*'ಮೆಹಬೂಬಾ’ ಟೀಸರ್ ಅನಾವರಣ..ಮಾ.15ಕ್ಕೆ ಶಶಿ ಚೊಚ್ಚಲ ಕನಸು ಯಾನ* *ಶಶಿ ’ಮೆಹಬೂಬಾ’ನಿಗೆ ಜೊತೆಯಾದ ಕನ್ನಡ ಬಿಗ್ ಬಾಸ್ ವಿನ್ನರ್ಸ್..ಮಾ.15ಕ್ಕೆ ಚಿತ್ರ ಬಿಡುಗಡೆ* *ಮಾ.15ಕ್ಕೆ ’ಮೆಹಬೂಬಾ’ ಮೆರವಣಿಗೆ...ಶಶಿ ಹೊಸ ಪ್ರಯತ್ನದ ಝಲಕ್ ರಿಲೀಸ್ .* *ಕಣ್ಣೀರಾದ ಮೆಹಬೂಬಾ ಶಶಿ...ಮಾ.15ಕ್ಕೆ ಸರ್ವಧರ್ಮ ಸಾಮರಸ್ಯ ಚಿತ್ರ ಬಿಡುಗಡೆ* ಮಾರ್ಡನ್ ರೈತ ಶಶಿ ಹೊಸ ಪ್ರಯತ್ನ ಮೆಹಬೂಬಾ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ. ಮಾರ್ಚ್ 15ಕ್ಕೆ ಚಿತ್ರ ತೆರೆಗೆ ಬರ್ತಿದೆ. ಪೋಸ್ಟರ್ ಹಾಗೂ ಹಾಡುಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಮೆಹಬೂಬಾ ಟೀಸರ್ ಅನಾವರಣಗೊಂಡಿದೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಟೀಸರ್ ಬಿಡುಗಡೆ ಕಾರ್ಯಕ್ರಮ ....
ಪ್ರಕಾಶ್ರಾಜ್, ಡಾಲಿ ಧನಂಜಯ್ ಮೆಚ್ಚಿದ ಫೋಟೋ ಕಳೆದ ಬೆಂಗಳೂರು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪ್ರೇಕ್ಷಕರಿಂದ ಪ್ರಶಂಸೆಗೆ ಒಳಪಟ್ಟಿದ್ದ ‘ಫೋಟೋ’ ಚಿತ್ರವು ಈಗ ಸದ್ದು ಮಾಡುತ್ತಿದೆ. ಪ್ರಚಾರದ ಸಲುವಾಗಿ ಪ್ರಕಾಶ್ರೈ ಒಡೆತನದ ಶ್ರೀರಂಗಪಟ್ಟಣದಲ್ಲಿರುವ ನಿರ್ದಿಗಂತ ಆಡಿಟೋರಿಯಂದಲ್ಲಿ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ಪ್ರಕಾಶ್ರೈ ಮಾತನಾಡಿ ನಮ್ಮ ದೇಹಕ್ಕೆ ಆದ ಗಾಯಗಳು ಸುಮ್ಮನಿದ್ದರೂ ವಾಸಿಯಾಗುತ್ತದೆ. ಆದರೆ ಸಮಾಜಕ್ಕೆ ಆಗಿರುವ ಗಾಯ ಸುಮ್ಮನಿದ್ದಷ್ಟು ಜಾಸ್ತಿಯಾಗುತ್ತದೆ. ಉತ್ಸವ್ಗೆ ಸಿನಿಮಾ ತೋರಿಸುವ ಆಸೆ ಇತ್ತು. ಬೇರೆ ....
"4 ಎನ್ 6" ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "4 ಎನ್ 6" ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕೊಲೆಯೊಂದರ ....
