ಆನ್ಲೈನ್ ಮದುವೆ ಆಫ್ ಲೈನ್ ಶೋಭನ ಟ್ರೈಲರ್ ಬಿಡುಗಡೆ ಕಿರುತೆರೆ ಖ್ಯಾತಿಯ ಯುವಜೋಡಿ ಜಗ್ಗಪ್ಪ, ಸುಶ್ಮಿತಾ ಅಭಿನಯದ, ವೇಂಪಲ್ಲಿ ಬಾವಾಜಿ ಅವರ ನಿರ್ದೇಶನದ ಆನ್ಲೈನ್ ಮದುವೆ, ಆïಲೈನ್ ಶೋಭನ ಚಿತ್ರದ ಟ್ರೈಲರ್ ಹಾಗೂ ೨ ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು, ಆನ್ ಲೈನ್ ಆಪ್ ಮೂಲಕ ಜೊತೆಯಾದ ಯುವಜೋಡಿಯ ಸುತ್ತ ನಡೆಯುವ ಹಾಸ್ಯಪ್ರದಾನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅಪ್ಸರ ಮೂವೀಸ್ ಬ್ಯಾನರ್ ಅಡಿಯಲ್ಲಿ ವೇಂಪಲ್ಲಿ ಬಾವಾಜಿ ಅವರೇ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿಯಿಂದ ಯು/ಎ ಸರ್ಟಿಫಿಕೇಟ್ ಪಡೆದೊರುವ ಈ ಚಿತ್ರವನ್ನು ಮುಂದಿನ ತಿಂಗಳು ತೆರೆಗೆ ತರುವ ಯೋಜನೆ ನಿರ್ಮಾಪಕರದ್ದು. ಜಗಪ್ಪ, ಸುಶ್ಮಿತ, ಸೀರುಂಡೆ ರಘು ....
ವಿನೂತನ ರೀತಿಯಲ್ಲಿ ಶೀರ್ಷಿಕೆ ಅನಾವರಣ ಪಝಲ್ ಆಟದಂತೆ ಕಲಾವಿದರು ಎಲ್ಲವನ್ನು ಜೋಡಿಸಿದಾಗ ಪವರ್ ಸ್ಟಾರ್ ಪುನೀತ್ರಾಜ್ಕುಮಾರ್ ಭಾವಚಿತ್ರ ಮೂಡಿಬಂತು. ನಂತರ ಅದನ್ನು ತಿರುಗಿಸಿದಾಗ ‘ದಂಡತೀರ್ಥ’ ಚಿತ್ರದ ಶೀರ್ಷಿಕೆ ಅನಾವರಣಗೊಂಡಿತು. ವೈಕುಂಠ ಏಕಾದಶಿ ಶುಭದಿನದಂದು ಸದರಿ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಸುಮಾರು ೭೮ ಚಿತ್ರಗಳಿಗೆ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿರುವ ಹರಿಪ್ರಾಣ ಮೊದಲ ಅನುಭವ ಎನ್ನುವಂತೆ ‘ಪ್ರಾಣ ಪ್ರೊಡಕ್ಷನ್’ ಸಂಸ್ಥೆ ಹುಟ್ಟುಹಾಕಿ ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಇದರ ಸಲುವಾಗಿ ಸಿನಿಮಾಕ್ಕೆ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ....
ಕಣ್ಣಾ ಮುಚ್ಚೆ ಪ್ರೀತಿಯ ಸಂಕೇತ ’ಕಣ್ಣಾ ಮುಚ್ಚೆ’ ಚಿತ್ರದ ಆರು ಹಾಡುಗಳ ಪೈಕಿ, ಮೂರು ಗೀತೆಗಳ ಲಿರಿಕಲ್ ವಿಡಿಯೋ ಬಿಡುಗಡೆ ಕಾರ್ಯಕ್ರಮ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ನಿರ್ಮಾಪಕರ ಮಾತೃಶ್ರೀರವರು ಸಾಂಗ್ನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹಿರಿಯ ನಟ ಸ್ವಸ್ತಿಕ್ಶಂಕರ್ ಉಪಸ್ತಿತರಿದ್ದರು. Krishi ಸ್ಟುಡಿಯೋಸ್ ಮತ್ತು ಸಚಿತ್ ಫಿಲಿಂಸ್ ಹಾಗೂ ಶಿವ ಸಿನಿಮಾಸ್ ಬ್ಯಾನರ್ನಡಿಯಲ್ಲಿ ಖ್ಯಾತ ವಿತರಕ ವೆಂಕಟ್ಗೌಡ ಪತ್ನಿ ಮೀನಾವೆಂಕಟ್ ನಿರ್ಮಾಣ ಮಾಡಿದ್ದಾರೆ. ಜಿ.ವಿ.ವೆಂಕಟೇಶ್ಬಾಬು-ಲೋಕೇಶ್.ಎನ್.ಬಿ ಸಹ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಸಾಕಷ್ಟು ಚಿತ್ರಗಳಿಗೆ ಗೀತೆಗಳನ್ನು ಬರೆದಿರುವ ಲೋಕಲ್ ಲೋಕಿ ....
