Dasvarenya sri Vijayadasaru.

Monday, January 08, 2024

  *ಕೇಂದ್ರ ಸಚಿವ ಶ್ರೀಪ್ರಹ್ಲಾದ ಜೋಶಿ ಅವರಿಂದ ಬಿಡುಗಡೆಯಾಯಿತು "ದಾಸವರೇಣ್ಯ ಶ್ರೀ ವಿಜಯ ದಾಸರು" ಚಿತ್ರದ ಧ್ವನಿಸುರಳಿ*   ಖ್ಯಾತ ಹರಿದಾಸರಾದ ಭೃಗು ಋಷಿಗಳ ಅಂಶ ಸಂಭೂತರಾದ ಶ್ರೀವಿಜಯದಾಸರ ಕುರಿತಾದ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ.   ತ್ರಿವಿಕ್ರಮ ಜೋಶಿ ಅವರು ಎಸ್ ಪಿ ಜೆ ಮೂವೀಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ,  ಮಧುಸೂದನ್ ಹವಾಲ್ದಾರ್ ನಿರ್ದೇಶಿಸಿರುವ "ದಾಸವರೇಣ್ಯ ಶ್ರೀ ವಿಜಯದಾಸರು" ಚಿತ್ರದ ಧ್ವನಿ ಸುರುಳಿಯನ್ನು ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ ಜೋಶಿ ಬಿಡುಗಡೆ ಮಾಡಿದರು. ಪಂಡಿತ ಪೂಜ್ಯ ಶ್ರೀ ಸತ್ಯಧ್ಯಾನಾಚಾರ್ಯ ಕಟ್ಟಿ,  ಮಾಜಿ ಸಚಿವರಾದ ಶ್ರೀ ಮುರುಗೇಶ್ ನಿರಾಣಿ, ಮಾಜಿ ಶಾಸಕರಾದ ಶ್ರೀ ....

249

Read More...

Matsyagandha.News

Wednesday, January 10, 2024

  ನಟ ಪ್ರಶಾಂತ್ ಸಿದ್ದಿ ಈಗ ಮ್ಯೂಸಿಕ್ ಡೈರೆಕ್ಟರ್ ಮತ್ಸ್ಯಗಂಧ ಚಿತ್ರದಿಂದ ಸಂಗೀತ ನಿರ್ದೇಶಕನಾದ ಪ್ರಶಾಂತ್ ಸಿದ್ದಿ ಹುಟ್ಟಿನಿಂದಲೇ ರಿದಂ ಮೈಗೂಡಿಸಿಕೊಂಡಿರೋ ಪ್ರತಿಭೆ ಪ್ರಶಾಂತ್ ಸಿದ್ದಿ ಅಮ್ಮನಿಂದ ಸಂಗೀತ, ನಾಟಕದಿಂದ ಪ್ರತಿಭೆ ಬೆಳಕಿಗೆ ಮತ್ಸ್ಯಗಂಧದಿಂದ ಸಿನಿಮಾ ಪ್ರಯೋಗ -------------------   ಯೋಗರಾಜ್ ಭಟ್ , ಸೂರಿ ಸಿನಿಮಾಗಳ ಖಾಯಂ ಪಾತ್ರದಾರಿ , ಪ್ರತಿಭಾನ್ವಿತ ನಟ, ರಂಗಭೂಮಿ ಹಿನ್ನೆಲೆಯ ಬಹುಮುಖ ಪ್ರತಿಭೆ ಪ್ರಶಾಂತ್ ಸಿದ್ದಿ, ತಮ್ಮ ಪ್ರತಿಭೆಯ ಮತ್ತೊಂದು ಮುಖವನ್ನ ಪರಿಚಯಿಸಿದ್ದಾರೆ. ಪೃಥ್ವಿ ಅಂಬರ್ ಅಭಿನಯದ ದೇವರಾಜ್ ಪೂಜಾರಿ ನಿರ್ದೇಶನದ ಮತ್ಸ್ಯಗಂಧ ಚಿತ್ರಕ್ಕೆ ಸಂಗೀತ ಸಂಯೋಜಿಸೋ ಮೂಲಕ ಸಂಗೀತ ನಿರ್ದೇಶಕನಾಗಿದ್ದಾರೆ. ಇತ್ತೀಚೆಗಷ್ಟೇ ಮತ್ಸ್ಯಗಂಧ ....

