ಪ ....

243

Read More...

Anartha.Film News

Thursday, May 16, 2024

  ಅನರ್ಥ ಹಾಡು ಮತ್ತು ಟೀಸರ್ ಬಿಡುಗಡೆ          ’ಬಲಹೀನತೆಯಿಂದ ಕ್ರೂರತನ ಹುಟ್ಟುತ್ತದೆ’ ಎಂಬ ವಾಕ್ಯವನ್ನು ರೋಮ್ ಫಿಲಾಸಫರ್ ಸೆನಕ ಅಂದೇ ಹೇಳಿದ್ದರು. ಇಂತಹುದೆ ಅಂಶಗಳನ್ನು ಹೆಕ್ಕಿಕೊಂಡು ’ಅನರ್ಥ’ ಎನ್ನುವ ಸಿನಿಮಾದ ಅಡಿಬರಹಕ್ಕೆ ಬಳಸಲಾಗಿ, ಸೆನ್ಸಾರ್‌ನಿಂದ ಪ್ರಶಂಸೆ ಪಡೆದುಕೊಂಡಿದೆ.  ಪ್ರಚಾರದ ಮೊದಲ ಹಂತವಾಗಿ ಟೀಸರ್ ಹಾಗೂ ಸಾಂಗ್, ರೇಣುಕಾಂಬ ಸ್ಟುಡಿಯೋದಲ್ಲಿ ಕಿಕ್ಕಿರಿದ ಜನರು ಎದುರು ಲೋಕಾರ್ಪಣೆಗೊಂಡಿತು. ನಿರ್ದೇಶಕರು ಮಾಧ್ಯಮಮಿತ್ರರನ್ನು ಮುಖ್ಯ ಅತಿಥಿ ಎಂದು ಪರಿಗಣಿಸಿದ್ದರಿಂದ, ಹಿರಿಯ ಪತ್ರಕರ್ತರಿಂದ ಟೇಸರ್ ಹಾಗೂ ಸಹ ನಿರ್ಮಾಪಕಿ ಜೆ.ಅಂಜಲಿ ಪುತ್ರಿಯರಾದ ಕುಮಾರಿ ಜಯಕೀರ್ತಿ ಮತ್ತು ಜಯಕನ್ನಿಕ ಜಂಟಿಯಾಗಿ ಹಾಡನ್ನು ಬಿಡುಗಡೆ ....

289

Read More...

Mother Teresa.Web Series.News

Thursday, May 16, 2024

  30 ಕೋಟಿ ಬಜೆಟ್ ವೆಬ್ ಸರಣಿಯಲ್ಲಿ  ಮದರ್ ತೆರೇಸಾ ಕಥೆ....      ಬಡವರು ಹಾಗೂ ದೀನದಲಿತರ ಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಿಳೆ, ಪದ್ಮಶ್ರೀ ಪುರಸ್ಕೃತೆ, ಶಾಂತಿಗಾಗಿ ನೋಬೆಲ್ ಪ್ರಶಸ್ತಿ ಪಡೆದ  ಮದರ್ ತೆರೇಸಾ  ಅವರ ಜೀವನ ಚರಿತ್ರೆ ಇದೀಗ  ವೆಬ್ ಸರಣಿಯಲ್ಲಿ ಮೂಡಿಬರಲಿದೆ.  ಸಾಹಿತಿ, ಚಿತ್ರಕಥೆಗಾರ ದಿ. ಜಾನ್‌ ಪಾಲ್ ಪುತ್ತುಸ್ಸೆರಿ, ಹಾಗೂ ನಿರ್ದೇಶಕ ಪಿ. ಚಂದ್ರಕುಮಾರ್‌ ಸೇರಿ ಮೂರು ವರ್ಷಗಳಿಂದ ಇವರ ಬಗ್ಗೆ ಮಾಹಿತಿ ಕಲೆಹಾಕಿ ಈ ಸೀರೀಸ್ ಮಾಡುತ್ತಿದ್ದಾರೆ. ಮದರ್ ತೆರೇಸಾ ವೆಬ್ ಸರಣಿಯ ಶೀರ್ಷಿಕೆ ಹಾಗೂ ಬ್ಯಾನರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.       ಈಗಾಗಲೇ ಮಲಯಾಳಂ ಚಿತ್ರರಂಗದಲ್ಲಿ ದೊಡ್ಡ  ಹೆಸರುವ  ....

294

Read More...

The Judgement.News

Wednesday, May 15, 2024

  *ಟ್ರೇಲರ್ ನಲ್ಲಿ ಕುತೂಹಲ ಮೂಡಿಸಿದೆ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ "ದ ಜಡ್ಜ್ ಮೆಂಟ್"* .      *ಬಹು ನಿರೀಕ್ಷಿತ ಈ ಚಿತ್ರ‌ ಮೇ 24 ರಂದು ದೇಶಾದ್ಯಂತ ಬಿಡುಗಡೆ* .                       G9 communication media & entertainment ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ದ ಜಡ್ಜ್ ಮೆಂಟ್" ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. MMB legacy ಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ನಿರ್ಮಾಪಕ ಉದಯ್ ಕೆ ಮಹ್ತಾ ಟ್ರೇಲರ್ ಬಿಡುಗಡೆ ಮಾಡಿ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.     ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ, ....