ಛಾಯಾ ಚಿತ್ರದಲ್ಲಿ ಹಾರರ್ ನೆರಳು ! ನ್ಯೂ ಗ್ಲೋಬಲ್ ಕ್ರಿಯೇಶನ್ಸ್ ಅಡಿಯಲ್ಲಿ ಶ್ರೀಮತಿ ನಂದ ಎಂ.ಆರ್. ಅವರು ನಿರ್ಮಿಸಿರುವ ಹಾರರ್ ಹಿನ್ನೆಲೆಯ ಚಿತ್ರ ಛಾಯ ತೆರೆಗೆ ಬರಲು ರೆಡಿಯಾಗಿದೆ. ನಾಲ್ಕು ಜನ ಯುವಕರು ಒಂದು ಮನೆಗೆ ಅತಿಥಿಗಳಾಗಿ ಹೋದಾಗ ಅಲ್ಲಿ ಅನೇಕ ಚಿತ್ರವಿಚಿತ್ರ ಘಟನೆಗಳು ನಡೆಯುತ್ತವೆ. ಆ ಎಲ್ಲಾ ಅನಾಹುತಗಳಿಗೆ ಕಾರಣವೇನು ಎನ್ನುವುದೇ ಛಾಯ ಚಿತ್ರದ ಪ್ರಮುಖ ಕಥಾವಸ್ತು. ನೃತ್ಯನಿರ್ದೇಶಕ ಜಗ್ಗು ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರದಲ್ಲಿ ಮಾರಕಾಸ್ತ್ರ ಖ್ಯಾತಿಯ ಆನಂದ್ ಆರ್ಯ, ತೇಜುರಾಜ್ ಹಾಗೂ ಅನನ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರದ ಹಾಡೊಂದರ ಬಿಡುಗಡೆ ಕಾರ್ಯಕ್ರಮ ಸೋಮವಾರ ನಡೆಯಿತು. ನಾಲ್ವರು ಸ್ನೇಹಿತರ ಸುತ್ತ ....
*‘ಸಲಾರ್ ಪಾರ್ಟ್ 1: ಸೀಸ್ಫೈರ್’ ಚಿತ್ರದ ‘ಆಕಾಶ ಗಾಡಿಯ’ ಹಾಡು ಬಿಡುಗಡೆ* ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್ನ ‘ಸಲಾರ್ ಪಾರ್ಟ್ 1: ಸೀಸ್ಫೈರ್’. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಭಾರತದ ಬೃಹತ್ ಆ್ಯಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ....
*ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ "ಕದನ ವಿರಾಮ" ಚಿತ್ರಕ್ಕೆ ಚಾಲನೆ*
. ಶ್ರೀಬ್ರಹ್ಮಲಿಂಗೇಶ್ವರ ಫಿಲಂಸ್ ಲಾಂಛನದಲ್ಲಿ ಕೆ.ಭಾಸ್ಕರ್ ನಾಯ್ಕ್ (ಮಾರಣಕಟ್ಟೆ) ಹಾಗೂ ಸಾಮ್ರಾಟ್ ಮಂಜುನಾಥ್.ವಿ(ಗರುಡಾಚಾರ್ ಪಾಳ್ಯ) ನಿರ್ಮಿಸುತ್ತಿರುವ ಹಾಗೂ ಮುರಳಿ ಎಸ್ ವೈ ನಿರ್ದೇಶನದ "ಕದನ ವಿರಾಮ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಬಿಲ್ಡರ್ ಸುರೇಶ್ ಆರಂಭ ಫಲಕ ತೋರಿದರು. ಉದ್ಯಮಿ ಚಿಕ್ಕಣ್ಣ ಕ್ಯಾಮೆರಾ ಚಾಲನೆ ಮಾಡಿದರು. ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.