243

Read More...

Klaantha.Film News

Tuesday, January 09, 2024

  *ಕ್ಲಾಂತ ಸಿನಿಮಾಗೆ ಸಾಥ್ ಕೊಟ್ಟ ಅಜಯ್ ರಾವ್…ಜ.19ಕ್ಕೆ ದಟ್ಟ ಕಾನನದೊಳಗಿನ ಕಥನಾಕ ಬೆಳ್ಳಿತೆರೆಮೇಲೆ ಅನಾವರಣ* *ಕ್ಲಾಂತ ಟ್ರೇಲರ್ ರಿಲೀಸ್..ವೈಭವ-ವಿಘ್ನೇಶ್ ಸಿನಿಮಾಗೆ ಅಜಯ್ ರಾವ್ ಸಾಥ್..ಜ.19ಕ್ಕೆ ಚಿತ್ರ ರಿಲೀಸ್*   ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ SRV ಥಿಯೇಟರ್ ನಲ್ಲಿಂದು ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಾಶಯ ಕೋರಿದ್ದಾರೆ.   ಅಜಯ್ ರಾವ್ ಮಾತನಾಡಿ, ಟ್ರೇಲರ್ ತುಂಬಾ ಆಕ್ಷನ್ ನಿಂದ ಕೂಡಿದೆ. ....

272

Read More...

5D Film News

Sunday, January 07, 2024

  ಎಸ್.ನಾರಾಯಣ್ ನಿರ್ದೇಶನದ  ೫ಡಿ ಟೀಸರ್ ಬಿಡುಗಡೆ   ಸೂರ್ಯವಂಶ, ಚೆಲುವಿನ ಚಿತ್ತಾರದಂದ  ಹಿಟ್ ಚಿತ್ರಗಳ  ನಿರ್ದೇಶಕ  ಎಸ್.ನಾರಾಯಣ್ ಅವರು ೫ ವರ್ಷಗಳ ನಂತರ  ನಿರ್ದೇಶಿಸಿರುವ ಚಿತ್ರ ೫ಡಿ. ವನ್ ಟು ಹಂಡ್ರೆಡ್ ಡ್ರೀಮ್ ಮೂವೀಸ್ ಲಾಂಚನದಲ್ಲಿ ಸ್ವಾತಿ ಕುಮಾರ್ ಅವರ ನಿರ್ಮಾಣದ ಈ  ಚಿತ್ರದಲ್ಲಿ  ಆದಿತ್ಯ, ಅದಿತಿ ಪ್ರಭುದೇವ ಪ್ರಮುಖ ಪಾತ್ರದಲ್ಲಿ  ಕಾಣಿಸಿಕೊಂಡಿದ್ದಾರೆ. ಈ ಚಿತ್ರದ ಟೀಸರ್ ಇತ್ತೀಚೆಗೆ  ಬಿಡುಗಡೆಯಾಯಿತು,  ಕಲಾವಿದರ ಸಂಘದಲ್ಲಿ  ನಡೆದ  ಈ ಕಾರ್ಯಕ್ರಮದಲ್ಲಿ   ನಿರ್ದೇಶಕ  ಎಸ್, ನಾರಾಯಣ್, ನಾಯಕ ಆದಿತ್ಯ, ನಿರ್ಮಾಪಕ ಕುಮಾರ್,  ಜೇಂಕಾರ್ ಆಡಿಯೋದ ಭರತ್ ಜೈನ್  ಇತರರು ಹಾಜರಿದ್ದರು.            ಈ ಸಂದರ್ಭದಲ್ಲಿ ....

281

Read More...

Raghavendra Chitravani Awards

Monday, January 08, 2024

     *ವಿಷಯ - ಶ್ರೀ ರಾಘವೇಂದ್ರ ಚಿತ್ರವಾಣಿ  ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ*    *ಸನ್ಮಾನ್ಯ ಸಂಪಾದಕರಿಗೆ ನಮಸ್ಕಾರಗಳು* ,                                                                   *ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ ಶ್ರೀ ಡಿ.ವಿ. ಸುಧೀಂದ್ರ ಅವರು ತಮ್ಮ ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಗೆ 25 ವರ್ಷ ತುಂಬಿದ  ಸುಸಂದರ್ಭದಲ್ಲಿ ಅನ್ನದಾತರಾದ ನಿರ್ಮಾಪಕರಿಗೆ ಮತ್ತು ಹಿರಿಯ ಪತ್ರಕರ್ತರಿಗೆ ಪ್ರಶಸ್ತಿ ನೀಡುವ ಪರಿಪಾಠ ಆರಂಭಿಸಿದರು. ಈಗ ಪ್ರಶಸ್ತಿಗಳ ಸಂಖ್ಯೆ ....