ಆಕರ್ಷಕ ಶೀರ್ಷಿಕೆ ಕಮಂಡಲ ಉತ್ತರ ಕರ್ನಾಟಕದ ಶಿವು ಜಮಖಂಡಿ ಈ ಹಿಂದೆ ‘ನನ್ನ ನಿನ್ನ ಪ್ರೇಮಕಥೆ’ ಮತ್ತು ‘ಗುಲಾಲ್ ಡಾಟ್ ಕಾಮ್’ ಚಿತ್ರಗಳನ್ನು ನಿರ್ದೇಶಿಸಿದ್ದರು. ಗ್ಯಾಪ್ ನಂತರ ಈಗ ‘ಕಮಂಡಲ’ ಸಿನಿಮಾಕ್ಕೆ ಕಥೆ ಬರೆದು ಆಕ್ಷನ್ ಕಟ್ ಹೇಳುತ್ತಿದ್ದಾರೆ. ಮೊನ್ನೆಯಷ್ಟೇ ಪೋಸ್ಟರ್ ಲಾಂಚ್ ಕಾರ್ಯಕ್ರಮ ನಡೆಯಿತು. ಸಿನಿಮಾವು ದೈವಿಕ ಶಕ್ತಿಯನ್ನು ಹೇಳಲಿದೆ. ಹಾಗಂತ ಇದು ಪೌರಾಣಿಕ ಚಿತ್ರವಲ್ಲ. ಸಿನಿಮಾವು ಚೆನ್ನಾಗಿ ಮೂಡಿಬರಲೆಂದು ೪೮ ದಿನಗಳ ಕಾಲ ವೃತ ಮಾಡಿದ್ದಾರಂತೆ. ಒನ್ ಲೈನ್ ಹುಟ್ಟಿಕೊಂಡಿದ್ದೇ ದೇವಸ್ಥಾನದಲ್ಲಿ. ಕಮಂಡಲ ಎನ್ನುವುದು ಋಷಿ, ಮುನಿಗಳ ಕೈಲಿರುತ್ತದೆ. ಅದರಲ್ಲಿಯ ತೀರ್ಥ ತುಂಬಾ ....
ಪುರುಷೋತ್ತಮನಿಗೆ ಶರಣ್ ಸಾಥ್ ತುಳು ಚಿತ್ರರಂಗದ ಖ್ಯಾತ ಹಾಸ್ಯ ನಟ ದೇವಿದಾಸ್ ಕಾಪಿಕಾಡ್ ನಿರ್ದೇಶನ ಮಾಡಿರುವ ‘ಪುರುಷೋತ್ತಮನ ಪ್ರಸಂಗ’ ಸಿನಿಮಾವು ಕಾಮಿಡಿ, ನೈಜ ಘಟನೆ ಆಧಾರಿತ ಜತೆಗೆ ಕೌಟುಂಬಿಕ ಕಥೆಯನ್ನು ಹೊಂದಿದೆ. ರಾಷ್ಟ್ರಕೂಟ ಪಿಕ್ಚರ್ಸ್ ಲಾಂಛನದಲ್ಲಿ ವಿ.ರವಿಕುಮಾರ್ ಮಗನ ಸಲುವಾಗಿ ನಿರ್ಮಾಣ ಮಾಡಿದ್ದಾರೆ. ವಿದೇಶದಲ್ಲಿ ತರಭೇತಿ ಪಡೆದುಕೊಂಡಿರುವ ಅಜಯ್ ಶೀರ್ಷಿಕೆ ಹೆಸರಿನಲ್ಲಿ ನಾಯಕ. ಈ ಹಿಂದೆ ಕಿಸ್, ಮೆಹಬೂಬ, ನಾಟ್ಔಟ್ ಸಿನಿಮಾಗಳಲ್ಲಿ ಅಭಿನಯಿಸಿದ್ದು, ಹೀರೋ ಆಗಿ ಮೊದಲ ಅನುಭವವಂತೆ. ರಿಷಿಕಾನಾಯಕ್ ನಾಯಕಿ. ಇವರೊಂದಿಗೆ ನವೀನ್.ಡಿ.ಪಡೀಲ್, ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು ಮುಂತಾದವರು ....