*ಪರಿಶುದ್ಧ ಮನೋರಂಜನೆಯ ರಸದೌತಣ ಬಡಿಸಲು ಬರುತ್ತಿದ್ದಾರೆ "ಬ್ಯಾಕ್ ಬೆಂಚರ್ಸ್"* *ಹಾಡು ಬಿಡುಗಡೆ ಮಾಡಿ ಶುಭ ಹಾರೈಸಿದ ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್* ನೋಡುಗರಿಗೆ ಪರಿಶುದ್ಧ ಮನೋರಂಜನೆಯ ರಸದೌತಣ ಉಣಬಡಿಸಲು ಹೊಸತಂಡವೊಂದು ಸಿದ್ದವಾಗಿದೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದಲ್ಲಿ ನೂತನ ಪ್ರತಿಭೆಗಳ ನಟಿಸಿರುವ " ಬ್ಯಾಕ್ ಬೆಂಚರ್ಸ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಇತ್ತೀಚೆಗೆ ಈ ಚಿತ್ರದ ಹಾಡೊಂದು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಕುಲ್ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಆನ್ ....
ಬ್ರಹ್ಮರಾಕ್ಷಸ ಟೀಸರ್ ಬಿಡುಗಡೆ ಸ್ಯಾಂಡಲ್ ವುಡ್ ಈಗೀಗ ಹೊಸಬರ ಕಾರಣದಿಂದಲೇ ಹೆಚ್ಚು ಸುದ್ದಿಯಾಗುತ್ತಿದೆ. ಹೊಸಬರ ಚಿತ್ರಗಳಲ್ಲಿ ಹೊಸತನದ ತಾಂತ್ರಿಕತೆಯ ಸ್ಪರ್ಶವಿರುತ್ತದೆ. ಅಂತಹ ಸಿನಿಮಾಗಳ ಸಾಲಿಗೆ ಸೇರಲಿರುವ ಮೊತ್ತೊಂದು ಚಿತ್ರವೇ ಬ್ರಹ್ಮರಾಕ್ಷಸ. ಒಬ್ಬ ಲೈಟ್ಮ್ಯಾನ್ ಆಗಿ ಫಿಲಂ ಇಂಡಸ್ಟ್ರಿಗೆ ಬಂದು ಹಲವಾರು ನಿರ್ದೇಶಕರ ಬಳಿ ಕೆಲಸ ಕಲಿತ ಶಂಕರ್.ವಿ. ಮೊದಲಬಾರಿಗೆ ಆ್ಯಕ್ಷನ್ಕಟ್ ಹೇಳಿರುವ ಚಿತ್ರ ಬ್ರಹ್ಮರಾಕ್ಷಸ. ಜ್ಯೋತಿ ಆರ್ಟ್ಸ್ ಮೂಲಕ ಕೆಎಂಪಿ. ಶ್ರೀನಿವಾಸ್ ನಿರ್ಮಿಸಿರುವ ಈ ಚಿತ್ರದಲ್ಲಿ ಅಂಕುಶ್ ಏಕಲವ್ಯ, ಪಲ್ಲವಿಗೌಡ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. ಮತೊಂದು ವಿಶಿಷ್ಠ ಪಾತ್ರದಲ್ಲಿ ವೈಜನಾಥ್ ಬಿರಾದಾರ್ ....
*"ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚಿತ್ರ ಡಿಸೆಂಬರ್ ನಲ್ಲಿ ಬಿಡುಗಡೆ.* ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ "ಕಾಣೆಯಾಗಿದ್ದಾಳೆ" ಹುಡುಕಿಕೊಟ್ಟವರಿಗೆ ಬಹುಮಾನ ಚತ್ರ ತೆರೆಗೆ ಬರಲು ಸಿದ್ದವಾಗಿದ್ದು, ಡಿಸೆಂಬರ್ ನಲ್ಲಿ ಬಿಡುಗಡೆಯಾಗಲಿದೆ. ಇತ್ತೀಚಿಗೆ ಈ ಚಿತ್ರದ ಹಾಡೊಂದನ್ನು ದಾವಣಗೆರೆ ಮಹಾನಗರ ಪಾಲಿಕೆಯ ಉಪ ಮೇಯರ್ ಯೋಗೇಶ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಇದೊಂದು ನೈಜ ಹಾಗೂ ಕಾಲ್ಪನಿಕ ಕಥಾ ಆಧಾರಿತ ಚಿತ್ರ. ಸಾಮಾಜಿಕ ಜಾಲತಾಣಗಳನ್ನು ಹೆಣ್ಣುಮಕ್ಕಳು ....