300

Read More...

Hanu Man.Film News

Saturday, January 06, 2024

  *ಬೆಂಗಳೂರಿನಲ್ಲಿ ’ಹನುಮಾನ್’ ಸಿನಿಮಾ ಪ್ರಚಾರ...ಸಂಕ್ರಾಂತಿಗೆ ತೇಜ ಸಜ್ಜಾ ಚಿತ್ರ ರಿಲೀಸ್..*       ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಸಂಕ್ರಾಂತಿ ಹಬ್ಬಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಟ್ರೇಲರ್ ಬಹಳ ಸದ್ದು ಮಾಡಿದೆ. ಚಿತ್ರತಂಡ ಕೂಡ ಭರದಿಂದ ಪ್ರಚಾರ ನಡೆಸುತ್ತಿದೆ. ಹನುಮಾನ್ ಪ್ರಚಾರದ ಅಂಗವಾಗಿ ಬೆಂಗಳೂರಿಗೆ ಬಂದಿದ್ದ ಚಿತ್ರತಂಡ ಮಾಧ್ಯಮದವರ ಮುಂದೆ ಸಾಕಷ್ಟು ವಿಷಯ ಹಂಚಿಕೊಂಡಿದೆ.   ನಾಯಕ ತೇಜ್ ಸಜ್ಜಾ ಮಾತನಾಡಿ, ಇದು ಹನುಮಾನ್ ದೇವರ ಬಗ್ಗೆ ಇರುವ ಸಿನಿಮಾವಲ್ಲ. ಇದು ಒಬ್ಬ ವ್ಯಕ್ತಿಗೆ ಪವರ್ ಬಂದ್ರೆ ಆತ ಸೂಪರ್ ಹೀರೋ ಆಗುತ್ತಾನೆ. ಅವರ ಬಗ್ಗೆ ಇರುವ ಚಿತ್ರ. ಕಾಮಿಡಿ , ....

273

Read More...

Bhuvanam Gaganam.News

Thursday, January 04, 2024

 ಭುವನಂ ಗಗನಂ ಕುಂಬಳಕಾಯಿ        ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶನ ಮಾಡಿದ್ದ ಗಿರೀಶ್‌ಮೂಲಿಮನಿ ಗ್ಯಾಪ್ ನಂತರ ‘ಭುವನಂ ಗಗನಂ’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.  ಪುನೀತ್‌ರಾಜ್‌ಕುಮಾರ್ ಅಭಿನಯದ ‘ವಂಶಿ’ ಸಿನಿಮಾದ ಹಾಡಿನ ಸಾಲು ಶೀರ್ಷಿಕೆಯಾಗಿದೆ. ಎಸ್‌ವಿಸಿ ಬ್ಯಾನರ್ ಅಡಿಯಲ್ಲಿ ಎಂ.ಮುನೇಗೌಡ  ಬಂಡವಾಳ ಹೂಡುತ್ತಿರುವುದು ಹೊಸ ಅನುಭವ. ಸಲಾರ್ ಖ್ಯಾತಿಯ ಪ್ರಮೋದ್  ಮತ್ತು ದಿಯಾ  ಪೃಥ್ವಿಅಂಬರ್ ನಾಯಕರುಗಳು. ರೆಚಲ್‌ಡೇವಿಡ್, ಅಶ್ವಥಿ ನಾಯಕಿಯರು. ಇವರೊಂದಿಗೆ ಅಚ್ಯುತಕುಮಾರ್, ಶರತ್‌ಲೋಹಿತಾಶ್ವ, ಪ್ರಕಾಶ್‌ತುಮ್ಮಿನಾಡು, ಸಿದ್ಲಿಂಗುಶ್ರೀಧರ್, ಹರಿಣಿ, ಸ್ಪರ್ಶರೇಖಾ, ಪ್ರಜ್ವಲ್‌ಶೆಟ್ಟಿ, ....