*ಗುರು ದೇಶಪಾಂಡೆ ನಿರ್ಮಾಣದ ಹಾಗೂ ಬಿ.ಎಂ ಗಿರಿರಾಜ್ ನಿರ್ದೇಶನದ ನೂತನ ಚಿತ್ರಕ್ಕೆ ಬಿ.ಜೆ.ಭರತ್ ಸಾರಥ್ಯದಲ್ಲಿ ಹಾಡುಗಳ ಧ್ವನಿಮುದ್ರಣ ಆರಂಭ* . ನಿರ್ದೇಶಕ ಹಾಗೂ ನಿರ್ಮಾಪಕ ಗುರು ದೇಶಪಾಂಡೆ ತಮ್ಮ ಜಿ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡುತ್ತಿರುವ "ಪ್ರೊಡಕ್ಷನ್ ನಂ 4" ಚಿತ್ರದ ಹಾಡುಗಳ ಧ್ವನಿಮುದ್ರಣ (ಸಾಂಗ್ ರೆಕಾರ್ಡಿಂಗ್) ಪೂಜೆ ನಾಗರಭಾವಿಯ ಲೂಪ್ ಸ್ಟುಡಿಯೋಸ್ ನಲ್ಲಿ ನೆರವೇರಿತು. "ಜಟ್ಟ", "ಮೈತ್ರಿ" ಚಿತ್ರಗಳ ಖ್ಯಾತಿಯ ಬಿ.ಎಂ ಗಿರಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕನ್ನಡದ ಹೆಸರಾಂತ ನಿರ್ದೇಶಕ ಬಿ.ಜೆ.ಭರತ್ ಸಂಗೀತ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಹಿಂದೆ ಸಾಂಗ್ ರೆಕಾರ್ಡಿಂಗ್ ಪೂಜೆ ಎಂದರೆ ಒಂದು ಸಡಗರ ಎಂದು ....
ಆಗ ದಾಸ ದರ್ಶನ್ ಈಗ ಮರಿದಾಸ ಭರತ್ ಎರಡು ದಶಕಗಳ ನಂತರ ಮತ್ತೆ ಮೆಜೆಸ್ಟಿಕ್ ನಲ್ಲಿ ಮರಿದಾಸನ ಹವಾ.. ನಟ ದರ್ಶನ್ ಗೆ ದಾಸ ಎಂಬ ಹೆಸರು ಬಂದಿದ್ದೇ ಮೆಜೆಸ್ಟಿಕ್ ಚಿತ್ರದಿಂದ. 22 ವರ್ಷಗಳ ಹಿಂದೆ ತೆರೆಕಂಡು ದೊಡ್ಡ ದಾಖಲೆ ಬರೆದಿದ್ದ ಮೆಜೆಸ್ಟಿಕ್ ಸಿನಿಮಾ ನಟ ದರ್ಶನ್ ಗೆ ಒಳ್ಳೇ ಹೆಸರನ್ನೂ ತಂದುಕೊಟ್ಟಿತ್ತು. ಆ ಚಿತ್ರಕ್ಕೆ ಆರಂಭದಲ್ಲಿ ಕಾನ್ಸೆಪ್ಟ್ ಹೆಣೆದಿದ್ದ ರಾಮು ಅವರೇ ಈಗ ಮೆಜೆಸ್ಟಿಕ್ ೨ ಹೆಸರಲ್ಲಿ ಚಿತ್ರ ನಿರ್ದೇಶಿಸಲು ಮುಂದಾಗಿದ್ದಾರೆ. ಮಹಾಶಿವರಾತ್ರಿಯ ಶುಭ ದಿನದಂದು ಆ ಚಿತ್ರ ಸೆಟ್ಟೇರಲು ಸಿದ್ದವಾಗಿದೆ. ಈ ಚಿತ್ರದ ಮೂಲಕ ಹಿರಿಯ ನಿರ್ಮಾಪಕ, ವಿತರಕ ಶಿಲ್ಪಾ ಶ್ರೀನಿವಾಸ್ ಅವರ ಪುತ್ರ ಭರತ್ ನಾಯಕನಾಗಿ ಪರಿಚಯವಾಗುತ್ತಿದ್ದಾರೆ. ....