ಮಂಡ್ಯಹೈದ ಟೀಸರ್ ಟೈಟಲ್ ಸಾಂಗ್ ಲಾಂಚ್ ಇಂಟ್ರಡಕ್ಷನ್ ಹಾಡಲ್ಲಿ ಅಭಯ್ ಹುಕ್ ಸ್ಟೆಪ್ಸ್ ಕನ್ನಡ ಚಿತ್ರರಂಗದಲ್ಲಿ ಮಂಡ್ಯ ಹೆಸರಿಗೆ ದೊಡ್ಡ ಮೌಲ್ಯವಿದೆ. ರೆಬೆಲ್ ಸ್ಟಾರ್ ಅಂಬರೀಶ್ ತವರುಜಿಲ್ಲೆ ಅಲ್ಲದೆ ಆ ಭಾಗದ ಕಥೆ ಹೇಳುವ ಹಲವಾರು ಚಿತ್ರಗಳು ತೆರೆಗೆ ಬಂದಿವೆ. ಈಗ ಮತ್ತೊಬ್ಬ ಮಂಡ್ಯಹೈದ ತನ್ನ ಪ್ರೀತಿಗಾಗಿ ಹೇಗೆಲ್ಲ ಹೋರಾಡಿದ ಎಂಬುದನ್ನು ನಿರ್ದೇಶಕ ವಿ.ಶ್ರೀಕಾಂತ್ ಅವರು ಹೇಳಹೊರಟಿದ್ದಾರೆ. ಮಂಡ್ಯಹೈದ ಚಿತ್ರದ ಟೈಟಲ್ ಸಾಂಗ್ ಕಾವೇರಮ್ಮನ ಮಡಿಲಲ್ ಹಾಡಿ ಬೆಳೆದವ್ನೆ ಎಂಬ ಸಾಹಿತ್ಯವಿರುವ ನಾಯಕನ ಇಂಟ್ರಡಕ್ಷನ್ ಹಾಡು ಸೋಮವಾರ ಬಿಡುಗಡೆಯಾಗಿದೆ, ಅಲ್ಲದೆ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮ ಕೂಡ ನಡೆಯಿತು, ಈ ....
*ಈ ವಾರ ಮಾಯಾನಗರಿ ಬಿಡುಗಡೆ* *ಚಿತ್ರಮಂದಿರಗಳಲ್ಲಿ "ಮಾಯಾನಗರಿ" ದರ್ಶನ* *ರಾಜ್ಯಾದ್ಯಂತ ಈ ವಾರ ಮಾಯಾನಗರಿ ಬಿಡುಗಡೆ* ಈಗಾಗಲೇ ಟ್ರೇಲರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ಗಮನ ಸೆಳೆದಿರುವ ಮಾಯಾನಗರಿ ಸಿನಿಮಾ ಈ ವಾರ (ಡಿ. 15 ರಂದು) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಶಂಕರ್ ಆರಾಧ್ಯ ನಿರ್ದೇಶನದ, ಅನೀಶ್ ತೇಜೇಶ್ವರ್ ನಟನೆಯ ಈ ಸಿನಿಮಾ ಸುಮಾರು 150ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅನೀಶ್ ಜೋಡಿಯಾಗಿ ಶ್ರಾವ್ಯ ರಾವ್ ಹಾಗೂ ತೇಜು ನಟಿಸಿದ್ದಾರೆ. ಶೂಟಿಂಗ್ ವೇಳೆ ಸಾಕಷ್ಟು ಪರಿಶ್ರಮ ಹಾಕಿರುವ ಚಿತ್ರತಂಡ, ಹಲವಾರು ರಿಸ್ಕಿ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಿದೆ. ಈ ಕುರಿತು ಮಾತನಾಡುವ ನಿರ್ದೇಶಕ ಶಂಕರ್ ಆರಾಧ್ಯ, "ಈ ....