283

Read More...

Mehabooba.Film News

Thursday, January 04, 2024

ನಾಯಕನ ಹುಟ್ಟುಹಬ್ಬಕ್ಕೆ ಪೋಸ್ಟರ್ ಬಿಡುಗಡೆ

        ಬಿಗ್ ಬಾಸ್ ಖ್ಯಾತಿ ಹಾಗೂ ಆಧುನಿಕ ರೈತ ಅಂಗ ಗುರುತಿಸಿಕೊಂಡಿರುವ ಶಶಿ ‘ಮೆಹಬೂಬ’ ಚಿತ್ರದಲ್ಲಿ ನಾಯಕನಾಗಿ ಪರಿಚಯವಾಗಿದ್ದಾರೆ. ಪ್ರಚಾರದ ಮೊದಲ ಹಂತವಾಗಿ ನಾಯಕನ ಹುಟ್ಟುಹಬ್ಬದಂದು ಕೃಷಿ ಸಚಿವ ಚೆಲುವರಾಜಸ್ವಾಮಿ ಆಗಮಿಸಿ ಪೋಸ್ಟರ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನಾಡಿದ ಸಚಿವರು ಶಶಿ ನಿರ್ಮಾಪಕರಾಗಿದ್ದರಿಂದ ಲಾಭ-ನಷ್ಟ ಹಾಗೂ ಹಸರು ಅವರದ್ದೇ ಆಗಿದೆ. ರಾಜ್ಯದ ಜನ ಆಶೀರ್ವಾದ ಮಾಡಬೇಕಾಗಿದೆ. ನಾಯಕಿ ನನ್ನ ಗೆಳೆಯನ ಮಗಳು. ಹೀಗಾಗಿ ಇಬ್ಬರಿಗೂ ಯಶಸ್ಸು ಸಿಗಲಿ ಎಂದರು.

254

Read More...

Life Today.Film News

Thursday, January 04, 2024

  ಹೊಸತನದ ಲೈಫ್ ಖಿoಜಚಿಥಿ        ಸದುಭಿರುಚಿಯ ಚಿತ್ರ ‘ಇರುವುದೆಲ್ಲವ ಬಿಟ್ಟು’ ನಿರ್ದೇಶನ ಮಾಡಿದ್ದ ಕಾಂತ ಕನ್ನಲ್ಲಿ ಗ್ಯಾಪ್ ನಂತರ ಈಗ ‘ಲೈಫ್ ಖಿoಜಚಿಥಿ’   ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.  ಮೇಘನಾ ಪ್ರೊಡಕ್ಷನ್ ಅಡಿಯಲ್ಲಿ ಮೇಘನಾಪ್ರದೀಪ್ ಬಂಡವಾಳ ಹೂಡುತ್ತಿರುವುದು ಹೊಸ ಅನುಭವ.       ಶ್ರೀ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ನಡೆದ ಮುಹೂರ್ತ ಸಮಾರಂಭದಲ್ಲಿ  ಹಿರಿಯ ನಿರ್ದೇಶಕ ಮಹೇಂದ್ರ ಕ್ಲಾಪ್ ಮಾಡಿದರೆ, ಧ್ರುವಸರ್ಜಾ ಟೈಟಲ್ ಹಾಗೂ ಫಸ್ಟ್‌ಲುಕ್ ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ನಂತರ ಮಾತನಾಡುತ್ತಾ  ಶೀರ್ಷಿಕೆ ಕೇಳಿದರೆ ನೋಡಬೇಕು ಅನಿಸುತ್ತದೆ. ....

236

Read More...