ಹೊಸ ಚಿತ್ರಕ್ಕೆ ಸಹಿ ಹಾಕಿದ ಕೋಮಲ್ಕುಮಾರ್ ‘ನಮೋ ಭೂತಾತ್ಮ’ ಚಿತ್ರದ ಯಶಸ್ಸಿನಿಂದ ಕೋಮಲ್ಕುಮಾರ್ ಸದ್ಯ ಬ್ಯುಸಿಯಾಗುತ್ತಿದ್ದಾರೆ. ಒಂದರ ನಂತರ ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು, ಇದರ ಸಾಲಿಗೆ ‘ಕುಟೀರ’ ಸೇರಿಕೊಂಡಿದೆ. ಶ್ರೀ ಬಂಡೆ ಮಹಾಂಕಾಳಿ ಅಮ್ಮನ ಸನ್ನಿದಿಯಲ್ಲಿ ಅದ್ದೂರಿಯಾಗಿ ಮುಹೂರ್ತ ಸಮಾರಂಭ ನಡೆಯಿತು. ಅನೂಪ್ ಆಂಟೋನಿ ನಿರ್ದೇಶನದಲ್ಲಿ, ಕಂಸಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ಮಧುಮರಿಸ್ವಾಮಿ ನಿರ್ಮಾಣ ಮಾಡುತ್ತಿದ್ದಾರೆ. ನಂತರ ಮಾತನಾಡಿದ ಕೋಮಲ್, ಇದೊಂದು ಹಾರರ್ ಕಾಮಿಡಿ ಕಥೆಯನ್ನು ಹೊಂದಿದೆ. ಕುಟೀರ ಹೆಸರಿನ ಪಾಳು ಬಿದ್ದಿರುವ ಮನೆಯಲ್ಲಿ ....
ಹೊಸ ಕೃಷ್ಣಾ ನೀ ಬೇಗನೆ ಬಾರೋ 80ರ ದಶಕದಲ್ಲಿ ಡಾ.ವಿಷ್ಣುವರ್ಧನ್ ಅಭಿನಯದ ’ಕೃಷ್ಣಾ ನೀ ಬೇಗನೆ ಬಾರೋ’ ಚಿತ್ರವು ಬಿಡುಗಡೆಗೊಂಡು ಸೂಪರ್ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಸಿನಿಮಾವೊಂದು ಸೆಟ್ಟೇರಿದೆ. ಪ್ರೇಮಿಗಳ ದಿನದಂದು ಬಲಮರಿ ವರಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನಡೆಯಿತು. ನಟರಾದ ಅನೀಶ್ತೇಜಶ್ವರ್ ಮತ್ತು ಇಶಾನ್ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿ ಶುಭ ಹಾರೈಸಿದರು. ನಿರ್ಮಾಪಕರ ಸೋದರ ಹೈದರಬಾದ್ ಉದ್ಯಮಿ ಶ್ರೀನಿಬಾಬು ಪುಲ್ಲೆಟ್ ಕ್ಯಾಮಾರ ಆನ್ ಮಾಡಿದರು. ದುಬೈನ ಎಸ್.ನೀಲಕಂಠ ಮತ್ತು ಚಲಪತಿರಾಜು ಜಂಟಿಯಾಗಿ ನೀಲಕಂಠ ಆರ್ಟ್ಸ್ ಬ್ಯಾನರ್ ಅಡಿಯಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಟಾಲಿವುಡ್ನ ಜಿ.ಸೂರ್ಯತೇಜ ....
ಎವಿಡೆನ್ಸ್ ಲಿರಿಕಲ್ ಸಾಂಗ್ ಬಿಡುಗಡೆ ಇಂಟರಾಗೇಶನ್ ರೂಮ್ ನಲ್ಲಿ ನಡೆಯುವ ಕ್ರೈಂ ಕಂಟೆಂಟ್ ಜೊತೆಗೊಂದು ತ್ರಿಕೋನ ಪ್ರೇಮಕಥೆ ಇಟ್ಟುಕೊಂಡು ಪ್ರವೀಣ ಸಿಪಿ. ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್. ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ’ಅಯ್ಯಯ್ಯೋ ಅರೆಮನಕೆ’ ಎಂಬ ಲಿರಿಕಲ್ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ನಡೆಯಿತು. ಶ್ರೀಧೃತಿ ಪ್ರೊಡಕ್ಷನ್ಸ್ ಹಾಗೂ ರೋಷಿರಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ಕೊಡ್ಲಾಡಿ ಸುರೇಂದ್ರ ಶೆಟ್ಟಿ, ಶ್ರೀನಿವಾಸ್ಪ್ರಭು ಕೆ, ಕೆ.ಮಾದೇಶ್ (ಕೊಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಸೇರಿ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರವೀಣ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ. ....