283

Read More...

Idu Nam Shale.News

Sunday, May 12, 2024

  *ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರಿಂದ "ಇದು ನಮ್ ಶಾಲೆ" ಚಿತ್ರದ ಹಾಡಿನ ಅನಾವರಣ* .    ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, "ಇದು ನಮ್ ಶಾಲೆ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಬಿಡುಗಡೆ ಮಾಡಿದರು. ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.   ಇದು ಖಾಸಗಿ ಹಾಗೂ ಸರ್ಕಾರಿ ಶಾಲೆಯ ಸುತ್ತಲಿನ ....

289

Read More...

Samrat Maandhatha.News

Tuesday, May 14, 2024

  25 ದಿನ ಪೂರೈಸಿದ ಸಾಮ್ರಾಟ್  ಮಾಂಧಾತ       ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ನಿರ್ದೇಶನ ಮಾಡಿರುವ, ಪೌರಾಣಿಕ ಕಥಾಹಂದರ ಹೊಂದಿರುವ  "ಸಾಮ್ರಾಟ್ ಮಂಧಾತ" ಚಿತ್ರ ದಿನದಿಂದ ದಿನಕ್ಕೆ  ಜನಮನ್ನಣೆ ಗಳಿಸುತ್ತ ಸಾಗಿ, ಇದೀಗ  ಬೆಂಗಳೂರಿನ ಉಲ್ಲಾಸ್ ಥೇಟರಿನಲ್ಲಿ ಯಶಸ್ವಿಯಾಗಿ 25 ದಿನಗಳನ್ನು  ಪೂರೈಸಿದೆ. ಈಗ ಚಿತ್ರವನ್ನು ರಾಜ್ಯಾದ್ಯಂತ ರಿಲೀಸ್ ಮಾಡುವ ಉದ್ದೇಶ ಹೊಂದಿರುವ ಚಿತ್ರತಂಡ ಮಾಧ್ಯಮಗಳ ಮುಂದೆ ಒಂದಷ್ಟು ವಿಚಾರಗಳನ್ನು ಹಂಚಿಕೊಂಡಿತು.‌        ನಿರ್ದೇಶಕ ಹೇಮಂತ್ ಮಾತನಾಡುತ್ತ ಆರಂಭದಲ್ಲಿ ನಮ್ಮ ಚಿತ್ರವನ್ನು 20 ಥೇಟರುಗಳಲ್ಲಾದರೂ ರಿಲೀಸ್ ಮಾಡಬೇಕೆಂಬ ಆಸೆಯಿತ್ತು. ಆದರೆ ಬಾಡಿಗೆ ಕಟ್ಟುವ ಶಕ್ತಿ ನಮ್ಮಲ್ಲಿರಲಿಲ್ಲ. ಆಗ ....

389

Read More...

Vidyarthi Vidyarthiniyare.News

Monday, May 13, 2024

  ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಟ್ರೈಲರ್ ಮೂಲಕ ದುಮ್ಮಿಕ್ಕಿತು ಹರೆಯದ ತೊರೆ! ರ್ಯಾಪರ್ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ಚಿತ್ರ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’. ಶೀರ್ಷಿಕೆಯಲ್ಲಿಯೇ ಟೀನೇಜ್ ಸ್ಟೋರಿಯ ಕಂಪು ಹೊಂದಿರುವ ಈ ಸಿನಿಮಾ ಈಗಾಗಲೇ ನಾನಾ ಕ್ರೀಯಾಶೀಲ ಚಟುವಟಿಕೆಗಳ ಮೂಲಕ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಆ ಕಾರಣದಿಂದಲೇ ಎಲ್ಲರೂ ಟ್ರೈಲರ್ ನತ್ತ ದೃಷ್ಟಿ ನೆಟ್ಟಿದ್ದರು. ಇದೀಗ ಚಿತ್ರತಂಡ ಯುವ ಆವೇಗದಿಂದ ತೊನೆದಾಡುತ್ತಿರುವಂತೆ ಭಾಸವಾಗುವ ಟ್ರೈಲರ್ ಅನ್ನು ಬಿಡುಗಡೆಗೊಳಿಸಿದೆ. ಅದರೊಳಗೆ ಹದಿಹರೆಯದ ಮನಸುಗಳ ನಾನಾ ಮಗ್ಗುಲುಗಳು ಹರೆಯದ ತೊರೆಯೊಂದಿಗೆ ದುಮ್ಮಿಕ್ಕಿ ಹರಿದಿವೆ. ಈ ಟ್ರೈಲರ್ ಅನ್ನು ಸೈಡ್ ಎ ಅಂತ ಹೆಸರಿಸಲಾಗಿದೆ. ....

472

Read More...
Copyright@2018 Chitralahari | All Rights Reserved. Photo Journalist K.S. Mokshendra,