Jotheyagiru.Film News

Wednesday, January 03, 2024

  ಮಿಸ್ ಕಾಲ್ ಪ್ರೇಮಕಥೆ "ಜೊತೆಯಾಗಿರು" ಟ್ರೈಲರ್ ಬಿಡುಗಡೆ        ರೇಣು ಮೂವೀಸ್ ಮೂಲಕ ಒಂದಷ್ಟು ಸ್ನೇಹಿತರೇ ಸೇರಿ ನಿರ್ಮಿಸಿರುವ ಚಿತ್ರ ಜೊತೆಯಾಗಿರು. ಅಜರಾಮರ, ನಾನೊಬ್ನೆ ಒಳ್ಳೇವ್ನು ಸೇರಿದಂತೆ ಹಲವಾರು ಸಿನಿಮಾಗಳಿಗೆ ಸಹಾಯಕ ನಿರ್ದೇಶಕ, ಸಹ ನಿರ್ದೇಶಕನಾಗಿಯೂ ಕೆಲಸ ಮಾಡಿದ ಸತೀಶ್ ಕುಮಾರ್ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಹಾಗೂ ೩ ಹಾಡುಗಳ ಪ್ರದರ್ಶನ  ಕಾರ್ಯಕ್ರಮ ಇತ್ತೀಚೆಗೆ ನೆರವೇರಿತು. ೨೦೦೯ರಲ್ಲಿ ನಡೆದ ನೈಜ ಘಟನೆಯಿಂದ ಪ್ರೇರಿತವಾದ ಕಥೆ ಈ ಚಿತ್ರದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಸತೀಶ್ ಕುಮಾರ್, ಆಗ ನನ್ನ ಸ್ನೇಹಿತನ ಜೀವನದಲ್ಲಿ ನಡೆದ ಘಟನೆಯನ್ನಿಟ್ಟುಕೊಂಡು ಈ ....

260

Read More...

Ranga Samudra.News

Tuesday, January 02, 2024

  *ರಾಘವೇಂದ್ರ ರಾಜಕುಮಾರ್ ಅವರಿಂದ ಬಿಡುಗಡೆಯಾಯಿತು "ರಂಗ ಸಮುದ್ರ" ಚಿತ್ರದ ಟ್ರೇಲರ್*    *ರಂಗಾಯಣ ರಘು ಪ್ರಮುಖಪಾತ್ರದಲ್ಲಿ ಅಭಿನಯಿಸಿರುವ ಜನಪದ ಸೊಗಡಿನ ಈ ಚಿತ್ರ ಜನವರಿ 12ರಂದು ತೆರೆಗೆ* .   ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಟ ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಬಹು ನಿರೀಕ್ಷಿತ "ರಂಗ ಸಮುದ್ರ" ಚಿತ್ರದ ಟ್ರೇಲರ್ ಅನ್ನು ರಾಘವೇಂದ್ರ ರಾಜಕುಮಾರ್ ಅವರು ಬಿಡುಗಡೆ ಮಾಡಿ ಶುಭ ಕೋರಿದರು.   ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರಾಘವೇಂದ್ರ ರಾಜಕುಮಾರ್, ಇಂತಹ ಕಥಾವಸ್ತು ಆಯ್ಕೆ ಮಾಡಿಕೊಂಡಿರುವ ನಿರ್ದೇಶಕರಿಗೆ ಮೊದಲ ಸೆಲ್ಯೂಟ್. ಇನ್ನು ರಂಗಾಯಣ ರಘು ಅವರ ಅಭಿನಯ ನಿಜಕ್ಕೂ ಅದ್ಭುತ. ಇಂತಹ ಚಿತ್ರದಲ್ಲಿ ನಾನು ....

295

Read More...

Kali Esru.Film 17/18.News

Tuesday, January 02, 2024

  *ಗಿರೀಶ್ ಕಾಸರವಳ್ಳಿ - ಜೋಗಿ ಅವರಿಂದ ಬಿಡುಗಡೆಯಾಯಿತು "ಕೋಳಿ ಎಸ್ರು" ಹಾಗೂ "ಹದಿನೇಳೆಂಟು" ಚಿತ್ರಗಳ ಟ್ರೇಲರ್* .    *ಪ್ರಶಸ್ತಿ ವಿಜೇತ ಈ ಎರಡು ಚಿತ್ರಗಳು ಜನವರಿ 26 ರಂದು ತೆರೆಗೆ*    ಚಂಪಾ.ಪಿ. ಶೆಟ್ಟಿ ನಿರ್ದೇಶನದ "ಕೋಳಿ ಎಸ್ರು" ಹಾಗೂ ಪೃಥ್ವಿ ಕೊಣನೂರು ನಿರ್ದೇಶಿಸಿರುವ "ಹದಿನೇಳೆಂಟು" ಚಿತ್ರಗಳ ಟ್ರೇಲರ್ ಬಿಡುಗಡೆಯಾಗಿದೆ. ಖ್ಯಾತ ನಿರ್ದೇಶಕ ಗಿರೀಶ್ ಕಾಸರವಳ್ಳಿ ಅವರು "ಕೋಳಿ ಎಸ್ರು" ಚಿತ್ರದ ಟ್ರೇಲರ್ ಅನ್ನು ಹಾಗೂ ಜನಪ್ರಿಯ ಲೇಖಕ & ಪತ್ರಕರ್ತ ಜೋಗಿ ಅವರು "ಹದಿನೇಳೆಂಟು" ಚಿತ್ರದ ಟ್ರೇಲರ್ ಅನ್ನು ಬಿಡುಗಡೆ ಮಾಡಿ ಶುಭ ಕೋರಿದರು.    ಚಂಪಾ ಶೆಟ್ಟಿ ಅವರು ಹಿಂದೆ “ಅಮ್ಮಚ್ಚಿಯೆಂಬ ನೆನಪು” ಚಿತ್ರವನ್ನು, ಪೃಥ್ವಿ ....