*N1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ TPL-3 ಟ್ರೋಫಿ ಹಾಗೂ ಜೆರ್ಸಿ ಬಿಡುಗಡೆ..ಫೆ.28ರಿಂದ ಶುರು ಕಿರುತೆರೆ ಕಲಾವಿದರ ಕ್ರಿಕೆಟ್ ಪಂದ್ಯಾವಳಿ..* *ಮತ್ತೆ ಬಂದೇ ಬಿಡ್ತು N1 ಕ್ರಿಕೆಟ್ ಅಕಾಡೆಮಿ ಪ್ರೆಸೆಂಟ್ TPL.. ಫೆ.28ರಿಂದ ಮಾ.3ರವೆರೆಗೆ ನಡೆಯಲಿದೆ ಟೆಲಿವಿಷನ್ ಪ್ರೀಮಿಯರ್ ಲೀಗ್* ಕಲಾವಿದರು ಮತ್ತು ತಂತ್ರಜ್ಞರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ N1 ಕ್ರಿಕೆಟ್ ಅಕಾಡೆಮಿಯ ಬಿಆರ್ ಸುನಿಲ್ ಕುಮಾರ್ ಕಳೆದ ಎರಡು ವರ್ಷಗಳಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್ ನಡೆಸುತ್ತಾ ಬಂದಿದ್ದಾರೆ. ಈಗಾಗಲೇ ಯಶಸ್ವಿಯಾಗಿ 2 ಸೀಸನ್ ಮುಕ್ತಾಯಗೊಂಡಿದ್ದು, ಇದೀಗ ಟಿಪಿಎಲ್ ಮೂರನೇ ಸೀಸನ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿ ಕಿರುತೆರೆ ಕಲಾವಿದರ ಕ್ರಿಕೆಟ್ ....
ಕ್ರೀಂ ಟ್ರೇಲರ್ ಬಿಡುಗಡೆ
ಮಹಿಳಾ ಪ್ರಧಾನ ಕಥೆಯನ್ನು ಹೊಂದಿರುವ ‘ಕ್ರೀಂ’ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭವು ಇತ್ತೀಚೆಗೆ ನಡೆಯಿತು. ಅಭಿಷೇಕ್ ಬಸಂತ್ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದು, ಡಿ.ಕೆ.ದೇವೇಂದ್ರ ಬಂಡವಾಳ ಹೂಡಿದ್ದಾರೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಗ್ನಿಶ್ರೀಧರ್ ನನಗೆ ನಟನೆಗಿಂತ ಬರವಣಿಗೆಯಲ್ಲಿ ಹೆಚ್ಚು ಆಸಕ್ತಿ. ನಿರ್ಮಾಪಕರ ಒತ್ತಾಯದ ಮೇಲೆ ಬಣ್ಣ ಹಚ್ಚಬೇಕಾಯಿತು. ವಿಷಯವನ್ನು ಕೊನೆವರೆಗೂ ಗೌಪ್ಯವಾಗಿಡಬೇಕೆಂದು ಹೇಳಿದ್ದೆ. ಆದರೆ ತುಣುಕುಗಳಲ್ಲಿ ನನ್ನನ್ನು ತೋರಿಸಿಬಿಟ್ಟಿದ್ದಾರೆ ಎಂದರು.
ಎನ್ನ ಮನದರಸಿ ಅಂತಾರೆ ಜಗ್ಗೇಶ್
ಅನೂಪ್ಸೀಳನ್ ಸಂಗೀತ ಮತ್ತು ಧ್ವನಿಯಾಗಿರುವ ‘ಎನ್ನ ಮನದರಸಿ’ ಹಾಡು ‘ರಂಗನಾಯಕ’ ಚಿತ್ರದ್ದಾಗಿದೆ. ನಿರ್ದೇಶಕ ಗುರುಪ್ರಸಾದ್ ಸಾಹಿತ್ಯದಲ್ಲಿ ಇಮ್ರಾನ್ ಸರ್ದಾರಿಯಾ ನೃತ್ಯ ಸಂಯೋಜಿಸಿದ್ದಾರೆ. ಇದೇ ಗೀತೆಯ ಲೋಕಾರ್ಪಣೆ ಕಾರ್ಯಕ್ರಮ ಮೊನ್ನೆಯಷ್ಟೇ ನಡೆಯಿತು. ನಾಯಕ ಜಗ್ಗೇಶ್ ಮಾತನಾಡಿ ಈ ಸಿನಿಮಾ ಸಂಪೂರ್ಣವಾಗಿ ಗುರುಪ್ರಸಾದ್ ಅವರ ಪ್ರಸಾದ. ಆತ ಜಗಮೊಂಡ. ಯಾರ ಮಾತನ್ನು ಕೇಳುವುದಿಲ್ಲ. ಮದವೇರಿದ ಒಂಟಿ ಸಲಗದಂತೆ. ನೋಡುಗರಿಗೆ ಬಾಯಿ ತುಂಬ ನಗು ತರಿಸಿದರೆ ನಮ್ಮ ಶ್ರಮ ಸಾರ್ಥಕವಾಗುತ್ತದೆ ಎಂದರು.