ಓ ನನ್ನ ಚೇತನ ಟ್ರೈಲರ್ ರಿಲೀಸ್ ಮಾಡಿದ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ತಮ್ಮ ಅಪೂರ್ವ ನಾಯಕಿ ಅಪೂರ್ವ ನಿರ್ದೇಶನದ ಚೊಚ್ಚಲ ಚಿತ್ರಕ್ಕೆ ಬೆನ್ನೆಲುಬಾಗಿ ನಿಂತ ರವಿಚಂದ್ರನ್ ಮಕ್ಕಳ ಚಿತ್ರದ ಟ್ರೈಲರ್ ನ ಮಗುವಿನಂತೆ ರಿಲೀಸ್ ಮಾಡಿಕೊಟ್ಟ ರವಿಮಾಮ ಓ ನನ್ನ ಚೇತನ ಟ್ರೈಲರ್ ಲಾಂಚ್ ವೇಳೆ ಪ್ರೇಮಲೋಕ, ಶಾಂತಿಕ್ರಾಂತಿಯ ಅದ್ಭುತ ಸನ್ನಿವೇಶಗಳನ್ನ ನೆನೆದ ರವಿಚಂದ್ರನ್ ಓ ನನ್ನ ಚೇತನ ಸಿನಿಮಾ ಇದೇ ತಿಂಗಳ 15ನೇ ತಾರೀಖು ಅಂದ್ರೆ ಇದೇ ಶುಕ್ರವಾರ ರಾಜ್ಯದಾದ್ಯಂತ ರಿಲೀಸ್ ಆಗ್ತಿದೆ. ----------- ಮೊಬೈಲ್ ನೋಡೋ ಮಕ್ಕಳು... ಮಕ್ಕಳ ಮೊಬೈಲ್ ಹಾವಳಿಗೆ ತತ್ತರಿಸೋ ಪೋಷಕರು ನೋಡಲೇ ಬೇಕಾದಂತಹ ಸಿನಿಮಾ ಓ ನನ್ನ ಚೇತನ... ದೊಡ್ಡ ತಾರಾಬಳಗವಿಲ್ಲ... ಆದ್ರೆ ದೊಡ್ಡ ತಂತ್ರಜ್ಞರೇ ಕೈ ....
ಬೆಂಗಳೂರಿನಲ್ಲಿ ಜೋರಾಮ್ ತಂಡ ತನ್ನ ಅಭಿನಯದ ಮೂಲಕ ಗಮನ ಸೆಳೆದಿರುವ ಬಾಲಿವುಡ್ ನಟ ಪದ್ಮಶ್ರೀ ಮನೋಜ್ಬಾಜ್ಪೇ ಹೊಸ ಚಿತ್ರ ’ಜೋರಾಮ್’ ಬಿಡುಗಡೆಗೆ ಸಿದ್ದವಾಗಿದೆ. ಕೊನೆ ಹಂತದ ಪ್ರಚಾರದ ಸಲುವಾಗಿ ತಂಡವು ಬೆಂಗಳೂರಿಗೆ ಭೇಟಿ ನೀಡಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ನಾಯಕ ಮತ್ತು ನಿರ್ದೇಶಕರು ಉತ್ತರವಾದರು. ತಡವಾಗಿ ಬಂದುದಕ್ಕೆ ಕ್ಷಮೆಯಾಚಿಸಿದ ಮನೋಜ್ಬಾಯ್ ಪೇ ಬೆಂಗಳೂರು ಸ್ಪಲ್ಪ ಗೊತ್ತಿದೆ. ನನ್ನ ಪೂರ್ವಜರು ಕರ್ನಾಟಕದವರು. ಕನ್ನಡ ಚಿತ್ರರಂಗ ಈಗ ಎಲ್ಲಾ ಕಡೆ ಸದ್ದು ಮಾಡುತ್ತಿದೆ. ಅದರಲ್ಲೂ ’ಗರುಡ ಗಮನ ವೃಷಭ ವಾಹನ’ ’ಕಾಂತಾರ’ ಚಿತ್ರಗಳು ನೋಡಿದ್ದೇನೆ. ಅದು ನನ್ನನ್ನು ತುಂಬ ಕಾಡಿದೆ. ಇಂತಹ ಚಿತ್ರಗಳು ನನಗೆ ಧೈರ್ಯ, ....