344

Read More...

Kaatera.Film Success Meet

Monday, January 01, 2024

ನಾನು ಮಾಡುವುದು ಕಮರ್ಷಿಯಲ್ ಚಿತ್ರ ಪ್ರಶಸ್ತಿಗಲ್ಲದರ್ಶನ್

       ಮೊನ್ನೆಯಷ್ಟೇ ಬಿಡುಗಡೆಯಾಗಿ ಸದ್ದು ಮಾಡುತ್ತಿರುವ ‘ಕಾಟೇರ’ ಚಿತ್ರತಂಡವು ಮಾಧ್ಯಮದವರನ್ನು ಭೇಟಿ ಮಾಡಿ ಒಂದಷ್ಟು ಪ್ರಶ್ನೆಗಳಿಗೆ ಉತ್ತರವಾದರು. ಅತಿ ಹೆಚ್ಚು ಉತ್ತರಗಳನ್ನು ನೀಡಿದ್ದು ದರ್ಶನ್. ಅವರ ಮಾತುಗಳಲ್ಲಿ ಹೇಳುವುದಾದರೆ, ಯಾವುದೇ ಸಿನಿಮಾ ಒಪ್ಪಲು ೩ ಪ್ರಮುಖ ಅಂಶಗಳನ್ನು ನೋಡುತ್ತೇನೆ. ಹೆಣ್ಣನ್ನು ತುಚ್ಚವಾಗಿ ನೋಡಬಾರದು. ನಮ್ಮ ನೆಲ, ಕನ್ನಡದ ಬಗ್ಗೆ ಕೇವಲವಾದ ಸಂಭಾಷಣೆ ಇರಬಾರದು. ನಿರ್ಮಾಪಕರಿಗೆ ಲಾಭ ತಂದುಕೊಡಬೇಕು. ಈ ಮೂರನ್ನು ಇಟ್ಟುಕೊಂಡು ಕಾಲ್‌ಶೀಟ್ ಕೊಡುತ್ತೇನೆ.

285

Read More...

Matinee.Film News

Sunday, December 31, 2023

  *ನ್ಯೂ ಇಯರ್ ಗೆ ಬಂತು  "ಮ್ಯಾಟ್ನಿ" ಚಿತ್ರದ ಮಾಸ್ ಹಾಡು* .    *ನೀನಾಸಂ ಸತೀಶ್ - ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ* .   ನೀನಾಸಂ ಸತೀಶ್ ಹಾಗೂ ರಚಿತಾರಾಮ್ "ಅಯೋಗ್ಯ" ಚಿತ್ರದ ನಂತರ ನಟಿಸಿರುವ ಚಿತ್ರ "ಮ್ಯಾಟ್ನಿ". ಬಹು ನಿರೀಕ್ಷಿತ ಈ ಚಿತ್ರದ " ಬಾರೋ ಬಾರೋ ಬಾಟಲ್ ತಾರೋ" ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ.  ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ  ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ  ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ....

307

Read More...

Film 131.New Film News

Saturday, December 30, 2023

 

*ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ* .

 

 *ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ* .

 

ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

257

Read More...