ಹೊಸ ಪ್ರತಿಭೆಗಳ ಭಾವತೀರ ಯಾನ
‘ಶಾಖಹಾರಿ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರುವ ಮಯೂರ್ ಅಂಬೆಕಲ್ಲು ಮತ್ತು ನಾಯಕನಾಗಿ ನಟಿಸಿರುವ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶನ ಮಾಡಿರುವ ‘ಭಾವತೀರ ಯಾನ’ ಸಿನಿಮಾದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಶೈಲೇಶ್ಅಂಬೆಕಲ್ಲು, ಲಕ್ಷಣ.ಬಿ.ಕೆ ನಿರ್ಮಾಣ ಮಾಡಿರುವುದು ಹೊಸ ಅನುಭವ.
ಹೊಸ ಪ್ರತಿಭೆಗಳ ಭಾವತೀರ ಯಾನ
‘ಶಾಖಹಾರಿ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿರುವ ಮಯೂರ್ ಅಂಬೆಕಲ್ಲು ಮತ್ತು ನಾಯಕನಾಗಿ ನಟಿಸಿರುವ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶನ ಮಾಡಿರುವ ‘ಭಾವತೀರ ಯಾನ’ ಸಿನಿಮಾದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ನಡೆಯಿತು. ಶೈಲೇಶ್ಅಂಬೆಕಲ್ಲು, ಲಕ್ಷಣ.ಬಿ.ಕೆ ನಿರ್ಮಾಣ ಮಾಡಿರುವುದು ಹೊಸ ಅನುಭವ.
ತೆರೆಗೆ ಸಿದ್ದ ಮತ್ಸ್ಯಗಂಧ
‘ಮತ್ಸ್ಯಗಂಧ’ ಸಿನಿಮಾದ ಟ್ರೇಲರ್ನ್ನು ಸಚಿವ ಮಾಂಕಾಳ.ಎಸ್.ವೈದ್ಯ ಬಿಡುಗಡೆ ಮಾಡಿದ್ದು, ದುನಿಯಾ ವಿಜಯ್, ಸೂರಿ, ಯೋಗರಾಜಭಟ್, ತರುಣುಸುಧೀರ್, ಉದಯ್ಮೆಹ್ತಾ, ಶಶಾಂಕ್ ಮುಂತಾದವರು ನೋಡಿ ಶುಭ ಹಾರೈಸಿದಿರುವುದು ತಂಡಕ್ಕೆ ಸಂತಸ ತಂದಿದೆ.
ಫಾರ್ ರಿಜಿಸ್ಟ್ರೇಷನ್ದಲ್ಲಿ ಸಂಬಂಧಗಳನ್ನು ಹೇಳಲಿದೆ
ಇಂಜಿನಿಯರ್, ರಂಗಕರ್ಮಿ ನವೀನ್ದ್ವಾರಕನಾಥ್ ಒಂದಷ್ಟು ಕಿರುಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಇದರ ಅನುಭವದಿಂದ ಈಗ ‘ಫಾರ್ ರಿಜಿಸ್ಟ್ರೇಷನ್’ (ಈoಡಿ ಖegಟಿ.) ಎನ್ನುವ ಸಿನಿಮಾಕ್ಕೆ ರಚಿಸಿ ಆಕ್ಷನ್ ಕಟ್ ಹೇಳಿದ್ದಾರೆ. ಸಾಂಸರಿಕ ಕಾಮಿಡಿ ಕಥೆಯಲ್ಲಿ ವಾಹನ ನಮ್ಮದಾಗಬೇಕು ಅಂದರೆ ಅದಕ್ಕೆ ರಿಜಿಸ್ಟ್ರೇಷನ್ ಮಾಡಿಸಬೇಕು. ಹಾಗೆಯೇ ಒಂದು ಸಂಬಂಧ ನಮ್ಮದಾಗಬೇಕು ಅಂದರೆ ಏನು ಮಾಡಬೇಕು ಎಂಬುದು ಒನ್ ಲೈನ್ ಸ್ಟೋರಿಯಾಗಿದೆ.