ಕಲರ್ಗಿಂತ ಕಪ್ಪು ಬಿಳುಪು ಯುಗ ಚೆನ್ನಾಗಿತ್ತು - ಡಾ.ಹಂಸಲೇಖ ನಾದಬ್ರಹ್ಮ ಡಾ.ಹಂಸಲೇಖ ಗರಡಿಯಲ್ಲಿ ಪಳಗಿರುವ ಸಾಕಷ್ಟು ವಿದ್ಯಾರ್ಥಿಗಳು ಚಿತ್ರರಂಗದಲ್ಲಿ ಗಾಯಕ, ನಿರ್ದೇಶಕ, ಸಂಗೀತ ಸಂಯೋಜಕ, ಸಾಹಿತಿಯಾಗಿ ಗುರುತಿಸಿಕೊಂಡಿದ್ದಾರೆ. ಅದೇ ಹಾದಿಯಲ್ಲಿ ಬೆಂಗಳೂರಿನ ಯಶ್ಜಿತ್ಗೌಡ ’ಕಲರ್ ಹನುಮ’ ಎನ್ನುವ ಕಿರುಚಿತ್ರಕ್ಕೆ ಕಥೆ,ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇವರ ಶ್ರಮಕ್ಕೆ ಜಗದೀಶ.ಎಂ.ದೇವನಹಳ್ಳಿ ಬಂಡವಾಳ ಹೂಡಿರುವುದು ಹೊಸ ಅನುಭವ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಚಿತ್ರ ವೀಕ್ಷಿಸಿದ ಹಂಸಲೇಖ, ಶಿಷ್ಯನ ಹಾಗೂ ಪ್ರಸಕ್ತ ಚಿತ್ರರಂಗದ ವಿದ್ಯಾಮಾನಗಳ ಬಗ್ಗೆ ಮಾತನಾಡಿದರು. ಎಕೆ 47 ನಂತಹ ಹಿಂಸೆಯ ವಿಚಿತ್ರವಾದ ಆಯುಧಗಳನ್ನು ....
*ಬೆಂಗಳೂರಿನಲ್ಲಿ ನ್ಯಾಚುರಲ್ ಸ್ಟಾರ್…‘ಹಾಯ್ ನಾನ್ನ’ ಪ್ರಮೋಷನ್ ನಲ್ಲಿ ನಾನಿ ಬ್ಯುಸಿ* ನ್ಯಾಚುರಲ್ ಸ್ಟಾರ್ ನಾನಿ ನಟನೆಯ ಹಾಯ್ ನಾನ್ನ ಸಿನಿಮಾ ಇದೇ ಡಿಸೆಂಬರ್ 7ರಂದು ಪಂಚ ಭಾಷೆಯಲ್ಲಿ ರಿಲೀಸ್ ಆಗ್ತಿದೆ. ಈ ಹಿನ್ನೆಲೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಚಾರ ನಡೆಸುತ್ತಿರುವ ನಾನಿ ಇಂದು ಬೆಂಗಳೂರಿನಲ್ಲಿ ತಮ್ಮ ಚಿತ್ರದ ಪ್ರಮೋಷನ್ ನಡೆಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಗೂ ಮುನ್ನ ಅವರು, ನಾಗವಾರದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆಗೆ ಭೇಟೆ ಕೊಟ್ಟು ಒಂದಷ್ಟು ಅವರ ಮನೆಯಲ್ಲಿ ಬ್ರೇಕ್ ಫಾಸ್ಟ್ ಸವಿದು ಕೆಲ ಕಾಲ ಸಮಯ ಕಳೆದಿದ್ದಾರೆ. ಶಿವಣ್ಣನ ಭೇಟಿ ಬಳಿಕ ಸುದ್ದಿಗೋಷ್ಠಿಯಲ್ಲಿ ಭಾಗಿಯಾದ ನಾನಿ ಸಿನಿಮಾ ಬಗ್ಗೆ ....
*ಮನಮೋಹಕವಾಗಿದೆ "ಲೇಡಿಸ್ ಬಾರ್" ಚಿತ್ರದ ಟೀಸರ್ ಹಾಗೂ ಹಾಡುಗಳು* . ಡಿ.ಎಂ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಟಿ.ಎಂ.ಸೋಮರಾಜು ಅವರು ನಿರ್ಮಿಸಿರುವ ಹಾಗೂ ಮುತ್ತು ಎ.ಎನ್ ನಿರ್ದೇಶಿಸಿರುವ "ಲೇಡಿಸ್ ಬಾರ್" ಚಿತ್ರದ ಟೀಸರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು ರಾಜಕೀಯ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ್ ಟೀಸರ್ ಬಿಡುಗಡೆ ಮಾಡಿದರು. ಹಾಡುಗಳನ್ನು ನಟಿ ರೂಪಿಕಾ, ಮಮತ ಹಾಗೂ ನಿರ್ಮಾಪಕ ಶಿಲ್ಪ ಶ್ರೀನಿವಾಸ್ ಹಾಡುಗಳನ್ನು ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಸಿರಿ ಮ್ಯೂಸಿಕ್ ಮೂಲಕ ಹಾಡುಗಳು ಲೋಕಾರ್ಪಣೆಯಾಗಿದೆ. ನಂತರ ಚಿತ್ರತಂಡದ ಸದಸ್ಯರು "ಲೇಡಿಸ್ ಬಾರ್" ಕುರಿತು ಮಾಹಿತಿ ನೀಡಿದರು. "ಲೇಡಿಸ್ ಬಾರ್" ಶೀರ್ಷಿಕೆ ಕೇಳಿದ ....