Ranaksha.Film News

Saturday, December 30, 2023

  ಸಸ್ಪೆನ್ಸ್, ಥ್ರಿಲ್ಲರ್ "ರಣಾಕ್ಷ" ಫಸ್ಟ್ ಲುಕ್,   ಕಾಮಿಡಿಯಿಂದ ಥ್ರಿಲ್ಲರ್ ನತ್ತ  ಸೀರುಂಡೆ ರಘು      ಈ‌ ಹಿಂದೆ ಮರೆಯದೆ ಕ್ಷಮಿಸು ಎಂಬ ಚಿತ್ರ ನಿರ್ದೇಶಿಸಿದ್ದ ಕೆ.ರಾಘವ ಅವರ ನಿರ್ದೇಶನದ ಮತ್ತೊಂದು ಚಿತ್ರ ರಣಾಕ್ಷ. ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಚಲನಚಿತ್ರ  ವಾಣಿಜ್ಯಮಂಡಳಿ ಅಧ್ಯಕ್ಷ ಎನ್.ಎಂ.ಸುರೇಶ್ ಮೊದಲನೋಟಕ್ಕೆ ಚಾಲನೆ ನೀಡಿದರು. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಿರುತೆರೆಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಸೀರುಂಡೆ ರಘು, ರಕ್ಷಾ ಹನುಮಂತು ಹಾಗೂ ರೋಹಿ ಪ್ರಮುಖ ಪಾತ್ರಗಳಲ್ಲಿ ....

519

Read More...

Sanju weds Geetha 2.News

Friday, December 29, 2023

  ಸ್ವಿಟ್ಜರ್ ಲ್ಯಾಂಡ್ ನಲ್ಲಿ  ಸಂಜು ವೆಡ್ಸ್ ಗೀತಾ-2         ನಾಲ್ಕು ತಿಂಗಳ‌ ಹಿಂದೆ ಪ್ರಾರಂಭವಾಗಿದ್ದ  ನಾಗಶೇಖರ್ ಅವರ  ನಿರ್ದೇಶನದ ಸಂಜು ವೆಡ್ಸ್ ಗೀತಾ ೨’ ಚಿತ್ರದ ಚಿತ್ರೀಕರಣ ಪ್ರಮುಖ ಘಟ್ಟಕ್ಕೆ ಬಂದಿದೆ. ಇದೇ ತಿಂಗಳು ಚಿತ್ರತಂಡ ಸ್ವಿಟ್ಜರ್ ಲ್ಯಾಂಡ್ ಗೆ ಹೋಗಿ 2 ಹಾಡುಗಳನ್ನು ಚಿತ್ರೀಕರಿಸಿಕೊಂಡು ಬಂದಿದೆ. ಈವರೆಗೆ ನಡೆಸಿದ ಚಿತ್ರೀಕರಣದ ಅನುಭವಗಳನ್ನು ಹಂಚಿಕೊಳ್ಳಲೆಂದು ನಿರ್ದೇಶಕ‌ ನಾಗಶೇಖರ್ ಹಾಗೂ ತಂಡ ಮಾದ್ಯಮಗಳ ಮುಂದೆ ಬಂದಿತ್ತು. ಅಶೋಕ ಹೋಟೆಲ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸ್ವಿಟ್ಜರ್ ಲ್ಯಾಂಡ್ ಶೂಟಿಂಗ್ ದೃಶ್ಯಗಳ ಪ್ರದರ್ಶನದ ನಂತರ ಮಾತನಾಡಿದ ನಿರ್ದೇಶಕ ನಾಗಶೇಖರ್ ಹಿಂದೆ ಸಂಜು ವೆಡ್ಸ್ ಗೀತಾ ಸಿನಿಮಾ ಮಾಡುವಾಗ ಆದ ....

267

Read More...