ಕನ್ನಡದ ಮಿ.ನಟ್ವರ್ಲಾಲ್ ಅಮಿತಾಬ್ಬಚ್ಚನ್ ಅಭಿನಯದಲ್ಲಿ ‘ಮಿ.ನಟ್ವರ್ಲಾಲ್’ ಸಿನಿಮಾವೊಂದು ಆ ಕಾಲಕ್ಕೆ ತೆರೆಕಂಡು ಯಶಸ್ವಿಯಾಗಿತ್ತು. ಈಗ ಅದೇ ಹೆಸರಿನಲ್ಲಿ ಚಿತ್ರವೊಂದು ಇದೇ ೨೩ರಂದು ತೆರೆಗೆ ಬರಲು ಸಿದ್ದವಾಗಿದೆ. ಪ್ರಚಾರದ ಕೊನೆ ಹಂತವಾಗಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ತಂಡವು ಮಾಧ್ಯಮದವರನ್ನು ಭೇಟಿ ಮಾಡಿ ಅನುಭವಗಳನ್ನು ಹಂಚಿಕೊಂಡಿತು. ನಾಯಕ ಮತ್ತು ನಿರ್ಮಾಪಕ ತನುಷ್ ಮಾತನಾಡಿ ತುಂಬಾ ಹಣ ಸುರಿದು ಒಂದೊಳ್ಳೆಯ ಸಿನಿಮಾ ಮಾಡಿದ್ದೇವೆ. ಇದನ್ನು ಪ್ರೇಕ್ಷಕರ ಮಡಿಲಿಗೆ ಹಾಕುತ್ತಿದ್ದೇವೆ. ಅವರೇನು ಮಾಡುತ್ತಾರೋ ಮಾಡಲಿ. ಒಂದು ಹಂತದಲ್ಲಿ ....
*ಅಪ್ಪು ನಮನ ಕಾರ್ಯಕ್ರಮದಲ್ಲಿ "ರವಿಕೆ ಪ್ರಸಂಗ" ಚಿತ್ರತಂಡ* ಮಂಗಳೂರು: "ಅಖಿಲ ಕರ್ನಾಟಕ ವಾದ್ಯಗೋಷ್ಠಿ ಮಹಾ ಸಂಘ" ದ ವತಿಯಿಂದ ಆಯೋಜಿಸಿದ್ದ "ಅಪ್ಪು ನಮನ" ಕಾರ್ಯಕ್ರಮದಲ್ಲಿ "ರವಿಕೆ ಪ್ರಸಂಗ" ಚಿತ್ರ ತಂಡ ಪಾಲ್ಗೊಂಡಿತು. "ರವಿಕೆ ಪ್ರಸಂಗ" ಸಿನಿಮಾದ ಟೈಟಲನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಬಿಡುಗಡೆಗೊಳಿಸಿರುವುದನ್ನು ಗೀತಾಭಾರತಿ ಭಟ್ ನೆನಪಿಸಿಕೊಂಡರು. ಅಪ್ಪುವಿಗೆ ವಿಶೇಷವಾಗಿ ಸಾವಿರಕ್ಕೂ ಹೆಚ್ಚಿನ ವಾದ್ಯಗೋಷ್ಠಿ ಕಲಾವಿದರೊಂದಿಗೆ ರವಿಕೆಪ್ರಸಂಗ ಚಿತ್ರದ ನಾಯಕಿ ಗೀತಾಭಾರತಿ ಭಟ್, ಕಲಾರತಿ ಮಹಾದೇವ್, ರಕ್ಷಕ್, ನಿರ್ದೇಶಕರಾದ ಸಂತೋಷ್ ಕೊಡೆಂಕೇರಿ, ಹಾಗೂ ಚಿತ್ರಕ್ಕೆ ಕಥೆ ಮತ್ತು ಸಂಭಾಷಣೆ ಬರೆದ ಪಾವನ ಸಂತೋಷ್ ಮತ್ತು ಚಿತ್ರದ ....
*ಸೆನ್ಸಾರ್ ಪಾಸಾದ ರವಿಕೆ ಪ್ರಸಂಗ* ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ. ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ’ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ ಬ್ಲೌಸನ್ನು ....