*ಅಥಿ ಐ ಲವ್ ಯು* ಸಿನಿಮಾ ನೋಡಿ ಜೋಡಿಗಳಿಗೆ ಗೋವಾಗೆ ಹೋಗುವ ವಿಶೇಷ ಆಫರ್! ರೆಡ್ ಅಂಡ್ ವೈಟ್ ಸೆವೆನ್ ರಾಜ್ ನಿರ್ಮಾಣದ ಲೋಕೇಂದ್ರ ಸೂರ್ಯ ಮತ್ತು ಓಂ ಪ್ರಕಾಶ್ ಪುತ್ರಿ ಶ್ರಾವ್ಯರಾವ್ ಜೋಡಿಯಾಗಿ ನಟಿಸಿರುವ ವಿಭಿನ್ನ ಕಥಾವಸ್ತು ಹೊಂದಿರುವ ಅತಿ ಐ ಲವ್ ಯು. ಈ ಚಿತ್ರ ಇದೇ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವುದು ಇಂದಿನ ದಿನಗಳಲ್ಲಿ ತುಂಬಾ ಕಷ್ಟದ ಕೆಲಸವಾಗಿದೆ. ಈ ನಿಟ್ಟಿನಲ್ಲಿ ಸಿನಿಮಾ ಪ್ರೇಕ್ಷಕರನ್ನು ಥಿಯೇಟರಿಗೆ ಕರೆತರಲು ಅತಿ ಚಿತ್ರತಂಡ ವಿಭಿನ್ನ ರೀತಿಯ ಯೋಜನೆ ರೂಪಿಸಿದೆ. ಟಿಕೆಟ್ ಜೊತೆ ಕೂಪನ್ ಒಂದನ್ನು ನೀಡುತ್ತಿದ್ದು, ಲಕ್ಕಿ ಡ್ರಾ ನಲ್ಲಿ ಆಯ್ಕೆಯಾದ ಏಳು ಜೋಡಿಗಳನ್ನು ವಿಮಾನದಲ್ಲಿ ಗೋವಾ ....
*"ರೋಜಿ" ಚಿತ್ರದಲ್ಲಿ ಶ್ರೀನಗರ ಕಿಟ್ಟಿ** . *"ಹುಡುಗರು" ಚಿತ್ರದ ನಂತರ ಮತ್ತೆ ಈ ಚಿತ್ರದಲ್ಲಿ ಯೋಗಿ - ಶ್ರೀನಗರ ಕಿಟ್ಟಿ* . ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ "ರೋಜಿ" ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. "ಲಿಯೋ" ಖ್ಯಾತಿಯ ಸ್ಯಾಂಡಿ ಮಾಸ್ಟರ್ ಸಹ ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ನಟ ಶ್ರೀನಗರ ಕಿಟ್ಟಿ "ರೋಜಿ" ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಶ್ರೀನಗರ ಕಿಟ್ಟಿ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆ ಚಿತ್ರತಂಡ ಬಿಡುಗಡೆ ಮಾಡಿದೆ. ಶಾಂತಿನಗರದ ಮೈದಾನದಲ್ಲಿ ಶ್ರೀನಗರ ಕಿಟ್ಟಿ ಅವರ ಮೂವತ್ತು ಅಡಿ ಪೋಸ್ಟರ್ ಬಿಡುಗಡೆ ಮಾಡಿ, ಕಿಟ್ಟಿ ಅವರನ್ನು ಚಿತ್ರಕ್ಕೆ ವಿಶೇಷವಾಗಿ ಬರಮಾಡಿಕೊಳ್ಳಲಾಯಿತು. ....