Gange Gowri.Film News

Thursday, December 28, 2023

  ಶೀರ್ಷಿಕೆ ಹಳೇದು ಕಥೆ ಹೊಸತು         60ರ ದಶಕದಲ್ಲಿ ’ಗಂಗೆ ಗೌರಿ’ ಚಿತ್ರದಲ್ಲಿ ಡಾ.ರಾಜ್ಕುಮಾರ್, ಲೀಲಾವತಿ, ಭಾರತಿ ಅಭಿನಯಿಸಿದ್ದು, ಆ ಕಾಲಕ್ಕೆ ದೊಡ್ಡ ಹಿಟ್ ಆಗಿತ್ತು. ಕಟ್ ಮಾಡಿದರೆ ಈಗ ಅದೇ ಹೆಸರಿನಲ್ಲಿ ಭಕ್ತಿ ಪ್ರಧಾನ ಸಿನಿಮಾವು ಸೆಟ್ಟೇರಿದೆ. ಬೆಂಗಳೂರಿನ ತಿಂಡ್ಲು ಸ್ಥಳದಲ್ಲಿರುವ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ನಡೆದ ಅದ್ದೂರಿ ಮುಹೂರ್ತ ಸಮಾರಂಭಕ್ಕೆ ಹಿರಿಯ ನಿರ್ದೇಶಕ ಸಾಯಿಪ್ರಕಾಶ್ ಮತ್ತು KTVA ಅಧ್ಯಕ್ಷರಾದ ರವಿ.ಆರ್.ಗರಣಿ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಹಿರಿಯ ಸಮಾಜ ಸೇವಕ ಶಿವಾನಂದ ದೊಡ್ಮನಿ, ಲಯನ್ ಮನೋಜ್ಕುಮಾರ್, ನಿರ್ದೇಶಕರ ಸಂಘದ ಅಧ್ಯಕ್ಷ ಎನ್‌ಆರ್ಕೆ.ವಿಶ್ವನಾಥ್ ಮುಂತಾದವರು ಉಪಸ್ತಿತರಿದ್ದರು. ....

343

Read More...

Friday.Film News

Wednesday, December 27, 2023

  *ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ "ಫ್ರೈಡೆ" ಚಿತ್ರ ಆರಂಭ* .      *ಇದು "ಹೊಸ ದಿನಚರಿ" ನಿರ್ದೇಶಕರ ಹೊಸ ಸಿನಿಮಾ* .     ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ "ಮೇಡ್ ಇನ್ ಬೆಂಗಳೂರು" ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ - ನಾಯಕಿಯಾಗಿ ನಟಿಸುತ್ತಿರುವ "ಫ್ರೈಡೆ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ "ಹೊಸ ದಿನಚರಿ" ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ....

396

Read More...

Aathma Thalana.News

Monday, December 25, 2023

  ಆತ್ಮತಲ್ಲಣ ಹಾರರ್ ರಿವೆಂಜ್ ಕಥೆ     ಯುವನಟ ಆದಿಕೇಶವ ರೆಡ್ಡಿ  ನಟನೆಯ ಹಾರರ್, ಥ್ರಿಲ್ಲರ್ ಕಥಾಹಂದರ ಹೊಂದಿದ  ಆತ್ಮ ತಲ್ಲಣ ಚಿತ್ರವು  ಇದೇ  ಶುಕ್ರವಾರ ಡಿ.೨೯ರಂದು ರಾಜ್ಯಾದ್ಯಂತ  ತೆರೆಕಾಣುತ್ತಿದೆ. ಇತ್ತೀಚೆಗೆ ಚಿತ್ರದ ಟ್ರೈಲರ್ ಕೂಡ ಬಿಡುಗಡೆಯಾಯಿತು.  ಎಸ್.ಪಿ. ಕೃಷ್ಣ ಅವರು ಈ ಚಿತ್ರದ  ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನದ ಜೊತೆ ಶ್ರೀ ಯೋಗಮಾತಾ ಹುಲಿಯಮ್ಮದೇವಿ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ  ನಿರ್ಮಾಣ ಸಹ ಮಾಡಿದ್ದಾರೆ.  ಆದಿಕೇಶವರೆಡ್ಡಿ ಚಿತ್ರದ ನಾಯಕನಾಗಿದ್ದು, ನಾಯಕಿಯಾಗಿ ಲಾವಣ್ಯ ಅಭಿನಯಿಸಿದ್ದಾರೆ, ಈ ಸಂದರ್ಭದಲ್ಲಿ ಮಾತನಾಡಿದ ನಿರ್ಮಾಪಕ, ನಿರ್ದೇಶಕ ಕೃಷ್ಣಪ್ಪ ನಾವು ಈ ಚಿತ್ರವನ್ನು ಶುರು ಮಾಡಿ ೩ ವರ್ಷಗಳಾಯಿತು, ....

464

Read More...
Copyright@2018 Chitralahari | All Rights Reserved. Photo Journalist K.S. Mokshendra,