ನಾನು ಮತ್ತು ಗುಂಡ ೨ ಟೈಟಲ್ ಟೀಸರ್ ದ್ರುವಸರ್ಜಾ ಬಿಡುಗಡೆ ನಾಯಿ ಹಾಗೂ ಅದರ ಮಾಲೀಕ ಗೋವಿಂದೇಗೌಡನ ನಡುವಿನ ಅವಿನಾಭಾವ ಸಂಬಂಧದ ಕಥೆಯನ್ನು ಹೇಳುವ ’ನಾನು ಮತ್ತು ಗುಂಡ’ ಚಿತ್ರವು ಎರಡು ವರ್ಷಗಳ ಹಿಂದೆ ತೆರೆಕಂಡು ಯಶಸ್ವಿ ಪ್ರದರ್ಶನ ಕಂಡಿತ್ತು. ಶಿವರಾಜ್ ಕೆ.ಆರ್. ಪೇಟೆ ನಾಯಕನಾಗಿ ಅಭಿನಯಿಸಿದ್ದ ಆ ಚಿತ್ರಕ್ಕೆ ರಘುಹಾಸನ್ ಆಕ್ಷನ್ ಕಟ್ ಹೇಳಿದ್ದರು. ಈಗ ಅದರ ಮುಂದುವರೆದ ಭಾಗವಾಗಿ "ನಾನು ಮತ್ತು ಗುಂಡ -2" ತಯಾರಾಗುತ್ತಿದ್ದು, ಚಿತ್ರದಲ್ಲಿ ಬಹುತೇಕ ಹಳೆಯ ತಂಡವೇ ಕೆಲಸ ಮಾಡುತ್ತಿದೆ. ಮೊದಲ ಭಾಗದಲ್ಲಿ ಮರಣ ಹೊಂದಿದ್ದ ಮಾಲೀಕನಿಗೆ ಇಲ್ಲಿ ಪುನರ್ಜನ್ಮವಾಗಿರುತ್ತದೆ. ಕನ್ನಡ, ತೆಲುಗು, ಹಿಂದಿ ಸೇರಿ ಐದು ಭಾಷೆಗಳಲ್ಲಿ ಈ ಚಿತ್ರ ....
ಮರೀಚಿ ಟ್ರೇಲರ್ ಬಿಡುಗಡೆ ‘ಮರೀಚಿ’ ಚಿತ್ರದ ಪ್ರಚಾರದ ಎರಡನೇ ಹಂತವಾಗಿ ಟ್ರೇಸಲರ್ ಬಿಡುಗಡೆ ಕಾರ್ಯಕ್ರಮ ಎಂಎಂಬಿ ಲೆಗಸಿಯಲ್ಲಿ ನಡೆಯಿತು. ಕಥೆ, ನಿರ್ದೇಶನ ಹಾಗೂ ಬಂಡವಾಳ ಹೂಡಿರುವ ಸಿದ್ದಾರ್ವ್ ಹೇಳುವಂತೆ ಇದೊಂದು ಸೆಸ್ಪೆನ್ಸ್, ಥ್ರಿಲ್ಲಿಂಗ್ ಅಂಶಗಳ ಝಲಕ್ ಕೊಡುತ್ತದೆ. ೧೫೦ ಟೈಟಲ್ಗಳು ನಮ್ಮ ಮುಂದೆ ಇತ್ತು. ಅದರಲ್ಲಿ ಋಷಿ ಹೆಸರು ಇರುವ ಶೀರ್ಷಿಕೆ ಆಯ್ಕೆ ಮಾಡಬೇಕಿತ್ತು. ಕೊನೆಗೆ ‘ಮರೀಚಿ’ ಅಂತಿಮವಾಯಿತು. ಬ್ರಹ್ಮನ ಮಗನಿಗೆ ಇದೇ ಹೆಸರಿನಿಂದ ಕರೆಯುತ್ತಾರೆ. ಈತ ದೇವದಾಸ್, ಅಸುರರ ಗಾಡ್ಫಾದರ್. ಇದರಲ್ಲಿ ಒಳ್ಳೆಯದು, ಕೆಟ್ಟದಕ್ಕೆ ಗಾಡ್ ಫಾದರ್ ತೆಗೆದುಕೊಳ್ಳಲಾಗಿದೆ. ಕಿರುಚಿತ್ರಗಳನ್ನು ಮಾಡಿ, ಇದರ ಅನುಭವದಿಂದ ....